Homeಕರ್ನಾಟಕಸೋನಿಯಾ ಗಾಂಧಿ ಜಗತ್ತಿನ 4ನೇ ಶ್ರೀಮಂತ ಮಹಿಳೆಯೇ? ಸತ್ಯ ಯಾವುದು??

ಸೋನಿಯಾ ಗಾಂಧಿ ಜಗತ್ತಿನ 4ನೇ ಶ್ರೀಮಂತ ಮಹಿಳೆಯೇ? ಸತ್ಯ ಯಾವುದು??

ಈ ವಾರದ ಟಾಪ್‌ 5 ಫೇಕ್‌ನ್ಯೂಸ್‌ಗಳು ಮತ್ತು ಅಸಲಿ ಸತ್ಯ ದಾಖಲೆಗಳೊಂದಿಗೆ ಇಲ್ಲಿದೆ.

- Advertisement -
- Advertisement -

1 ಸೋನಿಯಾ ಗಾಂಧಿ ಜಗತ್ತಿನ 4ನೇ ಶ್ರೀಮಂತ ಮಹಿಳೆಯೇ?
ಈ ರೀತಿಯ ಸುದ್ದಿ ಕಳೆದ ಒಂದು ತಿಂಗಳಿನಿಂದ ಎಲ್ಲಾ ಕಡೆ ಹರಿದಾಡುತ್ತಿದೆ. ಪೋಸ್ಟ್ ಕಾರ್ಡ್ ಕನ್ನಡ ಎನ್ನುವ ಕನ್ನಡದ ವೆಬ್‌ಸೈಟ್ ಅಂಬಾನಿ ಸಹೋದರರು ಶ್ರೀಮಂತರಾದರೂ ಸಹ (ಮೋದಿ ಸಹಾಯದಿಂದ) ಲಕ್ಷಾಂತರ ಭಾರತೀಯರಿಗೆ ಉದ್ಯೋಗ ನೀಡಿದ್ದಾರೆ. ವಿಶ್ವದ ನಾಲ್ಕನೇ ಅತ್ಯಂತ ಶ್ರೀಮಂತ ಮಹಿಳೆ ಸೋನಿಯಾ ಗಾಂಧಿ ಎಷ್ಟು ಭಾರತೀಯರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ? ಎಂದು ಆರೋಪಿಸಿದೆ.

ಜೊತೆಗೆ ಸಪೋರ್ಟ್ ಮೋದಿಜಿ ಅಂಡ್ ಬಿಜೆಪಿ ಎಂಬ ಇಂಗ್ಲಿಷ್ ಪೇಜ್‌ನಲ್ಲಿಯೂ ಇದೇ ಸುದ್ದಿ ಹರಿದಾಡಿದೆ. ಆಜ್ ತಕ್, ಒನ್‌ಇಂಡಿಯಾ, ದೈನಿಕ್ ಭಾಸ್ಕರ್ ಮತ್ತು ಸ್ವರಾಜ್ ನ್ಯೂಸ್‌ನಂತಹ ಚಾನೆಲ್‌ಗಳು ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಎಂದು ಸುದ್ದಿ ಮಾಡಿವೆ.

ಸತ್ಯ: ಸೋನಿಯಾ ಗಾಂಧಿ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂಬುದು ಅಪ್ಪಟ ಸುಳ್ಳು. ಈ ಬಾರಿಯ ಲೋಕಸಭಾ ಚುನಾವಣೆಗೆ ಅವರು ಸ್ಪರ್ಧಿಸಿದ್ದಾಗ ತಮ್ಮ ಬಳಿ 11.82 ಕೋಟಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು.

ಗೂಗಲ್‌ನಲ್ಲಿ ಪ್ರಪಂಚದ ಶ್ರೀಮಂತ ಮಹಿಳೆಯರ ಪಟ್ಟಿ ಪರಿಶೀಲಿಸಿದರೆ ಗೊತ್ತಾಗಿಬಿಡುತ್ತದೆ ಅವರು ಆ ಪಟ್ಟಿಯಲ್ಲಿಲ್ಲ ಎಂದು. ಹೋಗಲಿ ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಆಗಿದ್ದಾರ ಎಂದು ಚೆಕ್ ಮಾಡಿದರೆ ಅದು ಸಹ ಅಪ್ಪಟ ಸುಳ್ಳು ಸುದ್ದಿ. ಈ ಸುಳ್ಳನ್ನು ಪ್ರಕಟಿಸಿದ ಅಮೆರಿಕಾದ ಬಿಸಿನೆಸ್ ಇನ್‌ಸೈಡರ್ ಪತ್ರಿಕೆಯು ಸೋರ್ಸ್ ಎಂದು ‘World’s Luxury Guide’ ಅನ್ನು ಹೆಸರಿಸಿದೆ. ಅದರ ಮೂಲ ಹುಡುಕಿದರೆ ಆ ವೆಬ್‌ಸೈಟ್ ನಾಟ್ ಫಂಡ್ ಎಂದು ಬರುತ್ತಿದೆ.

ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.

2 ಮುಸ್ಲಿಂ ರಾಷ್ಟ್ರ ಸೌದಿ ಅರೇಬಿಯಾದಲ್ಲಿ ಭಗವದ್ಗೀತೆಯ ಅರೇಬಿಕ್ ಅವತರಣಿಕೆ ಬಿಡುಗಡೆ
“ಮುಸ್ಲಿಂ ರಾಷ್ಟ್ರ ಸೌದಿ ಅರೇಬಿಯಾನೇ ಭಗವದ್ಗೀತೆಯ ಅರೇಬಿಕ್ ಅವತರಣಿಕೆ ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಭಾರತ್ ಮಾತಾಕೀ ಜೈ ಎಂದರೆ ಸಾಕು ಇಸ್ಲಾಂ ಅಪಾಯದಲ್ಲಿದೆ ಎಂಬು ಬೊಬ್ಬಿರಿಯುತ್ತಾರೆ” ಎಂಬ ಪೋಸ್ಟ್ ಟ್ವಿಟ್ಟರ್, ಫೇಸ್‌ಬುಕ್‌ನಲ್ಲಿ ಹರಿದಾಡಿದೆ.

ಸತ್ಯ ಏನೆಂದರೆ ಸೌದಿ ಅರೇಬಿಯಾ ಈ ಕೆಲಸ ಮಾಡಿಲ್ಲ. ಬದಲಿಗೆ ಇಸ್ಕಾನ್ ಭಕ್ತರಾದ ರಾವನರಿ ಪ್ರಭು ಎಂಬುವವರು ಭಗವದ್ಗೀತೆಯನ್ನು ಅರೇಬಿಕ್ ಭಾಷೆಗೆ ಅನುವಾದ ಮಾಡಿದ್ದಾರೆ. ಅಷ್ಟೇ ಅಲ್ಲದೇ 11ನೇ ಶತಮಾನದಲ್ಲಿಯೇ ಅಲ್ ಬಿರೂನಿ ಎಂಬುವವರು ಅನುವಾದ ಮಾಡಲು ಯತ್ನಿಸಿದ್ದರು ಎಂಬುದಕ್ಕೆ ದಾಖಲೆಗಳಿವೆ.

3 ಕೇವಲ ಜಾಹೀರಾತಿಗಾಗಿ 1500 ಕೋಟಿ ಖರ್ಚು ಮಾಡಿದ ದೆಹಲಿ ಸರ್ಕಾರ?
ಹೀಗೆಂದು ಹೇಳಿದವರು ಕೇಂದ್ರ ಪರಿಸರ ಮತ್ತು ಹವಾಮಾನ ವೈಪರೀತ್ಯ ಸಚಿವ ಪ್ರಕಾಶ್ ಜಾವಡೆಕರ್. ಅದು ಕೂಡ ಬಹಿರಂಗ ಪತ್ರಿಕಾಗೋಷ್ಟಿಯಲ್ಲಿ. “1500 ಕೋಟಿ ಹಣವನ್ನು ಜಾಹೀರಾತಿಗಾಗಿ ಸುರಿಯುವುದಕ್ಕಿಂತ ಅದೇ ಹಣವನ್ನು ಪಂಜಾಬ್ ಮತ್ತು ಹರಿಯಾಣ ರೈತರಿಗೆ ನೀಡಬಹುದಾಗಿತ್ತು” ಎಂದು ಟೀಕಿಸಿದ್ದರು.


ಆದರೆ ಸತ್ಯ ಏನೆಂದರೆ ಒಂದು ವರ್ಷಕ್ಕೆ ಮಾತ್ರವಲ್ಲ ಇಡೀ ಐದು ವರ್ಷದ ಆಡಳಿತದಲ್ಲಿ ದೆಹಲಿಯ ಆಮ್‌ ಆದ್ಮಿ ಸರ್ಕಾರ 1500 ಕೋಟಿ ಹಣವನ್ನು ಜಾಹೀರಾತಿಗೆ ಖರ್ಚು ಮಾಡಿಲ್ಲ. ಅವರು ಮಾಡಿದ್ದು ಜಾವಡೆಕರ್ ಹೇಳಿದ್ದರಲ್ಲಿ ಅರ್ಧಕ್ಕಿಂತಲೂ ಕಡಿಮೆ. ಅಂದರೆ ಐದು ವರ್ಷದಲ್ಲಿ 692ಕೋಟಿ ರೂ ಮಾತ್ರ ಖರ್ಚು ಮಾಡಿದ್ದಾರೆ. ಆಮ್ ಆದ್ಮಿ ಸರ್ಕಾರದ ಮೇಲನ ದ್ವೇಷಕ್ಕಾಗಿ ಜಾವಡೆಕರ್ ಸುಳ್ಳು ಹೇಳಿದ್ದಾರೆ.

4 ಅಯೋಧ್ಯ ತೀರ್ಪು ಕುರಿತ ಮೋದಿಯನ್ನು ಬೈಯ್ದಿದ್ದಕ್ಕಾಗಿ ಸಭೆಯಿಂದ ಹೊರನಡೆದ ಒವೈಸಿ ಬೆಂಬಲಿಗರು!
ಅಯೋಧ್ಯ ತೀರ್ಪು ನ್ಯಾಯಯುತವಾಗಿಲ್ಲ, ಮೋದಿ ರಾಜಕೀಯ ಮಾಡಿದ್ದಾರೆ ಎಂದು ಒವೈಸಿ ಮೋದಿಯನ್ನು ಹಿಗ್ಗಾ ಮಗ್ಗಾ ಟೀಕಿಸಿದ್ದಕ್ಕೆ ಬೇಸರಗೊಂಡ ಆತನ ಬೆಂಬಲಿಗರು ಕಾರ್ಯಕ್ರಮ ಬಿಟ್ಟು ಹೊರಟು ಹೋದರು ಎಂಬ ವಿಡಿಯೋವನ್ನು ವೈರಲ್ ಮಾಡಲಾಗಿದೆ.

ಇದೆಲ್ಲಾ ಅಪ್ಪಟ ಸುಳ್ಳು. ಆ ವಿಡಿಯೋ 2018ನೇ ಇಸವಿಯ ಹಳೆಯದು. ಸಾರ್ವಜನಿಕ ಕಾರ್ಯಕ್ರಮದಲ್ಲಿ ಒವೈಸಿ ಮೋದಿಯವರನ್ನು ತೆಗಳಿದರು. ಆಗ ಸಭಿಕರಲ್ಲಿ ಒಬ್ಬ ಒವೈಸಿ ಕಡೆ ಚಪ್ಪಲಿ ತೂರಿದ ಆಗ ಒವೈಸಿ ಬೆಂಬಲಿಗರು ವೇದಿಕೆಯ ಕಡೆ ಧಾವಿಸಿದರು. ಪರಿಸ್ಥಿತಿ ಗಂಭೀರವಾಗಿತ್ತು. ಆಗ ಒವೈಸಿಯವರು ಬೆಂಬಲಿಗರ ಮನವೊಲಿಸಿ ತಮ್ಮ ಕುರ್ಚಿಗಳಲ್ಲಿ ಕುಳಿತುಕೊಳ್ಳುವಂತೆ ಮನವಿ ಮಾಡಿದರು. ಆಗ ಬೆಂಬಲಿಗರು ವೇದಿಕೆಯ ಕಡೆಯಿಂದ ತಮ್ಮ ಕುರ್ಚಿಗಳು ಇದ್ದಲ್ಲಿಗೆ ತೆರಳುತ್ತಿದ್ದ ವಿಡಿಯೋವನ್ನು ಕತ್ತರಿಸಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

5 ಸಿಎಂ ಕನಸು ಕಂಡಿದ್ದ ಆದಿತ್ಯ ಠಾಕ್ರೆಯ ಶಾಸಕ ಸ್ಥಾನವೇ ಢಮಾರ್?
ಮಹಾರಾಷ್ಟ್ರ ಸಿಎಂ ಆಗುವ ಕನಸು ಕಂಡಿದ್ದ ಆದಿತ್ಯ ಠಾಕ್ರೆಯ ಶಾಸಕ ಸ್ಥಾನವೇ ಢಮಾರ್ ಆಗಿದೆ. ಮಹಾ ನ್ಯಾಯವಾದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಎಂದು ಕರುನಾಡ-ವಾಣಿ ಎಂಬ ಕನ್ನಡದ ಫೇಸ್‌ಬುಕ್ ಪಟುದಲ್ಲಿ ಪ್ರಕಟಿಸಿಲಾಗಿದೆ. ಹೀಗಾಗಲು ಕಾರಣ ಆದಿತ್ಯ ಠಾಕ್ರೆ ತನ್ನ ಆಸ್ತಿ ಕುರಿತು ಚುನಾವಣಾ ಅಫಿಡವಿಟ್‌ನಲ್ಲಿ ತನ್ನ ಕಾರಿನ ಬೆಲೆ 6 ಲಕ್ಷ ಎಂದು ನಮೂದಿಸಿದ್ದಾರೆ. ಆದರೆ ನಿಜ ಎಂದರೆ ಆ ಕಾರಿನ ಒಂದು ಟೈರಿನ ಬೆಲೆಯೇ 6 ಲಕ್ಷ. ಅದನ್ನು ನ್ಯಾಯವಾದಿ ಕಂಡುಹಿಡಿದಿದ್ದಾರೆ ಹಾಗಾಗಿ ಅವರ ಶಾಸಕ ಸ್ಥಾನ ಢಮಾರ್ ಆಗಿದೆ ಎಂಬ ಸುಳ್ಳು ಸುದ್ದಿಯನ್ನು ಈ ಪುಟ ಹರಡಿದೆ.

ಇದೆಲ್ಲವೂ ಸಂಪೂರ್ಣ ಸುಳ್ಳಾಗಿದೆ. ಈ ಫೇಸ್ ಬುಕ್ ಪುಟ ಬಿಜೆಪಿಯನ್ನು ಬೆಂಬಲಿತ್ತಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಬಿಜೆಪಿಗೆ ಸರ್ಕಾರ ರಚಿಸಲು ಬೆಂಬಲ ಕೊಟ್ಟಿಲ್ಲ. ಹಾಗಾಗಿ ಶಿವಸೇನೆಯ ವಿರುದ್ಧ ಈ ಸುಳ್ಳನ್ನು ಹಬ್ಬಿಸಲಾಗಿದೆ. ಜನ ಎಷ್ಟು ದಡ್ಡರು ಎಂದರೆ ಈ ಸುಳ್ಳು ಸುದ್ದಿಯನ್ನು 10 ಸಾವಿರ ಜನ ಲೈಕ್ ಮಾಡಿದ್ದು 852 ಜನ ಷೇರ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...