Homeಕರ್ನಾಟಕಶಾಲಾ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ಟಾಪರ್‌‌

ಶಾಲಾ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ಟಾಪರ್‌‌

ಮೂಡಬಿದಿರೆಯ ಆಳ್ವಾಸ್ ಶಾಲೆಯಲ್ಲಿ ಗ್ರೀಷ್ಮಾ ವ್ಯಾಸಂಗ ಮಾಡುತ್ತಿದ್ದಳು. ಪೋಷಕರು ಶುಲ್ಕ ಪಾವತಿಸದ ಕಾರಣ ಶಾಲಾ ಪ್ರವೇಶಾತಿ ನಿರಾಕರಿಸಲಾಗಿತ್ತು. ತೇರ್ಗಡೆಯಾಗಿರುವ ವಿದ್ಯಾರ್ಥಿಗೆ 50,000 ರೂ. ಪ್ರೋತ್ಸಾಹಧನವನ್ನು ಡಾ.ಜಿ.ಪರಮೇಶ್ವರ ನೀಡಿದ್ದಾರೆ.

- Advertisement -
- Advertisement -

ಶಾಲೆಯ ಶುಲ್ಕ ಪಾವತಿಸಲಾಗದೆ, ಶಾಲೆಯವರು ಪರೀಕ್ಷೆಯ ಪ್ರವೇಶಪತ್ರ ನೀಡದ ಕಾರಣ ಹತ್ತನೇ ತರಗತಿ ಪರೀಕ್ಷೆಯನ್ನು ಬರೆಯಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಕೊನೆಗೂ ಪೂರಕ ಪರೀಕ್ಷೆಯನ್ನು ಎದುರಿಸಿ ಶಾಲೆಗೆ ಟಾಪರ್‌ ಆಗಿ ತೇರ್ಗಡೆಯಾಗಿದ್ದಾಳೆ.

ಕೊರಟಗೆರೆ ಪಟ್ಟಣದ ಬಿ.ಆರ್‌.ನರಸಿಂಹಮೂರ್ತಿ, ಟಿ.ಪಿ.ಪದ್ಮಾವತಮ್ಮ ದಂಪತಿಯ ಹದಿನಾರು ವರ್ಷಗಳ ಪುತ್ರಿ ಗ್ರೀಷ್ಮಾ ನಾಯಕ್‌, ಪರೀಕ್ಷೆ ಬರೆಯಲು ಅವಕಾಶ ಸಿಗದೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಕೋವಿಡ್ ಸಂದರ್ಭದಲ್ಲಿ ಘಟಿಸಿದ ಈ ಪ್ರಕರಣ ರಾಜ್ಯ ಮಟ್ಟದ ಸುದ್ದಿಯಾಗಿತ್ತು.

ರೈತರ ಮಗಳಾದ ಗ್ರೀಷ್ಮಾ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್‌ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಗ್ರೀಷ್ಮಾ ಹೇಳುವಂತೆ, “ಕೋವಿಡ್ ಕಾರಣದಿಂದಾಗಿ ಶಾಲೆಗೆ ಹಾಜರಾಗಲು ಹಾಗೂ ಶುಲ್ಕವನ್ನು ಪಾವತಿಸಲು ಸಾಧ್ಯವಾಗಿರಲಿಲ್ಲ. ನನ್ನ ಸಹೋದರಿ ಕೀರ್ತನಾ, ಕೋರ್‌ ಸಬ್ಜೆಕ್ಟ್‌ ಕಲಿಕೆಗೆ ಸಹಕರಿಸಿದಳು. ಪರೀಕ್ಷೆಗೆ ಮೂರು ತಿಂಗಳು ಇರುವಾಗ ಭಾಷಾ ವಿಷಯಗಳ ಓದು ಆರಂಭಿಸಿದ್ದೆ. ಆದರೆ ನನ್ನ ಹೆಸರು ಶಾಲಾ ದಾಖಲಾತಿಯಲ್ಲಿಯೇ ಇರಲಿಲ್ಲ.”

ಗ್ರೀಷ್ಮಾ ಆಳ್ವಾಸ್‌ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು. ಗ್ರೀಷ್ಮಾ ಕುಟುಂಬ ಶಾಲಾ ಶುಲ್ಕವನ್ನು ಪಾವತಿಸಿಲ್ಲ ಎಂದು ಹತ್ತನೇ ತರಗತಿಯ ದಾಖಲಾತಿಯಲ್ಲಿ ಸೇರಿಸಿರಲಿಲ್ಲ. ಹೀಗಾಗಿ ಹತ್ತನೇ ತರಗತಿಯ ಪ್ರವೇಶಾತಿಗೂ ಅವಕಾಶವಿರಲಿಲ್ಲ.

“ಶುಲ್ಕ ಪಾವತಿಗೆ ಹೆಚ್ಚುವರಿ ಸಮಯವನ್ನು ಶಾಲಾ ನಿರ್ವಹಣಾ ಮಂಡಳಿ ನಮಗೆ ನೀಡಲಿಲ್ಲ. ಗ್ರೀಷ್ಮಾ 9ನೇ ತರಗತಿಯಲ್ಲಿ ಶೇ .96 ಅಂಕ ಗಳಿಸಿದ್ದರೂ ಹತ್ತನೇ ತರಗತಿಗೆ ಪ್ರವೇಶವನ್ನು ನೀಡಿಲ್ಲ” ಎಂದು ಪೋಷಕರು ಆರೋಪಿಸಿದ್ದರು.

ಡಿಡಿಪಿಐ ಅವರಲ್ಲಿಯೂ ಪೋಷಕರು ಮೊರೆ ಇಟ್ಟಾಗ ಪ್ರಕರಣ ಅಂದಿನ ಪ್ರಾಥಮಿಕ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಅವರ ತನಕ ಹೋಗಿತ್ತು. ಇದೇ ರೀತಿಯ ಪ್ರಕರಣಗಳು ಎಲ್ಲೆಡೆ ವರದಿಯಾದಾಗ ಶುಲ್ಕ ಪಾವತಿಯನ್ನು ಮುಂದಿಟ್ಟುಕೊಂಡು ಪರೀಕ್ಷಾ ಪ್ರವೇಶಾತಿಯನ್ನು ನಿರಾಕರಿಸುವಂತಿಲ್ಲ ಎಂದು ಆದೇಶಿಸಿದ್ದರು.

ವಿದ್ಯಾರ್ಥಿನಿ ಗ್ರೀಷ್ಮಾ

ಅಲ್ಲದೇ ಗ್ರೀಷ್ಮಾ ಅವರ ಕುಟುಂಬವನ್ನು ಸುರೇಶ್‌ ಕುಮಾರ್‌ ಭೇಟಿಯಾಗದಿದರು. ಹೊಸ ಅಭ್ಯರ್ಥಿಯನ್ನಾಗಿಯೇ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದರು. ಗ್ರೀಷ್ಮಾ ಅವರ ಓದಿನ ಖುಷಿಯನ್ನು ಸುರೇಶ್ ಕುಮಾರ್ ಪ್ರೋತ್ಸಾಹಿಸಿದ್ದರು.

“ಸಚಿವರು ನಮ್ಮ ಮನೆಗೆ ಬಂದ ಬಳಿಕ ಶಾಲೆಯವರು ನನ್ನ ಹೆಸರನ್ನು ಬೋರ್ಡ್ ಪರೀಕ್ಷೆಗೆ ನಮೂದಿಸಿದ್ದರು. ಹೀಗಾಗಿ ಮೊದಲ ಭಾರಿಗೆ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಯಾಗಿ ಪೂರಕ ಪರೀಕ್ಷೆಯಲ್ಲಿ ನನ್ನನ್ನು ಪರಿಗಣಿಸಲಾಗಿತ್ತು” ಎಂದು ಗ್ರೀಷ್ಮಾ ಹೇಳಿದ್ದಾರೆ.

ಇದನ್ನೂ ಓದಿರಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

ಆಳ್ವಾಸ್‌ ಶಾಲೆಯ ಮುಖ್ಯಶಿಕ್ಷಕಿ ವಿಜಯಾ ಟಿ.ಮೂರ್ತಿ ಅವರು, “ಗ್ರೀಷ್ಮಾ ಪೋಷಕರು ನಮ್ಮ ಸಂಪರ್ಕದಲ್ಲಿ ಇರಲಿಲ್ಲ” ಎಂದು ಆರೋಪಿಸಿದ್ದರು. “ನಾವು ಪೋಷಕರಿಗೆ ಪತ್ರವನ್ನು ಕಳುಹಿಸಿದ್ದೆವು. ಆದರೂ ಅವರು ಹತ್ತನೇ ತರಗತಿಗೆ ದಾಖಲಾತಿ ಮಾಡಿರಲಿಲ್ಲ. ನಮ್ಮ ಪತ್ರಗಳಿಗೂ ಉತ್ತರಿಸಲಿಲ್ಲ. ನಂತರದಲ್ಲಿ ಶುಲ್ಕ ಪಾವತಿಸದ ಕಾರಣ ಪ್ರವೇಶಾತಿ ನೀಡಿಲ್ಲ ಎಂದು ಹೇಳಿ ಗಾಬರಿಗೊಳಿಸಿದರು” ಎಂದು ಮುಖ್ಯಶಿಕ್ಷಕಿ ಹೇಳಿಕೆ ನೀಡಿದ್ದರು.

ಅಂದಹಾಗೆ ಗ್ರೀಷ್ಮಾ ಉತ್ತಮ ಫಲಿತಾಂಶವನ್ನು ಗಳಿಸುವ ಮೂಲಕ ಭರವಸೆಯಾಗಿ ಹೊಮ್ಮಿದ್ದಾರೆ. “ನಾನು 625ಕ್ಕೆ 615ಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುವ ಭರವಸೆ ಹೊಂದಿದ್ದೆ. ಆದರೆ ಪರೀಕ್ಷೆಯಲ್ಲಿ ಕೆಲವೊಂದು ಗೊಂದಲಕ್ಕೊಳಗಾಗಿ ಕೆಲವು ಅಂಕಗಳನ್ನು ಕಳೆದುಕೊಂಡೆ” ಎಂದಿದ್ದಾರೆ. ಆದರೆ ಅಂತಿಮವಾಗಿ ಗ್ರೀಷ್ಮಾ 599 ಅಂಕಗಳನ್ನು ಗಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಮುಂದಿನ ಕಲಿಕೆಯನ್ನು ಮುಂದುವರಿಸುವುದಾಗಿ ಗ್ರೀಷ್ಮಾ ಹೇಳಿದ್ದಾರೆ. ಅವರಿಗೆ ಹಲವರ ಸಹಕಾರವೂ ದೊರೆತಿದೆ.

ಜಿ.ಪರಮೇಶ್ವರ 50 ಸಾವಿರ ರೂ. ಪ್ರೋತ್ಸಾಹ ಧನ; ಮೆಡಿಕಲ್‌ ಸೀಟ್ ಭರವಸೆ

ಕೊರಟಗೆರೆ ಕ್ಷೇತ್ರದ ಶಾಸಕ, ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ವಿದ್ಯಾರ್ಥಿನಿಯ ಕುಟುಂಬವನ್ನು ಮಂಗಳವಾರ ಭೇಟಿಯಾಗಿ, ಐವತ್ತು ಸಾವಿರ ರೂ. ಪ್ರೋತ್ಸಾಹಧನವನ್ನು ನೀಡಿ, ವಿದ್ಯಾರ್ಥಿಯನ್ನು ಪ್ರೋತ್ಸಾಹಿಸಿದ್ದಾರೆ.

“ವಿದ್ಯಾಭ್ಯಾಸವನ್ನು ಇದೇ ರೀತಿಯಲ್ಲಿ ಮುಂದುವರಿಸಬೇಕು” ಎಂದು ಕಿವಿ ಮಾತನ್ನು ಹೇಳಿರುವ ಶಾಸಕರು ಇದೇ ಸಂದರ್ಭದಲ್ಲಿ ಪ್ರೋತ್ಸಾಹಧನವಾಗಿ ವಿದ್ಯಾರ್ಥಿನಿಗೆ 50 ಸಾವಿರ ರೂ.ಗಳ ಚೆಕ್ ನೀಡಿ ನೆರವಾಗಿದ್ದಾರೆ. ಜೊತೆಗೆ ಪಿಯುಸಿ ನಂತರ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಉಚಿತವಾಗಿ ಪ್ರವೇಶಾತಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿರಿ: ನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...