Homeಮುಖಪುಟಉನ್ನತ‌ ನ್ಯಾಯಾಧೀಶರು ಹೈಕೋರ್ಟ್‌ ಕೆಲಸದ ಮೇಲೆ ಪ್ರಭಾವ ಬೀರುತ್ತಿದ್ದಾರೆ: ಜಗನ್ ಮೋಹನ್ ರೆಡ್ಡಿ

ಉನ್ನತ‌ ನ್ಯಾಯಾಧೀಶರು ಹೈಕೋರ್ಟ್‌ ಕೆಲಸದ ಮೇಲೆ ಪ್ರಭಾವ ಬೀರುತ್ತಿದ್ದಾರೆ: ಜಗನ್ ಮೋಹನ್ ರೆಡ್ಡಿ

"ಪ್ರತಿಪಕ್ಷ ತೆಲುಗು ದೇಶಂ ಪಕ್ಷದ ಮೇಲಿನ ಪ್ರಮುಖ ಪ್ರಕರಣಗಳನ್ನು ಉದ್ದೇಶಪೂರ್ವಕವಾಗಿ ಕೆಲವು ನ್ಯಾಯಾಧೀಶರಿಗೆ ಹಂಚಲಾಗಿದೆ"

- Advertisement -
- Advertisement -

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಅವರಿಗೆ ಪತ್ರ ಬರೆದಿದ್ದು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್.ವಿ.ರಮಣ ಸೇರಿದಂತೆ ಕೆಲವು ನ್ಯಾಯಾಧೀಶರ ಹೆಸರನ್ನು ಉಲ್ಲೇಖಿಸಿ, ಇವರು ರಾಜ್ಯ ಹೈಕೋರ್ಟ್‌ನ ಸಭೆಗಳಲ್ಲಿ ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

“ಪ್ರತಿಪಕ್ಷ ತೆಲುಗು ದೇಶಂ ಪಕ್ಷದ ಮೇಲಿನ ಪ್ರಮುಖ ಪ್ರಕರಣಗಳನ್ನು ಉದ್ದೇಶಪೂರ್ವಕವಾಗಿ ಕೆಲವು ನ್ಯಾಯಾಧೀಶರಿಗೆ ಹಂಚಲಾಗಿದೆ” ಎಂದು ಅಕ್ಟೋಬರ್ 6 ರಂದು ಬರೆದಿರುವ ಪತ್ರದಲ್ಲಿ ಆರೋಪಿಸಿದ್ದಾರೆ ಎಂದು ಸ್ಕ್ರಾಲ್.ಇನ್ ವರದಿ ಮಾಡಿದೆ.

ಇದನ್ನೂ ಓದಿ: ಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

ಆಂಧ್ರಪ್ರದೇಶದ ಹೈಕೋರ್ಟ್‌ನ ಎರಡು ಪ್ರಮುಖ ತೀರ್ಪುಗಳ ಫಲಾನುಭವಿಗಳು ತೆಲುಗು ದೇಶಂ ಪಕ್ಷದ ಮುಖಂಡರು ಎಂದು ಜಗನ್‌ ಮೋಹನ್ ರೆಡ್ಡಿ ಹೇಳಿದ್ದು, ಹಿಂದಿನ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರದಲ್ಲಿ ಎನ್.ವಿ.ರಮಣ ಕಾನೂನು ಸಲಹೆಗಾರ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿದ್ದರು ಎಂದು ಜಗನ್ ಮೋಹನ್ ರೆಡ್ಡಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಭ್ರಷ್ಟಾಚಾರ, ನೈಸರ್ಗಿಕ ಸಂಪನ್ಮೂಲಗಳನ್ನು ನಿರ್ದಯವಾಗಿ ಬರಿದಾಗಿಸುವ ಮತ್ತು ಹಿಂದಿನ ಸರ್ಕಾರದ ಆಳ್ವಿಕೆಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಭೂಮಿಯನ್ನು ಕಸಿದುಕೊಂಡ ಆರೋಪಗಳನ್ನು ಪರಿಶೀಲಿಸಲು ಕಳೆದ ವರ್ಷದ ಜೂನ್‌ನಲ್ಲಿ ಆಂಧ್ರಪ್ರದೇಶ ಸರ್ಕಾರವು ಉಪಸಮಿತಿಯನ್ನು ರಚಿಸಿತ್ತು. ಈ ಉಪಸಮಿತಿ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿತ್ತು. ಚಂದ್ರಬಾಬು ನಾಯ್ಡು ಮತ್ತು ಇತರರು ಸುಮಾರು 4,000 ಎಕರೆಗಳನ್ನು ಖರೀದಿಸಿ, ಅಕ್ರಮ ವಹಿವಾಟಿನಿಂದ ಸಾಕಷ್ಟು ಸಂಪತ್ತನ್ನು ಸಂಗ್ರಹಿಸಿದ್ದಾರೆ. ಇದನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರವನ್ನು ಕೇಳಿಕೊಂಡಿತ್ತು” ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಪಾಸ್ವಾನ್ ಮರಣದ ನಂತರ ಮೋದಿ ಕ್ಯಾಬಿನೆಟ್‌ನಲ್ಲಿ ಉಳಿದಿರುವುದು ಕೇವಲ ಒಬ್ಬ NDA ಮಿತ್ರರು!

“ಆಂಧ್ರಪ್ರದೇಶದ ನ್ಯಾಯಾಂಗ ತಟಸ್ಥತೆಯನ್ನು ಕಾಪಾಡಿಕೊಳ್ಳುವುದಕ್ಕೆ ಕ್ರಮ ಕೈಗೊಳ್ಳುವಂತೆ ಜಗನ್ ಮೋಹನ ರೆಡ್ಡಿ ಬೊಬ್ಡೆಗೆ ಒತ್ತಾಯಿಸಿದ್ದಾರೆ. ಮಾಜಿ ಕಾನೂನು ಅಧಿಕಾರಿ ಮತ್ತು ಇತರರಿಗೆ ಸಂಬಂಧಿಸಿದಂತೆ ಅಮರಾವತಿಯಲ್ಲಿ ಭೂ ವ್ಯವಹಾರ ಪ್ರಕರಣವೊಂದನ್ನು ವರದಿ ಮಾಡದಂತೆ ಹೈ ಕೋರ್ಟ್ ಮಾಧ್ಯಮಗಳಿಗೆ ಬೆದರಿಕೆ ಹಾಕಿದೆ” ಎಂದು ಆರೋಪ ಮಾಡಿದ್ದಾರೆ.

ಮುಖ್ಯಮಂತ್ರಿಯವರ ಸಲಹೆಗಾರ ಅಜಯ ಕಲ್ಲಂ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಆಂಧ್ರಪ್ರದೇಶದ ಹೈಕೋರ್ಟ್ ವ್ಯವಹರಿಸುವ ವಿಷಯಗಳಲ್ಲಿ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರ ಹಸ್ತಕ್ಷೇಪಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳನ್ನು ರಾಜ್ಯ ಸರ್ಕಾರ ಭಾರತದ ಮುಖ್ಯ ನ್ಯಾಯಾಧೀಶರಿಗೆ ಸಲ್ಲಿಸಿದೆ” ಎಂದು ದಿ ಹಿಂದೂ ವರದಿ ಮಾಡಿದೆ.


ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ?; ಕುಮಾರಸ್ವಾಮಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...