Homeಕರ್ನಾಟಕಎಲ್ಲ ಪೊಲೀಸ್ ಠಾಣೆಗಳಲ್ಲೂ ಉನ್ನತ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್‌ಗಳ ಫಲಕ ಹಾಕಬೇಕು: ಡಿಜಿಪಿ ಸೂಚನೆ

ಎಲ್ಲ ಪೊಲೀಸ್ ಠಾಣೆಗಳಲ್ಲೂ ಉನ್ನತ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್‌ಗಳ ಫಲಕ ಹಾಕಬೇಕು: ಡಿಜಿಪಿ ಸೂಚನೆ

- Advertisement -
- Advertisement -

ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲೂ ಹಾಕಿ ಉನ್ನತ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್‌ಗಳ ಒಂದು ಫಲಕವನ್ನು ಹಾಕಬೇಕು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿ-ಐಜಿಪಿ) ಅಲೋಕ್ ಮೋಹನ್ ಸುತ್ತೋಲೆ ಹೊರಡಿಸಿದ್ದಾರೆ.

ಕರ್ನಾಟಕ ಡಿಜಿಪಿ ಅಲೋಕ್ ಮೋಹನ್ ಅವರು ಹೊರಡಿಸಿದ ಸುತ್ತೋಲೆಯಲ್ಲಿ ”ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳು ಉನ್ನತ ಪೊಲೀಸ್ ಅಧಿಕಾರಿಗಳ ಫೋನ್ ಸಂಖ್ಯೆಗಳನ್ನು ನಮೂದಿಸುವ ಬೋರ್ಡ್ಅನ್ನು ಹಾಕಬೇಕು. ಇದರಿಂದ ಸಾರ್ವಜನಿಕರು ನೀಡಿದ ದೂರುಗಳಿಗೆ ಪೊಲೀಸರು ಸ್ಪಂದಿಸದಿದ್ದರೆ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಲು ಜನರಿಗೆ ಇದರಿಂದ ಸಾಧ್ಯವಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರ ದೂರುಗಳನ್ನು ದೂರುಗಳನ್ನು ಸ್ವೀಕರಿಸದೇ ಹೋದಲ್ಲಿ ಪೊಲೀಸ್ ಮುಖ್ಯಸ್ಥರು, ಡಿಸಿಪಿ, ಎಸಿಪಿಯನ್ನು ಸಂಪರ್ಕಿಸಿ ಎಂದು ಬರೆದು, ದೂರವಾಣಿ ಸಂಖ್ಯೆಗಳನ್ನು ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ನಮೂದಿಸಬೇಕು ಎಂದು ತಿಳಿಸಲಾಗಿದೆ.

ಕಮೀಷನರೇಟ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯಲ್ಲಿ ಎಸ್‌ಪಿ, ಎಎಸ್‌ಪಿ, ಡಿವೈಎಸ್‌ಪಿ ದೂರವಾಣಿ ಸಂಖ್ಯೆಗಳನ್ನೂ ನಮೂದಿಸಬೇಕು. 20 ಜೂನ್ 2023ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚನೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಅಕ್ರಮ ಮರಳು ಮಾಫಿಯಾ ತಡೆಯಲು ಮುಂದಾದ ಪೊಲೀಸ್ ಪೇದೆ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆ

ಅಪರಾಧ ಕೃತ್ಯ ತಡೆಗೆ ಗೃಹ ಇಲಾಖೆ ದಿಟ್ಟ ಕ್ರಮ: ಸಚಿವ ಡಾ.ಜಿ.ಪರಮೇಶ್ವರ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಕೃತ್ಯ ತಡೆಗೆ ಗೃಹ ಇಲಾಖೆ ದಿಟ್ಟ ಕ್ರಮಕ್ಕೆ ಮುಂದಾಗಿದ್ದು, ಜನಸಂದಣಿ, ಇಂಟರ್ ಸೆಕ್ಷನ್, ಮಹಿಳೆಯರು ಓಡಾಡುವ ಸ್ಥಳಗಳು ಸೇರಿದಂತೆ ಹಲವು ಕಡೆ 7 ಸಾವಿರ ಹೈ ರೆಸಲ್ಯೂಷನ್​ ಕ್ಯಾಮರಾ ಅಳವಡಿಸಲಾಗಿದೆ. 80 ಠಾಣೆಗಳಲ್ಲಿ ಕ್ಯಾಮರಾ ದೃಶ್ಯಾವಳಿ ನೋಡುವುದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದ್ದಾರೆ.

ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ”ಬೆಂಗಳೂರಿನ 30 ಕಡೆ ಸೇಫ್ಟಿ ಐಲ್ಯಾಂಡ್​​ ಓಪನ್​ ಮಾಡಲಾಗಿದೆ. ಸೇಫ್ಟಿ ಐಲ್ಯಾಂಡ್​​​ನಲ್ಲಿ ಬಟನ್​​ ಒತ್ತಿದ್ರೆ ಪೊಲೀಸರಿಗೆ ಮಾಹಿತಿ ಬರುತ್ತೆ. ಕೆಲವೇ ನಿಮಿಷಗಳಲ್ಲಿ ಪೊಲೀಸರು ಸ್ಥಳಕ್ಕೆ ಬಂದು ರಕ್ಷಣೆ ಮಾಡುತ್ತಾರೆ” ಎಂದು ತಿಳಿಸಿದರು.

ಠಾಣೆಯಲ್ಲಿ ದೂರು ಸ್ವೀಕರಿಸಲ್ಲ ಎಂಬ ದೂರು ಬರಬಾರದು

”ಪೊಲೀಸ್ ಇಲಾಖೆ ಜನಸ್ನೇಹಿ ಆಗಬೇಕು. ಪೊಲೀಸ್​​ ಸಿಬ್ಬಂದಿಗೆ ಹಿರಿಯ ಅಧಿಕಾರಿಗಳು ತಿಳಿಹೇಳಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ. ಠಾಣೆಯಲ್ಲಿ ದೂರು ಸ್ವೀಕರಿಸಲ್ಲ ಎಂಬ ದೂರುಗಳು ಬರಬಾರದು. ನಾನು ಕೂಡ ಠಾಣೆಗಳಿಗೆ ಭೇಟಿ ನೀಡುತ್ತೇನೆ. ಸರ್ಕಾರ ಪೊಲೀಸರಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಿದೆ” ಎಂದು ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...