Homeನಿಜವೋ ಸುಳ್ಳೋಈ ವಾರದ ಟಾಪ್ 5 ಫೇಕ್ ನ್ಯೂಸ್‍ಗಳು

ಈ ವಾರದ ಟಾಪ್ 5 ಫೇಕ್ ನ್ಯೂಸ್‍ಗಳು

- Advertisement -
- Advertisement -

1. ಬಿಹಾರಿಗಳು 500 ಬಸ್ ಚಾರ್ಜ್‍ನಲ್ಲಿ ದಿಲ್ಲಿಗೆ ಬಂದು 5 ಲಕ್ಷದ ಚಿಕಿತ್ಸೆ ಪಡೆದು ದೋಚುತ್ತಿದ್ದಾರೆ: ಕೇಜ್ರಿವಾಲ್..
ನಿಜವಾಗಿಯೂ ಕೇಜ್ರಿವಾಲ್ ಹೇಳಿದ್ದೇನು?
ಬಿಹಾರದ ವ್ಯಕ್ತಿಯೊಬ್ಬರು 500 ರೂ.ಗೆ ಟಿಕೆಟ್ ಖರೀದಿಸಿ ದೆಹಲಿಗೆ ಬರುತ್ತಾರೆ. 5 ಲಕ್ಷ ರೂಪಾಯಿ ಮೌಲ್ಯದ ಉಚಿತ ಚಿಕಿತ್ಸೆ ಪಡೆದ ನಂತರ ಹಿಂದಿರುಗುತ್ತಾರೆ. ಅವರು ನಮ್ಮ ದೇಶದ ಜನರಾಗಿರುವುದರಿಂದ ಅದು ನಮಗೆ ಸಂತೋಷವನ್ನು ನೀಡುತ್ತದೆ, ಆದರೆ ದೆಹಲಿಗೆ ತನ್ನದೇ ಆದ ಸಾಮಥ್ರ್ಯವಿದೆ. ದೆಹಲಿ ಇಡೀ ದೇಶದ ಜನರಿಗೆ ಹೇಗೆ ಸೇವೆ ಸಲ್ಲಿಸಲು ಸಾಧ್ಯ? ಆದ್ದರಿಂದ ದೇಶಾದ್ಯಂತ ಈ ಸೌಲಭ್ಯಗಳನ್ನು ಸುಧಾರಿಸುವ ಅವಶ್ಯಕತೆಯಿದೆ. (ಗೋಡಿ ಮೀಡಿಯಾ ತಮ್ಮ ವರದಿಗಳಲ್ಲಿ ಮೊದಲೆರಡು ಸಾಲನ್ನು ಮಾತ್ರ ಪ್ರಸಾರ ಮಾಡಿ ಕೊನೆಯ ಸಾಲುಗಳನ್ನು ಕತ್ತರಿಸುತ್ತಾರೆ. ಆದರೆ ಅದು ವೀಡಿಯೊದಲ್ಲಿದೆ)

ಗೋದಿ ಮೀಡಿಯಾ ಹೇಗೆ ವರದಿ ಮಾಡಿತು?
ಬಿಹಾರಿಗಳು 500 ರೂ.ಗೆ ಪ್ರಯಾಣ ಮಾಡಿ, 5 ಲಕ್ಷ ರೂ. ಉಚಿತ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದಾರೆ: ಅರವಿಂದ್ ಕೇಜ್ರಿವಾಲ್ ಪೂವಾರ್ಂಚಲಿಸ್ ಮೇಲೆ ದಾಳಿ…

ಬಿಜೆಪಿ ಹೇಗೆ ಪ್ರತಿಕ್ರಿಯಿಸಿತು?
ಮನೋಜ್ ತಿವಾರಿ: ದೆಹಲಿಯಲ್ಲಿ ನಿಮ್ಮ ಆಟ ಮುಗಿದಿದೆ ಎಂದು ನಿಮಗೆ ತಿಳಿದಿದೆ. ಹಾಗಾಗಿ ಪೂವಾರ್ಂಚಲಿಸ್ ಬಗ್ಗೆ ನಿಮ್ಮ ದ್ವೇಷವು ಮುಂಚೂಣಿಗೆ ಬಂದಿದೆ. ಶೀಘ್ರದಲ್ಲಿಯೇ ದೆಹಲಿಯ ಜನರು ನಿಮಗೆ ಉತ್ತರವನ್ನು ನೀಡುತ್ತಾರೆ.

ಐಟಿ ಸೆಲ್ ಹೇಗೆ ಟ್ರೋಲ್ ಮಾಡಿದರು:
ಕೇಜ್ರಿವಾಲ್‍ರ ವಿಡಿಯೋದಲ್ಲಿ ಕೊನೆಯ ಸಾಲುಗಳನ್ನು ಕತ್ತರಿಸಿದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡರು. ಗೋಡಿ ಮೀಡಿಯಾದ ತುಣುಕುಗಳನ್ನು ಮತ್ತು ಬಿಜೆಪಿ ರಾಜಕಾರಣಿಗಳ ಹೇಳಿಕೆಗಳನ್ನು ಬಳಸಿ ವೈರಲ್ ಮಾಡಿದರು. ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟಿಸಿ ಕೇಜ್ರಿವಾಲ್ ವಿರುದ್ಧ ಕಾರಿಕೊಂಡರು.
ಹಣಬಲ + ಕೊಂಡುಕೊಂಡ ಮಾಧ್ಯಮ + ಐಟಿ ಸೆಲ್ ಇವಿಷ್ಟು ಒಗ್ಗೂಡಿದರೆ ಏನು ಮಾಡಬಹುದು ಎಂಬುದಕ್ಕೆ ಇದು ಒಂದು ವಿಶಿಷ್ಟ ಉದಾಹರಣೆಯಾಗಿದೆ. ಯಾರನ್ನಾದರೂ ದೂಷಿಸಲು, ಜನರ ಮನಸ್ಸಿನಲ್ಲಿ ಯಾರನ್ನಾದರೂ ರಾಷ್ಟ್ರ ವಿರೋಧಿಗಳನ್ನಾಗಿ ಮಾಡಲು ಅಥವಾ ವೈದ್ಯರನ್ನು ದೆವ್ವದಂತೆ ಕಾಣುವಂತೆ ಮಾಡಲು ಇದು ಸುಲಭವಾದ ಮಾರ್ಗವಾಗಿದೆ…

2. ಬಾಲಕೋಟ್‍ನ ಪ್ರಮೋಷನಲ್ ವಿಡಿಯೋವನ್ನು ರಿಯಲ್ ಫೂಟೆಜ್ ಎಂದು ತಿರುಚಿದ ಮಾಧ್ಯಮಗಳು
ರಿಪಬ್ಲಿಕ್ ಟಿವಿ, ಟೈಮ್ಸ್ ನೌ, ಝೀ ಹಿಂದಿ ನ್ಯೂಸ್, ಎಬಿಪಿ ನ್ಯೂಸ್, ಇಂಡಿಯಾ ಟುಡೇ ಇತ್ಯಾದಿ ಚಾನೆಲ್‍ಗಳ ಜೊತೆಗೆ ಕೆಲವು ಪ್ರಾದೇಶಿಕ ಚಾನೆಲ್‍ಗಳು ಮತ್ತು ಪತ್ರಿಕೆಗಳು ತಮ್ಮ ವೀಕ್ಷಕರು ಮತ್ತು ಓದುಗರ ಮೇಲೆ ಈ ‘ಫೇಕ್ ದಾಳಿ’ ನಡೆಸಿದವು. ಅವು ಭಾರತೀಯ ವಾಯುಸೇನೆ ಬಿಡಿಗಡೆ ಮಾಡಿದ್ದ ವಿಡಿಯೋ ಒಂದನ್ನು ತೋರಿಸಿ ಅದು ಬಾಲಾಕೋಟ್ ದಾಳಿಯ ರಿಯಲ್ ಫೂಟೇಜ್ ಎಂದವು.

ಕೆಲವು ಚಾನೆಲ್‍ಗಳಂತೂ ‘ಪ್ರೂಫ್ ಬೇಕಾ ಪ್ರೂಫ್? ಇಲ್ಲಿದೆ ನೋಡಿ’ ಎಂದವು. ಪಂಜಾಬ್ ಕೇಸರಿ ಮತ್ತು ಗುಜರಾತ್ ಸಮಾಚಾರ್ ಪತ್ರಿಕೆಗಳು ಪುಟಗಟ್ಟಲೇ ಬರೆದವು.
ಅಸಲಿಗೆ ಯಾವುದೇ ದಾಳಿಯ ವಿಡಿಯೋಗಳನ್ನು ಸೇನೆ ಬಿಡುಗಡೆ ಮಾಡುವುದಿಲ್ಲ. ಅದು ಅಕ್ಟೋಬರ್ 4ರಂದು ಬಿಡುಗಡೆ ಮಾಡಿದ್ದು ಬಾಲಾಕೋಟ್ ದಾಳಿ ಹೇಗೆ ಯೋಜಿತವಾಗಿತು ಎಂದು ತೋರಿಸುವ ಪ್ರಮೋಷನಲ್ (ರೆಪ್ರೆಸೆಂಟೆಟಿವ್ ವಿಡಿಯೋ ಅಂದರೆ ಪ್ರಾತಿನಿಧಿಕ ವಿಡಿಯೋ) ವಿಡಿಯೋವನ್ನಷ್ಟೇ. ಆದರೆ ಬಹುಪಾಲು ಚಾನೆಲ್‍ಗಳು ಬಾಲಾಕೋಟ್ ದಾಳಿಯ ರಿಯಲ್ ಫೂಟೇಜ್ ಎಂದೆಲ್ಲ ಬೊಬ್ಬೆ ಹೊಡೆದವು.

3. ಮಹಾತ್ಮನ ವಿರುದ್ಧವೇ ಸಂಚು.. ಫೋಟೋಶಾಪ್ ಮಾಡಿದ ಭಕ್ತರು..
ಮಹಾತ್ಮ ಗಾಂಧಿ ಮಹಿಳೆಯೊಂದಿಗೆ ಅಸಭ್ಯ ಭಂಗಿಯಲ್ಲಿರುವ ಚಿತ್ರ ಎಂದು ಈ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಗಾಂಧಿ ವಿರೋಧಿಗಳು ಹಂಚಿಕೊಳ್ಳುತ್ತಿದ್ದಾರೆ. ಟ್ವಿಟರ್ ಬಳಕೆದಾರ ಸಂಜಯ್ ಗುಪ್ತಾ ಬಿಜೆಪಿ ಈ ಚಿತ್ರವನ್ನು ಮೊದಲು ಹಂಚಿಕೊಂಡಿದ್ದು “ರಾಷ್ಟ್ರದ ಪಿತಾಮಹ, ನೀವು ಏನು ಮಾಡುತ್ತಿದ್ದೀರಿ? ಎಂಬ ತಲೆಬರಹವನ್ನು ನೀಡಿದ್ದಾನೆ. ಪ್ರತಿವರ್ಷ ಗಾಂಧಿಜಯಂತಿ ಮತ್ತು ಗಾಂಧಿ ಹತಾತ್ಮರಾದ ದಿನಗಳ ಸುತ್ತಾಮುತ್ತಾ ಈ ಫೇಕ್ ಫೋಟೊವನ್ನು ವೈರಲ್ ಮಾಡಲಾಗುತ್ತಿದೆ. ಕಾರಣ ಗಾಂಧಿ ದ್ವೇಷ ಅಷ್ಟೇ.

ಸತ್ಯ ಏನೆಂದರೆ ಜುಲೈ 6, 1946 ರಂದು ಭಾರತದ ಬಾಂಬೆಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಗಾಂಧಿ ಮತ್ತು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರೊಂದಿಗೆ ಕುಳಿತು ಮಾತಾಡುತ್ತಿರುವ ಛಾಯಾಚಿತ್ರವು ಅಸೋಸಿಯೇಟೆಡ್ ಪ್ರೆಸ್‍ನ ಆರ್ಕೈವ್‍ನಲ್ಲಿದೆ. ಇದನ್ನು ಯಾರೋ ಕಿಡಿಗೇಡಿಗಳು ಹಲವು ವರ್ಷಗಳ ಹಿಂದೆಯೇ ಫೋಟೊಶಾಪ್ ಮಾಡಿದ್ದು ನೆಹರು ಜಾಗದಲ್ಲಿ ಯುವತಿಯೊಬ್ಬಳ ಫೋಟೊವನ್ನು ಕೂರಿಸಿದ್ದಾರೆ. ಗಾಂಧಿ ಬಗ್ಗೆ ವಿಕೃತ ಸುಳ್ಳುಗಳನ್ನು ಹಂಚಿರುವ ಈ ವಂಚಕರು ಚಿತ್ರ ನೋಡಿದವರಿಗೆ ಅನುಮಾನ ಬರಲೆಂದು ಈ ಕೆಲಸ ಮಾಡಿದ್ದಾರೆ.

4. ಕೈಗೆ ದೊಡ್ಡ ಗಾಯವಾಗಿದೆ ಎಂದು ಶಿವರಾಜ್‍ಸಿಂಗ್ ನಾಟಕವಾಡುತ್ತಿದ್ದಾರ?
ಈ ಫೊಟೊ ನೋಡಿ ಒಮ್ಮೆ ಬಲಗೈಗೆ ಬ್ಯಾಂಡೇಜ್ ಹಾಕಿಕೊಂಡರೆ ಮತ್ತೊಮ್ಮೆ ಎಡಗೈಗೆ ಬ್ಯಾಂಡೇಜ್ ಹಾಕಿಕೊಂಡು ಸಿಕ್ಕಿಹಾಕಿಕೊಂಡಿದ್ದಾರೆ..


ಈ ಸಂದೇಶ ಮೇಲಿನ ಫೋಟೊ ಜೊತೆ ಎಲ್ಲಾ ಕಡೆ ವೈರಲ್ ಆಗಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಮುಖಂಡ ಶಿವರಾಜ್‍ಸಿಂಗ್‍ರವರ ತೆಜೋವಧೆ ಮಾಡಲು ಈ ಫೋಟೊವನ್ನು ವ್ಯಾಪಕವಾಗಿ ಬಳಸಿಕೊಳ್ಳಲಾಗಿದೆ.

ಆದರೆ ವಾಸ್ತವ ಏನೆಂದರೆ ಇದೆಲ್ಲವೂ ಸುಳ್ಳು ಸಂದೇಶವಾಗಿದೆ. ನಿಜವಾಗಿಯೂ ಅವರ ಬಲಗೈಗೆ ಗಾಯವಾಗಿದೆ ಮತ್ತು ಆ ಒಂದು ಕೈಗೆ ಮಾತ್ರ ಬ್ಯಾಂಡೇಜ್ ಹಾಕಲಾಗಿದೆ. ಮೊಲದ ಚಿತ್ರ.. ಎರಡನೇ ಚಿತ್ರದಲ್ಲಿ ಎಡಗೈಗೆ ಗಾಯವಾಗಿ ಬ್ಯಾಂಡೇಜ್ ಹಾಕಿರುವಂತೆ ಕಾಣುತ್ತಿರುವುದು ಏಕೆಂದರೆ ಅದು ಸೆಲ್ಫಿ ಚಿತ್ರವಾಗಿದೆ. ಆ ಫೋಟೊವನ್ನು ಸೂಕ್ಷ್ಮವಾಗಿ ಗಮನಿಸಿ ಅಭಿಮಾನಿಯೊಬ್ಬ ತನ್ನ ಕೈಯಿಂದ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬರುತ್ತದೆ. ಕೆಲವೊಮ್ಮೆ ಸೆಲ್ಫಿ ತೆಗೆಯುವಾಗ ನಮ್ಮ ಚಿತ್ರಗಳು ಕನ್ನಡಿಯಲ್ಲಿ ಕಾಣುವಂತೆ ಉಲ್ಟಾ ಬರುತ್ತವೆ. ಹಾಗಾಗಿ ಇಲ್ಲ ಅವರ ಎಡಗೈಗೆ ಬ್ಯಾಂಡೇಜ್ ಹಾಕಿದಂತೆ ಚಿತ್ರ ಬಂದಿದೆ ಅಷ್ಟೇ.

5. ಕರ್ನಾಟಕದ ಪ್ರವಾಹ ಪರಿಹಾರಕ್ಕೆ ಕೇಂದ್ರ ಸರ್ಕಾರ 3800 ಕೋಟಿ, ರಾಜ್ಯ ಸರ್ಕಾರ 6200ಕೋಟಿ ಬಿಡುಗಡೆ ಮಾಡಿದೆ: ಬಿಜಪಿ ಬಾಗಲಕೋಟ
ಫೇಸ್‍ಬುಕ್‍ನಲ್ಲಿ ಇಂತಹ ಒಂದು ಪೋಸ್ಟರ್ ಸಾಕಷ್ಟು ಓಡಾಡುತ್ತಿದೆ. ಅದೂ ಅಲ್ಲದೇ ತತ್ ಕ್ಷಣದ ಪರಿಹಾರ ಎಂದೂ ಬೂಸಿ ಬಿಡಲಾಗಿದೆ.

ಸತ್ಯ: ಕರ್ನಾಟಕದಲ್ಲಿ ಪ್ರವಾಹ ಸಂಭವಿಸಿ ಒಂದೂವರೆ ತಿಂಗಳ ನಂತರ ಕೇಂದ್ರ ಸರ್ಕಾರದ ಗೃಹ ಇಲಾಕೆ 1200 ಕೋಟಿ ಬಿಡುಗಡೆಗೆ ಮನವಿ ಮಾಡಿದೆ. ಆದರೆ ಎನ್‍ಡಿಆರ್‌ಎಫ್ ಅದಕ್ಕೂ ಕಡಿಮೆ ಹಣ ಬಿಡುಗಡೆ ಮಾಡಬಹುದೆಂಬ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ ಬಿಜೆಪಿ ಭಕ್ತರು ಮಾತ್ರ ಮೋದಿಯನ್ನು ಹೊಗಳುವ ಭರದಲ್ಲಿ ಮನಸ್ಸಿಗೆ ಬಂದ ಸಂಖ್ಯೆಗಳನ್ನು ಬರೆದು 10000 ಕೋಟಿ ಎಂದು ಬೊಬ್ಬೆಯೊಡೆಯುತ್ತಿದ್ದಾರೆ. ಅಲ್ಲದೇ ಇನ್ನು ಹಣ ಬರುತ್ತದೆ ಎಂದು ಬಳಾಂಗ್ ಬಿಡುತ್ತಿದ್ದಾರೆ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...