Homeಕರ್ನಾಟಕಸೋನಿಯಾ ಗಾಂಧಿ ಜಗತ್ತಿನ 4ನೇ ಶ್ರೀಮಂತ ಮಹಿಳೆಯೇ? ಸತ್ಯ ಯಾವುದು??

ಸೋನಿಯಾ ಗಾಂಧಿ ಜಗತ್ತಿನ 4ನೇ ಶ್ರೀಮಂತ ಮಹಿಳೆಯೇ? ಸತ್ಯ ಯಾವುದು??

ಈ ವಾರದ ಟಾಪ್‌ 5 ಫೇಕ್‌ನ್ಯೂಸ್‌ಗಳು ಮತ್ತು ಅಸಲಿ ಸತ್ಯ ದಾಖಲೆಗಳೊಂದಿಗೆ ಇಲ್ಲಿದೆ.

- Advertisement -
- Advertisement -

1 ಸೋನಿಯಾ ಗಾಂಧಿ ಜಗತ್ತಿನ 4ನೇ ಶ್ರೀಮಂತ ಮಹಿಳೆಯೇ?
ಈ ರೀತಿಯ ಸುದ್ದಿ ಕಳೆದ ಒಂದು ತಿಂಗಳಿನಿಂದ ಎಲ್ಲಾ ಕಡೆ ಹರಿದಾಡುತ್ತಿದೆ. ಪೋಸ್ಟ್ ಕಾರ್ಡ್ ಕನ್ನಡ ಎನ್ನುವ ಕನ್ನಡದ ವೆಬ್‌ಸೈಟ್ ಅಂಬಾನಿ ಸಹೋದರರು ಶ್ರೀಮಂತರಾದರೂ ಸಹ (ಮೋದಿ ಸಹಾಯದಿಂದ) ಲಕ್ಷಾಂತರ ಭಾರತೀಯರಿಗೆ ಉದ್ಯೋಗ ನೀಡಿದ್ದಾರೆ. ವಿಶ್ವದ ನಾಲ್ಕನೇ ಅತ್ಯಂತ ಶ್ರೀಮಂತ ಮಹಿಳೆ ಸೋನಿಯಾ ಗಾಂಧಿ ಎಷ್ಟು ಭಾರತೀಯರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ? ಎಂದು ಆರೋಪಿಸಿದೆ.

ಜೊತೆಗೆ ಸಪೋರ್ಟ್ ಮೋದಿಜಿ ಅಂಡ್ ಬಿಜೆಪಿ ಎಂಬ ಇಂಗ್ಲಿಷ್ ಪೇಜ್‌ನಲ್ಲಿಯೂ ಇದೇ ಸುದ್ದಿ ಹರಿದಾಡಿದೆ. ಆಜ್ ತಕ್, ಒನ್‌ಇಂಡಿಯಾ, ದೈನಿಕ್ ಭಾಸ್ಕರ್ ಮತ್ತು ಸ್ವರಾಜ್ ನ್ಯೂಸ್‌ನಂತಹ ಚಾನೆಲ್‌ಗಳು ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಎಂದು ಸುದ್ದಿ ಮಾಡಿವೆ.

ಸತ್ಯ: ಸೋನಿಯಾ ಗಾಂಧಿ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂಬುದು ಅಪ್ಪಟ ಸುಳ್ಳು. ಈ ಬಾರಿಯ ಲೋಕಸಭಾ ಚುನಾವಣೆಗೆ ಅವರು ಸ್ಪರ್ಧಿಸಿದ್ದಾಗ ತಮ್ಮ ಬಳಿ 11.82 ಕೋಟಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು.

ಗೂಗಲ್‌ನಲ್ಲಿ ಪ್ರಪಂಚದ ಶ್ರೀಮಂತ ಮಹಿಳೆಯರ ಪಟ್ಟಿ ಪರಿಶೀಲಿಸಿದರೆ ಗೊತ್ತಾಗಿಬಿಡುತ್ತದೆ ಅವರು ಆ ಪಟ್ಟಿಯಲ್ಲಿಲ್ಲ ಎಂದು. ಹೋಗಲಿ ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಆಗಿದ್ದಾರ ಎಂದು ಚೆಕ್ ಮಾಡಿದರೆ ಅದು ಸಹ ಅಪ್ಪಟ ಸುಳ್ಳು ಸುದ್ದಿ. ಈ ಸುಳ್ಳನ್ನು ಪ್ರಕಟಿಸಿದ ಅಮೆರಿಕಾದ ಬಿಸಿನೆಸ್ ಇನ್‌ಸೈಡರ್ ಪತ್ರಿಕೆಯು ಸೋರ್ಸ್ ಎಂದು ‘World’s Luxury Guide’ ಅನ್ನು ಹೆಸರಿಸಿದೆ. ಅದರ ಮೂಲ ಹುಡುಕಿದರೆ ಆ ವೆಬ್‌ಸೈಟ್ ನಾಟ್ ಫಂಡ್ ಎಂದು ಬರುತ್ತಿದೆ.

ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.

2 ಮುಸ್ಲಿಂ ರಾಷ್ಟ್ರ ಸೌದಿ ಅರೇಬಿಯಾದಲ್ಲಿ ಭಗವದ್ಗೀತೆಯ ಅರೇಬಿಕ್ ಅವತರಣಿಕೆ ಬಿಡುಗಡೆ
“ಮುಸ್ಲಿಂ ರಾಷ್ಟ್ರ ಸೌದಿ ಅರೇಬಿಯಾನೇ ಭಗವದ್ಗೀತೆಯ ಅರೇಬಿಕ್ ಅವತರಣಿಕೆ ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಭಾರತ್ ಮಾತಾಕೀ ಜೈ ಎಂದರೆ ಸಾಕು ಇಸ್ಲಾಂ ಅಪಾಯದಲ್ಲಿದೆ ಎಂಬು ಬೊಬ್ಬಿರಿಯುತ್ತಾರೆ” ಎಂಬ ಪೋಸ್ಟ್ ಟ್ವಿಟ್ಟರ್, ಫೇಸ್‌ಬುಕ್‌ನಲ್ಲಿ ಹರಿದಾಡಿದೆ.

ಸತ್ಯ ಏನೆಂದರೆ ಸೌದಿ ಅರೇಬಿಯಾ ಈ ಕೆಲಸ ಮಾಡಿಲ್ಲ. ಬದಲಿಗೆ ಇಸ್ಕಾನ್ ಭಕ್ತರಾದ ರಾವನರಿ ಪ್ರಭು ಎಂಬುವವರು ಭಗವದ್ಗೀತೆಯನ್ನು ಅರೇಬಿಕ್ ಭಾಷೆಗೆ ಅನುವಾದ ಮಾಡಿದ್ದಾರೆ. ಅಷ್ಟೇ ಅಲ್ಲದೇ 11ನೇ ಶತಮಾನದಲ್ಲಿಯೇ ಅಲ್ ಬಿರೂನಿ ಎಂಬುವವರು ಅನುವಾದ ಮಾಡಲು ಯತ್ನಿಸಿದ್ದರು ಎಂಬುದಕ್ಕೆ ದಾಖಲೆಗಳಿವೆ.

3 ಕೇವಲ ಜಾಹೀರಾತಿಗಾಗಿ 1500 ಕೋಟಿ ಖರ್ಚು ಮಾಡಿದ ದೆಹಲಿ ಸರ್ಕಾರ?
ಹೀಗೆಂದು ಹೇಳಿದವರು ಕೇಂದ್ರ ಪರಿಸರ ಮತ್ತು ಹವಾಮಾನ ವೈಪರೀತ್ಯ ಸಚಿವ ಪ್ರಕಾಶ್ ಜಾವಡೆಕರ್. ಅದು ಕೂಡ ಬಹಿರಂಗ ಪತ್ರಿಕಾಗೋಷ್ಟಿಯಲ್ಲಿ. “1500 ಕೋಟಿ ಹಣವನ್ನು ಜಾಹೀರಾತಿಗಾಗಿ ಸುರಿಯುವುದಕ್ಕಿಂತ ಅದೇ ಹಣವನ್ನು ಪಂಜಾಬ್ ಮತ್ತು ಹರಿಯಾಣ ರೈತರಿಗೆ ನೀಡಬಹುದಾಗಿತ್ತು” ಎಂದು ಟೀಕಿಸಿದ್ದರು.


ಆದರೆ ಸತ್ಯ ಏನೆಂದರೆ ಒಂದು ವರ್ಷಕ್ಕೆ ಮಾತ್ರವಲ್ಲ ಇಡೀ ಐದು ವರ್ಷದ ಆಡಳಿತದಲ್ಲಿ ದೆಹಲಿಯ ಆಮ್‌ ಆದ್ಮಿ ಸರ್ಕಾರ 1500 ಕೋಟಿ ಹಣವನ್ನು ಜಾಹೀರಾತಿಗೆ ಖರ್ಚು ಮಾಡಿಲ್ಲ. ಅವರು ಮಾಡಿದ್ದು ಜಾವಡೆಕರ್ ಹೇಳಿದ್ದರಲ್ಲಿ ಅರ್ಧಕ್ಕಿಂತಲೂ ಕಡಿಮೆ. ಅಂದರೆ ಐದು ವರ್ಷದಲ್ಲಿ 692ಕೋಟಿ ರೂ ಮಾತ್ರ ಖರ್ಚು ಮಾಡಿದ್ದಾರೆ. ಆಮ್ ಆದ್ಮಿ ಸರ್ಕಾರದ ಮೇಲನ ದ್ವೇಷಕ್ಕಾಗಿ ಜಾವಡೆಕರ್ ಸುಳ್ಳು ಹೇಳಿದ್ದಾರೆ.

4 ಅಯೋಧ್ಯ ತೀರ್ಪು ಕುರಿತ ಮೋದಿಯನ್ನು ಬೈಯ್ದಿದ್ದಕ್ಕಾಗಿ ಸಭೆಯಿಂದ ಹೊರನಡೆದ ಒವೈಸಿ ಬೆಂಬಲಿಗರು!
ಅಯೋಧ್ಯ ತೀರ್ಪು ನ್ಯಾಯಯುತವಾಗಿಲ್ಲ, ಮೋದಿ ರಾಜಕೀಯ ಮಾಡಿದ್ದಾರೆ ಎಂದು ಒವೈಸಿ ಮೋದಿಯನ್ನು ಹಿಗ್ಗಾ ಮಗ್ಗಾ ಟೀಕಿಸಿದ್ದಕ್ಕೆ ಬೇಸರಗೊಂಡ ಆತನ ಬೆಂಬಲಿಗರು ಕಾರ್ಯಕ್ರಮ ಬಿಟ್ಟು ಹೊರಟು ಹೋದರು ಎಂಬ ವಿಡಿಯೋವನ್ನು ವೈರಲ್ ಮಾಡಲಾಗಿದೆ.

ಇದೆಲ್ಲಾ ಅಪ್ಪಟ ಸುಳ್ಳು. ಆ ವಿಡಿಯೋ 2018ನೇ ಇಸವಿಯ ಹಳೆಯದು. ಸಾರ್ವಜನಿಕ ಕಾರ್ಯಕ್ರಮದಲ್ಲಿ ಒವೈಸಿ ಮೋದಿಯವರನ್ನು ತೆಗಳಿದರು. ಆಗ ಸಭಿಕರಲ್ಲಿ ಒಬ್ಬ ಒವೈಸಿ ಕಡೆ ಚಪ್ಪಲಿ ತೂರಿದ ಆಗ ಒವೈಸಿ ಬೆಂಬಲಿಗರು ವೇದಿಕೆಯ ಕಡೆ ಧಾವಿಸಿದರು. ಪರಿಸ್ಥಿತಿ ಗಂಭೀರವಾಗಿತ್ತು. ಆಗ ಒವೈಸಿಯವರು ಬೆಂಬಲಿಗರ ಮನವೊಲಿಸಿ ತಮ್ಮ ಕುರ್ಚಿಗಳಲ್ಲಿ ಕುಳಿತುಕೊಳ್ಳುವಂತೆ ಮನವಿ ಮಾಡಿದರು. ಆಗ ಬೆಂಬಲಿಗರು ವೇದಿಕೆಯ ಕಡೆಯಿಂದ ತಮ್ಮ ಕುರ್ಚಿಗಳು ಇದ್ದಲ್ಲಿಗೆ ತೆರಳುತ್ತಿದ್ದ ವಿಡಿಯೋವನ್ನು ಕತ್ತರಿಸಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

5 ಸಿಎಂ ಕನಸು ಕಂಡಿದ್ದ ಆದಿತ್ಯ ಠಾಕ್ರೆಯ ಶಾಸಕ ಸ್ಥಾನವೇ ಢಮಾರ್?
ಮಹಾರಾಷ್ಟ್ರ ಸಿಎಂ ಆಗುವ ಕನಸು ಕಂಡಿದ್ದ ಆದಿತ್ಯ ಠಾಕ್ರೆಯ ಶಾಸಕ ಸ್ಥಾನವೇ ಢಮಾರ್ ಆಗಿದೆ. ಮಹಾ ನ್ಯಾಯವಾದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಎಂದು ಕರುನಾಡ-ವಾಣಿ ಎಂಬ ಕನ್ನಡದ ಫೇಸ್‌ಬುಕ್ ಪಟುದಲ್ಲಿ ಪ್ರಕಟಿಸಿಲಾಗಿದೆ. ಹೀಗಾಗಲು ಕಾರಣ ಆದಿತ್ಯ ಠಾಕ್ರೆ ತನ್ನ ಆಸ್ತಿ ಕುರಿತು ಚುನಾವಣಾ ಅಫಿಡವಿಟ್‌ನಲ್ಲಿ ತನ್ನ ಕಾರಿನ ಬೆಲೆ 6 ಲಕ್ಷ ಎಂದು ನಮೂದಿಸಿದ್ದಾರೆ. ಆದರೆ ನಿಜ ಎಂದರೆ ಆ ಕಾರಿನ ಒಂದು ಟೈರಿನ ಬೆಲೆಯೇ 6 ಲಕ್ಷ. ಅದನ್ನು ನ್ಯಾಯವಾದಿ ಕಂಡುಹಿಡಿದಿದ್ದಾರೆ ಹಾಗಾಗಿ ಅವರ ಶಾಸಕ ಸ್ಥಾನ ಢಮಾರ್ ಆಗಿದೆ ಎಂಬ ಸುಳ್ಳು ಸುದ್ದಿಯನ್ನು ಈ ಪುಟ ಹರಡಿದೆ.

ಇದೆಲ್ಲವೂ ಸಂಪೂರ್ಣ ಸುಳ್ಳಾಗಿದೆ. ಈ ಫೇಸ್ ಬುಕ್ ಪುಟ ಬಿಜೆಪಿಯನ್ನು ಬೆಂಬಲಿತ್ತಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಬಿಜೆಪಿಗೆ ಸರ್ಕಾರ ರಚಿಸಲು ಬೆಂಬಲ ಕೊಟ್ಟಿಲ್ಲ. ಹಾಗಾಗಿ ಶಿವಸೇನೆಯ ವಿರುದ್ಧ ಈ ಸುಳ್ಳನ್ನು ಹಬ್ಬಿಸಲಾಗಿದೆ. ಜನ ಎಷ್ಟು ದಡ್ಡರು ಎಂದರೆ ಈ ಸುಳ್ಳು ಸುದ್ದಿಯನ್ನು 10 ಸಾವಿರ ಜನ ಲೈಕ್ ಮಾಡಿದ್ದು 852 ಜನ ಷೇರ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...