Homeಮುಖಪುಟಪಂಡೋರ ಪೇಪರ್ಸ್‌: ತೆರಿಗೆ ವಂಚಿಸುವ ವ್ಯವಹಾರದಲ್ಲಿ ಸಚಿನ್‌, ಅಂಬಾನಿ ಹೆಸರು?

ಪಂಡೋರ ಪೇಪರ್ಸ್‌: ತೆರಿಗೆ ವಂಚಿಸುವ ವ್ಯವಹಾರದಲ್ಲಿ ಸಚಿನ್‌, ಅಂಬಾನಿ ಹೆಸರು?

- Advertisement -
- Advertisement -

ತೆರಿಗೆ ವಂಚಿಸುವ ಹಾಗೂ ರಹಸ್ಯ ಹೂಡಿಕೆಯನ್ನು ಬಯಲು ಮಾಡುವ ಪಂಡೋರಾ ಪೇಪರ್ಸ್‌ ಅನ್ನು  ಅಂತಾರಾಷ್ಟ್ರೀಯ ತನಿಖಾ ಪತ್ರಿಕೋದ್ಯಮ ಒಕ್ಕೂಟ (ಸಿಐಸಿಜೆ) ಬಯಲು ಮಾಡಿದ್ದು ಭಾರತೀಯ ದಿಗ್ಗಜರ ಹೆಸರುಗಳು ಅದರಲ್ಲಿವೆ.

ವಿಶ್ವದ ಮಹಾನ್‌ ನಾಯಕರು, ಸಾರ್ವಜನಿಕ ಅಧಿಕಾರಿಗಳು, ಖ್ಯಾತನಾಮರ ಹೆಸರುಗಳು ಬಯಲಾಗಿವೆ. ಉದ್ಯಮಿಗಳ ಅನಿಲ್‌ ಅಂಬಾನಿ, ಕಿರಣ್‌ ಮಜುಂದಾರ್‌ ಷಾ ಹಾಗೂ ಕ್ರಿಕೆಟ್ ದಿಗ್ಗಜ ಸಚಿನ್‌ ತೆಂಡೂಲ್ಕರ್‌ ಅವರ ಹೆಸರು ಪಂಡೋರ ಹಗಣರಣದಲ್ಲಿ ಸೇರಿವೆ.

ತೆರಿಗೆ ವಂಚಿಸಲು ಇರುವ ಜಾಗತಿಕ ಅವಕಾಶಗಳನ್ನು ಇವರು ಬಳಸಿದ್ದಾರೆ. ಸರ್ಕಾರದ ಕಣ್ಣು ತಪ್ಪಿಸಿ ನಡೆಯುವ ವ್ಯವಹಾರಗಳ ಮಾಹಿತಿಯನ್ನು ತನಿಖಾ ಸಂಸ್ಥೆಗಳ ಭಾಗವಾದ ಇಂಡಿಯನ್‌ ಎಕ್ಸ್‌ಪ್ರೆಸ್ ಪತ್ರಿಕೆ ಬಯಲು ಮಾಡಿದೆ. ಹಣ ಹೂಡಿಕೆ ಮಾಡಿದ್ದಾರೆ ಎಂಬುದನ್ನು ಕಡಲಾಚೆಯ 14 ಸಂಸ್ಥೆಗಳು ಮಾಹಿತಿ ನೀಡಿದ್ದು, ಒಟ್ಟು 11.9 ಮಿಲಿಯನ್‌ ದಾಖಲೆಗಳ ಆಧಾರದಲ್ಲಿ ಹಗರಣವನ್ನು ಬಯಲಿಗೆಳೆಯಲಾಗಿದೆ.

ಈ ದಾಖಲೆಗಳು ವಾಷಿಂಗ್‌ಟನ್‌ ಮೂಲದ ಅಂತಾರಾಷ್ಟ್ರೀಯ ತನಿಖಾ ಪತ್ರಿಕೋದ್ಯಮ ಒಕ್ಕೂಟದಿಂದ (ಸಿಐಸಿಜೆ) ಪಡೆಯಲಾಗಿದೆ. ಜಾಗತಿಕ ತನಿಖಾ ಪತ್ರಿಕೋದ್ಯಮ ಪಾಲುದಾರರಾದ ದಿ ಗಾರ್ಡಿಯನ್‌, ಬಿಬಿಸಿ ಪನೋರಮಾ ಮತ್ತು ವಾಷಿಂಗ್‌ಟನ್‌ ಪೋಸ್ಟ್‌, ಇಂಡಿಯನ್‌ ಎಕ್ಸ್‌ಪ್ರೆಸ್‌‌ ಸೇರಿದಂತೆ ಇತರ ಸಂಸ್ಥೆಗಳು ಪನೋಮ ಪೇಪರ್ಸ್‌ ಬಳಿಕ ಬಹುದೊಡ್ಡ ಹಗರಣವನ್ನು ಬಯಲಿಗೆಳೆದಿವೆ. ಇದನ್ನು ಸಿಐಸಿಜೆ ‘ಪಂಡೋರ ಪೇಪರ್ಸ್‌’ ಎಂದು ಕರೆಯಲಾಗಿದೆ. ಕಡಲಾಚೆಯ ಘಟಕಗಳೆಲ್ಲ ಕಾನೂನು ಬಾಹಿರವೇನಲ್ಲ. ಆದರೆ ತೆರಿಗೆ ವಂಚಕರು ಈ ಸ್ವರ್ಗಗಳನ್ನು ಹುಡುಕುತ್ತಾರೆ. ಈ ನಿಟ್ಟಿನಲ್ಲಿ ಪಂಡೋರ ಪೇಪರ್ಸ್‌, 2014ರ ಬಳಿಕ ಬಯಲಾದ ಅತಿದೊಡ್ಡ ದಾಖಲೆಯಾಗಿದೆ.

ರಿಲಯನ್ಸ್ ಎಡಿಎ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಮತ್ತು ಅವರ ಪ್ರತಿನಿಧಿಗಳು ಜರ್ಸಿ, ಬ್ರಿಟಿಷ್ ವರ್ಜಿನ್ ದ್ವೀಪಗಳು ಮತ್ತು ಸೈಪ್ರಸ್‌ನಲ್ಲಿ ಕನಿಷ್ಠ 18 ಕಡಲಾಚೆಯ ಕಂಪನಿಗಳನ್ನು ಹೊಂದಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಇವುಗಳಲ್ಲಿ ಏಳು ಕಂಪನಿಗಳು ಕನಿಷ್ಠ 1.3 ಬಿಲಿಯನ್ ಡಾಲರ್‌ಗಳನ್ನು (ಸುಮಾರು ರೂ. 9,649 ಕೋಟಿ) ಎರವಲು ಮತ್ತು ಹೂಡಿಕೆ ಮಾಡಿವೆ ಎಂದು ವರದಿಯಾಗಿದೆ.

ಫೆಬ್ರವರಿ 2020ರಲ್ಲಿ, ಅಂಬಾನಿ ಅವರು ತಮ್ಮ ಹೂಡಿಕೆ ಕುರಿತು, “ನಿವ್ವಳ ಮೌಲ್ಯ ಶೂನ್ಯ” ಎಂದು ಲಂಡನ್‌ನ ನ್ಯಾಯಾಲಯಕ್ಕೆ ತಿಳಿಸಿದ್ದರು. ಆದಾಗ್ಯೂ, “ಅಂಬಾನಿಯವರಿಗೆ ಯಾವುದೇ ಕಡಲಾಚೆಯ ಹಿತಾಸಕ್ತಿಗಳಿವೆ” ಎಂಬ ಪ್ರಶ್ನೆಗಳಿವೆ ಎಂದು ನ್ಯಾಯಾಲಯ ಕೇಳಿತ್ತು. ನ್ಯಾಯಾಲಯವು, ಮೂರು ಚೀನೀ ಬ್ಯಾಂಕುಗಳಿಗೆ 716 ಮಿಲಿಯನ್ ಡಾಲರ್‌‌ (ಸುಮಾರು ರೂ. 5,315 ಕೋಟಿ) ಪಾವತಿಸಲು ಆದೇಶಿಸಿತ್ತು. ಆದರೆ ಅದನ್ನು ಅಂಬಾನಿ ಪಾಲಿಸಿಲ್ಲ.

ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ಅವರ ಪತಿ ವಿದೇಶದಲ್ಲಿ ಟ್ರಸ್ಟ್‌ ಸ್ಥಾಪಿಸಿದ್ದಾರೆ. ಅದರ ಹೊಣೆಯನ್ನು ಇನ್‌ಸೈಡರ್‌ ಟ್ರೇಡಿಂಗ್‌ಗಾಗಿ ಸೆಬಿಯಿಂದ ನಿಷೇಧಕ್ಕೆ ಒಳಗಾದ ವ್ಯಕ್ತಿಗೆ ನೀಡಲಾಗಿದೆ ಎಂದು ಪಂಡೋರ ಪೇಪರ್ಸ್‌ ವರದಿ ಮಾಡಿದೆ.

2016ರಲ್ಲಿ ಪನಾಮಾ ಪೇಪರ್‌ ಬಹಿರಂಗವಾದ ಬಳಿಕ ವಿದೇಶದಲ್ಲಿನ ತಮ್ಮ ಆಸ್ತಿಯನ್ನು ನಗದೀಕರಣ ಮಾಡುವಂತೆ ಸಚಿನ್‌ ಕೋರಿದ್ದರು ಎನ್ನಲಾಗಿದೆ. ಸಚಿನ್‌ ಅವರಂತೆಯೇ ಅನೇಕರು ಆಸ್ತಿ ನಗದೀಕರಣಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿರಿ: ಪೆಗಾಸಸ್ ಹಗರಣ ತನಿಖೆಗೆ ಸಮಿತಿ ರಚನೆ: ಸುಪ್ರೀಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....