Homeಕರ್ನಾಟಕಶಾಲಾ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ಟಾಪರ್‌‌

ಶಾಲಾ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ಟಾಪರ್‌‌

ಮೂಡಬಿದಿರೆಯ ಆಳ್ವಾಸ್ ಶಾಲೆಯಲ್ಲಿ ಗ್ರೀಷ್ಮಾ ವ್ಯಾಸಂಗ ಮಾಡುತ್ತಿದ್ದಳು. ಪೋಷಕರು ಶುಲ್ಕ ಪಾವತಿಸದ ಕಾರಣ ಶಾಲಾ ಪ್ರವೇಶಾತಿ ನಿರಾಕರಿಸಲಾಗಿತ್ತು. ತೇರ್ಗಡೆಯಾಗಿರುವ ವಿದ್ಯಾರ್ಥಿಗೆ 50,000 ರೂ. ಪ್ರೋತ್ಸಾಹಧನವನ್ನು ಡಾ.ಜಿ.ಪರಮೇಶ್ವರ ನೀಡಿದ್ದಾರೆ.

- Advertisement -
- Advertisement -

ಶಾಲೆಯ ಶುಲ್ಕ ಪಾವತಿಸಲಾಗದೆ, ಶಾಲೆಯವರು ಪರೀಕ್ಷೆಯ ಪ್ರವೇಶಪತ್ರ ನೀಡದ ಕಾರಣ ಹತ್ತನೇ ತರಗತಿ ಪರೀಕ್ಷೆಯನ್ನು ಬರೆಯಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಕೊನೆಗೂ ಪೂರಕ ಪರೀಕ್ಷೆಯನ್ನು ಎದುರಿಸಿ ಶಾಲೆಗೆ ಟಾಪರ್‌ ಆಗಿ ತೇರ್ಗಡೆಯಾಗಿದ್ದಾಳೆ.

ಕೊರಟಗೆರೆ ಪಟ್ಟಣದ ಬಿ.ಆರ್‌.ನರಸಿಂಹಮೂರ್ತಿ, ಟಿ.ಪಿ.ಪದ್ಮಾವತಮ್ಮ ದಂಪತಿಯ ಹದಿನಾರು ವರ್ಷಗಳ ಪುತ್ರಿ ಗ್ರೀಷ್ಮಾ ನಾಯಕ್‌, ಪರೀಕ್ಷೆ ಬರೆಯಲು ಅವಕಾಶ ಸಿಗದೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಕೋವಿಡ್ ಸಂದರ್ಭದಲ್ಲಿ ಘಟಿಸಿದ ಈ ಪ್ರಕರಣ ರಾಜ್ಯ ಮಟ್ಟದ ಸುದ್ದಿಯಾಗಿತ್ತು.

ರೈತರ ಮಗಳಾದ ಗ್ರೀಷ್ಮಾ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್‌ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಗ್ರೀಷ್ಮಾ ಹೇಳುವಂತೆ, “ಕೋವಿಡ್ ಕಾರಣದಿಂದಾಗಿ ಶಾಲೆಗೆ ಹಾಜರಾಗಲು ಹಾಗೂ ಶುಲ್ಕವನ್ನು ಪಾವತಿಸಲು ಸಾಧ್ಯವಾಗಿರಲಿಲ್ಲ. ನನ್ನ ಸಹೋದರಿ ಕೀರ್ತನಾ, ಕೋರ್‌ ಸಬ್ಜೆಕ್ಟ್‌ ಕಲಿಕೆಗೆ ಸಹಕರಿಸಿದಳು. ಪರೀಕ್ಷೆಗೆ ಮೂರು ತಿಂಗಳು ಇರುವಾಗ ಭಾಷಾ ವಿಷಯಗಳ ಓದು ಆರಂಭಿಸಿದ್ದೆ. ಆದರೆ ನನ್ನ ಹೆಸರು ಶಾಲಾ ದಾಖಲಾತಿಯಲ್ಲಿಯೇ ಇರಲಿಲ್ಲ.”

ಗ್ರೀಷ್ಮಾ ಆಳ್ವಾಸ್‌ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು. ಗ್ರೀಷ್ಮಾ ಕುಟುಂಬ ಶಾಲಾ ಶುಲ್ಕವನ್ನು ಪಾವತಿಸಿಲ್ಲ ಎಂದು ಹತ್ತನೇ ತರಗತಿಯ ದಾಖಲಾತಿಯಲ್ಲಿ ಸೇರಿಸಿರಲಿಲ್ಲ. ಹೀಗಾಗಿ ಹತ್ತನೇ ತರಗತಿಯ ಪ್ರವೇಶಾತಿಗೂ ಅವಕಾಶವಿರಲಿಲ್ಲ.

“ಶುಲ್ಕ ಪಾವತಿಗೆ ಹೆಚ್ಚುವರಿ ಸಮಯವನ್ನು ಶಾಲಾ ನಿರ್ವಹಣಾ ಮಂಡಳಿ ನಮಗೆ ನೀಡಲಿಲ್ಲ. ಗ್ರೀಷ್ಮಾ 9ನೇ ತರಗತಿಯಲ್ಲಿ ಶೇ .96 ಅಂಕ ಗಳಿಸಿದ್ದರೂ ಹತ್ತನೇ ತರಗತಿಗೆ ಪ್ರವೇಶವನ್ನು ನೀಡಿಲ್ಲ” ಎಂದು ಪೋಷಕರು ಆರೋಪಿಸಿದ್ದರು.

ಡಿಡಿಪಿಐ ಅವರಲ್ಲಿಯೂ ಪೋಷಕರು ಮೊರೆ ಇಟ್ಟಾಗ ಪ್ರಕರಣ ಅಂದಿನ ಪ್ರಾಥಮಿಕ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಅವರ ತನಕ ಹೋಗಿತ್ತು. ಇದೇ ರೀತಿಯ ಪ್ರಕರಣಗಳು ಎಲ್ಲೆಡೆ ವರದಿಯಾದಾಗ ಶುಲ್ಕ ಪಾವತಿಯನ್ನು ಮುಂದಿಟ್ಟುಕೊಂಡು ಪರೀಕ್ಷಾ ಪ್ರವೇಶಾತಿಯನ್ನು ನಿರಾಕರಿಸುವಂತಿಲ್ಲ ಎಂದು ಆದೇಶಿಸಿದ್ದರು.

ವಿದ್ಯಾರ್ಥಿನಿ ಗ್ರೀಷ್ಮಾ

ಅಲ್ಲದೇ ಗ್ರೀಷ್ಮಾ ಅವರ ಕುಟುಂಬವನ್ನು ಸುರೇಶ್‌ ಕುಮಾರ್‌ ಭೇಟಿಯಾಗದಿದರು. ಹೊಸ ಅಭ್ಯರ್ಥಿಯನ್ನಾಗಿಯೇ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದರು. ಗ್ರೀಷ್ಮಾ ಅವರ ಓದಿನ ಖುಷಿಯನ್ನು ಸುರೇಶ್ ಕುಮಾರ್ ಪ್ರೋತ್ಸಾಹಿಸಿದ್ದರು.

“ಸಚಿವರು ನಮ್ಮ ಮನೆಗೆ ಬಂದ ಬಳಿಕ ಶಾಲೆಯವರು ನನ್ನ ಹೆಸರನ್ನು ಬೋರ್ಡ್ ಪರೀಕ್ಷೆಗೆ ನಮೂದಿಸಿದ್ದರು. ಹೀಗಾಗಿ ಮೊದಲ ಭಾರಿಗೆ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಯಾಗಿ ಪೂರಕ ಪರೀಕ್ಷೆಯಲ್ಲಿ ನನ್ನನ್ನು ಪರಿಗಣಿಸಲಾಗಿತ್ತು” ಎಂದು ಗ್ರೀಷ್ಮಾ ಹೇಳಿದ್ದಾರೆ.

ಇದನ್ನೂ ಓದಿರಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

ಆಳ್ವಾಸ್‌ ಶಾಲೆಯ ಮುಖ್ಯಶಿಕ್ಷಕಿ ವಿಜಯಾ ಟಿ.ಮೂರ್ತಿ ಅವರು, “ಗ್ರೀಷ್ಮಾ ಪೋಷಕರು ನಮ್ಮ ಸಂಪರ್ಕದಲ್ಲಿ ಇರಲಿಲ್ಲ” ಎಂದು ಆರೋಪಿಸಿದ್ದರು. “ನಾವು ಪೋಷಕರಿಗೆ ಪತ್ರವನ್ನು ಕಳುಹಿಸಿದ್ದೆವು. ಆದರೂ ಅವರು ಹತ್ತನೇ ತರಗತಿಗೆ ದಾಖಲಾತಿ ಮಾಡಿರಲಿಲ್ಲ. ನಮ್ಮ ಪತ್ರಗಳಿಗೂ ಉತ್ತರಿಸಲಿಲ್ಲ. ನಂತರದಲ್ಲಿ ಶುಲ್ಕ ಪಾವತಿಸದ ಕಾರಣ ಪ್ರವೇಶಾತಿ ನೀಡಿಲ್ಲ ಎಂದು ಹೇಳಿ ಗಾಬರಿಗೊಳಿಸಿದರು” ಎಂದು ಮುಖ್ಯಶಿಕ್ಷಕಿ ಹೇಳಿಕೆ ನೀಡಿದ್ದರು.

ಅಂದಹಾಗೆ ಗ್ರೀಷ್ಮಾ ಉತ್ತಮ ಫಲಿತಾಂಶವನ್ನು ಗಳಿಸುವ ಮೂಲಕ ಭರವಸೆಯಾಗಿ ಹೊಮ್ಮಿದ್ದಾರೆ. “ನಾನು 625ಕ್ಕೆ 615ಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುವ ಭರವಸೆ ಹೊಂದಿದ್ದೆ. ಆದರೆ ಪರೀಕ್ಷೆಯಲ್ಲಿ ಕೆಲವೊಂದು ಗೊಂದಲಕ್ಕೊಳಗಾಗಿ ಕೆಲವು ಅಂಕಗಳನ್ನು ಕಳೆದುಕೊಂಡೆ” ಎಂದಿದ್ದಾರೆ. ಆದರೆ ಅಂತಿಮವಾಗಿ ಗ್ರೀಷ್ಮಾ 599 ಅಂಕಗಳನ್ನು ಗಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಮುಂದಿನ ಕಲಿಕೆಯನ್ನು ಮುಂದುವರಿಸುವುದಾಗಿ ಗ್ರೀಷ್ಮಾ ಹೇಳಿದ್ದಾರೆ. ಅವರಿಗೆ ಹಲವರ ಸಹಕಾರವೂ ದೊರೆತಿದೆ.

ಜಿ.ಪರಮೇಶ್ವರ 50 ಸಾವಿರ ರೂ. ಪ್ರೋತ್ಸಾಹ ಧನ; ಮೆಡಿಕಲ್‌ ಸೀಟ್ ಭರವಸೆ

ಕೊರಟಗೆರೆ ಕ್ಷೇತ್ರದ ಶಾಸಕ, ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ವಿದ್ಯಾರ್ಥಿನಿಯ ಕುಟುಂಬವನ್ನು ಮಂಗಳವಾರ ಭೇಟಿಯಾಗಿ, ಐವತ್ತು ಸಾವಿರ ರೂ. ಪ್ರೋತ್ಸಾಹಧನವನ್ನು ನೀಡಿ, ವಿದ್ಯಾರ್ಥಿಯನ್ನು ಪ್ರೋತ್ಸಾಹಿಸಿದ್ದಾರೆ.

“ವಿದ್ಯಾಭ್ಯಾಸವನ್ನು ಇದೇ ರೀತಿಯಲ್ಲಿ ಮುಂದುವರಿಸಬೇಕು” ಎಂದು ಕಿವಿ ಮಾತನ್ನು ಹೇಳಿರುವ ಶಾಸಕರು ಇದೇ ಸಂದರ್ಭದಲ್ಲಿ ಪ್ರೋತ್ಸಾಹಧನವಾಗಿ ವಿದ್ಯಾರ್ಥಿನಿಗೆ 50 ಸಾವಿರ ರೂ.ಗಳ ಚೆಕ್ ನೀಡಿ ನೆರವಾಗಿದ್ದಾರೆ. ಜೊತೆಗೆ ಪಿಯುಸಿ ನಂತರ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಉಚಿತವಾಗಿ ಪ್ರವೇಶಾತಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿರಿ: ನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...