Homeಕರ್ನಾಟಕಶಾಲಾ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ಟಾಪರ್‌‌

ಶಾಲಾ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ಟಾಪರ್‌‌

ಮೂಡಬಿದಿರೆಯ ಆಳ್ವಾಸ್ ಶಾಲೆಯಲ್ಲಿ ಗ್ರೀಷ್ಮಾ ವ್ಯಾಸಂಗ ಮಾಡುತ್ತಿದ್ದಳು. ಪೋಷಕರು ಶುಲ್ಕ ಪಾವತಿಸದ ಕಾರಣ ಶಾಲಾ ಪ್ರವೇಶಾತಿ ನಿರಾಕರಿಸಲಾಗಿತ್ತು. ತೇರ್ಗಡೆಯಾಗಿರುವ ವಿದ್ಯಾರ್ಥಿಗೆ 50,000 ರೂ. ಪ್ರೋತ್ಸಾಹಧನವನ್ನು ಡಾ.ಜಿ.ಪರಮೇಶ್ವರ ನೀಡಿದ್ದಾರೆ.

- Advertisement -
- Advertisement -

ಶಾಲೆಯ ಶುಲ್ಕ ಪಾವತಿಸಲಾಗದೆ, ಶಾಲೆಯವರು ಪರೀಕ್ಷೆಯ ಪ್ರವೇಶಪತ್ರ ನೀಡದ ಕಾರಣ ಹತ್ತನೇ ತರಗತಿ ಪರೀಕ್ಷೆಯನ್ನು ಬರೆಯಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಕೊನೆಗೂ ಪೂರಕ ಪರೀಕ್ಷೆಯನ್ನು ಎದುರಿಸಿ ಶಾಲೆಗೆ ಟಾಪರ್‌ ಆಗಿ ತೇರ್ಗಡೆಯಾಗಿದ್ದಾಳೆ.

ಕೊರಟಗೆರೆ ಪಟ್ಟಣದ ಬಿ.ಆರ್‌.ನರಸಿಂಹಮೂರ್ತಿ, ಟಿ.ಪಿ.ಪದ್ಮಾವತಮ್ಮ ದಂಪತಿಯ ಹದಿನಾರು ವರ್ಷಗಳ ಪುತ್ರಿ ಗ್ರೀಷ್ಮಾ ನಾಯಕ್‌, ಪರೀಕ್ಷೆ ಬರೆಯಲು ಅವಕಾಶ ಸಿಗದೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಕೋವಿಡ್ ಸಂದರ್ಭದಲ್ಲಿ ಘಟಿಸಿದ ಈ ಪ್ರಕರಣ ರಾಜ್ಯ ಮಟ್ಟದ ಸುದ್ದಿಯಾಗಿತ್ತು.

ರೈತರ ಮಗಳಾದ ಗ್ರೀಷ್ಮಾ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್‌ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಗ್ರೀಷ್ಮಾ ಹೇಳುವಂತೆ, “ಕೋವಿಡ್ ಕಾರಣದಿಂದಾಗಿ ಶಾಲೆಗೆ ಹಾಜರಾಗಲು ಹಾಗೂ ಶುಲ್ಕವನ್ನು ಪಾವತಿಸಲು ಸಾಧ್ಯವಾಗಿರಲಿಲ್ಲ. ನನ್ನ ಸಹೋದರಿ ಕೀರ್ತನಾ, ಕೋರ್‌ ಸಬ್ಜೆಕ್ಟ್‌ ಕಲಿಕೆಗೆ ಸಹಕರಿಸಿದಳು. ಪರೀಕ್ಷೆಗೆ ಮೂರು ತಿಂಗಳು ಇರುವಾಗ ಭಾಷಾ ವಿಷಯಗಳ ಓದು ಆರಂಭಿಸಿದ್ದೆ. ಆದರೆ ನನ್ನ ಹೆಸರು ಶಾಲಾ ದಾಖಲಾತಿಯಲ್ಲಿಯೇ ಇರಲಿಲ್ಲ.”

ಗ್ರೀಷ್ಮಾ ಆಳ್ವಾಸ್‌ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು. ಗ್ರೀಷ್ಮಾ ಕುಟುಂಬ ಶಾಲಾ ಶುಲ್ಕವನ್ನು ಪಾವತಿಸಿಲ್ಲ ಎಂದು ಹತ್ತನೇ ತರಗತಿಯ ದಾಖಲಾತಿಯಲ್ಲಿ ಸೇರಿಸಿರಲಿಲ್ಲ. ಹೀಗಾಗಿ ಹತ್ತನೇ ತರಗತಿಯ ಪ್ರವೇಶಾತಿಗೂ ಅವಕಾಶವಿರಲಿಲ್ಲ.

“ಶುಲ್ಕ ಪಾವತಿಗೆ ಹೆಚ್ಚುವರಿ ಸಮಯವನ್ನು ಶಾಲಾ ನಿರ್ವಹಣಾ ಮಂಡಳಿ ನಮಗೆ ನೀಡಲಿಲ್ಲ. ಗ್ರೀಷ್ಮಾ 9ನೇ ತರಗತಿಯಲ್ಲಿ ಶೇ .96 ಅಂಕ ಗಳಿಸಿದ್ದರೂ ಹತ್ತನೇ ತರಗತಿಗೆ ಪ್ರವೇಶವನ್ನು ನೀಡಿಲ್ಲ” ಎಂದು ಪೋಷಕರು ಆರೋಪಿಸಿದ್ದರು.

ಡಿಡಿಪಿಐ ಅವರಲ್ಲಿಯೂ ಪೋಷಕರು ಮೊರೆ ಇಟ್ಟಾಗ ಪ್ರಕರಣ ಅಂದಿನ ಪ್ರಾಥಮಿಕ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಅವರ ತನಕ ಹೋಗಿತ್ತು. ಇದೇ ರೀತಿಯ ಪ್ರಕರಣಗಳು ಎಲ್ಲೆಡೆ ವರದಿಯಾದಾಗ ಶುಲ್ಕ ಪಾವತಿಯನ್ನು ಮುಂದಿಟ್ಟುಕೊಂಡು ಪರೀಕ್ಷಾ ಪ್ರವೇಶಾತಿಯನ್ನು ನಿರಾಕರಿಸುವಂತಿಲ್ಲ ಎಂದು ಆದೇಶಿಸಿದ್ದರು.

ವಿದ್ಯಾರ್ಥಿನಿ ಗ್ರೀಷ್ಮಾ

ಅಲ್ಲದೇ ಗ್ರೀಷ್ಮಾ ಅವರ ಕುಟುಂಬವನ್ನು ಸುರೇಶ್‌ ಕುಮಾರ್‌ ಭೇಟಿಯಾಗದಿದರು. ಹೊಸ ಅಭ್ಯರ್ಥಿಯನ್ನಾಗಿಯೇ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದರು. ಗ್ರೀಷ್ಮಾ ಅವರ ಓದಿನ ಖುಷಿಯನ್ನು ಸುರೇಶ್ ಕುಮಾರ್ ಪ್ರೋತ್ಸಾಹಿಸಿದ್ದರು.

“ಸಚಿವರು ನಮ್ಮ ಮನೆಗೆ ಬಂದ ಬಳಿಕ ಶಾಲೆಯವರು ನನ್ನ ಹೆಸರನ್ನು ಬೋರ್ಡ್ ಪರೀಕ್ಷೆಗೆ ನಮೂದಿಸಿದ್ದರು. ಹೀಗಾಗಿ ಮೊದಲ ಭಾರಿಗೆ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಯಾಗಿ ಪೂರಕ ಪರೀಕ್ಷೆಯಲ್ಲಿ ನನ್ನನ್ನು ಪರಿಗಣಿಸಲಾಗಿತ್ತು” ಎಂದು ಗ್ರೀಷ್ಮಾ ಹೇಳಿದ್ದಾರೆ.

ಇದನ್ನೂ ಓದಿರಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

ಆಳ್ವಾಸ್‌ ಶಾಲೆಯ ಮುಖ್ಯಶಿಕ್ಷಕಿ ವಿಜಯಾ ಟಿ.ಮೂರ್ತಿ ಅವರು, “ಗ್ರೀಷ್ಮಾ ಪೋಷಕರು ನಮ್ಮ ಸಂಪರ್ಕದಲ್ಲಿ ಇರಲಿಲ್ಲ” ಎಂದು ಆರೋಪಿಸಿದ್ದರು. “ನಾವು ಪೋಷಕರಿಗೆ ಪತ್ರವನ್ನು ಕಳುಹಿಸಿದ್ದೆವು. ಆದರೂ ಅವರು ಹತ್ತನೇ ತರಗತಿಗೆ ದಾಖಲಾತಿ ಮಾಡಿರಲಿಲ್ಲ. ನಮ್ಮ ಪತ್ರಗಳಿಗೂ ಉತ್ತರಿಸಲಿಲ್ಲ. ನಂತರದಲ್ಲಿ ಶುಲ್ಕ ಪಾವತಿಸದ ಕಾರಣ ಪ್ರವೇಶಾತಿ ನೀಡಿಲ್ಲ ಎಂದು ಹೇಳಿ ಗಾಬರಿಗೊಳಿಸಿದರು” ಎಂದು ಮುಖ್ಯಶಿಕ್ಷಕಿ ಹೇಳಿಕೆ ನೀಡಿದ್ದರು.

ಅಂದಹಾಗೆ ಗ್ರೀಷ್ಮಾ ಉತ್ತಮ ಫಲಿತಾಂಶವನ್ನು ಗಳಿಸುವ ಮೂಲಕ ಭರವಸೆಯಾಗಿ ಹೊಮ್ಮಿದ್ದಾರೆ. “ನಾನು 625ಕ್ಕೆ 615ಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುವ ಭರವಸೆ ಹೊಂದಿದ್ದೆ. ಆದರೆ ಪರೀಕ್ಷೆಯಲ್ಲಿ ಕೆಲವೊಂದು ಗೊಂದಲಕ್ಕೊಳಗಾಗಿ ಕೆಲವು ಅಂಕಗಳನ್ನು ಕಳೆದುಕೊಂಡೆ” ಎಂದಿದ್ದಾರೆ. ಆದರೆ ಅಂತಿಮವಾಗಿ ಗ್ರೀಷ್ಮಾ 599 ಅಂಕಗಳನ್ನು ಗಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಮುಂದಿನ ಕಲಿಕೆಯನ್ನು ಮುಂದುವರಿಸುವುದಾಗಿ ಗ್ರೀಷ್ಮಾ ಹೇಳಿದ್ದಾರೆ. ಅವರಿಗೆ ಹಲವರ ಸಹಕಾರವೂ ದೊರೆತಿದೆ.

ಜಿ.ಪರಮೇಶ್ವರ 50 ಸಾವಿರ ರೂ. ಪ್ರೋತ್ಸಾಹ ಧನ; ಮೆಡಿಕಲ್‌ ಸೀಟ್ ಭರವಸೆ

ಕೊರಟಗೆರೆ ಕ್ಷೇತ್ರದ ಶಾಸಕ, ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ವಿದ್ಯಾರ್ಥಿನಿಯ ಕುಟುಂಬವನ್ನು ಮಂಗಳವಾರ ಭೇಟಿಯಾಗಿ, ಐವತ್ತು ಸಾವಿರ ರೂ. ಪ್ರೋತ್ಸಾಹಧನವನ್ನು ನೀಡಿ, ವಿದ್ಯಾರ್ಥಿಯನ್ನು ಪ್ರೋತ್ಸಾಹಿಸಿದ್ದಾರೆ.

“ವಿದ್ಯಾಭ್ಯಾಸವನ್ನು ಇದೇ ರೀತಿಯಲ್ಲಿ ಮುಂದುವರಿಸಬೇಕು” ಎಂದು ಕಿವಿ ಮಾತನ್ನು ಹೇಳಿರುವ ಶಾಸಕರು ಇದೇ ಸಂದರ್ಭದಲ್ಲಿ ಪ್ರೋತ್ಸಾಹಧನವಾಗಿ ವಿದ್ಯಾರ್ಥಿನಿಗೆ 50 ಸಾವಿರ ರೂ.ಗಳ ಚೆಕ್ ನೀಡಿ ನೆರವಾಗಿದ್ದಾರೆ. ಜೊತೆಗೆ ಪಿಯುಸಿ ನಂತರ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಉಚಿತವಾಗಿ ಪ್ರವೇಶಾತಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿರಿ: ನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...