Homeನಿಜವೋ ಸುಳ್ಳೋಸಿಎಂ ಆಗಲು ದರ್ಗಾಗೆ ಭೇಟಿ ನೀಡಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ?

ಸಿಎಂ ಆಗಲು ದರ್ಗಾಗೆ ಭೇಟಿ ನೀಡಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ?

- Advertisement -
- Advertisement -

| ಮುತ್ತುರಾಜ್ |

1. ಐಸಿಸ್ ಸ್ಥಾಪಕ ಬಾಗ್ದಾದಿಯನ್ನು ಹುಡಕಿಕೊಟ್ಟ ನಾಯಿಗೆ ಸನ್ಮಾನಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್!!

ಹೌದು ಸ್ವತಃ ಡೊನಾಲ್ಡ್ ಟ್ರಂಪ್‌ರವರು ಟ್ವೀಟ್ ಮಾಡಿರುವ ಈ ಫೋಟೊ ನೋಡಿದಾಕ್ಷಣ ಎಲ್ಲರಿಗೂ ಹೌದಲ್ಲವೇ ಎನಿಸುತ್ತದೆ. ಆದರೆ ಸತ್ಯ ಏನೆಂದರೆ ಅದು ಫೋಟೊಶಾಪ್ ಮಾಡಿರುವ ಚಿತ್ರ.

ಅಕ್ಟೋಬರ್ 30ರಂದು ಟ್ರಂಪ್‌ರವರು ಕೇವಲ ಆ ನಾಯಿಯ ಫೋಟೊ ಹಾಕಿ ಟ್ವೀಟ್ ಮಾಡಿದ್ದರು. ನಂತರ ಅದೇ ಫೋಟೊವನ್ನು ಬಳಸಿ ದಿ ಡೈಲಿ ವೈರ್ ಎನ್ನುವ ಮಾಧ್ಯಮ ಸಂಸ್ಥೆಯೂ 2017ರಲ್ಲಿ ಟ್ರಂಪ್‌ರವರು ಯೋಧ ಮೆಕ್‌ಲ್ಹಾನ್ ಎಂಬುವವರಿಗೆ ಸನ್ಮಾನ ಮಾಡುತ್ತಿರುವ ಫೋಟೊದೊಂದಿಗೆ ಸೇರಿಸಿ ಫೋಟೊಶಾಪ್ ಮಾಡಿ ಟ್ವೀಟ್ ಮಾಡಿತ್ತು.

ಅದನ್ನು ನೇರ ಎತ್ತಿಕೊಂಡು ಟ್ರಂಪ್ ತಮ್ಮ ಟ್ವಿಟ್ಟರ್ ಅಕೌಂಟ್‌ನಿಂದ ಷೇರ್ ಮಾಡಿಬಿಟ್ಟರು. ಕನಿಷ್ಟ ಸ್ಪಷ್ಟನೆಯನ್ನು ಸಹ ಅವರು ನೀಡಲಿಲ್ಲ.

ಆ ಫೋಟೊ ಶಾಪ್ ಮಾಡಿದ ಫೋಟೊವನ್ನು ಜನ ನಿಜವೆಂದು ನಂಬಿ ಟ್ರಂಪ್‌ನನ್ನು ಹೊಗಳಿದ್ದೇ ಹೊಗಳಿದ್ದು. ನೋಡಿ ಒಂದು ನಾಯಿಗೂ ನಮ್ಮ ಟ್ರಂಪ್ ಎಷ್ಟು ಮಹತ್ವ ಕೊಡುತ್ತಾರೆ ಎಂದು ಬಹುಫರಾಕ್ ಹೇಳಿದರು. ಟ್ರಂಪ್ ಅದನ್ನು ಆಸ್ವಾದಿಸಿದರು.. ನೋಡಿ ಅಮೇರಿಕದ ದೊಡ್ಡಣ್ಣ ಸಹ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು.

2. ಟಿಪ್ಪು ಸುಲ್ತಾನನ ಅಸಲಿ ಫೋಟೊ ಯಾವುದು?

ಅಪ್ರತಿಮ ಹೋರಾಟಗಾರ ಟಿಪ್ಪು ಸುಲ್ತಾನ್ ಕಂಡರೆ ಬಿಜೆಪಿಯವರಿಗೆ ಎಣ್ಣೆ ಸೀಗೆಕಾಯಿ ಇದ್ದಹಾಗೆ. ಟಿಪ್ಪು ಮಾಡಿರುವ ಅಸಂಖ್ಯ ಸಾಧನೆಗಳು ಕಣ್ಣಿಗೆ ರಾಚುತ್ತಿದ್ದರು ಅದನ್ನು ಸಹಿಸಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಸದಾ ಟಿಪ್ಪು ವಿರೋಧಿ ಭಾವನೆ ಮೂಡುವಂತೆ, ಟಿಪ್ಪುವಿನ ವಿರುದ್ಧ ಸುಳ್ಳುಗಳನ್ನು ಹಬ್ಬಿಸುತ್ತಿರುತ್ತಾರೆ. ಅದರಲ್ಲಿ ಆತನ ಫೋಟೊದು ಒಂದು.

ಟಿಪ್ಪುವಿನ ಫೋಟೊದ ಜೊತೆಗೆ ಇನ್ನೊಬ್ಬರ ಕಪ್ಪು ಬಣ್ಣದ ಫೋಟೊ ಕೊಲಾಜ್ ಮಾಡಿ ಅವರೇ ಟಿಪ್ಪು ಸುಲ್ತಾನ್ ಎಂದು ಬಿಜೆಪಿಯ ಹಲವಾರು ಸಂಸದರು, ಶಾಸಕರು ದೇಶಾದ್ಯಂತ ಸುಳ್ಳು ಹಬ್ಬಿಸುತ್ತಿದ್ದಾರೆ.

ಆದರೆ ಸತ್ಯ ಏನೆಂದರೆ ಫೋಟೊದಲ್ಲಿರುವ ಕಪ್ಪುವ್ಯಕ್ತಿ ಟಿಪ್ಪುವಲ್ಲ. ಆಫ್ರಿಕಾದ ಗುಲಾಮರ ಮಾರಾಟಗಾರ ಟಿಪ್ಪು ಟಿಪ್ ಎಂಬುವವರ ಫೋಟೊವನ್ನು ಬಳಸಿ ಜನರಲ್ಲಿ ಗೊಂದಲ ಹುಟ್ಟಿಸುತ್ತಿದ್ದಾರೆ ಅಷ್ಟೇ. ಗೂಗಲ್ ಸರ್ಚ್ನಲ್ಲಿ ಸಂಪೂರ್ಣ ವಿವರ ಸಿಕ್ಕಿಬಿಡುತ್ತದೆ. ಆದರೇನು ಮಾಡುವುದು ಟಿಪ್ಪು ಅನ್ಯಧರ್ಮೀಯ ಎಂಬ ಏಕೈಕ ಕಾರಣಕ್ಕೆ ಅಪಪ್ರಚಾರಕ್ಕೊಳಗಾಗಬೇಕಿದೆ.

3 ಭಾರತೀಯರ ಮನಕಲಕಿದ ಈ ಪುಟ್ಟ ಬಾಲೆ ರೋಹಿಂಗ್ಯ ಮುಸ್ಲಿಮಳೆ?

ಈಕೆ ರೋಹಿಂಗ್ಯ ಮುಸ್ಲಿ ಹುಡುಗಿ. ಯೋಗಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಎಡಪಂಥೀಯರು ಮತ್ತು ಜಾತ್ಯಾತೀತವಾದಿಗಳು ದೀಪಾವಳಿಯಂದು ಆಕೆಯನ್ನು ಅಯೋಧ್ಯೆಗೆ ತಂದು ಪಿತೂರಿ ನಡೆಸಿದ್ದಾರೆ ಎಂದೆಲ್ಲಾ ಸುಳ್ಳು ಸಂದೇಶಗಳನ್ನು ಹರಡಲಾಯಿತು.

ಹಿಂದೂ ಧರ್ಮ ಯೋಧ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಈ ಸಂದೇಶ 15 ಸಾವಿರ ಬಾರಿ ಷೇರ್ ಆಗಿದೆ.

ಸತ್ಯವೇನೆಂದರೆ ಉತ್ತರಪ್ರದೇಶದ ಸರ್ಕಾರ ಅಯೋಧ್ಯೆಯಲ್ಲಿ ದೀಪಾವಳಿಯ ಸಂಭ್ರಮಕ್ಕೆಂದು ಐದೂವರೆ ಲಕ್ಷ ಹಣತೆಗಳನ್ನು ಬೆಳಗಿಸಿತು. ಬಳಸಿದ ಎಣ್ಣೆ 20 ಸಾವಿರ ಲೀಟರುಗಳು. ಈ ಉತ್ಸವಕ್ಕೆ ತಗುಲಿದ ಅಂದಾಜು ವೆಚ್ಚ 133 ಕೋಟಿ ರುಪಾಯಿಗಳು. ಏಳೆಂಟು ವರ್ಷದ ವಯಸ್ಸಿನ ಬಡ ಬಾಲಕಿಯೊಬ್ಬಳು ತನ್ನ ಗುಡಿಸಿಲಿಗೆ ಒಯ್ಯಲು ಆರಿ ಹೋಗಿದ್ದ ಹಣತೆಗಳಿಂದ ಪ್ಲಾಸ್ಟಿಕ್ ಬಾಟಲಿಯೊಂದಕ್ಕೆ ಎಣ್ಣೆ ಬಸಿದುಕೊಳ್ಳುತ್ತಿದ್ದಳು. ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ನಮ್ಮೆಲ್ಲರ ಆತ್ಮಸಾಕ್ಷಿಯನ್ನು ಪ್ರಶ್ನಿಸುತ್ತಿತ್ತು. ಒಂದು ರೀತಿಯಲ್ಲಿ ಉತ್ತರ ಪ್ರದೇಶ ಸರ್ಕಾರವನ್ನು ಚುಚ್ಚುತ್ತಿತ್ತು. ಹಗಾಗಿ ಸರ್ಕಾರದ ಭಕ್ತರು ಸುಳ್ಳು ಸುದ್ದಿ ಹರಡಿದ್ದಾರೆ ಅಷ್ಟೇ.

ಚಿತ್ರದಲ್ಲಿರುವ ಎರಡನೇ ಹುಡುಗಿ ಮಾತ್ರ ರೋಹಿಂಗ್ಯ ಮುಸ್ಲಿಂಳಾಗಿದ್ದಾರೆ.

4 ಸಿಎಂ ಆಗಲು ದರ್ಗಾಗೆ ಭೇಟಿ ನೀಡಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ?

ಮಹಾರಾಷ್ಟ್ರ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದ ನಂತರ ಸಿಎಂ ಆಗುವ ಆಸೆಯಿಂದ ದರ್ಗಾಗೆ ತೆರಳಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ. ಅಧಿಕಾರಕ್ಕಾಗಿ ಏನನ್ನು ಬೇಕಾದರೂ ಮಾಡುತ್ತಾರೆ ಎಂಬ ವಿಡಿಯೋ ಫೇಸ್‌ಬುಕ್‌ನಲ್ಲಿ ವೈರಲ್ ಆಗಿದೆ. ಟ್ವಿಟ್ಟರ್‌ನಲ್ಲಿ ನರೇಂದ್ರ ಮೋದಿಯವರು ಸಹ ಫಾಲೋ ಮಾಡುವ ಗೌರವ್ ಪ್ರಧಾನ್ ಎಂಬ ಬಿಜೆಪಿ ನಾಯಕ ಕೂಡ ಇದೇ ಸುಳ್ಳನ್ನು ಹರಡಿದ್ದಾರೆ. ಜೊತೆಗೆ ಬಾಳಾಸಾಹೇಬ್ ಮತ್ತೊಮ್ಮೆ ಸತ್ತರು ಎಂದು ಉದ್ಘಾರ ತೆಗೆದಿದ್ದಾರೆ.

ಆದರೆ ಸತ್ಯ ಏನೆಂದರೆ ಅದು ಹಳೆಯ ವಿಡಿಯೋ. 2017ರಲ್ಲಿ ಆದಿತ್ಯ ಠಾಕ್ರೆ ದರ್ಗಾಗೆ ಭೇಟಿ ವಿಡಿಯೋವನ್ನು ಚುನಾವನಾ ಫಲಿತಾಂಶದ ನಂತರ ಪೋಸ್ಟ್ ಮಾಡಿ ಸುಳ್ಳು ಹರಡುತ್ತಿದ್ದಾರೆ ಅಷ್ಟೇ.

5. ನನ್ನ ಮತ್ತು ಆಕೆಯ ನಡುವೆ ನಡೆದಿರುವುದು ಅತ್ಯಾಚಾರವಲ್ಲ. ಕೊನೆಗೂ ಪವಿತ್ರ ಏಸುವಿನ ಮಾಂತ್ರಿಕ ಅಸ್ತಿತ್ವವನ್ನು ಅನುಭವಿಸುವ ಜ್ಞಾನೋದಯದ ಹೋಳಿ ಆಚರಣೆಯಾಗಿದೆ ಎಂದ ಕ್ರೈಸ್ತ ಪಾದ್ರಿ?

 

ಈ ರೀತಿಯ ಸಂದೇಶವನ್ನು, ಟಿವಿ ವಾಹಿನಿಯ ಚಿತ್ರವೊಂದನ್ನು ಷೇರ್ ಮಾಡಿ ಕ್ರೈಸ್ತರನ್ನು ದೂಷಿಸಲಾಗಿದೆ. ಜೊತೆಗೆ ಮತಾಂತರವನ್ನು ಹಳಿಯಲಾಗಿದೆ. ಟ್ವಿಟ್ಟರ್‌ನಲ್ಲಿ 20 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ಮಧುಪೂರ್ಣಿಮ ಕಿಶ್ವರ್ ಎಂಬುವವರು ಸಹ ಇದನ್ನು ಪೋಸ್ಟ್ ಮಾಡಿದ್ದಾರೆ.

ಆದರೆ ಇದನ್ನು ಮೊದಲ ಪೋಸ್ಟ್ ಮಾಡಿದ ‘ದಿ ಅನ್‌ಪೆಯ್ಡ್ ಟೈಮ್ಸ್’ ಎಂಬ ಅಕೌಂಟ್ ತಾನು ಸುಳ್ಳು ಸುದ್ದಿ ಹಬ್ಬಿಸಲು ಇರುವ ಅಕೌಂಟ್ ಎಂದು ಘೋಷಿಸಿಕೊಂಡಿದೆ. ಅದನ್ನು ಇವರೆಲ್ಲಾ ನಿಜ ಎಂದು  ನಂಬಿ ಷೇರ್ ಮಾಡಿದ್ದಾರೆ. ಇಡೀ ಪ್ರಕರಣೆ ಕಲ್ಪಿತವಾದುದ್ದೇ ವಿನಃ ಸತ್ಯವಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...