Homeಮುಖಪುಟಪಂಡೋರ ಪೇಪರ್ಸ್‌: ತೆರಿಗೆ ವಂಚಿಸುವ ವ್ಯವಹಾರದಲ್ಲಿ ಸಚಿನ್‌, ಅಂಬಾನಿ ಹೆಸರು?

ಪಂಡೋರ ಪೇಪರ್ಸ್‌: ತೆರಿಗೆ ವಂಚಿಸುವ ವ್ಯವಹಾರದಲ್ಲಿ ಸಚಿನ್‌, ಅಂಬಾನಿ ಹೆಸರು?

- Advertisement -
- Advertisement -

ತೆರಿಗೆ ವಂಚಿಸುವ ಹಾಗೂ ರಹಸ್ಯ ಹೂಡಿಕೆಯನ್ನು ಬಯಲು ಮಾಡುವ ಪಂಡೋರಾ ಪೇಪರ್ಸ್‌ ಅನ್ನು  ಅಂತಾರಾಷ್ಟ್ರೀಯ ತನಿಖಾ ಪತ್ರಿಕೋದ್ಯಮ ಒಕ್ಕೂಟ (ಸಿಐಸಿಜೆ) ಬಯಲು ಮಾಡಿದ್ದು ಭಾರತೀಯ ದಿಗ್ಗಜರ ಹೆಸರುಗಳು ಅದರಲ್ಲಿವೆ.

ವಿಶ್ವದ ಮಹಾನ್‌ ನಾಯಕರು, ಸಾರ್ವಜನಿಕ ಅಧಿಕಾರಿಗಳು, ಖ್ಯಾತನಾಮರ ಹೆಸರುಗಳು ಬಯಲಾಗಿವೆ. ಉದ್ಯಮಿಗಳ ಅನಿಲ್‌ ಅಂಬಾನಿ, ಕಿರಣ್‌ ಮಜುಂದಾರ್‌ ಷಾ ಹಾಗೂ ಕ್ರಿಕೆಟ್ ದಿಗ್ಗಜ ಸಚಿನ್‌ ತೆಂಡೂಲ್ಕರ್‌ ಅವರ ಹೆಸರು ಪಂಡೋರ ಹಗಣರಣದಲ್ಲಿ ಸೇರಿವೆ.

ತೆರಿಗೆ ವಂಚಿಸಲು ಇರುವ ಜಾಗತಿಕ ಅವಕಾಶಗಳನ್ನು ಇವರು ಬಳಸಿದ್ದಾರೆ. ಸರ್ಕಾರದ ಕಣ್ಣು ತಪ್ಪಿಸಿ ನಡೆಯುವ ವ್ಯವಹಾರಗಳ ಮಾಹಿತಿಯನ್ನು ತನಿಖಾ ಸಂಸ್ಥೆಗಳ ಭಾಗವಾದ ಇಂಡಿಯನ್‌ ಎಕ್ಸ್‌ಪ್ರೆಸ್ ಪತ್ರಿಕೆ ಬಯಲು ಮಾಡಿದೆ. ಹಣ ಹೂಡಿಕೆ ಮಾಡಿದ್ದಾರೆ ಎಂಬುದನ್ನು ಕಡಲಾಚೆಯ 14 ಸಂಸ್ಥೆಗಳು ಮಾಹಿತಿ ನೀಡಿದ್ದು, ಒಟ್ಟು 11.9 ಮಿಲಿಯನ್‌ ದಾಖಲೆಗಳ ಆಧಾರದಲ್ಲಿ ಹಗರಣವನ್ನು ಬಯಲಿಗೆಳೆಯಲಾಗಿದೆ.

ಈ ದಾಖಲೆಗಳು ವಾಷಿಂಗ್‌ಟನ್‌ ಮೂಲದ ಅಂತಾರಾಷ್ಟ್ರೀಯ ತನಿಖಾ ಪತ್ರಿಕೋದ್ಯಮ ಒಕ್ಕೂಟದಿಂದ (ಸಿಐಸಿಜೆ) ಪಡೆಯಲಾಗಿದೆ. ಜಾಗತಿಕ ತನಿಖಾ ಪತ್ರಿಕೋದ್ಯಮ ಪಾಲುದಾರರಾದ ದಿ ಗಾರ್ಡಿಯನ್‌, ಬಿಬಿಸಿ ಪನೋರಮಾ ಮತ್ತು ವಾಷಿಂಗ್‌ಟನ್‌ ಪೋಸ್ಟ್‌, ಇಂಡಿಯನ್‌ ಎಕ್ಸ್‌ಪ್ರೆಸ್‌‌ ಸೇರಿದಂತೆ ಇತರ ಸಂಸ್ಥೆಗಳು ಪನೋಮ ಪೇಪರ್ಸ್‌ ಬಳಿಕ ಬಹುದೊಡ್ಡ ಹಗರಣವನ್ನು ಬಯಲಿಗೆಳೆದಿವೆ. ಇದನ್ನು ಸಿಐಸಿಜೆ ‘ಪಂಡೋರ ಪೇಪರ್ಸ್‌’ ಎಂದು ಕರೆಯಲಾಗಿದೆ. ಕಡಲಾಚೆಯ ಘಟಕಗಳೆಲ್ಲ ಕಾನೂನು ಬಾಹಿರವೇನಲ್ಲ. ಆದರೆ ತೆರಿಗೆ ವಂಚಕರು ಈ ಸ್ವರ್ಗಗಳನ್ನು ಹುಡುಕುತ್ತಾರೆ. ಈ ನಿಟ್ಟಿನಲ್ಲಿ ಪಂಡೋರ ಪೇಪರ್ಸ್‌, 2014ರ ಬಳಿಕ ಬಯಲಾದ ಅತಿದೊಡ್ಡ ದಾಖಲೆಯಾಗಿದೆ.

ರಿಲಯನ್ಸ್ ಎಡಿಎ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಮತ್ತು ಅವರ ಪ್ರತಿನಿಧಿಗಳು ಜರ್ಸಿ, ಬ್ರಿಟಿಷ್ ವರ್ಜಿನ್ ದ್ವೀಪಗಳು ಮತ್ತು ಸೈಪ್ರಸ್‌ನಲ್ಲಿ ಕನಿಷ್ಠ 18 ಕಡಲಾಚೆಯ ಕಂಪನಿಗಳನ್ನು ಹೊಂದಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಇವುಗಳಲ್ಲಿ ಏಳು ಕಂಪನಿಗಳು ಕನಿಷ್ಠ 1.3 ಬಿಲಿಯನ್ ಡಾಲರ್‌ಗಳನ್ನು (ಸುಮಾರು ರೂ. 9,649 ಕೋಟಿ) ಎರವಲು ಮತ್ತು ಹೂಡಿಕೆ ಮಾಡಿವೆ ಎಂದು ವರದಿಯಾಗಿದೆ.

ಫೆಬ್ರವರಿ 2020ರಲ್ಲಿ, ಅಂಬಾನಿ ಅವರು ತಮ್ಮ ಹೂಡಿಕೆ ಕುರಿತು, “ನಿವ್ವಳ ಮೌಲ್ಯ ಶೂನ್ಯ” ಎಂದು ಲಂಡನ್‌ನ ನ್ಯಾಯಾಲಯಕ್ಕೆ ತಿಳಿಸಿದ್ದರು. ಆದಾಗ್ಯೂ, “ಅಂಬಾನಿಯವರಿಗೆ ಯಾವುದೇ ಕಡಲಾಚೆಯ ಹಿತಾಸಕ್ತಿಗಳಿವೆ” ಎಂಬ ಪ್ರಶ್ನೆಗಳಿವೆ ಎಂದು ನ್ಯಾಯಾಲಯ ಕೇಳಿತ್ತು. ನ್ಯಾಯಾಲಯವು, ಮೂರು ಚೀನೀ ಬ್ಯಾಂಕುಗಳಿಗೆ 716 ಮಿಲಿಯನ್ ಡಾಲರ್‌‌ (ಸುಮಾರು ರೂ. 5,315 ಕೋಟಿ) ಪಾವತಿಸಲು ಆದೇಶಿಸಿತ್ತು. ಆದರೆ ಅದನ್ನು ಅಂಬಾನಿ ಪಾಲಿಸಿಲ್ಲ.

ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ಅವರ ಪತಿ ವಿದೇಶದಲ್ಲಿ ಟ್ರಸ್ಟ್‌ ಸ್ಥಾಪಿಸಿದ್ದಾರೆ. ಅದರ ಹೊಣೆಯನ್ನು ಇನ್‌ಸೈಡರ್‌ ಟ್ರೇಡಿಂಗ್‌ಗಾಗಿ ಸೆಬಿಯಿಂದ ನಿಷೇಧಕ್ಕೆ ಒಳಗಾದ ವ್ಯಕ್ತಿಗೆ ನೀಡಲಾಗಿದೆ ಎಂದು ಪಂಡೋರ ಪೇಪರ್ಸ್‌ ವರದಿ ಮಾಡಿದೆ.

2016ರಲ್ಲಿ ಪನಾಮಾ ಪೇಪರ್‌ ಬಹಿರಂಗವಾದ ಬಳಿಕ ವಿದೇಶದಲ್ಲಿನ ತಮ್ಮ ಆಸ್ತಿಯನ್ನು ನಗದೀಕರಣ ಮಾಡುವಂತೆ ಸಚಿನ್‌ ಕೋರಿದ್ದರು ಎನ್ನಲಾಗಿದೆ. ಸಚಿನ್‌ ಅವರಂತೆಯೇ ಅನೇಕರು ಆಸ್ತಿ ನಗದೀಕರಣಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿರಿ: ಪೆಗಾಸಸ್ ಹಗರಣ ತನಿಖೆಗೆ ಸಮಿತಿ ರಚನೆ: ಸುಪ್ರೀಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...