Homeಅಂತರಾಷ್ಟ್ರೀಯಇರಾನ್‌ನಲ್ಲಿ ಹಮಾಸ್‌ ಸರ್ವೋಚ್ಛ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆ; ಇಸ್ರೇಲ್ ಅನ್ನು ದೂಷಿಸಿದ ಐಆರ್‌ಜಿಸಿ

ಇರಾನ್‌ನಲ್ಲಿ ಹಮಾಸ್‌ ಸರ್ವೋಚ್ಛ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆ; ಇಸ್ರೇಲ್ ಅನ್ನು ದೂಷಿಸಿದ ಐಆರ್‌ಜಿಸಿ

- Advertisement -
- Advertisement -

ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಬುಧವಾರ ಇರಾನ್‌ನಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂದು ಹಮಾಸ್ ಮತ್ತು ಇರಾನ್‌ನ ಎಲೈಟ್ ರೆವೆಲ್ಯೂಷನರಿ ಗಾರ್ಡ್ಸ್ (ಐಆರ್‌ಜಿಸಿ) ಪ್ರತ್ಯೇಕ ಹೇಳಿಕೆಗಳಲ್ಲಿ ತಿಳಿಸಿವೆ.

ಹನಿಯೆಹ್ ಸಾವಿಗೆ ತೀವ್ರ ದುಖಃ ವ್ಯಕ್ತಪಡಿಸಿರುವ ಹಮಾಸ್, ಮಂಗಳವಾರ ಬೆಳಿಗ್ಗೆ ಟೆಹ್ರಾನ್‌ನಲ್ಲಿರುವ ನಿವಾಸದ ಮೇಲೆ ನಡೆದ ವಿಶ್ವಾಸಘಾತುಕ ಝಿಯೋನಿಸ್ಟ್ ದಾಳಿಯಲ್ಲಿ ಹನಿಯೆಹ್ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

ಮಂಗಳವಾರ ನಡೆದ ಇರಾನ್‌ನ ನೂತನ ಅಧ್ಯಕ್ಷ ಮಸೂದ್ ಪೆಝೆಶ್ಕಿಯಾನ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಹನಿಯೆಹ್ ಭಾಗವಹಿಸಿದ್ದರು.

“ಇಂದು ಮುಂಜಾನೆ, ಟೆಹ್ರಾನ್‌ನಲ್ಲಿರುವ ಇಸ್ಮಾಯಿಲ್ ಹನಿಯೆ ಅವರ ನಿವಾಸದ ಮೇಲೆ ದಾಳಿ ನಡೆದಿದ್ದು, ಪರಿಣಾಮ ಹನಿಯೆಹ್ ಮತ್ತು ಅವರ ಅಂಗರಕ್ಷಕರಲ್ಲಿ ಒಬ್ಬರು ಹುತಾತ್ಮರಾಗಿದ್ದಾರೆ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ನೀಡಲಾಗುವುದು” ಎಂದು ಎಲೈಟ್ ರೆವೆಲ್ಯೂಷನರಿ ಗಾರ್ಡ್ಸ್ ಮಂಗಳವಾರ ತಿಳಿಸಿದೆ.

ಕಳೆದ ಏಪ್ರಿಲ್‌ನಲ್ಲಿ, ಗಾಝಾದಲ್ಲಿ ವಾಹನದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯೊಂದರಲ್ಲಿ ಹನಿಯೆಹ್‌ ಅವರ ಮೂವರು ಪುತ್ರರು ಮತ್ತು ನಾಲ್ವರು ಮೊಮ್ಮಕ್ಕಳು ಕೊಲ್ಲಲ್ಪಟ್ಟಿದ್ದರು. ಗಾಝಾದ ಅಲ್-ಶಾತಿ ಶಿಬಿರದ ಬಳಿ ಅವರು ಚಲಾಯಿಸುತ್ತಿದ್ದ ಕಾರಿಗೆ ಬಾಂಬ್ ದಾಳಿ ನಡೆಸಿ, ಹನಿಯೆಹ್ ಅವರ ಮೂವರು ಪುತ್ರರಾದ ಹಝೆಮ್, ಅಮೀರ್ ಮತ್ತು ಮೊಹಮ್ಮದ್ ಅನ್ನು ಹತ್ಯೆ ಮಾಡಲಾಗಿತ್ತು. ಹಮಾಸ್ ನಡೆಸುತ್ತಿರುವ ಮಾಧ್ಯಮಗಳ ಪ್ರಕಾರ, ದಾಳಿಯಲ್ಲಿ ಅವರ ನಾಲ್ವರು ಮೊಮ್ಮಕ್ಕಳೂ ಸಾವನ್ನಪ್ಪಿದ್ದಾರೆ.

ಕಳೆದ ತಿಂಗಳು, ಹಮಾಸ್ ಮುಖ್ಯಸ್ಥ ಸಹೋದರಿ ಸೇರಿದಂತೆ ತನ್ನ ಕುಟುಂಬದ ಹತ್ತು ಸದಸ್ಯರನ್ನು ಕಳೆದುಕೊಂಡಿದ್ದರು. ಗಾಝಾ ನಗರದಲ್ಲಿ ನಡೆದ ಮತ್ತೊಂದು ಆಪಾದಿತ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಅವರು ಕೊಲ್ಲಟ್ಟಿದ್ದರು. ಇಸ್ರೇಲ್‌ನಲ್ಲಿ ವಾಸಿಸುವ ಹನಿಯೆಹ್ ಅವರ ಇನ್ನೊಬ್ಬ ಸಹೋದರಿಯನ್ನೂ ಏಪ್ರಿಲ್‌ನಲ್ಲಿ ಭಯೋತ್ಪಾದಕ ಗುಂಪಿನ ಸಂಪರ್ಕ ಮತ್ತು ಭಯೋತ್ಪಾದಕ ಕೃತ್ಯಗಳ ಆರೋಪ ಹೊರಿಸಿ ಬಂಧಿಸಲಾಗಿತ್ತು.

ಇದನ್ನೂ ಓದಿ; ವಯನಾಡ್ ಭೂಕುಸಿತ ದುರಂತ: 143 ಕ್ಕೆ ತಲುಪಿದ ಸಾವಿನ ಸಂಖ್ಯೆ, 186 ಜನರು ಪ್ರಾಣಾಪಾಯದಿಂದ ಪಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...