Homeನಿಜವೋ ಸುಳ್ಳೋಸಿಎಂ ಆಗಲು ದರ್ಗಾಗೆ ಭೇಟಿ ನೀಡಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ?

ಸಿಎಂ ಆಗಲು ದರ್ಗಾಗೆ ಭೇಟಿ ನೀಡಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ?

- Advertisement -
- Advertisement -

| ಮುತ್ತುರಾಜ್ |

1. ಐಸಿಸ್ ಸ್ಥಾಪಕ ಬಾಗ್ದಾದಿಯನ್ನು ಹುಡಕಿಕೊಟ್ಟ ನಾಯಿಗೆ ಸನ್ಮಾನಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್!!

ಹೌದು ಸ್ವತಃ ಡೊನಾಲ್ಡ್ ಟ್ರಂಪ್‌ರವರು ಟ್ವೀಟ್ ಮಾಡಿರುವ ಈ ಫೋಟೊ ನೋಡಿದಾಕ್ಷಣ ಎಲ್ಲರಿಗೂ ಹೌದಲ್ಲವೇ ಎನಿಸುತ್ತದೆ. ಆದರೆ ಸತ್ಯ ಏನೆಂದರೆ ಅದು ಫೋಟೊಶಾಪ್ ಮಾಡಿರುವ ಚಿತ್ರ.

ಅಕ್ಟೋಬರ್ 30ರಂದು ಟ್ರಂಪ್‌ರವರು ಕೇವಲ ಆ ನಾಯಿಯ ಫೋಟೊ ಹಾಕಿ ಟ್ವೀಟ್ ಮಾಡಿದ್ದರು. ನಂತರ ಅದೇ ಫೋಟೊವನ್ನು ಬಳಸಿ ದಿ ಡೈಲಿ ವೈರ್ ಎನ್ನುವ ಮಾಧ್ಯಮ ಸಂಸ್ಥೆಯೂ 2017ರಲ್ಲಿ ಟ್ರಂಪ್‌ರವರು ಯೋಧ ಮೆಕ್‌ಲ್ಹಾನ್ ಎಂಬುವವರಿಗೆ ಸನ್ಮಾನ ಮಾಡುತ್ತಿರುವ ಫೋಟೊದೊಂದಿಗೆ ಸೇರಿಸಿ ಫೋಟೊಶಾಪ್ ಮಾಡಿ ಟ್ವೀಟ್ ಮಾಡಿತ್ತು.

ಅದನ್ನು ನೇರ ಎತ್ತಿಕೊಂಡು ಟ್ರಂಪ್ ತಮ್ಮ ಟ್ವಿಟ್ಟರ್ ಅಕೌಂಟ್‌ನಿಂದ ಷೇರ್ ಮಾಡಿಬಿಟ್ಟರು. ಕನಿಷ್ಟ ಸ್ಪಷ್ಟನೆಯನ್ನು ಸಹ ಅವರು ನೀಡಲಿಲ್ಲ.

ಆ ಫೋಟೊ ಶಾಪ್ ಮಾಡಿದ ಫೋಟೊವನ್ನು ಜನ ನಿಜವೆಂದು ನಂಬಿ ಟ್ರಂಪ್‌ನನ್ನು ಹೊಗಳಿದ್ದೇ ಹೊಗಳಿದ್ದು. ನೋಡಿ ಒಂದು ನಾಯಿಗೂ ನಮ್ಮ ಟ್ರಂಪ್ ಎಷ್ಟು ಮಹತ್ವ ಕೊಡುತ್ತಾರೆ ಎಂದು ಬಹುಫರಾಕ್ ಹೇಳಿದರು. ಟ್ರಂಪ್ ಅದನ್ನು ಆಸ್ವಾದಿಸಿದರು.. ನೋಡಿ ಅಮೇರಿಕದ ದೊಡ್ಡಣ್ಣ ಸಹ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು.

2. ಟಿಪ್ಪು ಸುಲ್ತಾನನ ಅಸಲಿ ಫೋಟೊ ಯಾವುದು?

ಅಪ್ರತಿಮ ಹೋರಾಟಗಾರ ಟಿಪ್ಪು ಸುಲ್ತಾನ್ ಕಂಡರೆ ಬಿಜೆಪಿಯವರಿಗೆ ಎಣ್ಣೆ ಸೀಗೆಕಾಯಿ ಇದ್ದಹಾಗೆ. ಟಿಪ್ಪು ಮಾಡಿರುವ ಅಸಂಖ್ಯ ಸಾಧನೆಗಳು ಕಣ್ಣಿಗೆ ರಾಚುತ್ತಿದ್ದರು ಅದನ್ನು ಸಹಿಸಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಸದಾ ಟಿಪ್ಪು ವಿರೋಧಿ ಭಾವನೆ ಮೂಡುವಂತೆ, ಟಿಪ್ಪುವಿನ ವಿರುದ್ಧ ಸುಳ್ಳುಗಳನ್ನು ಹಬ್ಬಿಸುತ್ತಿರುತ್ತಾರೆ. ಅದರಲ್ಲಿ ಆತನ ಫೋಟೊದು ಒಂದು.

ಟಿಪ್ಪುವಿನ ಫೋಟೊದ ಜೊತೆಗೆ ಇನ್ನೊಬ್ಬರ ಕಪ್ಪು ಬಣ್ಣದ ಫೋಟೊ ಕೊಲಾಜ್ ಮಾಡಿ ಅವರೇ ಟಿಪ್ಪು ಸುಲ್ತಾನ್ ಎಂದು ಬಿಜೆಪಿಯ ಹಲವಾರು ಸಂಸದರು, ಶಾಸಕರು ದೇಶಾದ್ಯಂತ ಸುಳ್ಳು ಹಬ್ಬಿಸುತ್ತಿದ್ದಾರೆ.

ಆದರೆ ಸತ್ಯ ಏನೆಂದರೆ ಫೋಟೊದಲ್ಲಿರುವ ಕಪ್ಪುವ್ಯಕ್ತಿ ಟಿಪ್ಪುವಲ್ಲ. ಆಫ್ರಿಕಾದ ಗುಲಾಮರ ಮಾರಾಟಗಾರ ಟಿಪ್ಪು ಟಿಪ್ ಎಂಬುವವರ ಫೋಟೊವನ್ನು ಬಳಸಿ ಜನರಲ್ಲಿ ಗೊಂದಲ ಹುಟ್ಟಿಸುತ್ತಿದ್ದಾರೆ ಅಷ್ಟೇ. ಗೂಗಲ್ ಸರ್ಚ್ನಲ್ಲಿ ಸಂಪೂರ್ಣ ವಿವರ ಸಿಕ್ಕಿಬಿಡುತ್ತದೆ. ಆದರೇನು ಮಾಡುವುದು ಟಿಪ್ಪು ಅನ್ಯಧರ್ಮೀಯ ಎಂಬ ಏಕೈಕ ಕಾರಣಕ್ಕೆ ಅಪಪ್ರಚಾರಕ್ಕೊಳಗಾಗಬೇಕಿದೆ.

3 ಭಾರತೀಯರ ಮನಕಲಕಿದ ಈ ಪುಟ್ಟ ಬಾಲೆ ರೋಹಿಂಗ್ಯ ಮುಸ್ಲಿಮಳೆ?

ಈಕೆ ರೋಹಿಂಗ್ಯ ಮುಸ್ಲಿ ಹುಡುಗಿ. ಯೋಗಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಎಡಪಂಥೀಯರು ಮತ್ತು ಜಾತ್ಯಾತೀತವಾದಿಗಳು ದೀಪಾವಳಿಯಂದು ಆಕೆಯನ್ನು ಅಯೋಧ್ಯೆಗೆ ತಂದು ಪಿತೂರಿ ನಡೆಸಿದ್ದಾರೆ ಎಂದೆಲ್ಲಾ ಸುಳ್ಳು ಸಂದೇಶಗಳನ್ನು ಹರಡಲಾಯಿತು.

ಹಿಂದೂ ಧರ್ಮ ಯೋಧ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಈ ಸಂದೇಶ 15 ಸಾವಿರ ಬಾರಿ ಷೇರ್ ಆಗಿದೆ.

ಸತ್ಯವೇನೆಂದರೆ ಉತ್ತರಪ್ರದೇಶದ ಸರ್ಕಾರ ಅಯೋಧ್ಯೆಯಲ್ಲಿ ದೀಪಾವಳಿಯ ಸಂಭ್ರಮಕ್ಕೆಂದು ಐದೂವರೆ ಲಕ್ಷ ಹಣತೆಗಳನ್ನು ಬೆಳಗಿಸಿತು. ಬಳಸಿದ ಎಣ್ಣೆ 20 ಸಾವಿರ ಲೀಟರುಗಳು. ಈ ಉತ್ಸವಕ್ಕೆ ತಗುಲಿದ ಅಂದಾಜು ವೆಚ್ಚ 133 ಕೋಟಿ ರುಪಾಯಿಗಳು. ಏಳೆಂಟು ವರ್ಷದ ವಯಸ್ಸಿನ ಬಡ ಬಾಲಕಿಯೊಬ್ಬಳು ತನ್ನ ಗುಡಿಸಿಲಿಗೆ ಒಯ್ಯಲು ಆರಿ ಹೋಗಿದ್ದ ಹಣತೆಗಳಿಂದ ಪ್ಲಾಸ್ಟಿಕ್ ಬಾಟಲಿಯೊಂದಕ್ಕೆ ಎಣ್ಣೆ ಬಸಿದುಕೊಳ್ಳುತ್ತಿದ್ದಳು. ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ನಮ್ಮೆಲ್ಲರ ಆತ್ಮಸಾಕ್ಷಿಯನ್ನು ಪ್ರಶ್ನಿಸುತ್ತಿತ್ತು. ಒಂದು ರೀತಿಯಲ್ಲಿ ಉತ್ತರ ಪ್ರದೇಶ ಸರ್ಕಾರವನ್ನು ಚುಚ್ಚುತ್ತಿತ್ತು. ಹಗಾಗಿ ಸರ್ಕಾರದ ಭಕ್ತರು ಸುಳ್ಳು ಸುದ್ದಿ ಹರಡಿದ್ದಾರೆ ಅಷ್ಟೇ.

ಚಿತ್ರದಲ್ಲಿರುವ ಎರಡನೇ ಹುಡುಗಿ ಮಾತ್ರ ರೋಹಿಂಗ್ಯ ಮುಸ್ಲಿಂಳಾಗಿದ್ದಾರೆ.

4 ಸಿಎಂ ಆಗಲು ದರ್ಗಾಗೆ ಭೇಟಿ ನೀಡಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ?

ಮಹಾರಾಷ್ಟ್ರ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದ ನಂತರ ಸಿಎಂ ಆಗುವ ಆಸೆಯಿಂದ ದರ್ಗಾಗೆ ತೆರಳಿದ ಶಿವಸೇನೆಯ ಯುವರಾಜ ಆದಿತ್ಯ ಠಾಕ್ರೆ. ಅಧಿಕಾರಕ್ಕಾಗಿ ಏನನ್ನು ಬೇಕಾದರೂ ಮಾಡುತ್ತಾರೆ ಎಂಬ ವಿಡಿಯೋ ಫೇಸ್‌ಬುಕ್‌ನಲ್ಲಿ ವೈರಲ್ ಆಗಿದೆ. ಟ್ವಿಟ್ಟರ್‌ನಲ್ಲಿ ನರೇಂದ್ರ ಮೋದಿಯವರು ಸಹ ಫಾಲೋ ಮಾಡುವ ಗೌರವ್ ಪ್ರಧಾನ್ ಎಂಬ ಬಿಜೆಪಿ ನಾಯಕ ಕೂಡ ಇದೇ ಸುಳ್ಳನ್ನು ಹರಡಿದ್ದಾರೆ. ಜೊತೆಗೆ ಬಾಳಾಸಾಹೇಬ್ ಮತ್ತೊಮ್ಮೆ ಸತ್ತರು ಎಂದು ಉದ್ಘಾರ ತೆಗೆದಿದ್ದಾರೆ.

ಆದರೆ ಸತ್ಯ ಏನೆಂದರೆ ಅದು ಹಳೆಯ ವಿಡಿಯೋ. 2017ರಲ್ಲಿ ಆದಿತ್ಯ ಠಾಕ್ರೆ ದರ್ಗಾಗೆ ಭೇಟಿ ವಿಡಿಯೋವನ್ನು ಚುನಾವನಾ ಫಲಿತಾಂಶದ ನಂತರ ಪೋಸ್ಟ್ ಮಾಡಿ ಸುಳ್ಳು ಹರಡುತ್ತಿದ್ದಾರೆ ಅಷ್ಟೇ.

5. ನನ್ನ ಮತ್ತು ಆಕೆಯ ನಡುವೆ ನಡೆದಿರುವುದು ಅತ್ಯಾಚಾರವಲ್ಲ. ಕೊನೆಗೂ ಪವಿತ್ರ ಏಸುವಿನ ಮಾಂತ್ರಿಕ ಅಸ್ತಿತ್ವವನ್ನು ಅನುಭವಿಸುವ ಜ್ಞಾನೋದಯದ ಹೋಳಿ ಆಚರಣೆಯಾಗಿದೆ ಎಂದ ಕ್ರೈಸ್ತ ಪಾದ್ರಿ?

 

ಈ ರೀತಿಯ ಸಂದೇಶವನ್ನು, ಟಿವಿ ವಾಹಿನಿಯ ಚಿತ್ರವೊಂದನ್ನು ಷೇರ್ ಮಾಡಿ ಕ್ರೈಸ್ತರನ್ನು ದೂಷಿಸಲಾಗಿದೆ. ಜೊತೆಗೆ ಮತಾಂತರವನ್ನು ಹಳಿಯಲಾಗಿದೆ. ಟ್ವಿಟ್ಟರ್‌ನಲ್ಲಿ 20 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ಮಧುಪೂರ್ಣಿಮ ಕಿಶ್ವರ್ ಎಂಬುವವರು ಸಹ ಇದನ್ನು ಪೋಸ್ಟ್ ಮಾಡಿದ್ದಾರೆ.

ಆದರೆ ಇದನ್ನು ಮೊದಲ ಪೋಸ್ಟ್ ಮಾಡಿದ ‘ದಿ ಅನ್‌ಪೆಯ್ಡ್ ಟೈಮ್ಸ್’ ಎಂಬ ಅಕೌಂಟ್ ತಾನು ಸುಳ್ಳು ಸುದ್ದಿ ಹಬ್ಬಿಸಲು ಇರುವ ಅಕೌಂಟ್ ಎಂದು ಘೋಷಿಸಿಕೊಂಡಿದೆ. ಅದನ್ನು ಇವರೆಲ್ಲಾ ನಿಜ ಎಂದು  ನಂಬಿ ಷೇರ್ ಮಾಡಿದ್ದಾರೆ. ಇಡೀ ಪ್ರಕರಣೆ ಕಲ್ಪಿತವಾದುದ್ದೇ ವಿನಃ ಸತ್ಯವಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...