Homeಮುಖಪುಟಪಂಡೋರ ಪೇಪರ್ಸ್‌: ತೆರಿಗೆ ವಂಚಿಸುವ ವ್ಯವಹಾರದಲ್ಲಿ ಸಚಿನ್‌, ಅಂಬಾನಿ ಹೆಸರು?

ಪಂಡೋರ ಪೇಪರ್ಸ್‌: ತೆರಿಗೆ ವಂಚಿಸುವ ವ್ಯವಹಾರದಲ್ಲಿ ಸಚಿನ್‌, ಅಂಬಾನಿ ಹೆಸರು?

- Advertisement -
- Advertisement -

ತೆರಿಗೆ ವಂಚಿಸುವ ಹಾಗೂ ರಹಸ್ಯ ಹೂಡಿಕೆಯನ್ನು ಬಯಲು ಮಾಡುವ ಪಂಡೋರಾ ಪೇಪರ್ಸ್‌ ಅನ್ನು  ಅಂತಾರಾಷ್ಟ್ರೀಯ ತನಿಖಾ ಪತ್ರಿಕೋದ್ಯಮ ಒಕ್ಕೂಟ (ಸಿಐಸಿಜೆ) ಬಯಲು ಮಾಡಿದ್ದು ಭಾರತೀಯ ದಿಗ್ಗಜರ ಹೆಸರುಗಳು ಅದರಲ್ಲಿವೆ.

ವಿಶ್ವದ ಮಹಾನ್‌ ನಾಯಕರು, ಸಾರ್ವಜನಿಕ ಅಧಿಕಾರಿಗಳು, ಖ್ಯಾತನಾಮರ ಹೆಸರುಗಳು ಬಯಲಾಗಿವೆ. ಉದ್ಯಮಿಗಳ ಅನಿಲ್‌ ಅಂಬಾನಿ, ಕಿರಣ್‌ ಮಜುಂದಾರ್‌ ಷಾ ಹಾಗೂ ಕ್ರಿಕೆಟ್ ದಿಗ್ಗಜ ಸಚಿನ್‌ ತೆಂಡೂಲ್ಕರ್‌ ಅವರ ಹೆಸರು ಪಂಡೋರ ಹಗಣರಣದಲ್ಲಿ ಸೇರಿವೆ.

ತೆರಿಗೆ ವಂಚಿಸಲು ಇರುವ ಜಾಗತಿಕ ಅವಕಾಶಗಳನ್ನು ಇವರು ಬಳಸಿದ್ದಾರೆ. ಸರ್ಕಾರದ ಕಣ್ಣು ತಪ್ಪಿಸಿ ನಡೆಯುವ ವ್ಯವಹಾರಗಳ ಮಾಹಿತಿಯನ್ನು ತನಿಖಾ ಸಂಸ್ಥೆಗಳ ಭಾಗವಾದ ಇಂಡಿಯನ್‌ ಎಕ್ಸ್‌ಪ್ರೆಸ್ ಪತ್ರಿಕೆ ಬಯಲು ಮಾಡಿದೆ. ಹಣ ಹೂಡಿಕೆ ಮಾಡಿದ್ದಾರೆ ಎಂಬುದನ್ನು ಕಡಲಾಚೆಯ 14 ಸಂಸ್ಥೆಗಳು ಮಾಹಿತಿ ನೀಡಿದ್ದು, ಒಟ್ಟು 11.9 ಮಿಲಿಯನ್‌ ದಾಖಲೆಗಳ ಆಧಾರದಲ್ಲಿ ಹಗರಣವನ್ನು ಬಯಲಿಗೆಳೆಯಲಾಗಿದೆ.

ಈ ದಾಖಲೆಗಳು ವಾಷಿಂಗ್‌ಟನ್‌ ಮೂಲದ ಅಂತಾರಾಷ್ಟ್ರೀಯ ತನಿಖಾ ಪತ್ರಿಕೋದ್ಯಮ ಒಕ್ಕೂಟದಿಂದ (ಸಿಐಸಿಜೆ) ಪಡೆಯಲಾಗಿದೆ. ಜಾಗತಿಕ ತನಿಖಾ ಪತ್ರಿಕೋದ್ಯಮ ಪಾಲುದಾರರಾದ ದಿ ಗಾರ್ಡಿಯನ್‌, ಬಿಬಿಸಿ ಪನೋರಮಾ ಮತ್ತು ವಾಷಿಂಗ್‌ಟನ್‌ ಪೋಸ್ಟ್‌, ಇಂಡಿಯನ್‌ ಎಕ್ಸ್‌ಪ್ರೆಸ್‌‌ ಸೇರಿದಂತೆ ಇತರ ಸಂಸ್ಥೆಗಳು ಪನೋಮ ಪೇಪರ್ಸ್‌ ಬಳಿಕ ಬಹುದೊಡ್ಡ ಹಗರಣವನ್ನು ಬಯಲಿಗೆಳೆದಿವೆ. ಇದನ್ನು ಸಿಐಸಿಜೆ ‘ಪಂಡೋರ ಪೇಪರ್ಸ್‌’ ಎಂದು ಕರೆಯಲಾಗಿದೆ. ಕಡಲಾಚೆಯ ಘಟಕಗಳೆಲ್ಲ ಕಾನೂನು ಬಾಹಿರವೇನಲ್ಲ. ಆದರೆ ತೆರಿಗೆ ವಂಚಕರು ಈ ಸ್ವರ್ಗಗಳನ್ನು ಹುಡುಕುತ್ತಾರೆ. ಈ ನಿಟ್ಟಿನಲ್ಲಿ ಪಂಡೋರ ಪೇಪರ್ಸ್‌, 2014ರ ಬಳಿಕ ಬಯಲಾದ ಅತಿದೊಡ್ಡ ದಾಖಲೆಯಾಗಿದೆ.

ರಿಲಯನ್ಸ್ ಎಡಿಎ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಮತ್ತು ಅವರ ಪ್ರತಿನಿಧಿಗಳು ಜರ್ಸಿ, ಬ್ರಿಟಿಷ್ ವರ್ಜಿನ್ ದ್ವೀಪಗಳು ಮತ್ತು ಸೈಪ್ರಸ್‌ನಲ್ಲಿ ಕನಿಷ್ಠ 18 ಕಡಲಾಚೆಯ ಕಂಪನಿಗಳನ್ನು ಹೊಂದಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಇವುಗಳಲ್ಲಿ ಏಳು ಕಂಪನಿಗಳು ಕನಿಷ್ಠ 1.3 ಬಿಲಿಯನ್ ಡಾಲರ್‌ಗಳನ್ನು (ಸುಮಾರು ರೂ. 9,649 ಕೋಟಿ) ಎರವಲು ಮತ್ತು ಹೂಡಿಕೆ ಮಾಡಿವೆ ಎಂದು ವರದಿಯಾಗಿದೆ.

ಫೆಬ್ರವರಿ 2020ರಲ್ಲಿ, ಅಂಬಾನಿ ಅವರು ತಮ್ಮ ಹೂಡಿಕೆ ಕುರಿತು, “ನಿವ್ವಳ ಮೌಲ್ಯ ಶೂನ್ಯ” ಎಂದು ಲಂಡನ್‌ನ ನ್ಯಾಯಾಲಯಕ್ಕೆ ತಿಳಿಸಿದ್ದರು. ಆದಾಗ್ಯೂ, “ಅಂಬಾನಿಯವರಿಗೆ ಯಾವುದೇ ಕಡಲಾಚೆಯ ಹಿತಾಸಕ್ತಿಗಳಿವೆ” ಎಂಬ ಪ್ರಶ್ನೆಗಳಿವೆ ಎಂದು ನ್ಯಾಯಾಲಯ ಕೇಳಿತ್ತು. ನ್ಯಾಯಾಲಯವು, ಮೂರು ಚೀನೀ ಬ್ಯಾಂಕುಗಳಿಗೆ 716 ಮಿಲಿಯನ್ ಡಾಲರ್‌‌ (ಸುಮಾರು ರೂ. 5,315 ಕೋಟಿ) ಪಾವತಿಸಲು ಆದೇಶಿಸಿತ್ತು. ಆದರೆ ಅದನ್ನು ಅಂಬಾನಿ ಪಾಲಿಸಿಲ್ಲ.

ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ಅವರ ಪತಿ ವಿದೇಶದಲ್ಲಿ ಟ್ರಸ್ಟ್‌ ಸ್ಥಾಪಿಸಿದ್ದಾರೆ. ಅದರ ಹೊಣೆಯನ್ನು ಇನ್‌ಸೈಡರ್‌ ಟ್ರೇಡಿಂಗ್‌ಗಾಗಿ ಸೆಬಿಯಿಂದ ನಿಷೇಧಕ್ಕೆ ಒಳಗಾದ ವ್ಯಕ್ತಿಗೆ ನೀಡಲಾಗಿದೆ ಎಂದು ಪಂಡೋರ ಪೇಪರ್ಸ್‌ ವರದಿ ಮಾಡಿದೆ.

2016ರಲ್ಲಿ ಪನಾಮಾ ಪೇಪರ್‌ ಬಹಿರಂಗವಾದ ಬಳಿಕ ವಿದೇಶದಲ್ಲಿನ ತಮ್ಮ ಆಸ್ತಿಯನ್ನು ನಗದೀಕರಣ ಮಾಡುವಂತೆ ಸಚಿನ್‌ ಕೋರಿದ್ದರು ಎನ್ನಲಾಗಿದೆ. ಸಚಿನ್‌ ಅವರಂತೆಯೇ ಅನೇಕರು ಆಸ್ತಿ ನಗದೀಕರಣಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿರಿ: ಪೆಗಾಸಸ್ ಹಗರಣ ತನಿಖೆಗೆ ಸಮಿತಿ ರಚನೆ: ಸುಪ್ರೀಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...