Homeಕರ್ನಾಟಕಸೋನಿಯಾ ಗಾಂಧಿ ಜಗತ್ತಿನ 4ನೇ ಶ್ರೀಮಂತ ಮಹಿಳೆಯೇ? ಸತ್ಯ ಯಾವುದು??

ಸೋನಿಯಾ ಗಾಂಧಿ ಜಗತ್ತಿನ 4ನೇ ಶ್ರೀಮಂತ ಮಹಿಳೆಯೇ? ಸತ್ಯ ಯಾವುದು??

ಈ ವಾರದ ಟಾಪ್‌ 5 ಫೇಕ್‌ನ್ಯೂಸ್‌ಗಳು ಮತ್ತು ಅಸಲಿ ಸತ್ಯ ದಾಖಲೆಗಳೊಂದಿಗೆ ಇಲ್ಲಿದೆ.

- Advertisement -
- Advertisement -

1 ಸೋನಿಯಾ ಗಾಂಧಿ ಜಗತ್ತಿನ 4ನೇ ಶ್ರೀಮಂತ ಮಹಿಳೆಯೇ?
ಈ ರೀತಿಯ ಸುದ್ದಿ ಕಳೆದ ಒಂದು ತಿಂಗಳಿನಿಂದ ಎಲ್ಲಾ ಕಡೆ ಹರಿದಾಡುತ್ತಿದೆ. ಪೋಸ್ಟ್ ಕಾರ್ಡ್ ಕನ್ನಡ ಎನ್ನುವ ಕನ್ನಡದ ವೆಬ್‌ಸೈಟ್ ಅಂಬಾನಿ ಸಹೋದರರು ಶ್ರೀಮಂತರಾದರೂ ಸಹ (ಮೋದಿ ಸಹಾಯದಿಂದ) ಲಕ್ಷಾಂತರ ಭಾರತೀಯರಿಗೆ ಉದ್ಯೋಗ ನೀಡಿದ್ದಾರೆ. ವಿಶ್ವದ ನಾಲ್ಕನೇ ಅತ್ಯಂತ ಶ್ರೀಮಂತ ಮಹಿಳೆ ಸೋನಿಯಾ ಗಾಂಧಿ ಎಷ್ಟು ಭಾರತೀಯರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ? ಎಂದು ಆರೋಪಿಸಿದೆ.

ಜೊತೆಗೆ ಸಪೋರ್ಟ್ ಮೋದಿಜಿ ಅಂಡ್ ಬಿಜೆಪಿ ಎಂಬ ಇಂಗ್ಲಿಷ್ ಪೇಜ್‌ನಲ್ಲಿಯೂ ಇದೇ ಸುದ್ದಿ ಹರಿದಾಡಿದೆ. ಆಜ್ ತಕ್, ಒನ್‌ಇಂಡಿಯಾ, ದೈನಿಕ್ ಭಾಸ್ಕರ್ ಮತ್ತು ಸ್ವರಾಜ್ ನ್ಯೂಸ್‌ನಂತಹ ಚಾನೆಲ್‌ಗಳು ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಎಂದು ಸುದ್ದಿ ಮಾಡಿವೆ.

ಸತ್ಯ: ಸೋನಿಯಾ ಗಾಂಧಿ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂಬುದು ಅಪ್ಪಟ ಸುಳ್ಳು. ಈ ಬಾರಿಯ ಲೋಕಸಭಾ ಚುನಾವಣೆಗೆ ಅವರು ಸ್ಪರ್ಧಿಸಿದ್ದಾಗ ತಮ್ಮ ಬಳಿ 11.82 ಕೋಟಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು.

ಗೂಗಲ್‌ನಲ್ಲಿ ಪ್ರಪಂಚದ ಶ್ರೀಮಂತ ಮಹಿಳೆಯರ ಪಟ್ಟಿ ಪರಿಶೀಲಿಸಿದರೆ ಗೊತ್ತಾಗಿಬಿಡುತ್ತದೆ ಅವರು ಆ ಪಟ್ಟಿಯಲ್ಲಿಲ್ಲ ಎಂದು. ಹೋಗಲಿ ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಆಗಿದ್ದಾರ ಎಂದು ಚೆಕ್ ಮಾಡಿದರೆ ಅದು ಸಹ ಅಪ್ಪಟ ಸುಳ್ಳು ಸುದ್ದಿ. ಈ ಸುಳ್ಳನ್ನು ಪ್ರಕಟಿಸಿದ ಅಮೆರಿಕಾದ ಬಿಸಿನೆಸ್ ಇನ್‌ಸೈಡರ್ ಪತ್ರಿಕೆಯು ಸೋರ್ಸ್ ಎಂದು ‘World’s Luxury Guide’ ಅನ್ನು ಹೆಸರಿಸಿದೆ. ಅದರ ಮೂಲ ಹುಡುಕಿದರೆ ಆ ವೆಬ್‌ಸೈಟ್ ನಾಟ್ ಫಂಡ್ ಎಂದು ಬರುತ್ತಿದೆ.

ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.

2 ಮುಸ್ಲಿಂ ರಾಷ್ಟ್ರ ಸೌದಿ ಅರೇಬಿಯಾದಲ್ಲಿ ಭಗವದ್ಗೀತೆಯ ಅರೇಬಿಕ್ ಅವತರಣಿಕೆ ಬಿಡುಗಡೆ
“ಮುಸ್ಲಿಂ ರಾಷ್ಟ್ರ ಸೌದಿ ಅರೇಬಿಯಾನೇ ಭಗವದ್ಗೀತೆಯ ಅರೇಬಿಕ್ ಅವತರಣಿಕೆ ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಭಾರತ್ ಮಾತಾಕೀ ಜೈ ಎಂದರೆ ಸಾಕು ಇಸ್ಲಾಂ ಅಪಾಯದಲ್ಲಿದೆ ಎಂಬು ಬೊಬ್ಬಿರಿಯುತ್ತಾರೆ” ಎಂಬ ಪೋಸ್ಟ್ ಟ್ವಿಟ್ಟರ್, ಫೇಸ್‌ಬುಕ್‌ನಲ್ಲಿ ಹರಿದಾಡಿದೆ.

ಸತ್ಯ ಏನೆಂದರೆ ಸೌದಿ ಅರೇಬಿಯಾ ಈ ಕೆಲಸ ಮಾಡಿಲ್ಲ. ಬದಲಿಗೆ ಇಸ್ಕಾನ್ ಭಕ್ತರಾದ ರಾವನರಿ ಪ್ರಭು ಎಂಬುವವರು ಭಗವದ್ಗೀತೆಯನ್ನು ಅರೇಬಿಕ್ ಭಾಷೆಗೆ ಅನುವಾದ ಮಾಡಿದ್ದಾರೆ. ಅಷ್ಟೇ ಅಲ್ಲದೇ 11ನೇ ಶತಮಾನದಲ್ಲಿಯೇ ಅಲ್ ಬಿರೂನಿ ಎಂಬುವವರು ಅನುವಾದ ಮಾಡಲು ಯತ್ನಿಸಿದ್ದರು ಎಂಬುದಕ್ಕೆ ದಾಖಲೆಗಳಿವೆ.

3 ಕೇವಲ ಜಾಹೀರಾತಿಗಾಗಿ 1500 ಕೋಟಿ ಖರ್ಚು ಮಾಡಿದ ದೆಹಲಿ ಸರ್ಕಾರ?
ಹೀಗೆಂದು ಹೇಳಿದವರು ಕೇಂದ್ರ ಪರಿಸರ ಮತ್ತು ಹವಾಮಾನ ವೈಪರೀತ್ಯ ಸಚಿವ ಪ್ರಕಾಶ್ ಜಾವಡೆಕರ್. ಅದು ಕೂಡ ಬಹಿರಂಗ ಪತ್ರಿಕಾಗೋಷ್ಟಿಯಲ್ಲಿ. “1500 ಕೋಟಿ ಹಣವನ್ನು ಜಾಹೀರಾತಿಗಾಗಿ ಸುರಿಯುವುದಕ್ಕಿಂತ ಅದೇ ಹಣವನ್ನು ಪಂಜಾಬ್ ಮತ್ತು ಹರಿಯಾಣ ರೈತರಿಗೆ ನೀಡಬಹುದಾಗಿತ್ತು” ಎಂದು ಟೀಕಿಸಿದ್ದರು.


ಆದರೆ ಸತ್ಯ ಏನೆಂದರೆ ಒಂದು ವರ್ಷಕ್ಕೆ ಮಾತ್ರವಲ್ಲ ಇಡೀ ಐದು ವರ್ಷದ ಆಡಳಿತದಲ್ಲಿ ದೆಹಲಿಯ ಆಮ್‌ ಆದ್ಮಿ ಸರ್ಕಾರ 1500 ಕೋಟಿ ಹಣವನ್ನು ಜಾಹೀರಾತಿಗೆ ಖರ್ಚು ಮಾಡಿಲ್ಲ. ಅವರು ಮಾಡಿದ್ದು ಜಾವಡೆಕರ್ ಹೇಳಿದ್ದರಲ್ಲಿ ಅರ್ಧಕ್ಕಿಂತಲೂ ಕಡಿಮೆ. ಅಂದರೆ ಐದು ವರ್ಷದಲ್ಲಿ 692ಕೋಟಿ ರೂ ಮಾತ್ರ ಖರ್ಚು ಮಾಡಿದ್ದಾರೆ. ಆಮ್ ಆದ್ಮಿ ಸರ್ಕಾರದ ಮೇಲನ ದ್ವೇಷಕ್ಕಾಗಿ ಜಾವಡೆಕರ್ ಸುಳ್ಳು ಹೇಳಿದ್ದಾರೆ.

4 ಅಯೋಧ್ಯ ತೀರ್ಪು ಕುರಿತ ಮೋದಿಯನ್ನು ಬೈಯ್ದಿದ್ದಕ್ಕಾಗಿ ಸಭೆಯಿಂದ ಹೊರನಡೆದ ಒವೈಸಿ ಬೆಂಬಲಿಗರು!
ಅಯೋಧ್ಯ ತೀರ್ಪು ನ್ಯಾಯಯುತವಾಗಿಲ್ಲ, ಮೋದಿ ರಾಜಕೀಯ ಮಾಡಿದ್ದಾರೆ ಎಂದು ಒವೈಸಿ ಮೋದಿಯನ್ನು ಹಿಗ್ಗಾ ಮಗ್ಗಾ ಟೀಕಿಸಿದ್ದಕ್ಕೆ ಬೇಸರಗೊಂಡ ಆತನ ಬೆಂಬಲಿಗರು ಕಾರ್ಯಕ್ರಮ ಬಿಟ್ಟು ಹೊರಟು ಹೋದರು ಎಂಬ ವಿಡಿಯೋವನ್ನು ವೈರಲ್ ಮಾಡಲಾಗಿದೆ.

ಇದೆಲ್ಲಾ ಅಪ್ಪಟ ಸುಳ್ಳು. ಆ ವಿಡಿಯೋ 2018ನೇ ಇಸವಿಯ ಹಳೆಯದು. ಸಾರ್ವಜನಿಕ ಕಾರ್ಯಕ್ರಮದಲ್ಲಿ ಒವೈಸಿ ಮೋದಿಯವರನ್ನು ತೆಗಳಿದರು. ಆಗ ಸಭಿಕರಲ್ಲಿ ಒಬ್ಬ ಒವೈಸಿ ಕಡೆ ಚಪ್ಪಲಿ ತೂರಿದ ಆಗ ಒವೈಸಿ ಬೆಂಬಲಿಗರು ವೇದಿಕೆಯ ಕಡೆ ಧಾವಿಸಿದರು. ಪರಿಸ್ಥಿತಿ ಗಂಭೀರವಾಗಿತ್ತು. ಆಗ ಒವೈಸಿಯವರು ಬೆಂಬಲಿಗರ ಮನವೊಲಿಸಿ ತಮ್ಮ ಕುರ್ಚಿಗಳಲ್ಲಿ ಕುಳಿತುಕೊಳ್ಳುವಂತೆ ಮನವಿ ಮಾಡಿದರು. ಆಗ ಬೆಂಬಲಿಗರು ವೇದಿಕೆಯ ಕಡೆಯಿಂದ ತಮ್ಮ ಕುರ್ಚಿಗಳು ಇದ್ದಲ್ಲಿಗೆ ತೆರಳುತ್ತಿದ್ದ ವಿಡಿಯೋವನ್ನು ಕತ್ತರಿಸಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

5 ಸಿಎಂ ಕನಸು ಕಂಡಿದ್ದ ಆದಿತ್ಯ ಠಾಕ್ರೆಯ ಶಾಸಕ ಸ್ಥಾನವೇ ಢಮಾರ್?
ಮಹಾರಾಷ್ಟ್ರ ಸಿಎಂ ಆಗುವ ಕನಸು ಕಂಡಿದ್ದ ಆದಿತ್ಯ ಠಾಕ್ರೆಯ ಶಾಸಕ ಸ್ಥಾನವೇ ಢಮಾರ್ ಆಗಿದೆ. ಮಹಾ ನ್ಯಾಯವಾದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಎಂದು ಕರುನಾಡ-ವಾಣಿ ಎಂಬ ಕನ್ನಡದ ಫೇಸ್‌ಬುಕ್ ಪಟುದಲ್ಲಿ ಪ್ರಕಟಿಸಿಲಾಗಿದೆ. ಹೀಗಾಗಲು ಕಾರಣ ಆದಿತ್ಯ ಠಾಕ್ರೆ ತನ್ನ ಆಸ್ತಿ ಕುರಿತು ಚುನಾವಣಾ ಅಫಿಡವಿಟ್‌ನಲ್ಲಿ ತನ್ನ ಕಾರಿನ ಬೆಲೆ 6 ಲಕ್ಷ ಎಂದು ನಮೂದಿಸಿದ್ದಾರೆ. ಆದರೆ ನಿಜ ಎಂದರೆ ಆ ಕಾರಿನ ಒಂದು ಟೈರಿನ ಬೆಲೆಯೇ 6 ಲಕ್ಷ. ಅದನ್ನು ನ್ಯಾಯವಾದಿ ಕಂಡುಹಿಡಿದಿದ್ದಾರೆ ಹಾಗಾಗಿ ಅವರ ಶಾಸಕ ಸ್ಥಾನ ಢಮಾರ್ ಆಗಿದೆ ಎಂಬ ಸುಳ್ಳು ಸುದ್ದಿಯನ್ನು ಈ ಪುಟ ಹರಡಿದೆ.

ಇದೆಲ್ಲವೂ ಸಂಪೂರ್ಣ ಸುಳ್ಳಾಗಿದೆ. ಈ ಫೇಸ್ ಬುಕ್ ಪುಟ ಬಿಜೆಪಿಯನ್ನು ಬೆಂಬಲಿತ್ತಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಬಿಜೆಪಿಗೆ ಸರ್ಕಾರ ರಚಿಸಲು ಬೆಂಬಲ ಕೊಟ್ಟಿಲ್ಲ. ಹಾಗಾಗಿ ಶಿವಸೇನೆಯ ವಿರುದ್ಧ ಈ ಸುಳ್ಳನ್ನು ಹಬ್ಬಿಸಲಾಗಿದೆ. ಜನ ಎಷ್ಟು ದಡ್ಡರು ಎಂದರೆ ಈ ಸುಳ್ಳು ಸುದ್ದಿಯನ್ನು 10 ಸಾವಿರ ಜನ ಲೈಕ್ ಮಾಡಿದ್ದು 852 ಜನ ಷೇರ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...