Homeಕರ್ನಾಟಕಸೋನಿಯಾ ಗಾಂಧಿ ಜಗತ್ತಿನ 4ನೇ ಶ್ರೀಮಂತ ಮಹಿಳೆಯೇ? ಸತ್ಯ ಯಾವುದು??

ಸೋನಿಯಾ ಗಾಂಧಿ ಜಗತ್ತಿನ 4ನೇ ಶ್ರೀಮಂತ ಮಹಿಳೆಯೇ? ಸತ್ಯ ಯಾವುದು??

ಈ ವಾರದ ಟಾಪ್‌ 5 ಫೇಕ್‌ನ್ಯೂಸ್‌ಗಳು ಮತ್ತು ಅಸಲಿ ಸತ್ಯ ದಾಖಲೆಗಳೊಂದಿಗೆ ಇಲ್ಲಿದೆ.

- Advertisement -
- Advertisement -

1 ಸೋನಿಯಾ ಗಾಂಧಿ ಜಗತ್ತಿನ 4ನೇ ಶ್ರೀಮಂತ ಮಹಿಳೆಯೇ?
ಈ ರೀತಿಯ ಸುದ್ದಿ ಕಳೆದ ಒಂದು ತಿಂಗಳಿನಿಂದ ಎಲ್ಲಾ ಕಡೆ ಹರಿದಾಡುತ್ತಿದೆ. ಪೋಸ್ಟ್ ಕಾರ್ಡ್ ಕನ್ನಡ ಎನ್ನುವ ಕನ್ನಡದ ವೆಬ್‌ಸೈಟ್ ಅಂಬಾನಿ ಸಹೋದರರು ಶ್ರೀಮಂತರಾದರೂ ಸಹ (ಮೋದಿ ಸಹಾಯದಿಂದ) ಲಕ್ಷಾಂತರ ಭಾರತೀಯರಿಗೆ ಉದ್ಯೋಗ ನೀಡಿದ್ದಾರೆ. ವಿಶ್ವದ ನಾಲ್ಕನೇ ಅತ್ಯಂತ ಶ್ರೀಮಂತ ಮಹಿಳೆ ಸೋನಿಯಾ ಗಾಂಧಿ ಎಷ್ಟು ಭಾರತೀಯರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ? ಎಂದು ಆರೋಪಿಸಿದೆ.

ಜೊತೆಗೆ ಸಪೋರ್ಟ್ ಮೋದಿಜಿ ಅಂಡ್ ಬಿಜೆಪಿ ಎಂಬ ಇಂಗ್ಲಿಷ್ ಪೇಜ್‌ನಲ್ಲಿಯೂ ಇದೇ ಸುದ್ದಿ ಹರಿದಾಡಿದೆ. ಆಜ್ ತಕ್, ಒನ್‌ಇಂಡಿಯಾ, ದೈನಿಕ್ ಭಾಸ್ಕರ್ ಮತ್ತು ಸ್ವರಾಜ್ ನ್ಯೂಸ್‌ನಂತಹ ಚಾನೆಲ್‌ಗಳು ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಎಂದು ಸುದ್ದಿ ಮಾಡಿವೆ.

ಸತ್ಯ: ಸೋನಿಯಾ ಗಾಂಧಿ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂಬುದು ಅಪ್ಪಟ ಸುಳ್ಳು. ಈ ಬಾರಿಯ ಲೋಕಸಭಾ ಚುನಾವಣೆಗೆ ಅವರು ಸ್ಪರ್ಧಿಸಿದ್ದಾಗ ತಮ್ಮ ಬಳಿ 11.82 ಕೋಟಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು.

ಗೂಗಲ್‌ನಲ್ಲಿ ಪ್ರಪಂಚದ ಶ್ರೀಮಂತ ಮಹಿಳೆಯರ ಪಟ್ಟಿ ಪರಿಶೀಲಿಸಿದರೆ ಗೊತ್ತಾಗಿಬಿಡುತ್ತದೆ ಅವರು ಆ ಪಟ್ಟಿಯಲ್ಲಿಲ್ಲ ಎಂದು. ಹೋಗಲಿ ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಆಗಿದ್ದಾರ ಎಂದು ಚೆಕ್ ಮಾಡಿದರೆ ಅದು ಸಹ ಅಪ್ಪಟ ಸುಳ್ಳು ಸುದ್ದಿ. ಈ ಸುಳ್ಳನ್ನು ಪ್ರಕಟಿಸಿದ ಅಮೆರಿಕಾದ ಬಿಸಿನೆಸ್ ಇನ್‌ಸೈಡರ್ ಪತ್ರಿಕೆಯು ಸೋರ್ಸ್ ಎಂದು ‘World’s Luxury Guide’ ಅನ್ನು ಹೆಸರಿಸಿದೆ. ಅದರ ಮೂಲ ಹುಡುಕಿದರೆ ಆ ವೆಬ್‌ಸೈಟ್ ನಾಟ್ ಫಂಡ್ ಎಂದು ಬರುತ್ತಿದೆ.

ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.

2 ಮುಸ್ಲಿಂ ರಾಷ್ಟ್ರ ಸೌದಿ ಅರೇಬಿಯಾದಲ್ಲಿ ಭಗವದ್ಗೀತೆಯ ಅರೇಬಿಕ್ ಅವತರಣಿಕೆ ಬಿಡುಗಡೆ
“ಮುಸ್ಲಿಂ ರಾಷ್ಟ್ರ ಸೌದಿ ಅರೇಬಿಯಾನೇ ಭಗವದ್ಗೀತೆಯ ಅರೇಬಿಕ್ ಅವತರಣಿಕೆ ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಭಾರತ್ ಮಾತಾಕೀ ಜೈ ಎಂದರೆ ಸಾಕು ಇಸ್ಲಾಂ ಅಪಾಯದಲ್ಲಿದೆ ಎಂಬು ಬೊಬ್ಬಿರಿಯುತ್ತಾರೆ” ಎಂಬ ಪೋಸ್ಟ್ ಟ್ವಿಟ್ಟರ್, ಫೇಸ್‌ಬುಕ್‌ನಲ್ಲಿ ಹರಿದಾಡಿದೆ.

ಸತ್ಯ ಏನೆಂದರೆ ಸೌದಿ ಅರೇಬಿಯಾ ಈ ಕೆಲಸ ಮಾಡಿಲ್ಲ. ಬದಲಿಗೆ ಇಸ್ಕಾನ್ ಭಕ್ತರಾದ ರಾವನರಿ ಪ್ರಭು ಎಂಬುವವರು ಭಗವದ್ಗೀತೆಯನ್ನು ಅರೇಬಿಕ್ ಭಾಷೆಗೆ ಅನುವಾದ ಮಾಡಿದ್ದಾರೆ. ಅಷ್ಟೇ ಅಲ್ಲದೇ 11ನೇ ಶತಮಾನದಲ್ಲಿಯೇ ಅಲ್ ಬಿರೂನಿ ಎಂಬುವವರು ಅನುವಾದ ಮಾಡಲು ಯತ್ನಿಸಿದ್ದರು ಎಂಬುದಕ್ಕೆ ದಾಖಲೆಗಳಿವೆ.

3 ಕೇವಲ ಜಾಹೀರಾತಿಗಾಗಿ 1500 ಕೋಟಿ ಖರ್ಚು ಮಾಡಿದ ದೆಹಲಿ ಸರ್ಕಾರ?
ಹೀಗೆಂದು ಹೇಳಿದವರು ಕೇಂದ್ರ ಪರಿಸರ ಮತ್ತು ಹವಾಮಾನ ವೈಪರೀತ್ಯ ಸಚಿವ ಪ್ರಕಾಶ್ ಜಾವಡೆಕರ್. ಅದು ಕೂಡ ಬಹಿರಂಗ ಪತ್ರಿಕಾಗೋಷ್ಟಿಯಲ್ಲಿ. “1500 ಕೋಟಿ ಹಣವನ್ನು ಜಾಹೀರಾತಿಗಾಗಿ ಸುರಿಯುವುದಕ್ಕಿಂತ ಅದೇ ಹಣವನ್ನು ಪಂಜಾಬ್ ಮತ್ತು ಹರಿಯಾಣ ರೈತರಿಗೆ ನೀಡಬಹುದಾಗಿತ್ತು” ಎಂದು ಟೀಕಿಸಿದ್ದರು.


ಆದರೆ ಸತ್ಯ ಏನೆಂದರೆ ಒಂದು ವರ್ಷಕ್ಕೆ ಮಾತ್ರವಲ್ಲ ಇಡೀ ಐದು ವರ್ಷದ ಆಡಳಿತದಲ್ಲಿ ದೆಹಲಿಯ ಆಮ್‌ ಆದ್ಮಿ ಸರ್ಕಾರ 1500 ಕೋಟಿ ಹಣವನ್ನು ಜಾಹೀರಾತಿಗೆ ಖರ್ಚು ಮಾಡಿಲ್ಲ. ಅವರು ಮಾಡಿದ್ದು ಜಾವಡೆಕರ್ ಹೇಳಿದ್ದರಲ್ಲಿ ಅರ್ಧಕ್ಕಿಂತಲೂ ಕಡಿಮೆ. ಅಂದರೆ ಐದು ವರ್ಷದಲ್ಲಿ 692ಕೋಟಿ ರೂ ಮಾತ್ರ ಖರ್ಚು ಮಾಡಿದ್ದಾರೆ. ಆಮ್ ಆದ್ಮಿ ಸರ್ಕಾರದ ಮೇಲನ ದ್ವೇಷಕ್ಕಾಗಿ ಜಾವಡೆಕರ್ ಸುಳ್ಳು ಹೇಳಿದ್ದಾರೆ.

4 ಅಯೋಧ್ಯ ತೀರ್ಪು ಕುರಿತ ಮೋದಿಯನ್ನು ಬೈಯ್ದಿದ್ದಕ್ಕಾಗಿ ಸಭೆಯಿಂದ ಹೊರನಡೆದ ಒವೈಸಿ ಬೆಂಬಲಿಗರು!
ಅಯೋಧ್ಯ ತೀರ್ಪು ನ್ಯಾಯಯುತವಾಗಿಲ್ಲ, ಮೋದಿ ರಾಜಕೀಯ ಮಾಡಿದ್ದಾರೆ ಎಂದು ಒವೈಸಿ ಮೋದಿಯನ್ನು ಹಿಗ್ಗಾ ಮಗ್ಗಾ ಟೀಕಿಸಿದ್ದಕ್ಕೆ ಬೇಸರಗೊಂಡ ಆತನ ಬೆಂಬಲಿಗರು ಕಾರ್ಯಕ್ರಮ ಬಿಟ್ಟು ಹೊರಟು ಹೋದರು ಎಂಬ ವಿಡಿಯೋವನ್ನು ವೈರಲ್ ಮಾಡಲಾಗಿದೆ.

ಇದೆಲ್ಲಾ ಅಪ್ಪಟ ಸುಳ್ಳು. ಆ ವಿಡಿಯೋ 2018ನೇ ಇಸವಿಯ ಹಳೆಯದು. ಸಾರ್ವಜನಿಕ ಕಾರ್ಯಕ್ರಮದಲ್ಲಿ ಒವೈಸಿ ಮೋದಿಯವರನ್ನು ತೆಗಳಿದರು. ಆಗ ಸಭಿಕರಲ್ಲಿ ಒಬ್ಬ ಒವೈಸಿ ಕಡೆ ಚಪ್ಪಲಿ ತೂರಿದ ಆಗ ಒವೈಸಿ ಬೆಂಬಲಿಗರು ವೇದಿಕೆಯ ಕಡೆ ಧಾವಿಸಿದರು. ಪರಿಸ್ಥಿತಿ ಗಂಭೀರವಾಗಿತ್ತು. ಆಗ ಒವೈಸಿಯವರು ಬೆಂಬಲಿಗರ ಮನವೊಲಿಸಿ ತಮ್ಮ ಕುರ್ಚಿಗಳಲ್ಲಿ ಕುಳಿತುಕೊಳ್ಳುವಂತೆ ಮನವಿ ಮಾಡಿದರು. ಆಗ ಬೆಂಬಲಿಗರು ವೇದಿಕೆಯ ಕಡೆಯಿಂದ ತಮ್ಮ ಕುರ್ಚಿಗಳು ಇದ್ದಲ್ಲಿಗೆ ತೆರಳುತ್ತಿದ್ದ ವಿಡಿಯೋವನ್ನು ಕತ್ತರಿಸಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

5 ಸಿಎಂ ಕನಸು ಕಂಡಿದ್ದ ಆದಿತ್ಯ ಠಾಕ್ರೆಯ ಶಾಸಕ ಸ್ಥಾನವೇ ಢಮಾರ್?
ಮಹಾರಾಷ್ಟ್ರ ಸಿಎಂ ಆಗುವ ಕನಸು ಕಂಡಿದ್ದ ಆದಿತ್ಯ ಠಾಕ್ರೆಯ ಶಾಸಕ ಸ್ಥಾನವೇ ಢಮಾರ್ ಆಗಿದೆ. ಮಹಾ ನ್ಯಾಯವಾದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಎಂದು ಕರುನಾಡ-ವಾಣಿ ಎಂಬ ಕನ್ನಡದ ಫೇಸ್‌ಬುಕ್ ಪಟುದಲ್ಲಿ ಪ್ರಕಟಿಸಿಲಾಗಿದೆ. ಹೀಗಾಗಲು ಕಾರಣ ಆದಿತ್ಯ ಠಾಕ್ರೆ ತನ್ನ ಆಸ್ತಿ ಕುರಿತು ಚುನಾವಣಾ ಅಫಿಡವಿಟ್‌ನಲ್ಲಿ ತನ್ನ ಕಾರಿನ ಬೆಲೆ 6 ಲಕ್ಷ ಎಂದು ನಮೂದಿಸಿದ್ದಾರೆ. ಆದರೆ ನಿಜ ಎಂದರೆ ಆ ಕಾರಿನ ಒಂದು ಟೈರಿನ ಬೆಲೆಯೇ 6 ಲಕ್ಷ. ಅದನ್ನು ನ್ಯಾಯವಾದಿ ಕಂಡುಹಿಡಿದಿದ್ದಾರೆ ಹಾಗಾಗಿ ಅವರ ಶಾಸಕ ಸ್ಥಾನ ಢಮಾರ್ ಆಗಿದೆ ಎಂಬ ಸುಳ್ಳು ಸುದ್ದಿಯನ್ನು ಈ ಪುಟ ಹರಡಿದೆ.

ಇದೆಲ್ಲವೂ ಸಂಪೂರ್ಣ ಸುಳ್ಳಾಗಿದೆ. ಈ ಫೇಸ್ ಬುಕ್ ಪುಟ ಬಿಜೆಪಿಯನ್ನು ಬೆಂಬಲಿತ್ತಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಬಿಜೆಪಿಗೆ ಸರ್ಕಾರ ರಚಿಸಲು ಬೆಂಬಲ ಕೊಟ್ಟಿಲ್ಲ. ಹಾಗಾಗಿ ಶಿವಸೇನೆಯ ವಿರುದ್ಧ ಈ ಸುಳ್ಳನ್ನು ಹಬ್ಬಿಸಲಾಗಿದೆ. ಜನ ಎಷ್ಟು ದಡ್ಡರು ಎಂದರೆ ಈ ಸುಳ್ಳು ಸುದ್ದಿಯನ್ನು 10 ಸಾವಿರ ಜನ ಲೈಕ್ ಮಾಡಿದ್ದು 852 ಜನ ಷೇರ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...