Homeನಿಜವೋ ಸುಳ್ಳೋಈ ವಾರದ ಟಾಪ್ 5 ಫೇಕ್ ನ್ಯೂಸ್‍ಗಳು

ಈ ವಾರದ ಟಾಪ್ 5 ಫೇಕ್ ನ್ಯೂಸ್‍ಗಳು

- Advertisement -
- Advertisement -

1. ಬಿಹಾರಿಗಳು 500 ಬಸ್ ಚಾರ್ಜ್‍ನಲ್ಲಿ ದಿಲ್ಲಿಗೆ ಬಂದು 5 ಲಕ್ಷದ ಚಿಕಿತ್ಸೆ ಪಡೆದು ದೋಚುತ್ತಿದ್ದಾರೆ: ಕೇಜ್ರಿವಾಲ್..
ನಿಜವಾಗಿಯೂ ಕೇಜ್ರಿವಾಲ್ ಹೇಳಿದ್ದೇನು?
ಬಿಹಾರದ ವ್ಯಕ್ತಿಯೊಬ್ಬರು 500 ರೂ.ಗೆ ಟಿಕೆಟ್ ಖರೀದಿಸಿ ದೆಹಲಿಗೆ ಬರುತ್ತಾರೆ. 5 ಲಕ್ಷ ರೂಪಾಯಿ ಮೌಲ್ಯದ ಉಚಿತ ಚಿಕಿತ್ಸೆ ಪಡೆದ ನಂತರ ಹಿಂದಿರುಗುತ್ತಾರೆ. ಅವರು ನಮ್ಮ ದೇಶದ ಜನರಾಗಿರುವುದರಿಂದ ಅದು ನಮಗೆ ಸಂತೋಷವನ್ನು ನೀಡುತ್ತದೆ, ಆದರೆ ದೆಹಲಿಗೆ ತನ್ನದೇ ಆದ ಸಾಮಥ್ರ್ಯವಿದೆ. ದೆಹಲಿ ಇಡೀ ದೇಶದ ಜನರಿಗೆ ಹೇಗೆ ಸೇವೆ ಸಲ್ಲಿಸಲು ಸಾಧ್ಯ? ಆದ್ದರಿಂದ ದೇಶಾದ್ಯಂತ ಈ ಸೌಲಭ್ಯಗಳನ್ನು ಸುಧಾರಿಸುವ ಅವಶ್ಯಕತೆಯಿದೆ. (ಗೋಡಿ ಮೀಡಿಯಾ ತಮ್ಮ ವರದಿಗಳಲ್ಲಿ ಮೊದಲೆರಡು ಸಾಲನ್ನು ಮಾತ್ರ ಪ್ರಸಾರ ಮಾಡಿ ಕೊನೆಯ ಸಾಲುಗಳನ್ನು ಕತ್ತರಿಸುತ್ತಾರೆ. ಆದರೆ ಅದು ವೀಡಿಯೊದಲ್ಲಿದೆ)

ಗೋದಿ ಮೀಡಿಯಾ ಹೇಗೆ ವರದಿ ಮಾಡಿತು?
ಬಿಹಾರಿಗಳು 500 ರೂ.ಗೆ ಪ್ರಯಾಣ ಮಾಡಿ, 5 ಲಕ್ಷ ರೂ. ಉಚಿತ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದಾರೆ: ಅರವಿಂದ್ ಕೇಜ್ರಿವಾಲ್ ಪೂವಾರ್ಂಚಲಿಸ್ ಮೇಲೆ ದಾಳಿ…

ಬಿಜೆಪಿ ಹೇಗೆ ಪ್ರತಿಕ್ರಿಯಿಸಿತು?
ಮನೋಜ್ ತಿವಾರಿ: ದೆಹಲಿಯಲ್ಲಿ ನಿಮ್ಮ ಆಟ ಮುಗಿದಿದೆ ಎಂದು ನಿಮಗೆ ತಿಳಿದಿದೆ. ಹಾಗಾಗಿ ಪೂವಾರ್ಂಚಲಿಸ್ ಬಗ್ಗೆ ನಿಮ್ಮ ದ್ವೇಷವು ಮುಂಚೂಣಿಗೆ ಬಂದಿದೆ. ಶೀಘ್ರದಲ್ಲಿಯೇ ದೆಹಲಿಯ ಜನರು ನಿಮಗೆ ಉತ್ತರವನ್ನು ನೀಡುತ್ತಾರೆ.

ಐಟಿ ಸೆಲ್ ಹೇಗೆ ಟ್ರೋಲ್ ಮಾಡಿದರು:
ಕೇಜ್ರಿವಾಲ್‍ರ ವಿಡಿಯೋದಲ್ಲಿ ಕೊನೆಯ ಸಾಲುಗಳನ್ನು ಕತ್ತರಿಸಿದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡರು. ಗೋಡಿ ಮೀಡಿಯಾದ ತುಣುಕುಗಳನ್ನು ಮತ್ತು ಬಿಜೆಪಿ ರಾಜಕಾರಣಿಗಳ ಹೇಳಿಕೆಗಳನ್ನು ಬಳಸಿ ವೈರಲ್ ಮಾಡಿದರು. ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟಿಸಿ ಕೇಜ್ರಿವಾಲ್ ವಿರುದ್ಧ ಕಾರಿಕೊಂಡರು.
ಹಣಬಲ + ಕೊಂಡುಕೊಂಡ ಮಾಧ್ಯಮ + ಐಟಿ ಸೆಲ್ ಇವಿಷ್ಟು ಒಗ್ಗೂಡಿದರೆ ಏನು ಮಾಡಬಹುದು ಎಂಬುದಕ್ಕೆ ಇದು ಒಂದು ವಿಶಿಷ್ಟ ಉದಾಹರಣೆಯಾಗಿದೆ. ಯಾರನ್ನಾದರೂ ದೂಷಿಸಲು, ಜನರ ಮನಸ್ಸಿನಲ್ಲಿ ಯಾರನ್ನಾದರೂ ರಾಷ್ಟ್ರ ವಿರೋಧಿಗಳನ್ನಾಗಿ ಮಾಡಲು ಅಥವಾ ವೈದ್ಯರನ್ನು ದೆವ್ವದಂತೆ ಕಾಣುವಂತೆ ಮಾಡಲು ಇದು ಸುಲಭವಾದ ಮಾರ್ಗವಾಗಿದೆ…

2. ಬಾಲಕೋಟ್‍ನ ಪ್ರಮೋಷನಲ್ ವಿಡಿಯೋವನ್ನು ರಿಯಲ್ ಫೂಟೆಜ್ ಎಂದು ತಿರುಚಿದ ಮಾಧ್ಯಮಗಳು
ರಿಪಬ್ಲಿಕ್ ಟಿವಿ, ಟೈಮ್ಸ್ ನೌ, ಝೀ ಹಿಂದಿ ನ್ಯೂಸ್, ಎಬಿಪಿ ನ್ಯೂಸ್, ಇಂಡಿಯಾ ಟುಡೇ ಇತ್ಯಾದಿ ಚಾನೆಲ್‍ಗಳ ಜೊತೆಗೆ ಕೆಲವು ಪ್ರಾದೇಶಿಕ ಚಾನೆಲ್‍ಗಳು ಮತ್ತು ಪತ್ರಿಕೆಗಳು ತಮ್ಮ ವೀಕ್ಷಕರು ಮತ್ತು ಓದುಗರ ಮೇಲೆ ಈ ‘ಫೇಕ್ ದಾಳಿ’ ನಡೆಸಿದವು. ಅವು ಭಾರತೀಯ ವಾಯುಸೇನೆ ಬಿಡಿಗಡೆ ಮಾಡಿದ್ದ ವಿಡಿಯೋ ಒಂದನ್ನು ತೋರಿಸಿ ಅದು ಬಾಲಾಕೋಟ್ ದಾಳಿಯ ರಿಯಲ್ ಫೂಟೇಜ್ ಎಂದವು.

ಕೆಲವು ಚಾನೆಲ್‍ಗಳಂತೂ ‘ಪ್ರೂಫ್ ಬೇಕಾ ಪ್ರೂಫ್? ಇಲ್ಲಿದೆ ನೋಡಿ’ ಎಂದವು. ಪಂಜಾಬ್ ಕೇಸರಿ ಮತ್ತು ಗುಜರಾತ್ ಸಮಾಚಾರ್ ಪತ್ರಿಕೆಗಳು ಪುಟಗಟ್ಟಲೇ ಬರೆದವು.
ಅಸಲಿಗೆ ಯಾವುದೇ ದಾಳಿಯ ವಿಡಿಯೋಗಳನ್ನು ಸೇನೆ ಬಿಡುಗಡೆ ಮಾಡುವುದಿಲ್ಲ. ಅದು ಅಕ್ಟೋಬರ್ 4ರಂದು ಬಿಡುಗಡೆ ಮಾಡಿದ್ದು ಬಾಲಾಕೋಟ್ ದಾಳಿ ಹೇಗೆ ಯೋಜಿತವಾಗಿತು ಎಂದು ತೋರಿಸುವ ಪ್ರಮೋಷನಲ್ (ರೆಪ್ರೆಸೆಂಟೆಟಿವ್ ವಿಡಿಯೋ ಅಂದರೆ ಪ್ರಾತಿನಿಧಿಕ ವಿಡಿಯೋ) ವಿಡಿಯೋವನ್ನಷ್ಟೇ. ಆದರೆ ಬಹುಪಾಲು ಚಾನೆಲ್‍ಗಳು ಬಾಲಾಕೋಟ್ ದಾಳಿಯ ರಿಯಲ್ ಫೂಟೇಜ್ ಎಂದೆಲ್ಲ ಬೊಬ್ಬೆ ಹೊಡೆದವು.

3. ಮಹಾತ್ಮನ ವಿರುದ್ಧವೇ ಸಂಚು.. ಫೋಟೋಶಾಪ್ ಮಾಡಿದ ಭಕ್ತರು..
ಮಹಾತ್ಮ ಗಾಂಧಿ ಮಹಿಳೆಯೊಂದಿಗೆ ಅಸಭ್ಯ ಭಂಗಿಯಲ್ಲಿರುವ ಚಿತ್ರ ಎಂದು ಈ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಗಾಂಧಿ ವಿರೋಧಿಗಳು ಹಂಚಿಕೊಳ್ಳುತ್ತಿದ್ದಾರೆ. ಟ್ವಿಟರ್ ಬಳಕೆದಾರ ಸಂಜಯ್ ಗುಪ್ತಾ ಬಿಜೆಪಿ ಈ ಚಿತ್ರವನ್ನು ಮೊದಲು ಹಂಚಿಕೊಂಡಿದ್ದು “ರಾಷ್ಟ್ರದ ಪಿತಾಮಹ, ನೀವು ಏನು ಮಾಡುತ್ತಿದ್ದೀರಿ? ಎಂಬ ತಲೆಬರಹವನ್ನು ನೀಡಿದ್ದಾನೆ. ಪ್ರತಿವರ್ಷ ಗಾಂಧಿಜಯಂತಿ ಮತ್ತು ಗಾಂಧಿ ಹತಾತ್ಮರಾದ ದಿನಗಳ ಸುತ್ತಾಮುತ್ತಾ ಈ ಫೇಕ್ ಫೋಟೊವನ್ನು ವೈರಲ್ ಮಾಡಲಾಗುತ್ತಿದೆ. ಕಾರಣ ಗಾಂಧಿ ದ್ವೇಷ ಅಷ್ಟೇ.

ಸತ್ಯ ಏನೆಂದರೆ ಜುಲೈ 6, 1946 ರಂದು ಭಾರತದ ಬಾಂಬೆಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಗಾಂಧಿ ಮತ್ತು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರೊಂದಿಗೆ ಕುಳಿತು ಮಾತಾಡುತ್ತಿರುವ ಛಾಯಾಚಿತ್ರವು ಅಸೋಸಿಯೇಟೆಡ್ ಪ್ರೆಸ್‍ನ ಆರ್ಕೈವ್‍ನಲ್ಲಿದೆ. ಇದನ್ನು ಯಾರೋ ಕಿಡಿಗೇಡಿಗಳು ಹಲವು ವರ್ಷಗಳ ಹಿಂದೆಯೇ ಫೋಟೊಶಾಪ್ ಮಾಡಿದ್ದು ನೆಹರು ಜಾಗದಲ್ಲಿ ಯುವತಿಯೊಬ್ಬಳ ಫೋಟೊವನ್ನು ಕೂರಿಸಿದ್ದಾರೆ. ಗಾಂಧಿ ಬಗ್ಗೆ ವಿಕೃತ ಸುಳ್ಳುಗಳನ್ನು ಹಂಚಿರುವ ಈ ವಂಚಕರು ಚಿತ್ರ ನೋಡಿದವರಿಗೆ ಅನುಮಾನ ಬರಲೆಂದು ಈ ಕೆಲಸ ಮಾಡಿದ್ದಾರೆ.

4. ಕೈಗೆ ದೊಡ್ಡ ಗಾಯವಾಗಿದೆ ಎಂದು ಶಿವರಾಜ್‍ಸಿಂಗ್ ನಾಟಕವಾಡುತ್ತಿದ್ದಾರ?
ಈ ಫೊಟೊ ನೋಡಿ ಒಮ್ಮೆ ಬಲಗೈಗೆ ಬ್ಯಾಂಡೇಜ್ ಹಾಕಿಕೊಂಡರೆ ಮತ್ತೊಮ್ಮೆ ಎಡಗೈಗೆ ಬ್ಯಾಂಡೇಜ್ ಹಾಕಿಕೊಂಡು ಸಿಕ್ಕಿಹಾಕಿಕೊಂಡಿದ್ದಾರೆ..


ಈ ಸಂದೇಶ ಮೇಲಿನ ಫೋಟೊ ಜೊತೆ ಎಲ್ಲಾ ಕಡೆ ವೈರಲ್ ಆಗಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಮುಖಂಡ ಶಿವರಾಜ್‍ಸಿಂಗ್‍ರವರ ತೆಜೋವಧೆ ಮಾಡಲು ಈ ಫೋಟೊವನ್ನು ವ್ಯಾಪಕವಾಗಿ ಬಳಸಿಕೊಳ್ಳಲಾಗಿದೆ.

ಆದರೆ ವಾಸ್ತವ ಏನೆಂದರೆ ಇದೆಲ್ಲವೂ ಸುಳ್ಳು ಸಂದೇಶವಾಗಿದೆ. ನಿಜವಾಗಿಯೂ ಅವರ ಬಲಗೈಗೆ ಗಾಯವಾಗಿದೆ ಮತ್ತು ಆ ಒಂದು ಕೈಗೆ ಮಾತ್ರ ಬ್ಯಾಂಡೇಜ್ ಹಾಕಲಾಗಿದೆ. ಮೊಲದ ಚಿತ್ರ.. ಎರಡನೇ ಚಿತ್ರದಲ್ಲಿ ಎಡಗೈಗೆ ಗಾಯವಾಗಿ ಬ್ಯಾಂಡೇಜ್ ಹಾಕಿರುವಂತೆ ಕಾಣುತ್ತಿರುವುದು ಏಕೆಂದರೆ ಅದು ಸೆಲ್ಫಿ ಚಿತ್ರವಾಗಿದೆ. ಆ ಫೋಟೊವನ್ನು ಸೂಕ್ಷ್ಮವಾಗಿ ಗಮನಿಸಿ ಅಭಿಮಾನಿಯೊಬ್ಬ ತನ್ನ ಕೈಯಿಂದ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬರುತ್ತದೆ. ಕೆಲವೊಮ್ಮೆ ಸೆಲ್ಫಿ ತೆಗೆಯುವಾಗ ನಮ್ಮ ಚಿತ್ರಗಳು ಕನ್ನಡಿಯಲ್ಲಿ ಕಾಣುವಂತೆ ಉಲ್ಟಾ ಬರುತ್ತವೆ. ಹಾಗಾಗಿ ಇಲ್ಲ ಅವರ ಎಡಗೈಗೆ ಬ್ಯಾಂಡೇಜ್ ಹಾಕಿದಂತೆ ಚಿತ್ರ ಬಂದಿದೆ ಅಷ್ಟೇ.

5. ಕರ್ನಾಟಕದ ಪ್ರವಾಹ ಪರಿಹಾರಕ್ಕೆ ಕೇಂದ್ರ ಸರ್ಕಾರ 3800 ಕೋಟಿ, ರಾಜ್ಯ ಸರ್ಕಾರ 6200ಕೋಟಿ ಬಿಡುಗಡೆ ಮಾಡಿದೆ: ಬಿಜಪಿ ಬಾಗಲಕೋಟ
ಫೇಸ್‍ಬುಕ್‍ನಲ್ಲಿ ಇಂತಹ ಒಂದು ಪೋಸ್ಟರ್ ಸಾಕಷ್ಟು ಓಡಾಡುತ್ತಿದೆ. ಅದೂ ಅಲ್ಲದೇ ತತ್ ಕ್ಷಣದ ಪರಿಹಾರ ಎಂದೂ ಬೂಸಿ ಬಿಡಲಾಗಿದೆ.

ಸತ್ಯ: ಕರ್ನಾಟಕದಲ್ಲಿ ಪ್ರವಾಹ ಸಂಭವಿಸಿ ಒಂದೂವರೆ ತಿಂಗಳ ನಂತರ ಕೇಂದ್ರ ಸರ್ಕಾರದ ಗೃಹ ಇಲಾಕೆ 1200 ಕೋಟಿ ಬಿಡುಗಡೆಗೆ ಮನವಿ ಮಾಡಿದೆ. ಆದರೆ ಎನ್‍ಡಿಆರ್‌ಎಫ್ ಅದಕ್ಕೂ ಕಡಿಮೆ ಹಣ ಬಿಡುಗಡೆ ಮಾಡಬಹುದೆಂಬ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ ಬಿಜೆಪಿ ಭಕ್ತರು ಮಾತ್ರ ಮೋದಿಯನ್ನು ಹೊಗಳುವ ಭರದಲ್ಲಿ ಮನಸ್ಸಿಗೆ ಬಂದ ಸಂಖ್ಯೆಗಳನ್ನು ಬರೆದು 10000 ಕೋಟಿ ಎಂದು ಬೊಬ್ಬೆಯೊಡೆಯುತ್ತಿದ್ದಾರೆ. ಅಲ್ಲದೇ ಇನ್ನು ಹಣ ಬರುತ್ತದೆ ಎಂದು ಬಳಾಂಗ್ ಬಿಡುತ್ತಿದ್ದಾರೆ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...