Homeಕರ್ನಾಟಕಇಂದು ನೀವು ಮಿಸ್ ಮಾಡಿರುವ ’ನಾನುಗೌರಿ.ಕಾಮ್‌’ನ ಟಾಪ್ 5 ಸುದ್ದಿಗಳು!

ಇಂದು ನೀವು ಮಿಸ್ ಮಾಡಿರುವ ’ನಾನುಗೌರಿ.ಕಾಮ್‌’ನ ಟಾಪ್ 5 ಸುದ್ದಿಗಳು!

- Advertisement -
- Advertisement -

1. ಗೋದಿ ಮೀಡಿಯಾಗಳಿಗೆ ಸೆಡ್ಡು: ಸ್ವಂತ ಚಾನೆಲ್ ಆರಂಭಿಸಿದ ದೆಹಲಿಯ ಹೋರಾಟನಿರತ ರೈತರು!ಕೇಂದ್ರದ ವಿವಾದಾತ್ಮಕಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ಹೋರಾಡುತ್ತಿರುವ ರೈತರ ಪ್ರತಿಭಟನೆ 25ನೇ ದಿನಕ್ಕೆ ಕಾಲಿಟ್ಟಿದೆ. ರೈತರ ಹೋರಾಟಕ್ಕೆ ಹಲವೆಡೆಯಿಂದ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಆದರೆ ತಮ್ಮ ದಿಟ್ಟ ಹೋರಾಟವನ್ನು ಕೆಲ ಮಾಧ್ಯಮಗಳು ತೋರಿಸುತ್ತಿಲ್ಲ ಎಂದು ಅವನ್ನು ಗೋದಿ ಮೀಡಿಯಾ ಆರೋಪಿಸಿರುವ ರೈತರು ಅವುಗಳಿಗೆ ಸೆಡ್ಡು ಹೊಡೆದು ಸ್ವಂತ ಚಾನೆಲ್ ಆರಂಭಿಸಿದ್ದಾರೆ.(ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

2. ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ವಿಲೀನ ವಿವಾದ: ಸ್ಪಷ್ಟನೆ ನೀಡಿದ ಬಿಎಸ್‌ವೈ, ಎಚ್‌ಡಿಕೆರಾಜ್ಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ವಿಲೀನವಾಗಲಿದೆ ಎಂಬ ಊಹಪೋಹಗಳಿಗೆ ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಅಂತಹ ಯಾವುದೇ ಪ್ರಸ್ತಾಪ ತಮ್ಮ ಮುಂದಿಲ್ಲ, ವಿಲೀನ ಇಲ್ಲ ಎಂದು ತಿಳಿಸಿದ್ದಾರೆ. (ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

3. ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ – ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆ!ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ - ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆ!ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರಕಾರ ಇಲ್ಲಿ ಮಸೀದಿ ನಿರ್ಮಾಣಕ್ಕೆಂದು ನೀಡಿರುವ 5 ಎಕರೆ ಭೂಮಿಯಲ್ಲಿ ಬಾಬರಿ ಮಸೀದಿಗಿಂತ 4 ಪಟ್ಟು ದೊಡ್ಡ ಮಸೀದಿಯನ್ನು ನಿರ್ಮಿಸಲಾಗುತ್ತಿದೆ. ಜೊತೆಗೆ ಈ ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆಯೂ ನಿರ್ಮಾಣವಾಗಲಿದೆ. (ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

4.ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದವು ಎಂದು ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಪುನರುಚ್ಚರಿಸಿದ್ದಾರೆ. (ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

5. ಗುರುದ್ವಾರಕ್ಕೆ ಭೇಟಿ ನೀಡಿದ ಮೋದಿ : ’ಈ ನಾಟಕವೆಲ್ಲ ಬೇಡ’ ಎಂದ ನೆಟ್ಟಿಗರು!ಗುರುದ್ವಾರಕೇಂದ್ರ ಸರ್ಕಾರದ ನೂತನ ಕೃಷಿ ಕಾಯಿದೆಗಳ ವಿರುದ್ದ ಕಳೆದ 25 ದಿನಗಳಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದರೆ, ಪ್ರಧಾನಿ ಮೋದಿ ಸಿಖ್‌ ಸಮುದಾಯವನ್ನು ಮನವೊಲಿಸುವುದಕ್ಕಾಗಿ ನವ ದೆಹಲಿಯಲ್ಲಿರುವ ರಕಬ್‌ ಗಂಜ್‌ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. (ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...