Homeನಿಜವೋ ಸುಳ್ಳೋಈ ವಾರದ ಟಾಪ್ 5 ಫೇಕ್ ನ್ಯೂಸ್‍ಗಳು

ಈ ವಾರದ ಟಾಪ್ 5 ಫೇಕ್ ನ್ಯೂಸ್‍ಗಳು

- Advertisement -
- Advertisement -

1. ಬಿಹಾರಿಗಳು 500 ಬಸ್ ಚಾರ್ಜ್‍ನಲ್ಲಿ ದಿಲ್ಲಿಗೆ ಬಂದು 5 ಲಕ್ಷದ ಚಿಕಿತ್ಸೆ ಪಡೆದು ದೋಚುತ್ತಿದ್ದಾರೆ: ಕೇಜ್ರಿವಾಲ್..
ನಿಜವಾಗಿಯೂ ಕೇಜ್ರಿವಾಲ್ ಹೇಳಿದ್ದೇನು?
ಬಿಹಾರದ ವ್ಯಕ್ತಿಯೊಬ್ಬರು 500 ರೂ.ಗೆ ಟಿಕೆಟ್ ಖರೀದಿಸಿ ದೆಹಲಿಗೆ ಬರುತ್ತಾರೆ. 5 ಲಕ್ಷ ರೂಪಾಯಿ ಮೌಲ್ಯದ ಉಚಿತ ಚಿಕಿತ್ಸೆ ಪಡೆದ ನಂತರ ಹಿಂದಿರುಗುತ್ತಾರೆ. ಅವರು ನಮ್ಮ ದೇಶದ ಜನರಾಗಿರುವುದರಿಂದ ಅದು ನಮಗೆ ಸಂತೋಷವನ್ನು ನೀಡುತ್ತದೆ, ಆದರೆ ದೆಹಲಿಗೆ ತನ್ನದೇ ಆದ ಸಾಮಥ್ರ್ಯವಿದೆ. ದೆಹಲಿ ಇಡೀ ದೇಶದ ಜನರಿಗೆ ಹೇಗೆ ಸೇವೆ ಸಲ್ಲಿಸಲು ಸಾಧ್ಯ? ಆದ್ದರಿಂದ ದೇಶಾದ್ಯಂತ ಈ ಸೌಲಭ್ಯಗಳನ್ನು ಸುಧಾರಿಸುವ ಅವಶ್ಯಕತೆಯಿದೆ. (ಗೋಡಿ ಮೀಡಿಯಾ ತಮ್ಮ ವರದಿಗಳಲ್ಲಿ ಮೊದಲೆರಡು ಸಾಲನ್ನು ಮಾತ್ರ ಪ್ರಸಾರ ಮಾಡಿ ಕೊನೆಯ ಸಾಲುಗಳನ್ನು ಕತ್ತರಿಸುತ್ತಾರೆ. ಆದರೆ ಅದು ವೀಡಿಯೊದಲ್ಲಿದೆ)

ಗೋದಿ ಮೀಡಿಯಾ ಹೇಗೆ ವರದಿ ಮಾಡಿತು?
ಬಿಹಾರಿಗಳು 500 ರೂ.ಗೆ ಪ್ರಯಾಣ ಮಾಡಿ, 5 ಲಕ್ಷ ರೂ. ಉಚಿತ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದಾರೆ: ಅರವಿಂದ್ ಕೇಜ್ರಿವಾಲ್ ಪೂವಾರ್ಂಚಲಿಸ್ ಮೇಲೆ ದಾಳಿ…

ಬಿಜೆಪಿ ಹೇಗೆ ಪ್ರತಿಕ್ರಿಯಿಸಿತು?
ಮನೋಜ್ ತಿವಾರಿ: ದೆಹಲಿಯಲ್ಲಿ ನಿಮ್ಮ ಆಟ ಮುಗಿದಿದೆ ಎಂದು ನಿಮಗೆ ತಿಳಿದಿದೆ. ಹಾಗಾಗಿ ಪೂವಾರ್ಂಚಲಿಸ್ ಬಗ್ಗೆ ನಿಮ್ಮ ದ್ವೇಷವು ಮುಂಚೂಣಿಗೆ ಬಂದಿದೆ. ಶೀಘ್ರದಲ್ಲಿಯೇ ದೆಹಲಿಯ ಜನರು ನಿಮಗೆ ಉತ್ತರವನ್ನು ನೀಡುತ್ತಾರೆ.

ಐಟಿ ಸೆಲ್ ಹೇಗೆ ಟ್ರೋಲ್ ಮಾಡಿದರು:
ಕೇಜ್ರಿವಾಲ್‍ರ ವಿಡಿಯೋದಲ್ಲಿ ಕೊನೆಯ ಸಾಲುಗಳನ್ನು ಕತ್ತರಿಸಿದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡರು. ಗೋಡಿ ಮೀಡಿಯಾದ ತುಣುಕುಗಳನ್ನು ಮತ್ತು ಬಿಜೆಪಿ ರಾಜಕಾರಣಿಗಳ ಹೇಳಿಕೆಗಳನ್ನು ಬಳಸಿ ವೈರಲ್ ಮಾಡಿದರು. ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟಿಸಿ ಕೇಜ್ರಿವಾಲ್ ವಿರುದ್ಧ ಕಾರಿಕೊಂಡರು.
ಹಣಬಲ + ಕೊಂಡುಕೊಂಡ ಮಾಧ್ಯಮ + ಐಟಿ ಸೆಲ್ ಇವಿಷ್ಟು ಒಗ್ಗೂಡಿದರೆ ಏನು ಮಾಡಬಹುದು ಎಂಬುದಕ್ಕೆ ಇದು ಒಂದು ವಿಶಿಷ್ಟ ಉದಾಹರಣೆಯಾಗಿದೆ. ಯಾರನ್ನಾದರೂ ದೂಷಿಸಲು, ಜನರ ಮನಸ್ಸಿನಲ್ಲಿ ಯಾರನ್ನಾದರೂ ರಾಷ್ಟ್ರ ವಿರೋಧಿಗಳನ್ನಾಗಿ ಮಾಡಲು ಅಥವಾ ವೈದ್ಯರನ್ನು ದೆವ್ವದಂತೆ ಕಾಣುವಂತೆ ಮಾಡಲು ಇದು ಸುಲಭವಾದ ಮಾರ್ಗವಾಗಿದೆ…

2. ಬಾಲಕೋಟ್‍ನ ಪ್ರಮೋಷನಲ್ ವಿಡಿಯೋವನ್ನು ರಿಯಲ್ ಫೂಟೆಜ್ ಎಂದು ತಿರುಚಿದ ಮಾಧ್ಯಮಗಳು
ರಿಪಬ್ಲಿಕ್ ಟಿವಿ, ಟೈಮ್ಸ್ ನೌ, ಝೀ ಹಿಂದಿ ನ್ಯೂಸ್, ಎಬಿಪಿ ನ್ಯೂಸ್, ಇಂಡಿಯಾ ಟುಡೇ ಇತ್ಯಾದಿ ಚಾನೆಲ್‍ಗಳ ಜೊತೆಗೆ ಕೆಲವು ಪ್ರಾದೇಶಿಕ ಚಾನೆಲ್‍ಗಳು ಮತ್ತು ಪತ್ರಿಕೆಗಳು ತಮ್ಮ ವೀಕ್ಷಕರು ಮತ್ತು ಓದುಗರ ಮೇಲೆ ಈ ‘ಫೇಕ್ ದಾಳಿ’ ನಡೆಸಿದವು. ಅವು ಭಾರತೀಯ ವಾಯುಸೇನೆ ಬಿಡಿಗಡೆ ಮಾಡಿದ್ದ ವಿಡಿಯೋ ಒಂದನ್ನು ತೋರಿಸಿ ಅದು ಬಾಲಾಕೋಟ್ ದಾಳಿಯ ರಿಯಲ್ ಫೂಟೇಜ್ ಎಂದವು.

ಕೆಲವು ಚಾನೆಲ್‍ಗಳಂತೂ ‘ಪ್ರೂಫ್ ಬೇಕಾ ಪ್ರೂಫ್? ಇಲ್ಲಿದೆ ನೋಡಿ’ ಎಂದವು. ಪಂಜಾಬ್ ಕೇಸರಿ ಮತ್ತು ಗುಜರಾತ್ ಸಮಾಚಾರ್ ಪತ್ರಿಕೆಗಳು ಪುಟಗಟ್ಟಲೇ ಬರೆದವು.
ಅಸಲಿಗೆ ಯಾವುದೇ ದಾಳಿಯ ವಿಡಿಯೋಗಳನ್ನು ಸೇನೆ ಬಿಡುಗಡೆ ಮಾಡುವುದಿಲ್ಲ. ಅದು ಅಕ್ಟೋಬರ್ 4ರಂದು ಬಿಡುಗಡೆ ಮಾಡಿದ್ದು ಬಾಲಾಕೋಟ್ ದಾಳಿ ಹೇಗೆ ಯೋಜಿತವಾಗಿತು ಎಂದು ತೋರಿಸುವ ಪ್ರಮೋಷನಲ್ (ರೆಪ್ರೆಸೆಂಟೆಟಿವ್ ವಿಡಿಯೋ ಅಂದರೆ ಪ್ರಾತಿನಿಧಿಕ ವಿಡಿಯೋ) ವಿಡಿಯೋವನ್ನಷ್ಟೇ. ಆದರೆ ಬಹುಪಾಲು ಚಾನೆಲ್‍ಗಳು ಬಾಲಾಕೋಟ್ ದಾಳಿಯ ರಿಯಲ್ ಫೂಟೇಜ್ ಎಂದೆಲ್ಲ ಬೊಬ್ಬೆ ಹೊಡೆದವು.

3. ಮಹಾತ್ಮನ ವಿರುದ್ಧವೇ ಸಂಚು.. ಫೋಟೋಶಾಪ್ ಮಾಡಿದ ಭಕ್ತರು..
ಮಹಾತ್ಮ ಗಾಂಧಿ ಮಹಿಳೆಯೊಂದಿಗೆ ಅಸಭ್ಯ ಭಂಗಿಯಲ್ಲಿರುವ ಚಿತ್ರ ಎಂದು ಈ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಗಾಂಧಿ ವಿರೋಧಿಗಳು ಹಂಚಿಕೊಳ್ಳುತ್ತಿದ್ದಾರೆ. ಟ್ವಿಟರ್ ಬಳಕೆದಾರ ಸಂಜಯ್ ಗುಪ್ತಾ ಬಿಜೆಪಿ ಈ ಚಿತ್ರವನ್ನು ಮೊದಲು ಹಂಚಿಕೊಂಡಿದ್ದು “ರಾಷ್ಟ್ರದ ಪಿತಾಮಹ, ನೀವು ಏನು ಮಾಡುತ್ತಿದ್ದೀರಿ? ಎಂಬ ತಲೆಬರಹವನ್ನು ನೀಡಿದ್ದಾನೆ. ಪ್ರತಿವರ್ಷ ಗಾಂಧಿಜಯಂತಿ ಮತ್ತು ಗಾಂಧಿ ಹತಾತ್ಮರಾದ ದಿನಗಳ ಸುತ್ತಾಮುತ್ತಾ ಈ ಫೇಕ್ ಫೋಟೊವನ್ನು ವೈರಲ್ ಮಾಡಲಾಗುತ್ತಿದೆ. ಕಾರಣ ಗಾಂಧಿ ದ್ವೇಷ ಅಷ್ಟೇ.

ಸತ್ಯ ಏನೆಂದರೆ ಜುಲೈ 6, 1946 ರಂದು ಭಾರತದ ಬಾಂಬೆಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಗಾಂಧಿ ಮತ್ತು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರೊಂದಿಗೆ ಕುಳಿತು ಮಾತಾಡುತ್ತಿರುವ ಛಾಯಾಚಿತ್ರವು ಅಸೋಸಿಯೇಟೆಡ್ ಪ್ರೆಸ್‍ನ ಆರ್ಕೈವ್‍ನಲ್ಲಿದೆ. ಇದನ್ನು ಯಾರೋ ಕಿಡಿಗೇಡಿಗಳು ಹಲವು ವರ್ಷಗಳ ಹಿಂದೆಯೇ ಫೋಟೊಶಾಪ್ ಮಾಡಿದ್ದು ನೆಹರು ಜಾಗದಲ್ಲಿ ಯುವತಿಯೊಬ್ಬಳ ಫೋಟೊವನ್ನು ಕೂರಿಸಿದ್ದಾರೆ. ಗಾಂಧಿ ಬಗ್ಗೆ ವಿಕೃತ ಸುಳ್ಳುಗಳನ್ನು ಹಂಚಿರುವ ಈ ವಂಚಕರು ಚಿತ್ರ ನೋಡಿದವರಿಗೆ ಅನುಮಾನ ಬರಲೆಂದು ಈ ಕೆಲಸ ಮಾಡಿದ್ದಾರೆ.

4. ಕೈಗೆ ದೊಡ್ಡ ಗಾಯವಾಗಿದೆ ಎಂದು ಶಿವರಾಜ್‍ಸಿಂಗ್ ನಾಟಕವಾಡುತ್ತಿದ್ದಾರ?
ಈ ಫೊಟೊ ನೋಡಿ ಒಮ್ಮೆ ಬಲಗೈಗೆ ಬ್ಯಾಂಡೇಜ್ ಹಾಕಿಕೊಂಡರೆ ಮತ್ತೊಮ್ಮೆ ಎಡಗೈಗೆ ಬ್ಯಾಂಡೇಜ್ ಹಾಕಿಕೊಂಡು ಸಿಕ್ಕಿಹಾಕಿಕೊಂಡಿದ್ದಾರೆ..


ಈ ಸಂದೇಶ ಮೇಲಿನ ಫೋಟೊ ಜೊತೆ ಎಲ್ಲಾ ಕಡೆ ವೈರಲ್ ಆಗಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಮುಖಂಡ ಶಿವರಾಜ್‍ಸಿಂಗ್‍ರವರ ತೆಜೋವಧೆ ಮಾಡಲು ಈ ಫೋಟೊವನ್ನು ವ್ಯಾಪಕವಾಗಿ ಬಳಸಿಕೊಳ್ಳಲಾಗಿದೆ.

ಆದರೆ ವಾಸ್ತವ ಏನೆಂದರೆ ಇದೆಲ್ಲವೂ ಸುಳ್ಳು ಸಂದೇಶವಾಗಿದೆ. ನಿಜವಾಗಿಯೂ ಅವರ ಬಲಗೈಗೆ ಗಾಯವಾಗಿದೆ ಮತ್ತು ಆ ಒಂದು ಕೈಗೆ ಮಾತ್ರ ಬ್ಯಾಂಡೇಜ್ ಹಾಕಲಾಗಿದೆ. ಮೊಲದ ಚಿತ್ರ.. ಎರಡನೇ ಚಿತ್ರದಲ್ಲಿ ಎಡಗೈಗೆ ಗಾಯವಾಗಿ ಬ್ಯಾಂಡೇಜ್ ಹಾಕಿರುವಂತೆ ಕಾಣುತ್ತಿರುವುದು ಏಕೆಂದರೆ ಅದು ಸೆಲ್ಫಿ ಚಿತ್ರವಾಗಿದೆ. ಆ ಫೋಟೊವನ್ನು ಸೂಕ್ಷ್ಮವಾಗಿ ಗಮನಿಸಿ ಅಭಿಮಾನಿಯೊಬ್ಬ ತನ್ನ ಕೈಯಿಂದ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬರುತ್ತದೆ. ಕೆಲವೊಮ್ಮೆ ಸೆಲ್ಫಿ ತೆಗೆಯುವಾಗ ನಮ್ಮ ಚಿತ್ರಗಳು ಕನ್ನಡಿಯಲ್ಲಿ ಕಾಣುವಂತೆ ಉಲ್ಟಾ ಬರುತ್ತವೆ. ಹಾಗಾಗಿ ಇಲ್ಲ ಅವರ ಎಡಗೈಗೆ ಬ್ಯಾಂಡೇಜ್ ಹಾಕಿದಂತೆ ಚಿತ್ರ ಬಂದಿದೆ ಅಷ್ಟೇ.

5. ಕರ್ನಾಟಕದ ಪ್ರವಾಹ ಪರಿಹಾರಕ್ಕೆ ಕೇಂದ್ರ ಸರ್ಕಾರ 3800 ಕೋಟಿ, ರಾಜ್ಯ ಸರ್ಕಾರ 6200ಕೋಟಿ ಬಿಡುಗಡೆ ಮಾಡಿದೆ: ಬಿಜಪಿ ಬಾಗಲಕೋಟ
ಫೇಸ್‍ಬುಕ್‍ನಲ್ಲಿ ಇಂತಹ ಒಂದು ಪೋಸ್ಟರ್ ಸಾಕಷ್ಟು ಓಡಾಡುತ್ತಿದೆ. ಅದೂ ಅಲ್ಲದೇ ತತ್ ಕ್ಷಣದ ಪರಿಹಾರ ಎಂದೂ ಬೂಸಿ ಬಿಡಲಾಗಿದೆ.

ಸತ್ಯ: ಕರ್ನಾಟಕದಲ್ಲಿ ಪ್ರವಾಹ ಸಂಭವಿಸಿ ಒಂದೂವರೆ ತಿಂಗಳ ನಂತರ ಕೇಂದ್ರ ಸರ್ಕಾರದ ಗೃಹ ಇಲಾಕೆ 1200 ಕೋಟಿ ಬಿಡುಗಡೆಗೆ ಮನವಿ ಮಾಡಿದೆ. ಆದರೆ ಎನ್‍ಡಿಆರ್‌ಎಫ್ ಅದಕ್ಕೂ ಕಡಿಮೆ ಹಣ ಬಿಡುಗಡೆ ಮಾಡಬಹುದೆಂಬ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ ಬಿಜೆಪಿ ಭಕ್ತರು ಮಾತ್ರ ಮೋದಿಯನ್ನು ಹೊಗಳುವ ಭರದಲ್ಲಿ ಮನಸ್ಸಿಗೆ ಬಂದ ಸಂಖ್ಯೆಗಳನ್ನು ಬರೆದು 10000 ಕೋಟಿ ಎಂದು ಬೊಬ್ಬೆಯೊಡೆಯುತ್ತಿದ್ದಾರೆ. ಅಲ್ಲದೇ ಇನ್ನು ಹಣ ಬರುತ್ತದೆ ಎಂದು ಬಳಾಂಗ್ ಬಿಡುತ್ತಿದ್ದಾರೆ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...