Homeನಿಜವೋ ಸುಳ್ಳೋಸಿಎಂ ಆಗಲು ದರ್ಗಾಗೆ ಭೇಟಿ ನೀಡಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ?

ಸಿಎಂ ಆಗಲು ದರ್ಗಾಗೆ ಭೇಟಿ ನೀಡಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ?

- Advertisement -
- Advertisement -

| ಮುತ್ತುರಾಜ್ |

1. ಐಸಿಸ್ ಸ್ಥಾಪಕ ಬಾಗ್ದಾದಿಯನ್ನು ಹುಡಕಿಕೊಟ್ಟ ನಾಯಿಗೆ ಸನ್ಮಾನಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್!!

ಹೌದು ಸ್ವತಃ ಡೊನಾಲ್ಡ್ ಟ್ರಂಪ್‌ರವರು ಟ್ವೀಟ್ ಮಾಡಿರುವ ಈ ಫೋಟೊ ನೋಡಿದಾಕ್ಷಣ ಎಲ್ಲರಿಗೂ ಹೌದಲ್ಲವೇ ಎನಿಸುತ್ತದೆ. ಆದರೆ ಸತ್ಯ ಏನೆಂದರೆ ಅದು ಫೋಟೊಶಾಪ್ ಮಾಡಿರುವ ಚಿತ್ರ.

ಅಕ್ಟೋಬರ್ 30ರಂದು ಟ್ರಂಪ್‌ರವರು ಕೇವಲ ಆ ನಾಯಿಯ ಫೋಟೊ ಹಾಕಿ ಟ್ವೀಟ್ ಮಾಡಿದ್ದರು. ನಂತರ ಅದೇ ಫೋಟೊವನ್ನು ಬಳಸಿ ದಿ ಡೈಲಿ ವೈರ್ ಎನ್ನುವ ಮಾಧ್ಯಮ ಸಂಸ್ಥೆಯೂ 2017ರಲ್ಲಿ ಟ್ರಂಪ್‌ರವರು ಯೋಧ ಮೆಕ್‌ಲ್ಹಾನ್ ಎಂಬುವವರಿಗೆ ಸನ್ಮಾನ ಮಾಡುತ್ತಿರುವ ಫೋಟೊದೊಂದಿಗೆ ಸೇರಿಸಿ ಫೋಟೊಶಾಪ್ ಮಾಡಿ ಟ್ವೀಟ್ ಮಾಡಿತ್ತು.

ಅದನ್ನು ನೇರ ಎತ್ತಿಕೊಂಡು ಟ್ರಂಪ್ ತಮ್ಮ ಟ್ವಿಟ್ಟರ್ ಅಕೌಂಟ್‌ನಿಂದ ಷೇರ್ ಮಾಡಿಬಿಟ್ಟರು. ಕನಿಷ್ಟ ಸ್ಪಷ್ಟನೆಯನ್ನು ಸಹ ಅವರು ನೀಡಲಿಲ್ಲ.

ಆ ಫೋಟೊ ಶಾಪ್ ಮಾಡಿದ ಫೋಟೊವನ್ನು ಜನ ನಿಜವೆಂದು ನಂಬಿ ಟ್ರಂಪ್‌ನನ್ನು ಹೊಗಳಿದ್ದೇ ಹೊಗಳಿದ್ದು. ನೋಡಿ ಒಂದು ನಾಯಿಗೂ ನಮ್ಮ ಟ್ರಂಪ್ ಎಷ್ಟು ಮಹತ್ವ ಕೊಡುತ್ತಾರೆ ಎಂದು ಬಹುಫರಾಕ್ ಹೇಳಿದರು. ಟ್ರಂಪ್ ಅದನ್ನು ಆಸ್ವಾದಿಸಿದರು.. ನೋಡಿ ಅಮೇರಿಕದ ದೊಡ್ಡಣ್ಣ ಸಹ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು.

2. ಟಿಪ್ಪು ಸುಲ್ತಾನನ ಅಸಲಿ ಫೋಟೊ ಯಾವುದು?

ಅಪ್ರತಿಮ ಹೋರಾಟಗಾರ ಟಿಪ್ಪು ಸುಲ್ತಾನ್ ಕಂಡರೆ ಬಿಜೆಪಿಯವರಿಗೆ ಎಣ್ಣೆ ಸೀಗೆಕಾಯಿ ಇದ್ದಹಾಗೆ. ಟಿಪ್ಪು ಮಾಡಿರುವ ಅಸಂಖ್ಯ ಸಾಧನೆಗಳು ಕಣ್ಣಿಗೆ ರಾಚುತ್ತಿದ್ದರು ಅದನ್ನು ಸಹಿಸಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಸದಾ ಟಿಪ್ಪು ವಿರೋಧಿ ಭಾವನೆ ಮೂಡುವಂತೆ, ಟಿಪ್ಪುವಿನ ವಿರುದ್ಧ ಸುಳ್ಳುಗಳನ್ನು ಹಬ್ಬಿಸುತ್ತಿರುತ್ತಾರೆ. ಅದರಲ್ಲಿ ಆತನ ಫೋಟೊದು ಒಂದು.

ಟಿಪ್ಪುವಿನ ಫೋಟೊದ ಜೊತೆಗೆ ಇನ್ನೊಬ್ಬರ ಕಪ್ಪು ಬಣ್ಣದ ಫೋಟೊ ಕೊಲಾಜ್ ಮಾಡಿ ಅವರೇ ಟಿಪ್ಪು ಸುಲ್ತಾನ್ ಎಂದು ಬಿಜೆಪಿಯ ಹಲವಾರು ಸಂಸದರು, ಶಾಸಕರು ದೇಶಾದ್ಯಂತ ಸುಳ್ಳು ಹಬ್ಬಿಸುತ್ತಿದ್ದಾರೆ.

ಆದರೆ ಸತ್ಯ ಏನೆಂದರೆ ಫೋಟೊದಲ್ಲಿರುವ ಕಪ್ಪುವ್ಯಕ್ತಿ ಟಿಪ್ಪುವಲ್ಲ. ಆಫ್ರಿಕಾದ ಗುಲಾಮರ ಮಾರಾಟಗಾರ ಟಿಪ್ಪು ಟಿಪ್ ಎಂಬುವವರ ಫೋಟೊವನ್ನು ಬಳಸಿ ಜನರಲ್ಲಿ ಗೊಂದಲ ಹುಟ್ಟಿಸುತ್ತಿದ್ದಾರೆ ಅಷ್ಟೇ. ಗೂಗಲ್ ಸರ್ಚ್ನಲ್ಲಿ ಸಂಪೂರ್ಣ ವಿವರ ಸಿಕ್ಕಿಬಿಡುತ್ತದೆ. ಆದರೇನು ಮಾಡುವುದು ಟಿಪ್ಪು ಅನ್ಯಧರ್ಮೀಯ ಎಂಬ ಏಕೈಕ ಕಾರಣಕ್ಕೆ ಅಪಪ್ರಚಾರಕ್ಕೊಳಗಾಗಬೇಕಿದೆ.

3 ಭಾರತೀಯರ ಮನಕಲಕಿದ ಈ ಪುಟ್ಟ ಬಾಲೆ ರೋಹಿಂಗ್ಯ ಮುಸ್ಲಿಮಳೆ?

ಈಕೆ ರೋಹಿಂಗ್ಯ ಮುಸ್ಲಿ ಹುಡುಗಿ. ಯೋಗಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಎಡಪಂಥೀಯರು ಮತ್ತು ಜಾತ್ಯಾತೀತವಾದಿಗಳು ದೀಪಾವಳಿಯಂದು ಆಕೆಯನ್ನು ಅಯೋಧ್ಯೆಗೆ ತಂದು ಪಿತೂರಿ ನಡೆಸಿದ್ದಾರೆ ಎಂದೆಲ್ಲಾ ಸುಳ್ಳು ಸಂದೇಶಗಳನ್ನು ಹರಡಲಾಯಿತು.

ಹಿಂದೂ ಧರ್ಮ ಯೋಧ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಈ ಸಂದೇಶ 15 ಸಾವಿರ ಬಾರಿ ಷೇರ್ ಆಗಿದೆ.

ಸತ್ಯವೇನೆಂದರೆ ಉತ್ತರಪ್ರದೇಶದ ಸರ್ಕಾರ ಅಯೋಧ್ಯೆಯಲ್ಲಿ ದೀಪಾವಳಿಯ ಸಂಭ್ರಮಕ್ಕೆಂದು ಐದೂವರೆ ಲಕ್ಷ ಹಣತೆಗಳನ್ನು ಬೆಳಗಿಸಿತು. ಬಳಸಿದ ಎಣ್ಣೆ 20 ಸಾವಿರ ಲೀಟರುಗಳು. ಈ ಉತ್ಸವಕ್ಕೆ ತಗುಲಿದ ಅಂದಾಜು ವೆಚ್ಚ 133 ಕೋಟಿ ರುಪಾಯಿಗಳು. ಏಳೆಂಟು ವರ್ಷದ ವಯಸ್ಸಿನ ಬಡ ಬಾಲಕಿಯೊಬ್ಬಳು ತನ್ನ ಗುಡಿಸಿಲಿಗೆ ಒಯ್ಯಲು ಆರಿ ಹೋಗಿದ್ದ ಹಣತೆಗಳಿಂದ ಪ್ಲಾಸ್ಟಿಕ್ ಬಾಟಲಿಯೊಂದಕ್ಕೆ ಎಣ್ಣೆ ಬಸಿದುಕೊಳ್ಳುತ್ತಿದ್ದಳು. ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ನಮ್ಮೆಲ್ಲರ ಆತ್ಮಸಾಕ್ಷಿಯನ್ನು ಪ್ರಶ್ನಿಸುತ್ತಿತ್ತು. ಒಂದು ರೀತಿಯಲ್ಲಿ ಉತ್ತರ ಪ್ರದೇಶ ಸರ್ಕಾರವನ್ನು ಚುಚ್ಚುತ್ತಿತ್ತು. ಹಗಾಗಿ ಸರ್ಕಾರದ ಭಕ್ತರು ಸುಳ್ಳು ಸುದ್ದಿ ಹರಡಿದ್ದಾರೆ ಅಷ್ಟೇ.

ಚಿತ್ರದಲ್ಲಿರುವ ಎರಡನೇ ಹುಡುಗಿ ಮಾತ್ರ ರೋಹಿಂಗ್ಯ ಮುಸ್ಲಿಂಳಾಗಿದ್ದಾರೆ.

4 ಸಿಎಂ ಆಗಲು ದರ್ಗಾಗೆ ಭೇಟಿ ನೀಡಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ?

ಮಹಾರಾಷ್ಟ್ರ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದ ನಂತರ ಸಿಎಂ ಆಗುವ ಆಸೆಯಿಂದ ದರ್ಗಾಗೆ ತೆರಳಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ. ಅಧಿಕಾರಕ್ಕಾಗಿ ಏನನ್ನು ಬೇಕಾದರೂ ಮಾಡುತ್ತಾರೆ ಎಂಬ ವಿಡಿಯೋ ಫೇಸ್‌ಬುಕ್‌ನಲ್ಲಿ ವೈರಲ್ ಆಗಿದೆ. ಟ್ವಿಟ್ಟರ್‌ನಲ್ಲಿ ನರೇಂದ್ರ ಮೋದಿಯವರು ಸಹ ಫಾಲೋ ಮಾಡುವ ಗೌರವ್ ಪ್ರಧಾನ್ ಎಂಬ ಬಿಜೆಪಿ ನಾಯಕ ಕೂಡ ಇದೇ ಸುಳ್ಳನ್ನು ಹರಡಿದ್ದಾರೆ. ಜೊತೆಗೆ ಬಾಳಾಸಾಹೇಬ್ ಮತ್ತೊಮ್ಮೆ ಸತ್ತರು ಎಂದು ಉದ್ಘಾರ ತೆಗೆದಿದ್ದಾರೆ.

ಆದರೆ ಸತ್ಯ ಏನೆಂದರೆ ಅದು ಹಳೆಯ ವಿಡಿಯೋ. 2017ರಲ್ಲಿ ಆದಿತ್ಯ ಠಾಕ್ರೆ ದರ್ಗಾಗೆ ಭೇಟಿ ವಿಡಿಯೋವನ್ನು ಚುನಾವನಾ ಫಲಿತಾಂಶದ ನಂತರ ಪೋಸ್ಟ್ ಮಾಡಿ ಸುಳ್ಳು ಹರಡುತ್ತಿದ್ದಾರೆ ಅಷ್ಟೇ.

5. ನನ್ನ ಮತ್ತು ಆಕೆಯ ನಡುವೆ ನಡೆದಿರುವುದು ಅತ್ಯಾಚಾರವಲ್ಲ. ಕೊನೆಗೂ ಪವಿತ್ರ ಏಸುವಿನ ಮಾಂತ್ರಿಕ ಅಸ್ತಿತ್ವವನ್ನು ಅನುಭವಿಸುವ ಜ್ಞಾನೋದಯದ ಹೋಳಿ ಆಚರಣೆಯಾಗಿದೆ ಎಂದ ಕ್ರೈಸ್ತ ಪಾದ್ರಿ?

 

ಈ ರೀತಿಯ ಸಂದೇಶವನ್ನು, ಟಿವಿ ವಾಹಿನಿಯ ಚಿತ್ರವೊಂದನ್ನು ಷೇರ್ ಮಾಡಿ ಕ್ರೈಸ್ತರನ್ನು ದೂಷಿಸಲಾಗಿದೆ. ಜೊತೆಗೆ ಮತಾಂತರವನ್ನು ಹಳಿಯಲಾಗಿದೆ. ಟ್ವಿಟ್ಟರ್‌ನಲ್ಲಿ 20 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ಮಧುಪೂರ್ಣಿಮ ಕಿಶ್ವರ್ ಎಂಬುವವರು ಸಹ ಇದನ್ನು ಪೋಸ್ಟ್ ಮಾಡಿದ್ದಾರೆ.

ಆದರೆ ಇದನ್ನು ಮೊದಲ ಪೋಸ್ಟ್ ಮಾಡಿದ ‘ದಿ ಅನ್‌ಪೆಯ್ಡ್ ಟೈಮ್ಸ್’ ಎಂಬ ಅಕೌಂಟ್ ತಾನು ಸುಳ್ಳು ಸುದ್ದಿ ಹಬ್ಬಿಸಲು ಇರುವ ಅಕೌಂಟ್ ಎಂದು ಘೋಷಿಸಿಕೊಂಡಿದೆ. ಅದನ್ನು ಇವರೆಲ್ಲಾ ನಿಜ ಎಂದು  ನಂಬಿ ಷೇರ್ ಮಾಡಿದ್ದಾರೆ. ಇಡೀ ಪ್ರಕರಣೆ ಕಲ್ಪಿತವಾದುದ್ದೇ ವಿನಃ ಸತ್ಯವಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...