Homeಅಂತರಾಷ್ಟ್ರೀಯಇರಾನ್‌ನಲ್ಲಿ ಹಮಾಸ್‌ ಸರ್ವೋಚ್ಛ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆ; ಇಸ್ರೇಲ್ ಅನ್ನು ದೂಷಿಸಿದ ಐಆರ್‌ಜಿಸಿ

ಇರಾನ್‌ನಲ್ಲಿ ಹಮಾಸ್‌ ಸರ್ವೋಚ್ಛ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆ; ಇಸ್ರೇಲ್ ಅನ್ನು ದೂಷಿಸಿದ ಐಆರ್‌ಜಿಸಿ

- Advertisement -
- Advertisement -

ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಬುಧವಾರ ಇರಾನ್‌ನಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂದು ಹಮಾಸ್ ಮತ್ತು ಇರಾನ್‌ನ ಎಲೈಟ್ ರೆವೆಲ್ಯೂಷನರಿ ಗಾರ್ಡ್ಸ್ (ಐಆರ್‌ಜಿಸಿ) ಪ್ರತ್ಯೇಕ ಹೇಳಿಕೆಗಳಲ್ಲಿ ತಿಳಿಸಿವೆ.

ಹನಿಯೆಹ್ ಸಾವಿಗೆ ತೀವ್ರ ದುಖಃ ವ್ಯಕ್ತಪಡಿಸಿರುವ ಹಮಾಸ್, ಮಂಗಳವಾರ ಬೆಳಿಗ್ಗೆ ಟೆಹ್ರಾನ್‌ನಲ್ಲಿರುವ ನಿವಾಸದ ಮೇಲೆ ನಡೆದ ವಿಶ್ವಾಸಘಾತುಕ ಝಿಯೋನಿಸ್ಟ್ ದಾಳಿಯಲ್ಲಿ ಹನಿಯೆಹ್ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

ಮಂಗಳವಾರ ನಡೆದ ಇರಾನ್‌ನ ನೂತನ ಅಧ್ಯಕ್ಷ ಮಸೂದ್ ಪೆಝೆಶ್ಕಿಯಾನ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಹನಿಯೆಹ್ ಭಾಗವಹಿಸಿದ್ದರು.

“ಇಂದು ಮುಂಜಾನೆ, ಟೆಹ್ರಾನ್‌ನಲ್ಲಿರುವ ಇಸ್ಮಾಯಿಲ್ ಹನಿಯೆ ಅವರ ನಿವಾಸದ ಮೇಲೆ ದಾಳಿ ನಡೆದಿದ್ದು, ಪರಿಣಾಮ ಹನಿಯೆಹ್ ಮತ್ತು ಅವರ ಅಂಗರಕ್ಷಕರಲ್ಲಿ ಒಬ್ಬರು ಹುತಾತ್ಮರಾಗಿದ್ದಾರೆ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ನೀಡಲಾಗುವುದು” ಎಂದು ಎಲೈಟ್ ರೆವೆಲ್ಯೂಷನರಿ ಗಾರ್ಡ್ಸ್ ಮಂಗಳವಾರ ತಿಳಿಸಿದೆ.

ಕಳೆದ ಏಪ್ರಿಲ್‌ನಲ್ಲಿ, ಗಾಝಾದಲ್ಲಿ ವಾಹನದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯೊಂದರಲ್ಲಿ ಹನಿಯೆಹ್‌ ಅವರ ಮೂವರು ಪುತ್ರರು ಮತ್ತು ನಾಲ್ವರು ಮೊಮ್ಮಕ್ಕಳು ಕೊಲ್ಲಲ್ಪಟ್ಟಿದ್ದರು. ಗಾಝಾದ ಅಲ್-ಶಾತಿ ಶಿಬಿರದ ಬಳಿ ಅವರು ಚಲಾಯಿಸುತ್ತಿದ್ದ ಕಾರಿಗೆ ಬಾಂಬ್ ದಾಳಿ ನಡೆಸಿ, ಹನಿಯೆಹ್ ಅವರ ಮೂವರು ಪುತ್ರರಾದ ಹಝೆಮ್, ಅಮೀರ್ ಮತ್ತು ಮೊಹಮ್ಮದ್ ಅನ್ನು ಹತ್ಯೆ ಮಾಡಲಾಗಿತ್ತು. ಹಮಾಸ್ ನಡೆಸುತ್ತಿರುವ ಮಾಧ್ಯಮಗಳ ಪ್ರಕಾರ, ದಾಳಿಯಲ್ಲಿ ಅವರ ನಾಲ್ವರು ಮೊಮ್ಮಕ್ಕಳೂ ಸಾವನ್ನಪ್ಪಿದ್ದಾರೆ.

ಕಳೆದ ತಿಂಗಳು, ಹಮಾಸ್ ಮುಖ್ಯಸ್ಥ ಸಹೋದರಿ ಸೇರಿದಂತೆ ತನ್ನ ಕುಟುಂಬದ ಹತ್ತು ಸದಸ್ಯರನ್ನು ಕಳೆದುಕೊಂಡಿದ್ದರು. ಗಾಝಾ ನಗರದಲ್ಲಿ ನಡೆದ ಮತ್ತೊಂದು ಆಪಾದಿತ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಅವರು ಕೊಲ್ಲಟ್ಟಿದ್ದರು. ಇಸ್ರೇಲ್‌ನಲ್ಲಿ ವಾಸಿಸುವ ಹನಿಯೆಹ್ ಅವರ ಇನ್ನೊಬ್ಬ ಸಹೋದರಿಯನ್ನೂ ಏಪ್ರಿಲ್‌ನಲ್ಲಿ ಭಯೋತ್ಪಾದಕ ಗುಂಪಿನ ಸಂಪರ್ಕ ಮತ್ತು ಭಯೋತ್ಪಾದಕ ಕೃತ್ಯಗಳ ಆರೋಪ ಹೊರಿಸಿ ಬಂಧಿಸಲಾಗಿತ್ತು.

ಇದನ್ನೂ ಓದಿ; ವಯನಾಡ್ ಭೂಕುಸಿತ ದುರಂತ: 143 ಕ್ಕೆ ತಲುಪಿದ ಸಾವಿನ ಸಂಖ್ಯೆ, 186 ಜನರು ಪ್ರಾಣಾಪಾಯದಿಂದ ಪಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...