Homeನಿಜವೋ ಸುಳ್ಳೋಸಿಎಂ ಆಗಲು ದರ್ಗಾಗೆ ಭೇಟಿ ನೀಡಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ?

ಸಿಎಂ ಆಗಲು ದರ್ಗಾಗೆ ಭೇಟಿ ನೀಡಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ?

- Advertisement -
- Advertisement -

| ಮುತ್ತುರಾಜ್ |

1. ಐಸಿಸ್ ಸ್ಥಾಪಕ ಬಾಗ್ದಾದಿಯನ್ನು ಹುಡಕಿಕೊಟ್ಟ ನಾಯಿಗೆ ಸನ್ಮಾನಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್!!

ಹೌದು ಸ್ವತಃ ಡೊನಾಲ್ಡ್ ಟ್ರಂಪ್‌ರವರು ಟ್ವೀಟ್ ಮಾಡಿರುವ ಈ ಫೋಟೊ ನೋಡಿದಾಕ್ಷಣ ಎಲ್ಲರಿಗೂ ಹೌದಲ್ಲವೇ ಎನಿಸುತ್ತದೆ. ಆದರೆ ಸತ್ಯ ಏನೆಂದರೆ ಅದು ಫೋಟೊಶಾಪ್ ಮಾಡಿರುವ ಚಿತ್ರ.

ಅಕ್ಟೋಬರ್ 30ರಂದು ಟ್ರಂಪ್‌ರವರು ಕೇವಲ ಆ ನಾಯಿಯ ಫೋಟೊ ಹಾಕಿ ಟ್ವೀಟ್ ಮಾಡಿದ್ದರು. ನಂತರ ಅದೇ ಫೋಟೊವನ್ನು ಬಳಸಿ ದಿ ಡೈಲಿ ವೈರ್ ಎನ್ನುವ ಮಾಧ್ಯಮ ಸಂಸ್ಥೆಯೂ 2017ರಲ್ಲಿ ಟ್ರಂಪ್‌ರವರು ಯೋಧ ಮೆಕ್‌ಲ್ಹಾನ್ ಎಂಬುವವರಿಗೆ ಸನ್ಮಾನ ಮಾಡುತ್ತಿರುವ ಫೋಟೊದೊಂದಿಗೆ ಸೇರಿಸಿ ಫೋಟೊಶಾಪ್ ಮಾಡಿ ಟ್ವೀಟ್ ಮಾಡಿತ್ತು.

ಅದನ್ನು ನೇರ ಎತ್ತಿಕೊಂಡು ಟ್ರಂಪ್ ತಮ್ಮ ಟ್ವಿಟ್ಟರ್ ಅಕೌಂಟ್‌ನಿಂದ ಷೇರ್ ಮಾಡಿಬಿಟ್ಟರು. ಕನಿಷ್ಟ ಸ್ಪಷ್ಟನೆಯನ್ನು ಸಹ ಅವರು ನೀಡಲಿಲ್ಲ.

ಆ ಫೋಟೊ ಶಾಪ್ ಮಾಡಿದ ಫೋಟೊವನ್ನು ಜನ ನಿಜವೆಂದು ನಂಬಿ ಟ್ರಂಪ್‌ನನ್ನು ಹೊಗಳಿದ್ದೇ ಹೊಗಳಿದ್ದು. ನೋಡಿ ಒಂದು ನಾಯಿಗೂ ನಮ್ಮ ಟ್ರಂಪ್ ಎಷ್ಟು ಮಹತ್ವ ಕೊಡುತ್ತಾರೆ ಎಂದು ಬಹುಫರಾಕ್ ಹೇಳಿದರು. ಟ್ರಂಪ್ ಅದನ್ನು ಆಸ್ವಾದಿಸಿದರು.. ನೋಡಿ ಅಮೇರಿಕದ ದೊಡ್ಡಣ್ಣ ಸಹ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು.

2. ಟಿಪ್ಪು ಸುಲ್ತಾನನ ಅಸಲಿ ಫೋಟೊ ಯಾವುದು?

ಅಪ್ರತಿಮ ಹೋರಾಟಗಾರ ಟಿಪ್ಪು ಸುಲ್ತಾನ್ ಕಂಡರೆ ಬಿಜೆಪಿಯವರಿಗೆ ಎಣ್ಣೆ ಸೀಗೆಕಾಯಿ ಇದ್ದಹಾಗೆ. ಟಿಪ್ಪು ಮಾಡಿರುವ ಅಸಂಖ್ಯ ಸಾಧನೆಗಳು ಕಣ್ಣಿಗೆ ರಾಚುತ್ತಿದ್ದರು ಅದನ್ನು ಸಹಿಸಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಸದಾ ಟಿಪ್ಪು ವಿರೋಧಿ ಭಾವನೆ ಮೂಡುವಂತೆ, ಟಿಪ್ಪುವಿನ ವಿರುದ್ಧ ಸುಳ್ಳುಗಳನ್ನು ಹಬ್ಬಿಸುತ್ತಿರುತ್ತಾರೆ. ಅದರಲ್ಲಿ ಆತನ ಫೋಟೊದು ಒಂದು.

ಟಿಪ್ಪುವಿನ ಫೋಟೊದ ಜೊತೆಗೆ ಇನ್ನೊಬ್ಬರ ಕಪ್ಪು ಬಣ್ಣದ ಫೋಟೊ ಕೊಲಾಜ್ ಮಾಡಿ ಅವರೇ ಟಿಪ್ಪು ಸುಲ್ತಾನ್ ಎಂದು ಬಿಜೆಪಿಯ ಹಲವಾರು ಸಂಸದರು, ಶಾಸಕರು ದೇಶಾದ್ಯಂತ ಸುಳ್ಳು ಹಬ್ಬಿಸುತ್ತಿದ್ದಾರೆ.

ಆದರೆ ಸತ್ಯ ಏನೆಂದರೆ ಫೋಟೊದಲ್ಲಿರುವ ಕಪ್ಪುವ್ಯಕ್ತಿ ಟಿಪ್ಪುವಲ್ಲ. ಆಫ್ರಿಕಾದ ಗುಲಾಮರ ಮಾರಾಟಗಾರ ಟಿಪ್ಪು ಟಿಪ್ ಎಂಬುವವರ ಫೋಟೊವನ್ನು ಬಳಸಿ ಜನರಲ್ಲಿ ಗೊಂದಲ ಹುಟ್ಟಿಸುತ್ತಿದ್ದಾರೆ ಅಷ್ಟೇ. ಗೂಗಲ್ ಸರ್ಚ್ನಲ್ಲಿ ಸಂಪೂರ್ಣ ವಿವರ ಸಿಕ್ಕಿಬಿಡುತ್ತದೆ. ಆದರೇನು ಮಾಡುವುದು ಟಿಪ್ಪು ಅನ್ಯಧರ್ಮೀಯ ಎಂಬ ಏಕೈಕ ಕಾರಣಕ್ಕೆ ಅಪಪ್ರಚಾರಕ್ಕೊಳಗಾಗಬೇಕಿದೆ.

3 ಭಾರತೀಯರ ಮನಕಲಕಿದ ಈ ಪುಟ್ಟ ಬಾಲೆ ರೋಹಿಂಗ್ಯ ಮುಸ್ಲಿಮಳೆ?

ಈಕೆ ರೋಹಿಂಗ್ಯ ಮುಸ್ಲಿ ಹುಡುಗಿ. ಯೋಗಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಎಡಪಂಥೀಯರು ಮತ್ತು ಜಾತ್ಯಾತೀತವಾದಿಗಳು ದೀಪಾವಳಿಯಂದು ಆಕೆಯನ್ನು ಅಯೋಧ್ಯೆಗೆ ತಂದು ಪಿತೂರಿ ನಡೆಸಿದ್ದಾರೆ ಎಂದೆಲ್ಲಾ ಸುಳ್ಳು ಸಂದೇಶಗಳನ್ನು ಹರಡಲಾಯಿತು.

ಹಿಂದೂ ಧರ್ಮ ಯೋಧ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಈ ಸಂದೇಶ 15 ಸಾವಿರ ಬಾರಿ ಷೇರ್ ಆಗಿದೆ.

ಸತ್ಯವೇನೆಂದರೆ ಉತ್ತರಪ್ರದೇಶದ ಸರ್ಕಾರ ಅಯೋಧ್ಯೆಯಲ್ಲಿ ದೀಪಾವಳಿಯ ಸಂಭ್ರಮಕ್ಕೆಂದು ಐದೂವರೆ ಲಕ್ಷ ಹಣತೆಗಳನ್ನು ಬೆಳಗಿಸಿತು. ಬಳಸಿದ ಎಣ್ಣೆ 20 ಸಾವಿರ ಲೀಟರುಗಳು. ಈ ಉತ್ಸವಕ್ಕೆ ತಗುಲಿದ ಅಂದಾಜು ವೆಚ್ಚ 133 ಕೋಟಿ ರುಪಾಯಿಗಳು. ಏಳೆಂಟು ವರ್ಷದ ವಯಸ್ಸಿನ ಬಡ ಬಾಲಕಿಯೊಬ್ಬಳು ತನ್ನ ಗುಡಿಸಿಲಿಗೆ ಒಯ್ಯಲು ಆರಿ ಹೋಗಿದ್ದ ಹಣತೆಗಳಿಂದ ಪ್ಲಾಸ್ಟಿಕ್ ಬಾಟಲಿಯೊಂದಕ್ಕೆ ಎಣ್ಣೆ ಬಸಿದುಕೊಳ್ಳುತ್ತಿದ್ದಳು. ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ನಮ್ಮೆಲ್ಲರ ಆತ್ಮಸಾಕ್ಷಿಯನ್ನು ಪ್ರಶ್ನಿಸುತ್ತಿತ್ತು. ಒಂದು ರೀತಿಯಲ್ಲಿ ಉತ್ತರ ಪ್ರದೇಶ ಸರ್ಕಾರವನ್ನು ಚುಚ್ಚುತ್ತಿತ್ತು. ಹಗಾಗಿ ಸರ್ಕಾರದ ಭಕ್ತರು ಸುಳ್ಳು ಸುದ್ದಿ ಹರಡಿದ್ದಾರೆ ಅಷ್ಟೇ.

ಚಿತ್ರದಲ್ಲಿರುವ ಎರಡನೇ ಹುಡುಗಿ ಮಾತ್ರ ರೋಹಿಂಗ್ಯ ಮುಸ್ಲಿಂಳಾಗಿದ್ದಾರೆ.

4 ಸಿಎಂ ಆಗಲು ದರ್ಗಾಗೆ ಭೇಟಿ ನೀಡಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ?

ಮಹಾರಾಷ್ಟ್ರ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದ ನಂತರ ಸಿಎಂ ಆಗುವ ಆಸೆಯಿಂದ ದರ್ಗಾಗೆ ತೆರಳಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ. ಅಧಿಕಾರಕ್ಕಾಗಿ ಏನನ್ನು ಬೇಕಾದರೂ ಮಾಡುತ್ತಾರೆ ಎಂಬ ವಿಡಿಯೋ ಫೇಸ್‌ಬುಕ್‌ನಲ್ಲಿ ವೈರಲ್ ಆಗಿದೆ. ಟ್ವಿಟ್ಟರ್‌ನಲ್ಲಿ ನರೇಂದ್ರ ಮೋದಿಯವರು ಸಹ ಫಾಲೋ ಮಾಡುವ ಗೌರವ್ ಪ್ರಧಾನ್ ಎಂಬ ಬಿಜೆಪಿ ನಾಯಕ ಕೂಡ ಇದೇ ಸುಳ್ಳನ್ನು ಹರಡಿದ್ದಾರೆ. ಜೊತೆಗೆ ಬಾಳಾಸಾಹೇಬ್ ಮತ್ತೊಮ್ಮೆ ಸತ್ತರು ಎಂದು ಉದ್ಘಾರ ತೆಗೆದಿದ್ದಾರೆ.

ಆದರೆ ಸತ್ಯ ಏನೆಂದರೆ ಅದು ಹಳೆಯ ವಿಡಿಯೋ. 2017ರಲ್ಲಿ ಆದಿತ್ಯ ಠಾಕ್ರೆ ದರ್ಗಾಗೆ ಭೇಟಿ ವಿಡಿಯೋವನ್ನು ಚುನಾವನಾ ಫಲಿತಾಂಶದ ನಂತರ ಪೋಸ್ಟ್ ಮಾಡಿ ಸುಳ್ಳು ಹರಡುತ್ತಿದ್ದಾರೆ ಅಷ್ಟೇ.

5. ನನ್ನ ಮತ್ತು ಆಕೆಯ ನಡುವೆ ನಡೆದಿರುವುದು ಅತ್ಯಾಚಾರವಲ್ಲ. ಕೊನೆಗೂ ಪವಿತ್ರ ಏಸುವಿನ ಮಾಂತ್ರಿಕ ಅಸ್ತಿತ್ವವನ್ನು ಅನುಭವಿಸುವ ಜ್ಞಾನೋದಯದ ಹೋಳಿ ಆಚರಣೆಯಾಗಿದೆ ಎಂದ ಕ್ರೈಸ್ತ ಪಾದ್ರಿ?

 

ಈ ರೀತಿಯ ಸಂದೇಶವನ್ನು, ಟಿವಿ ವಾಹಿನಿಯ ಚಿತ್ರವೊಂದನ್ನು ಷೇರ್ ಮಾಡಿ ಕ್ರೈಸ್ತರನ್ನು ದೂಷಿಸಲಾಗಿದೆ. ಜೊತೆಗೆ ಮತಾಂತರವನ್ನು ಹಳಿಯಲಾಗಿದೆ. ಟ್ವಿಟ್ಟರ್‌ನಲ್ಲಿ 20 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ಮಧುಪೂರ್ಣಿಮ ಕಿಶ್ವರ್ ಎಂಬುವವರು ಸಹ ಇದನ್ನು ಪೋಸ್ಟ್ ಮಾಡಿದ್ದಾರೆ.

ಆದರೆ ಇದನ್ನು ಮೊದಲ ಪೋಸ್ಟ್ ಮಾಡಿದ ‘ದಿ ಅನ್‌ಪೆಯ್ಡ್ ಟೈಮ್ಸ್’ ಎಂಬ ಅಕೌಂಟ್ ತಾನು ಸುಳ್ಳು ಸುದ್ದಿ ಹಬ್ಬಿಸಲು ಇರುವ ಅಕೌಂಟ್ ಎಂದು ಘೋಷಿಸಿಕೊಂಡಿದೆ. ಅದನ್ನು ಇವರೆಲ್ಲಾ ನಿಜ ಎಂದು  ನಂಬಿ ಷೇರ್ ಮಾಡಿದ್ದಾರೆ. ಇಡೀ ಪ್ರಕರಣೆ ಕಲ್ಪಿತವಾದುದ್ದೇ ವಿನಃ ಸತ್ಯವಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...