Homeನಿಜವೋ ಸುಳ್ಳೋಈ ವಾರದ ಟಾಪ್ 5 ಫೇಕ್ ನ್ಯೂಸ್‍ಗಳು

ಈ ವಾರದ ಟಾಪ್ 5 ಫೇಕ್ ನ್ಯೂಸ್‍ಗಳು

- Advertisement -
- Advertisement -

1. ಬಿಹಾರಿಗಳು 500 ಬಸ್ ಚಾರ್ಜ್‍ನಲ್ಲಿ ದಿಲ್ಲಿಗೆ ಬಂದು 5 ಲಕ್ಷದ ಚಿಕಿತ್ಸೆ ಪಡೆದು ದೋಚುತ್ತಿದ್ದಾರೆ: ಕೇಜ್ರಿವಾಲ್..
ನಿಜವಾಗಿಯೂ ಕೇಜ್ರಿವಾಲ್ ಹೇಳಿದ್ದೇನು?
ಬಿಹಾರದ ವ್ಯಕ್ತಿಯೊಬ್ಬರು 500 ರೂ.ಗೆ ಟಿಕೆಟ್ ಖರೀದಿಸಿ ದೆಹಲಿಗೆ ಬರುತ್ತಾರೆ. 5 ಲಕ್ಷ ರೂಪಾಯಿ ಮೌಲ್ಯದ ಉಚಿತ ಚಿಕಿತ್ಸೆ ಪಡೆದ ನಂತರ ಹಿಂದಿರುಗುತ್ತಾರೆ. ಅವರು ನಮ್ಮ ದೇಶದ ಜನರಾಗಿರುವುದರಿಂದ ಅದು ನಮಗೆ ಸಂತೋಷವನ್ನು ನೀಡುತ್ತದೆ, ಆದರೆ ದೆಹಲಿಗೆ ತನ್ನದೇ ಆದ ಸಾಮಥ್ರ್ಯವಿದೆ. ದೆಹಲಿ ಇಡೀ ದೇಶದ ಜನರಿಗೆ ಹೇಗೆ ಸೇವೆ ಸಲ್ಲಿಸಲು ಸಾಧ್ಯ? ಆದ್ದರಿಂದ ದೇಶಾದ್ಯಂತ ಈ ಸೌಲಭ್ಯಗಳನ್ನು ಸುಧಾರಿಸುವ ಅವಶ್ಯಕತೆಯಿದೆ. (ಗೋಡಿ ಮೀಡಿಯಾ ತಮ್ಮ ವರದಿಗಳಲ್ಲಿ ಮೊದಲೆರಡು ಸಾಲನ್ನು ಮಾತ್ರ ಪ್ರಸಾರ ಮಾಡಿ ಕೊನೆಯ ಸಾಲುಗಳನ್ನು ಕತ್ತರಿಸುತ್ತಾರೆ. ಆದರೆ ಅದು ವೀಡಿಯೊದಲ್ಲಿದೆ)

ಗೋದಿ ಮೀಡಿಯಾ ಹೇಗೆ ವರದಿ ಮಾಡಿತು?
ಬಿಹಾರಿಗಳು 500 ರೂ.ಗೆ ಪ್ರಯಾಣ ಮಾಡಿ, 5 ಲಕ್ಷ ರೂ. ಉಚಿತ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದಾರೆ: ಅರವಿಂದ್ ಕೇಜ್ರಿವಾಲ್ ಪೂವಾರ್ಂಚಲಿಸ್ ಮೇಲೆ ದಾಳಿ…

ಬಿಜೆಪಿ ಹೇಗೆ ಪ್ರತಿಕ್ರಿಯಿಸಿತು?
ಮನೋಜ್ ತಿವಾರಿ: ದೆಹಲಿಯಲ್ಲಿ ನಿಮ್ಮ ಆಟ ಮುಗಿದಿದೆ ಎಂದು ನಿಮಗೆ ತಿಳಿದಿದೆ. ಹಾಗಾಗಿ ಪೂವಾರ್ಂಚಲಿಸ್ ಬಗ್ಗೆ ನಿಮ್ಮ ದ್ವೇಷವು ಮುಂಚೂಣಿಗೆ ಬಂದಿದೆ. ಶೀಘ್ರದಲ್ಲಿಯೇ ದೆಹಲಿಯ ಜನರು ನಿಮಗೆ ಉತ್ತರವನ್ನು ನೀಡುತ್ತಾರೆ.

ಐಟಿ ಸೆಲ್ ಹೇಗೆ ಟ್ರೋಲ್ ಮಾಡಿದರು:
ಕೇಜ್ರಿವಾಲ್‍ರ ವಿಡಿಯೋದಲ್ಲಿ ಕೊನೆಯ ಸಾಲುಗಳನ್ನು ಕತ್ತರಿಸಿದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡರು. ಗೋಡಿ ಮೀಡಿಯಾದ ತುಣುಕುಗಳನ್ನು ಮತ್ತು ಬಿಜೆಪಿ ರಾಜಕಾರಣಿಗಳ ಹೇಳಿಕೆಗಳನ್ನು ಬಳಸಿ ವೈರಲ್ ಮಾಡಿದರು. ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟಿಸಿ ಕೇಜ್ರಿವಾಲ್ ವಿರುದ್ಧ ಕಾರಿಕೊಂಡರು.
ಹಣಬಲ + ಕೊಂಡುಕೊಂಡ ಮಾಧ್ಯಮ + ಐಟಿ ಸೆಲ್ ಇವಿಷ್ಟು ಒಗ್ಗೂಡಿದರೆ ಏನು ಮಾಡಬಹುದು ಎಂಬುದಕ್ಕೆ ಇದು ಒಂದು ವಿಶಿಷ್ಟ ಉದಾಹರಣೆಯಾಗಿದೆ. ಯಾರನ್ನಾದರೂ ದೂಷಿಸಲು, ಜನರ ಮನಸ್ಸಿನಲ್ಲಿ ಯಾರನ್ನಾದರೂ ರಾಷ್ಟ್ರ ವಿರೋಧಿಗಳನ್ನಾಗಿ ಮಾಡಲು ಅಥವಾ ವೈದ್ಯರನ್ನು ದೆವ್ವದಂತೆ ಕಾಣುವಂತೆ ಮಾಡಲು ಇದು ಸುಲಭವಾದ ಮಾರ್ಗವಾಗಿದೆ…

2. ಬಾಲಕೋಟ್‍ನ ಪ್ರಮೋಷನಲ್ ವಿಡಿಯೋವನ್ನು ರಿಯಲ್ ಫೂಟೆಜ್ ಎಂದು ತಿರುಚಿದ ಮಾಧ್ಯಮಗಳು
ರಿಪಬ್ಲಿಕ್ ಟಿವಿ, ಟೈಮ್ಸ್ ನೌ, ಝೀ ಹಿಂದಿ ನ್ಯೂಸ್, ಎಬಿಪಿ ನ್ಯೂಸ್, ಇಂಡಿಯಾ ಟುಡೇ ಇತ್ಯಾದಿ ಚಾನೆಲ್‍ಗಳ ಜೊತೆಗೆ ಕೆಲವು ಪ್ರಾದೇಶಿಕ ಚಾನೆಲ್‍ಗಳು ಮತ್ತು ಪತ್ರಿಕೆಗಳು ತಮ್ಮ ವೀಕ್ಷಕರು ಮತ್ತು ಓದುಗರ ಮೇಲೆ ಈ ‘ಫೇಕ್ ದಾಳಿ’ ನಡೆಸಿದವು. ಅವು ಭಾರತೀಯ ವಾಯುಸೇನೆ ಬಿಡಿಗಡೆ ಮಾಡಿದ್ದ ವಿಡಿಯೋ ಒಂದನ್ನು ತೋರಿಸಿ ಅದು ಬಾಲಾಕೋಟ್ ದಾಳಿಯ ರಿಯಲ್ ಫೂಟೇಜ್ ಎಂದವು.

ಕೆಲವು ಚಾನೆಲ್‍ಗಳಂತೂ ‘ಪ್ರೂಫ್ ಬೇಕಾ ಪ್ರೂಫ್? ಇಲ್ಲಿದೆ ನೋಡಿ’ ಎಂದವು. ಪಂಜಾಬ್ ಕೇಸರಿ ಮತ್ತು ಗುಜರಾತ್ ಸಮಾಚಾರ್ ಪತ್ರಿಕೆಗಳು ಪುಟಗಟ್ಟಲೇ ಬರೆದವು.
ಅಸಲಿಗೆ ಯಾವುದೇ ದಾಳಿಯ ವಿಡಿಯೋಗಳನ್ನು ಸೇನೆ ಬಿಡುಗಡೆ ಮಾಡುವುದಿಲ್ಲ. ಅದು ಅಕ್ಟೋಬರ್ 4ರಂದು ಬಿಡುಗಡೆ ಮಾಡಿದ್ದು ಬಾಲಾಕೋಟ್ ದಾಳಿ ಹೇಗೆ ಯೋಜಿತವಾಗಿತು ಎಂದು ತೋರಿಸುವ ಪ್ರಮೋಷನಲ್ (ರೆಪ್ರೆಸೆಂಟೆಟಿವ್ ವಿಡಿಯೋ ಅಂದರೆ ಪ್ರಾತಿನಿಧಿಕ ವಿಡಿಯೋ) ವಿಡಿಯೋವನ್ನಷ್ಟೇ. ಆದರೆ ಬಹುಪಾಲು ಚಾನೆಲ್‍ಗಳು ಬಾಲಾಕೋಟ್ ದಾಳಿಯ ರಿಯಲ್ ಫೂಟೇಜ್ ಎಂದೆಲ್ಲ ಬೊಬ್ಬೆ ಹೊಡೆದವು.

3. ಮಹಾತ್ಮನ ವಿರುದ್ಧವೇ ಸಂಚು.. ಫೋಟೋಶಾಪ್ ಮಾಡಿದ ಭಕ್ತರು..
ಮಹಾತ್ಮ ಗಾಂಧಿ ಮಹಿಳೆಯೊಂದಿಗೆ ಅಸಭ್ಯ ಭಂಗಿಯಲ್ಲಿರುವ ಚಿತ್ರ ಎಂದು ಈ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಗಾಂಧಿ ವಿರೋಧಿಗಳು ಹಂಚಿಕೊಳ್ಳುತ್ತಿದ್ದಾರೆ. ಟ್ವಿಟರ್ ಬಳಕೆದಾರ ಸಂಜಯ್ ಗುಪ್ತಾ ಬಿಜೆಪಿ ಈ ಚಿತ್ರವನ್ನು ಮೊದಲು ಹಂಚಿಕೊಂಡಿದ್ದು “ರಾಷ್ಟ್ರದ ಪಿತಾಮಹ, ನೀವು ಏನು ಮಾಡುತ್ತಿದ್ದೀರಿ? ಎಂಬ ತಲೆಬರಹವನ್ನು ನೀಡಿದ್ದಾನೆ. ಪ್ರತಿವರ್ಷ ಗಾಂಧಿಜಯಂತಿ ಮತ್ತು ಗಾಂಧಿ ಹತಾತ್ಮರಾದ ದಿನಗಳ ಸುತ್ತಾಮುತ್ತಾ ಈ ಫೇಕ್ ಫೋಟೊವನ್ನು ವೈರಲ್ ಮಾಡಲಾಗುತ್ತಿದೆ. ಕಾರಣ ಗಾಂಧಿ ದ್ವೇಷ ಅಷ್ಟೇ.

ಸತ್ಯ ಏನೆಂದರೆ ಜುಲೈ 6, 1946 ರಂದು ಭಾರತದ ಬಾಂಬೆಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಗಾಂಧಿ ಮತ್ತು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರೊಂದಿಗೆ ಕುಳಿತು ಮಾತಾಡುತ್ತಿರುವ ಛಾಯಾಚಿತ್ರವು ಅಸೋಸಿಯೇಟೆಡ್ ಪ್ರೆಸ್‍ನ ಆರ್ಕೈವ್‍ನಲ್ಲಿದೆ. ಇದನ್ನು ಯಾರೋ ಕಿಡಿಗೇಡಿಗಳು ಹಲವು ವರ್ಷಗಳ ಹಿಂದೆಯೇ ಫೋಟೊಶಾಪ್ ಮಾಡಿದ್ದು ನೆಹರು ಜಾಗದಲ್ಲಿ ಯುವತಿಯೊಬ್ಬಳ ಫೋಟೊವನ್ನು ಕೂರಿಸಿದ್ದಾರೆ. ಗಾಂಧಿ ಬಗ್ಗೆ ವಿಕೃತ ಸುಳ್ಳುಗಳನ್ನು ಹಂಚಿರುವ ಈ ವಂಚಕರು ಚಿತ್ರ ನೋಡಿದವರಿಗೆ ಅನುಮಾನ ಬರಲೆಂದು ಈ ಕೆಲಸ ಮಾಡಿದ್ದಾರೆ.

4. ಕೈಗೆ ದೊಡ್ಡ ಗಾಯವಾಗಿದೆ ಎಂದು ಶಿವರಾಜ್‍ಸಿಂಗ್ ನಾಟಕವಾಡುತ್ತಿದ್ದಾರ?
ಈ ಫೊಟೊ ನೋಡಿ ಒಮ್ಮೆ ಬಲಗೈಗೆ ಬ್ಯಾಂಡೇಜ್ ಹಾಕಿಕೊಂಡರೆ ಮತ್ತೊಮ್ಮೆ ಎಡಗೈಗೆ ಬ್ಯಾಂಡೇಜ್ ಹಾಕಿಕೊಂಡು ಸಿಕ್ಕಿಹಾಕಿಕೊಂಡಿದ್ದಾರೆ..


ಈ ಸಂದೇಶ ಮೇಲಿನ ಫೋಟೊ ಜೊತೆ ಎಲ್ಲಾ ಕಡೆ ವೈರಲ್ ಆಗಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಮುಖಂಡ ಶಿವರಾಜ್‍ಸಿಂಗ್‍ರವರ ತೆಜೋವಧೆ ಮಾಡಲು ಈ ಫೋಟೊವನ್ನು ವ್ಯಾಪಕವಾಗಿ ಬಳಸಿಕೊಳ್ಳಲಾಗಿದೆ.

ಆದರೆ ವಾಸ್ತವ ಏನೆಂದರೆ ಇದೆಲ್ಲವೂ ಸುಳ್ಳು ಸಂದೇಶವಾಗಿದೆ. ನಿಜವಾಗಿಯೂ ಅವರ ಬಲಗೈಗೆ ಗಾಯವಾಗಿದೆ ಮತ್ತು ಆ ಒಂದು ಕೈಗೆ ಮಾತ್ರ ಬ್ಯಾಂಡೇಜ್ ಹಾಕಲಾಗಿದೆ. ಮೊಲದ ಚಿತ್ರ.. ಎರಡನೇ ಚಿತ್ರದಲ್ಲಿ ಎಡಗೈಗೆ ಗಾಯವಾಗಿ ಬ್ಯಾಂಡೇಜ್ ಹಾಕಿರುವಂತೆ ಕಾಣುತ್ತಿರುವುದು ಏಕೆಂದರೆ ಅದು ಸೆಲ್ಫಿ ಚಿತ್ರವಾಗಿದೆ. ಆ ಫೋಟೊವನ್ನು ಸೂಕ್ಷ್ಮವಾಗಿ ಗಮನಿಸಿ ಅಭಿಮಾನಿಯೊಬ್ಬ ತನ್ನ ಕೈಯಿಂದ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬರುತ್ತದೆ. ಕೆಲವೊಮ್ಮೆ ಸೆಲ್ಫಿ ತೆಗೆಯುವಾಗ ನಮ್ಮ ಚಿತ್ರಗಳು ಕನ್ನಡಿಯಲ್ಲಿ ಕಾಣುವಂತೆ ಉಲ್ಟಾ ಬರುತ್ತವೆ. ಹಾಗಾಗಿ ಇಲ್ಲ ಅವರ ಎಡಗೈಗೆ ಬ್ಯಾಂಡೇಜ್ ಹಾಕಿದಂತೆ ಚಿತ್ರ ಬಂದಿದೆ ಅಷ್ಟೇ.

5. ಕರ್ನಾಟಕದ ಪ್ರವಾಹ ಪರಿಹಾರಕ್ಕೆ ಕೇಂದ್ರ ಸರ್ಕಾರ 3800 ಕೋಟಿ, ರಾಜ್ಯ ಸರ್ಕಾರ 6200ಕೋಟಿ ಬಿಡುಗಡೆ ಮಾಡಿದೆ: ಬಿಜಪಿ ಬಾಗಲಕೋಟ
ಫೇಸ್‍ಬುಕ್‍ನಲ್ಲಿ ಇಂತಹ ಒಂದು ಪೋಸ್ಟರ್ ಸಾಕಷ್ಟು ಓಡಾಡುತ್ತಿದೆ. ಅದೂ ಅಲ್ಲದೇ ತತ್ ಕ್ಷಣದ ಪರಿಹಾರ ಎಂದೂ ಬೂಸಿ ಬಿಡಲಾಗಿದೆ.

ಸತ್ಯ: ಕರ್ನಾಟಕದಲ್ಲಿ ಪ್ರವಾಹ ಸಂಭವಿಸಿ ಒಂದೂವರೆ ತಿಂಗಳ ನಂತರ ಕೇಂದ್ರ ಸರ್ಕಾರದ ಗೃಹ ಇಲಾಕೆ 1200 ಕೋಟಿ ಬಿಡುಗಡೆಗೆ ಮನವಿ ಮಾಡಿದೆ. ಆದರೆ ಎನ್‍ಡಿಆರ್‌ಎಫ್ ಅದಕ್ಕೂ ಕಡಿಮೆ ಹಣ ಬಿಡುಗಡೆ ಮಾಡಬಹುದೆಂಬ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ ಬಿಜೆಪಿ ಭಕ್ತರು ಮಾತ್ರ ಮೋದಿಯನ್ನು ಹೊಗಳುವ ಭರದಲ್ಲಿ ಮನಸ್ಸಿಗೆ ಬಂದ ಸಂಖ್ಯೆಗಳನ್ನು ಬರೆದು 10000 ಕೋಟಿ ಎಂದು ಬೊಬ್ಬೆಯೊಡೆಯುತ್ತಿದ್ದಾರೆ. ಅಲ್ಲದೇ ಇನ್ನು ಹಣ ಬರುತ್ತದೆ ಎಂದು ಬಳಾಂಗ್ ಬಿಡುತ್ತಿದ್ದಾರೆ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...