Homeಕರ್ನಾಟಕಸೋನಿಯಾ ಗಾಂಧಿ ಜಗತ್ತಿನ 4ನೇ ಶ್ರೀಮಂತ ಮಹಿಳೆಯೇ? ಸತ್ಯ ಯಾವುದು??

ಸೋನಿಯಾ ಗಾಂಧಿ ಜಗತ್ತಿನ 4ನೇ ಶ್ರೀಮಂತ ಮಹಿಳೆಯೇ? ಸತ್ಯ ಯಾವುದು??

ಈ ವಾರದ ಟಾಪ್‌ 5 ಫೇಕ್‌ನ್ಯೂಸ್‌ಗಳು ಮತ್ತು ಅಸಲಿ ಸತ್ಯ ದಾಖಲೆಗಳೊಂದಿಗೆ ಇಲ್ಲಿದೆ.

- Advertisement -
- Advertisement -

1 ಸೋನಿಯಾ ಗಾಂಧಿ ಜಗತ್ತಿನ 4ನೇ ಶ್ರೀಮಂತ ಮಹಿಳೆಯೇ?
ಈ ರೀತಿಯ ಸುದ್ದಿ ಕಳೆದ ಒಂದು ತಿಂಗಳಿನಿಂದ ಎಲ್ಲಾ ಕಡೆ ಹರಿದಾಡುತ್ತಿದೆ. ಪೋಸ್ಟ್ ಕಾರ್ಡ್ ಕನ್ನಡ ಎನ್ನುವ ಕನ್ನಡದ ವೆಬ್‌ಸೈಟ್ ಅಂಬಾನಿ ಸಹೋದರರು ಶ್ರೀಮಂತರಾದರೂ ಸಹ (ಮೋದಿ ಸಹಾಯದಿಂದ) ಲಕ್ಷಾಂತರ ಭಾರತೀಯರಿಗೆ ಉದ್ಯೋಗ ನೀಡಿದ್ದಾರೆ. ವಿಶ್ವದ ನಾಲ್ಕನೇ ಅತ್ಯಂತ ಶ್ರೀಮಂತ ಮಹಿಳೆ ಸೋನಿಯಾ ಗಾಂಧಿ ಎಷ್ಟು ಭಾರತೀಯರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ? ಎಂದು ಆರೋಪಿಸಿದೆ.

ಜೊತೆಗೆ ಸಪೋರ್ಟ್ ಮೋದಿಜಿ ಅಂಡ್ ಬಿಜೆಪಿ ಎಂಬ ಇಂಗ್ಲಿಷ್ ಪೇಜ್‌ನಲ್ಲಿಯೂ ಇದೇ ಸುದ್ದಿ ಹರಿದಾಡಿದೆ. ಆಜ್ ತಕ್, ಒನ್‌ಇಂಡಿಯಾ, ದೈನಿಕ್ ಭಾಸ್ಕರ್ ಮತ್ತು ಸ್ವರಾಜ್ ನ್ಯೂಸ್‌ನಂತಹ ಚಾನೆಲ್‌ಗಳು ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಎಂದು ಸುದ್ದಿ ಮಾಡಿವೆ.

ಸತ್ಯ: ಸೋನಿಯಾ ಗಾಂಧಿ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂಬುದು ಅಪ್ಪಟ ಸುಳ್ಳು. ಈ ಬಾರಿಯ ಲೋಕಸಭಾ ಚುನಾವಣೆಗೆ ಅವರು ಸ್ಪರ್ಧಿಸಿದ್ದಾಗ ತಮ್ಮ ಬಳಿ 11.82 ಕೋಟಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು.

ಗೂಗಲ್‌ನಲ್ಲಿ ಪ್ರಪಂಚದ ಶ್ರೀಮಂತ ಮಹಿಳೆಯರ ಪಟ್ಟಿ ಪರಿಶೀಲಿಸಿದರೆ ಗೊತ್ತಾಗಿಬಿಡುತ್ತದೆ ಅವರು ಆ ಪಟ್ಟಿಯಲ್ಲಿಲ್ಲ ಎಂದು. ಹೋಗಲಿ ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಆಗಿದ್ದಾರ ಎಂದು ಚೆಕ್ ಮಾಡಿದರೆ ಅದು ಸಹ ಅಪ್ಪಟ ಸುಳ್ಳು ಸುದ್ದಿ. ಈ ಸುಳ್ಳನ್ನು ಪ್ರಕಟಿಸಿದ ಅಮೆರಿಕಾದ ಬಿಸಿನೆಸ್ ಇನ್‌ಸೈಡರ್ ಪತ್ರಿಕೆಯು ಸೋರ್ಸ್ ಎಂದು ‘World’s Luxury Guide’ ಅನ್ನು ಹೆಸರಿಸಿದೆ. ಅದರ ಮೂಲ ಹುಡುಕಿದರೆ ಆ ವೆಬ್‌ಸೈಟ್ ನಾಟ್ ಫಂಡ್ ಎಂದು ಬರುತ್ತಿದೆ.

ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.

2 ಮುಸ್ಲಿಂ ರಾಷ್ಟ್ರ ಸೌದಿ ಅರೇಬಿಯಾದಲ್ಲಿ ಭಗವದ್ಗೀತೆಯ ಅರೇಬಿಕ್ ಅವತರಣಿಕೆ ಬಿಡುಗಡೆ
“ಮುಸ್ಲಿಂ ರಾಷ್ಟ್ರ ಸೌದಿ ಅರೇಬಿಯಾನೇ ಭಗವದ್ಗೀತೆಯ ಅರೇಬಿಕ್ ಅವತರಣಿಕೆ ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಭಾರತ್ ಮಾತಾಕೀ ಜೈ ಎಂದರೆ ಸಾಕು ಇಸ್ಲಾಂ ಅಪಾಯದಲ್ಲಿದೆ ಎಂಬು ಬೊಬ್ಬಿರಿಯುತ್ತಾರೆ” ಎಂಬ ಪೋಸ್ಟ್ ಟ್ವಿಟ್ಟರ್, ಫೇಸ್‌ಬುಕ್‌ನಲ್ಲಿ ಹರಿದಾಡಿದೆ.

ಸತ್ಯ ಏನೆಂದರೆ ಸೌದಿ ಅರೇಬಿಯಾ ಈ ಕೆಲಸ ಮಾಡಿಲ್ಲ. ಬದಲಿಗೆ ಇಸ್ಕಾನ್ ಭಕ್ತರಾದ ರಾವನರಿ ಪ್ರಭು ಎಂಬುವವರು ಭಗವದ್ಗೀತೆಯನ್ನು ಅರೇಬಿಕ್ ಭಾಷೆಗೆ ಅನುವಾದ ಮಾಡಿದ್ದಾರೆ. ಅಷ್ಟೇ ಅಲ್ಲದೇ 11ನೇ ಶತಮಾನದಲ್ಲಿಯೇ ಅಲ್ ಬಿರೂನಿ ಎಂಬುವವರು ಅನುವಾದ ಮಾಡಲು ಯತ್ನಿಸಿದ್ದರು ಎಂಬುದಕ್ಕೆ ದಾಖಲೆಗಳಿವೆ.

3 ಕೇವಲ ಜಾಹೀರಾತಿಗಾಗಿ 1500 ಕೋಟಿ ಖರ್ಚು ಮಾಡಿದ ದೆಹಲಿ ಸರ್ಕಾರ?
ಹೀಗೆಂದು ಹೇಳಿದವರು ಕೇಂದ್ರ ಪರಿಸರ ಮತ್ತು ಹವಾಮಾನ ವೈಪರೀತ್ಯ ಸಚಿವ ಪ್ರಕಾಶ್ ಜಾವಡೆಕರ್. ಅದು ಕೂಡ ಬಹಿರಂಗ ಪತ್ರಿಕಾಗೋಷ್ಟಿಯಲ್ಲಿ. “1500 ಕೋಟಿ ಹಣವನ್ನು ಜಾಹೀರಾತಿಗಾಗಿ ಸುರಿಯುವುದಕ್ಕಿಂತ ಅದೇ ಹಣವನ್ನು ಪಂಜಾಬ್ ಮತ್ತು ಹರಿಯಾಣ ರೈತರಿಗೆ ನೀಡಬಹುದಾಗಿತ್ತು” ಎಂದು ಟೀಕಿಸಿದ್ದರು.


ಆದರೆ ಸತ್ಯ ಏನೆಂದರೆ ಒಂದು ವರ್ಷಕ್ಕೆ ಮಾತ್ರವಲ್ಲ ಇಡೀ ಐದು ವರ್ಷದ ಆಡಳಿತದಲ್ಲಿ ದೆಹಲಿಯ ಆಮ್‌ ಆದ್ಮಿ ಸರ್ಕಾರ 1500 ಕೋಟಿ ಹಣವನ್ನು ಜಾಹೀರಾತಿಗೆ ಖರ್ಚು ಮಾಡಿಲ್ಲ. ಅವರು ಮಾಡಿದ್ದು ಜಾವಡೆಕರ್ ಹೇಳಿದ್ದರಲ್ಲಿ ಅರ್ಧಕ್ಕಿಂತಲೂ ಕಡಿಮೆ. ಅಂದರೆ ಐದು ವರ್ಷದಲ್ಲಿ 692ಕೋಟಿ ರೂ ಮಾತ್ರ ಖರ್ಚು ಮಾಡಿದ್ದಾರೆ. ಆಮ್ ಆದ್ಮಿ ಸರ್ಕಾರದ ಮೇಲನ ದ್ವೇಷಕ್ಕಾಗಿ ಜಾವಡೆಕರ್ ಸುಳ್ಳು ಹೇಳಿದ್ದಾರೆ.

4 ಅಯೋಧ್ಯ ತೀರ್ಪು ಕುರಿತ ಮೋದಿಯನ್ನು ಬೈಯ್ದಿದ್ದಕ್ಕಾಗಿ ಸಭೆಯಿಂದ ಹೊರನಡೆದ ಒವೈಸಿ ಬೆಂಬಲಿಗರು!
ಅಯೋಧ್ಯ ತೀರ್ಪು ನ್ಯಾಯಯುತವಾಗಿಲ್ಲ, ಮೋದಿ ರಾಜಕೀಯ ಮಾಡಿದ್ದಾರೆ ಎಂದು ಒವೈಸಿ ಮೋದಿಯನ್ನು ಹಿಗ್ಗಾ ಮಗ್ಗಾ ಟೀಕಿಸಿದ್ದಕ್ಕೆ ಬೇಸರಗೊಂಡ ಆತನ ಬೆಂಬಲಿಗರು ಕಾರ್ಯಕ್ರಮ ಬಿಟ್ಟು ಹೊರಟು ಹೋದರು ಎಂಬ ವಿಡಿಯೋವನ್ನು ವೈರಲ್ ಮಾಡಲಾಗಿದೆ.

ಇದೆಲ್ಲಾ ಅಪ್ಪಟ ಸುಳ್ಳು. ಆ ವಿಡಿಯೋ 2018ನೇ ಇಸವಿಯ ಹಳೆಯದು. ಸಾರ್ವಜನಿಕ ಕಾರ್ಯಕ್ರಮದಲ್ಲಿ ಒವೈಸಿ ಮೋದಿಯವರನ್ನು ತೆಗಳಿದರು. ಆಗ ಸಭಿಕರಲ್ಲಿ ಒಬ್ಬ ಒವೈಸಿ ಕಡೆ ಚಪ್ಪಲಿ ತೂರಿದ ಆಗ ಒವೈಸಿ ಬೆಂಬಲಿಗರು ವೇದಿಕೆಯ ಕಡೆ ಧಾವಿಸಿದರು. ಪರಿಸ್ಥಿತಿ ಗಂಭೀರವಾಗಿತ್ತು. ಆಗ ಒವೈಸಿಯವರು ಬೆಂಬಲಿಗರ ಮನವೊಲಿಸಿ ತಮ್ಮ ಕುರ್ಚಿಗಳಲ್ಲಿ ಕುಳಿತುಕೊಳ್ಳುವಂತೆ ಮನವಿ ಮಾಡಿದರು. ಆಗ ಬೆಂಬಲಿಗರು ವೇದಿಕೆಯ ಕಡೆಯಿಂದ ತಮ್ಮ ಕುರ್ಚಿಗಳು ಇದ್ದಲ್ಲಿಗೆ ತೆರಳುತ್ತಿದ್ದ ವಿಡಿಯೋವನ್ನು ಕತ್ತರಿಸಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

5 ಸಿಎಂ ಕನಸು ಕಂಡಿದ್ದ ಆದಿತ್ಯ ಠಾಕ್ರೆಯ ಶಾಸಕ ಸ್ಥಾನವೇ ಢಮಾರ್?
ಮಹಾರಾಷ್ಟ್ರ ಸಿಎಂ ಆಗುವ ಕನಸು ಕಂಡಿದ್ದ ಆದಿತ್ಯ ಠಾಕ್ರೆಯ ಶಾಸಕ ಸ್ಥಾನವೇ ಢಮಾರ್ ಆಗಿದೆ. ಮಹಾ ನ್ಯಾಯವಾದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಎಂದು ಕರುನಾಡ-ವಾಣಿ ಎಂಬ ಕನ್ನಡದ ಫೇಸ್‌ಬುಕ್ ಪಟುದಲ್ಲಿ ಪ್ರಕಟಿಸಿಲಾಗಿದೆ. ಹೀಗಾಗಲು ಕಾರಣ ಆದಿತ್ಯ ಠಾಕ್ರೆ ತನ್ನ ಆಸ್ತಿ ಕುರಿತು ಚುನಾವಣಾ ಅಫಿಡವಿಟ್‌ನಲ್ಲಿ ತನ್ನ ಕಾರಿನ ಬೆಲೆ 6 ಲಕ್ಷ ಎಂದು ನಮೂದಿಸಿದ್ದಾರೆ. ಆದರೆ ನಿಜ ಎಂದರೆ ಆ ಕಾರಿನ ಒಂದು ಟೈರಿನ ಬೆಲೆಯೇ 6 ಲಕ್ಷ. ಅದನ್ನು ನ್ಯಾಯವಾದಿ ಕಂಡುಹಿಡಿದಿದ್ದಾರೆ ಹಾಗಾಗಿ ಅವರ ಶಾಸಕ ಸ್ಥಾನ ಢಮಾರ್ ಆಗಿದೆ ಎಂಬ ಸುಳ್ಳು ಸುದ್ದಿಯನ್ನು ಈ ಪುಟ ಹರಡಿದೆ.

ಇದೆಲ್ಲವೂ ಸಂಪೂರ್ಣ ಸುಳ್ಳಾಗಿದೆ. ಈ ಫೇಸ್ ಬುಕ್ ಪುಟ ಬಿಜೆಪಿಯನ್ನು ಬೆಂಬಲಿತ್ತಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಬಿಜೆಪಿಗೆ ಸರ್ಕಾರ ರಚಿಸಲು ಬೆಂಬಲ ಕೊಟ್ಟಿಲ್ಲ. ಹಾಗಾಗಿ ಶಿವಸೇನೆಯ ವಿರುದ್ಧ ಈ ಸುಳ್ಳನ್ನು ಹಬ್ಬಿಸಲಾಗಿದೆ. ಜನ ಎಷ್ಟು ದಡ್ಡರು ಎಂದರೆ ಈ ಸುಳ್ಳು ಸುದ್ದಿಯನ್ನು 10 ಸಾವಿರ ಜನ ಲೈಕ್ ಮಾಡಿದ್ದು 852 ಜನ ಷೇರ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...