Homeಕರ್ನಾಟಕಸೋನಿಯಾ ಗಾಂಧಿ ಜಗತ್ತಿನ 4ನೇ ಶ್ರೀಮಂತ ಮಹಿಳೆಯೇ? ಸತ್ಯ ಯಾವುದು??

ಸೋನಿಯಾ ಗಾಂಧಿ ಜಗತ್ತಿನ 4ನೇ ಶ್ರೀಮಂತ ಮಹಿಳೆಯೇ? ಸತ್ಯ ಯಾವುದು??

ಈ ವಾರದ ಟಾಪ್‌ 5 ಫೇಕ್‌ನ್ಯೂಸ್‌ಗಳು ಮತ್ತು ಅಸಲಿ ಸತ್ಯ ದಾಖಲೆಗಳೊಂದಿಗೆ ಇಲ್ಲಿದೆ.

- Advertisement -
- Advertisement -

1 ಸೋನಿಯಾ ಗಾಂಧಿ ಜಗತ್ತಿನ 4ನೇ ಶ್ರೀಮಂತ ಮಹಿಳೆಯೇ?
ಈ ರೀತಿಯ ಸುದ್ದಿ ಕಳೆದ ಒಂದು ತಿಂಗಳಿನಿಂದ ಎಲ್ಲಾ ಕಡೆ ಹರಿದಾಡುತ್ತಿದೆ. ಪೋಸ್ಟ್ ಕಾರ್ಡ್ ಕನ್ನಡ ಎನ್ನುವ ಕನ್ನಡದ ವೆಬ್‌ಸೈಟ್ ಅಂಬಾನಿ ಸಹೋದರರು ಶ್ರೀಮಂತರಾದರೂ ಸಹ (ಮೋದಿ ಸಹಾಯದಿಂದ) ಲಕ್ಷಾಂತರ ಭಾರತೀಯರಿಗೆ ಉದ್ಯೋಗ ನೀಡಿದ್ದಾರೆ. ವಿಶ್ವದ ನಾಲ್ಕನೇ ಅತ್ಯಂತ ಶ್ರೀಮಂತ ಮಹಿಳೆ ಸೋನಿಯಾ ಗಾಂಧಿ ಎಷ್ಟು ಭಾರತೀಯರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ? ಎಂದು ಆರೋಪಿಸಿದೆ.

ಜೊತೆಗೆ ಸಪೋರ್ಟ್ ಮೋದಿಜಿ ಅಂಡ್ ಬಿಜೆಪಿ ಎಂಬ ಇಂಗ್ಲಿಷ್ ಪೇಜ್‌ನಲ್ಲಿಯೂ ಇದೇ ಸುದ್ದಿ ಹರಿದಾಡಿದೆ. ಆಜ್ ತಕ್, ಒನ್‌ಇಂಡಿಯಾ, ದೈನಿಕ್ ಭಾಸ್ಕರ್ ಮತ್ತು ಸ್ವರಾಜ್ ನ್ಯೂಸ್‌ನಂತಹ ಚಾನೆಲ್‌ಗಳು ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಎಂದು ಸುದ್ದಿ ಮಾಡಿವೆ.

ಸತ್ಯ: ಸೋನಿಯಾ ಗಾಂಧಿ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂಬುದು ಅಪ್ಪಟ ಸುಳ್ಳು. ಈ ಬಾರಿಯ ಲೋಕಸಭಾ ಚುನಾವಣೆಗೆ ಅವರು ಸ್ಪರ್ಧಿಸಿದ್ದಾಗ ತಮ್ಮ ಬಳಿ 11.82 ಕೋಟಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು.

ಗೂಗಲ್‌ನಲ್ಲಿ ಪ್ರಪಂಚದ ಶ್ರೀಮಂತ ಮಹಿಳೆಯರ ಪಟ್ಟಿ ಪರಿಶೀಲಿಸಿದರೆ ಗೊತ್ತಾಗಿಬಿಡುತ್ತದೆ ಅವರು ಆ ಪಟ್ಟಿಯಲ್ಲಿಲ್ಲ ಎಂದು. ಹೋಗಲಿ ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಆಗಿದ್ದಾರ ಎಂದು ಚೆಕ್ ಮಾಡಿದರೆ ಅದು ಸಹ ಅಪ್ಪಟ ಸುಳ್ಳು ಸುದ್ದಿ. ಈ ಸುಳ್ಳನ್ನು ಪ್ರಕಟಿಸಿದ ಅಮೆರಿಕಾದ ಬಿಸಿನೆಸ್ ಇನ್‌ಸೈಡರ್ ಪತ್ರಿಕೆಯು ಸೋರ್ಸ್ ಎಂದು ‘World’s Luxury Guide’ ಅನ್ನು ಹೆಸರಿಸಿದೆ. ಅದರ ಮೂಲ ಹುಡುಕಿದರೆ ಆ ವೆಬ್‌ಸೈಟ್ ನಾಟ್ ಫಂಡ್ ಎಂದು ಬರುತ್ತಿದೆ.

ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.

2 ಮುಸ್ಲಿಂ ರಾಷ್ಟ್ರ ಸೌದಿ ಅರೇಬಿಯಾದಲ್ಲಿ ಭಗವದ್ಗೀತೆಯ ಅರೇಬಿಕ್ ಅವತರಣಿಕೆ ಬಿಡುಗಡೆ
“ಮುಸ್ಲಿಂ ರಾಷ್ಟ್ರ ಸೌದಿ ಅರೇಬಿಯಾನೇ ಭಗವದ್ಗೀತೆಯ ಅರೇಬಿಕ್ ಅವತರಣಿಕೆ ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಭಾರತ್ ಮಾತಾಕೀ ಜೈ ಎಂದರೆ ಸಾಕು ಇಸ್ಲಾಂ ಅಪಾಯದಲ್ಲಿದೆ ಎಂಬು ಬೊಬ್ಬಿರಿಯುತ್ತಾರೆ” ಎಂಬ ಪೋಸ್ಟ್ ಟ್ವಿಟ್ಟರ್, ಫೇಸ್‌ಬುಕ್‌ನಲ್ಲಿ ಹರಿದಾಡಿದೆ.

ಸತ್ಯ ಏನೆಂದರೆ ಸೌದಿ ಅರೇಬಿಯಾ ಈ ಕೆಲಸ ಮಾಡಿಲ್ಲ. ಬದಲಿಗೆ ಇಸ್ಕಾನ್ ಭಕ್ತರಾದ ರಾವನರಿ ಪ್ರಭು ಎಂಬುವವರು ಭಗವದ್ಗೀತೆಯನ್ನು ಅರೇಬಿಕ್ ಭಾಷೆಗೆ ಅನುವಾದ ಮಾಡಿದ್ದಾರೆ. ಅಷ್ಟೇ ಅಲ್ಲದೇ 11ನೇ ಶತಮಾನದಲ್ಲಿಯೇ ಅಲ್ ಬಿರೂನಿ ಎಂಬುವವರು ಅನುವಾದ ಮಾಡಲು ಯತ್ನಿಸಿದ್ದರು ಎಂಬುದಕ್ಕೆ ದಾಖಲೆಗಳಿವೆ.

3 ಕೇವಲ ಜಾಹೀರಾತಿಗಾಗಿ 1500 ಕೋಟಿ ಖರ್ಚು ಮಾಡಿದ ದೆಹಲಿ ಸರ್ಕಾರ?
ಹೀಗೆಂದು ಹೇಳಿದವರು ಕೇಂದ್ರ ಪರಿಸರ ಮತ್ತು ಹವಾಮಾನ ವೈಪರೀತ್ಯ ಸಚಿವ ಪ್ರಕಾಶ್ ಜಾವಡೆಕರ್. ಅದು ಕೂಡ ಬಹಿರಂಗ ಪತ್ರಿಕಾಗೋಷ್ಟಿಯಲ್ಲಿ. “1500 ಕೋಟಿ ಹಣವನ್ನು ಜಾಹೀರಾತಿಗಾಗಿ ಸುರಿಯುವುದಕ್ಕಿಂತ ಅದೇ ಹಣವನ್ನು ಪಂಜಾಬ್ ಮತ್ತು ಹರಿಯಾಣ ರೈತರಿಗೆ ನೀಡಬಹುದಾಗಿತ್ತು” ಎಂದು ಟೀಕಿಸಿದ್ದರು.


ಆದರೆ ಸತ್ಯ ಏನೆಂದರೆ ಒಂದು ವರ್ಷಕ್ಕೆ ಮಾತ್ರವಲ್ಲ ಇಡೀ ಐದು ವರ್ಷದ ಆಡಳಿತದಲ್ಲಿ ದೆಹಲಿಯ ಆಮ್‌ ಆದ್ಮಿ ಸರ್ಕಾರ 1500 ಕೋಟಿ ಹಣವನ್ನು ಜಾಹೀರಾತಿಗೆ ಖರ್ಚು ಮಾಡಿಲ್ಲ. ಅವರು ಮಾಡಿದ್ದು ಜಾವಡೆಕರ್ ಹೇಳಿದ್ದರಲ್ಲಿ ಅರ್ಧಕ್ಕಿಂತಲೂ ಕಡಿಮೆ. ಅಂದರೆ ಐದು ವರ್ಷದಲ್ಲಿ 692ಕೋಟಿ ರೂ ಮಾತ್ರ ಖರ್ಚು ಮಾಡಿದ್ದಾರೆ. ಆಮ್ ಆದ್ಮಿ ಸರ್ಕಾರದ ಮೇಲನ ದ್ವೇಷಕ್ಕಾಗಿ ಜಾವಡೆಕರ್ ಸುಳ್ಳು ಹೇಳಿದ್ದಾರೆ.

4 ಅಯೋಧ್ಯ ತೀರ್ಪು ಕುರಿತ ಮೋದಿಯನ್ನು ಬೈಯ್ದಿದ್ದಕ್ಕಾಗಿ ಸಭೆಯಿಂದ ಹೊರನಡೆದ ಒವೈಸಿ ಬೆಂಬಲಿಗರು!
ಅಯೋಧ್ಯ ತೀರ್ಪು ನ್ಯಾಯಯುತವಾಗಿಲ್ಲ, ಮೋದಿ ರಾಜಕೀಯ ಮಾಡಿದ್ದಾರೆ ಎಂದು ಒವೈಸಿ ಮೋದಿಯನ್ನು ಹಿಗ್ಗಾ ಮಗ್ಗಾ ಟೀಕಿಸಿದ್ದಕ್ಕೆ ಬೇಸರಗೊಂಡ ಆತನ ಬೆಂಬಲಿಗರು ಕಾರ್ಯಕ್ರಮ ಬಿಟ್ಟು ಹೊರಟು ಹೋದರು ಎಂಬ ವಿಡಿಯೋವನ್ನು ವೈರಲ್ ಮಾಡಲಾಗಿದೆ.

ಇದೆಲ್ಲಾ ಅಪ್ಪಟ ಸುಳ್ಳು. ಆ ವಿಡಿಯೋ 2018ನೇ ಇಸವಿಯ ಹಳೆಯದು. ಸಾರ್ವಜನಿಕ ಕಾರ್ಯಕ್ರಮದಲ್ಲಿ ಒವೈಸಿ ಮೋದಿಯವರನ್ನು ತೆಗಳಿದರು. ಆಗ ಸಭಿಕರಲ್ಲಿ ಒಬ್ಬ ಒವೈಸಿ ಕಡೆ ಚಪ್ಪಲಿ ತೂರಿದ ಆಗ ಒವೈಸಿ ಬೆಂಬಲಿಗರು ವೇದಿಕೆಯ ಕಡೆ ಧಾವಿಸಿದರು. ಪರಿಸ್ಥಿತಿ ಗಂಭೀರವಾಗಿತ್ತು. ಆಗ ಒವೈಸಿಯವರು ಬೆಂಬಲಿಗರ ಮನವೊಲಿಸಿ ತಮ್ಮ ಕುರ್ಚಿಗಳಲ್ಲಿ ಕುಳಿತುಕೊಳ್ಳುವಂತೆ ಮನವಿ ಮಾಡಿದರು. ಆಗ ಬೆಂಬಲಿಗರು ವೇದಿಕೆಯ ಕಡೆಯಿಂದ ತಮ್ಮ ಕುರ್ಚಿಗಳು ಇದ್ದಲ್ಲಿಗೆ ತೆರಳುತ್ತಿದ್ದ ವಿಡಿಯೋವನ್ನು ಕತ್ತರಿಸಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

5 ಸಿಎಂ ಕನಸು ಕಂಡಿದ್ದ ಆದಿತ್ಯ ಠಾಕ್ರೆಯ ಶಾಸಕ ಸ್ಥಾನವೇ ಢಮಾರ್?
ಮಹಾರಾಷ್ಟ್ರ ಸಿಎಂ ಆಗುವ ಕನಸು ಕಂಡಿದ್ದ ಆದಿತ್ಯ ಠಾಕ್ರೆಯ ಶಾಸಕ ಸ್ಥಾನವೇ ಢಮಾರ್ ಆಗಿದೆ. ಮಹಾ ನ್ಯಾಯವಾದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಎಂದು ಕರುನಾಡ-ವಾಣಿ ಎಂಬ ಕನ್ನಡದ ಫೇಸ್‌ಬುಕ್ ಪಟುದಲ್ಲಿ ಪ್ರಕಟಿಸಿಲಾಗಿದೆ. ಹೀಗಾಗಲು ಕಾರಣ ಆದಿತ್ಯ ಠಾಕ್ರೆ ತನ್ನ ಆಸ್ತಿ ಕುರಿತು ಚುನಾವಣಾ ಅಫಿಡವಿಟ್‌ನಲ್ಲಿ ತನ್ನ ಕಾರಿನ ಬೆಲೆ 6 ಲಕ್ಷ ಎಂದು ನಮೂದಿಸಿದ್ದಾರೆ. ಆದರೆ ನಿಜ ಎಂದರೆ ಆ ಕಾರಿನ ಒಂದು ಟೈರಿನ ಬೆಲೆಯೇ 6 ಲಕ್ಷ. ಅದನ್ನು ನ್ಯಾಯವಾದಿ ಕಂಡುಹಿಡಿದಿದ್ದಾರೆ ಹಾಗಾಗಿ ಅವರ ಶಾಸಕ ಸ್ಥಾನ ಢಮಾರ್ ಆಗಿದೆ ಎಂಬ ಸುಳ್ಳು ಸುದ್ದಿಯನ್ನು ಈ ಪುಟ ಹರಡಿದೆ.

ಇದೆಲ್ಲವೂ ಸಂಪೂರ್ಣ ಸುಳ್ಳಾಗಿದೆ. ಈ ಫೇಸ್ ಬುಕ್ ಪುಟ ಬಿಜೆಪಿಯನ್ನು ಬೆಂಬಲಿತ್ತಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಬಿಜೆಪಿಗೆ ಸರ್ಕಾರ ರಚಿಸಲು ಬೆಂಬಲ ಕೊಟ್ಟಿಲ್ಲ. ಹಾಗಾಗಿ ಶಿವಸೇನೆಯ ವಿರುದ್ಧ ಈ ಸುಳ್ಳನ್ನು ಹಬ್ಬಿಸಲಾಗಿದೆ. ಜನ ಎಷ್ಟು ದಡ್ಡರು ಎಂದರೆ ಈ ಸುಳ್ಳು ಸುದ್ದಿಯನ್ನು 10 ಸಾವಿರ ಜನ ಲೈಕ್ ಮಾಡಿದ್ದು 852 ಜನ ಷೇರ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...