Homeಕರ್ನಾಟಕಶಾಲಾ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ಟಾಪರ್‌‌

ಶಾಲಾ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ಟಾಪರ್‌‌

ಮೂಡಬಿದಿರೆಯ ಆಳ್ವಾಸ್ ಶಾಲೆಯಲ್ಲಿ ಗ್ರೀಷ್ಮಾ ವ್ಯಾಸಂಗ ಮಾಡುತ್ತಿದ್ದಳು. ಪೋಷಕರು ಶುಲ್ಕ ಪಾವತಿಸದ ಕಾರಣ ಶಾಲಾ ಪ್ರವೇಶಾತಿ ನಿರಾಕರಿಸಲಾಗಿತ್ತು. ತೇರ್ಗಡೆಯಾಗಿರುವ ವಿದ್ಯಾರ್ಥಿಗೆ 50,000 ರೂ. ಪ್ರೋತ್ಸಾಹಧನವನ್ನು ಡಾ.ಜಿ.ಪರಮೇಶ್ವರ ನೀಡಿದ್ದಾರೆ.

- Advertisement -
- Advertisement -

ಶಾಲೆಯ ಶುಲ್ಕ ಪಾವತಿಸಲಾಗದೆ, ಶಾಲೆಯವರು ಪರೀಕ್ಷೆಯ ಪ್ರವೇಶಪತ್ರ ನೀಡದ ಕಾರಣ ಹತ್ತನೇ ತರಗತಿ ಪರೀಕ್ಷೆಯನ್ನು ಬರೆಯಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಕೊನೆಗೂ ಪೂರಕ ಪರೀಕ್ಷೆಯನ್ನು ಎದುರಿಸಿ ಶಾಲೆಗೆ ಟಾಪರ್‌ ಆಗಿ ತೇರ್ಗಡೆಯಾಗಿದ್ದಾಳೆ.

ಕೊರಟಗೆರೆ ಪಟ್ಟಣದ ಬಿ.ಆರ್‌.ನರಸಿಂಹಮೂರ್ತಿ, ಟಿ.ಪಿ.ಪದ್ಮಾವತಮ್ಮ ದಂಪತಿಯ ಹದಿನಾರು ವರ್ಷಗಳ ಪುತ್ರಿ ಗ್ರೀಷ್ಮಾ ನಾಯಕ್‌, ಪರೀಕ್ಷೆ ಬರೆಯಲು ಅವಕಾಶ ಸಿಗದೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಕೋವಿಡ್ ಸಂದರ್ಭದಲ್ಲಿ ಘಟಿಸಿದ ಈ ಪ್ರಕರಣ ರಾಜ್ಯ ಮಟ್ಟದ ಸುದ್ದಿಯಾಗಿತ್ತು.

ರೈತರ ಮಗಳಾದ ಗ್ರೀಷ್ಮಾ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್‌ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಗ್ರೀಷ್ಮಾ ಹೇಳುವಂತೆ, “ಕೋವಿಡ್ ಕಾರಣದಿಂದಾಗಿ ಶಾಲೆಗೆ ಹಾಜರಾಗಲು ಹಾಗೂ ಶುಲ್ಕವನ್ನು ಪಾವತಿಸಲು ಸಾಧ್ಯವಾಗಿರಲಿಲ್ಲ. ನನ್ನ ಸಹೋದರಿ ಕೀರ್ತನಾ, ಕೋರ್‌ ಸಬ್ಜೆಕ್ಟ್‌ ಕಲಿಕೆಗೆ ಸಹಕರಿಸಿದಳು. ಪರೀಕ್ಷೆಗೆ ಮೂರು ತಿಂಗಳು ಇರುವಾಗ ಭಾಷಾ ವಿಷಯಗಳ ಓದು ಆರಂಭಿಸಿದ್ದೆ. ಆದರೆ ನನ್ನ ಹೆಸರು ಶಾಲಾ ದಾಖಲಾತಿಯಲ್ಲಿಯೇ ಇರಲಿಲ್ಲ.”

ಗ್ರೀಷ್ಮಾ ಆಳ್ವಾಸ್‌ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು. ಗ್ರೀಷ್ಮಾ ಕುಟುಂಬ ಶಾಲಾ ಶುಲ್ಕವನ್ನು ಪಾವತಿಸಿಲ್ಲ ಎಂದು ಹತ್ತನೇ ತರಗತಿಯ ದಾಖಲಾತಿಯಲ್ಲಿ ಸೇರಿಸಿರಲಿಲ್ಲ. ಹೀಗಾಗಿ ಹತ್ತನೇ ತರಗತಿಯ ಪ್ರವೇಶಾತಿಗೂ ಅವಕಾಶವಿರಲಿಲ್ಲ.

“ಶುಲ್ಕ ಪಾವತಿಗೆ ಹೆಚ್ಚುವರಿ ಸಮಯವನ್ನು ಶಾಲಾ ನಿರ್ವಹಣಾ ಮಂಡಳಿ ನಮಗೆ ನೀಡಲಿಲ್ಲ. ಗ್ರೀಷ್ಮಾ 9ನೇ ತರಗತಿಯಲ್ಲಿ ಶೇ .96 ಅಂಕ ಗಳಿಸಿದ್ದರೂ ಹತ್ತನೇ ತರಗತಿಗೆ ಪ್ರವೇಶವನ್ನು ನೀಡಿಲ್ಲ” ಎಂದು ಪೋಷಕರು ಆರೋಪಿಸಿದ್ದರು.

ಡಿಡಿಪಿಐ ಅವರಲ್ಲಿಯೂ ಪೋಷಕರು ಮೊರೆ ಇಟ್ಟಾಗ ಪ್ರಕರಣ ಅಂದಿನ ಪ್ರಾಥಮಿಕ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಅವರ ತನಕ ಹೋಗಿತ್ತು. ಇದೇ ರೀತಿಯ ಪ್ರಕರಣಗಳು ಎಲ್ಲೆಡೆ ವರದಿಯಾದಾಗ ಶುಲ್ಕ ಪಾವತಿಯನ್ನು ಮುಂದಿಟ್ಟುಕೊಂಡು ಪರೀಕ್ಷಾ ಪ್ರವೇಶಾತಿಯನ್ನು ನಿರಾಕರಿಸುವಂತಿಲ್ಲ ಎಂದು ಆದೇಶಿಸಿದ್ದರು.

ವಿದ್ಯಾರ್ಥಿನಿ ಗ್ರೀಷ್ಮಾ

ಅಲ್ಲದೇ ಗ್ರೀಷ್ಮಾ ಅವರ ಕುಟುಂಬವನ್ನು ಸುರೇಶ್‌ ಕುಮಾರ್‌ ಭೇಟಿಯಾಗದಿದರು. ಹೊಸ ಅಭ್ಯರ್ಥಿಯನ್ನಾಗಿಯೇ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದರು. ಗ್ರೀಷ್ಮಾ ಅವರ ಓದಿನ ಖುಷಿಯನ್ನು ಸುರೇಶ್ ಕುಮಾರ್ ಪ್ರೋತ್ಸಾಹಿಸಿದ್ದರು.

“ಸಚಿವರು ನಮ್ಮ ಮನೆಗೆ ಬಂದ ಬಳಿಕ ಶಾಲೆಯವರು ನನ್ನ ಹೆಸರನ್ನು ಬೋರ್ಡ್ ಪರೀಕ್ಷೆಗೆ ನಮೂದಿಸಿದ್ದರು. ಹೀಗಾಗಿ ಮೊದಲ ಭಾರಿಗೆ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಯಾಗಿ ಪೂರಕ ಪರೀಕ್ಷೆಯಲ್ಲಿ ನನ್ನನ್ನು ಪರಿಗಣಿಸಲಾಗಿತ್ತು” ಎಂದು ಗ್ರೀಷ್ಮಾ ಹೇಳಿದ್ದಾರೆ.

ಇದನ್ನೂ ಓದಿರಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

ಆಳ್ವಾಸ್‌ ಶಾಲೆಯ ಮುಖ್ಯಶಿಕ್ಷಕಿ ವಿಜಯಾ ಟಿ.ಮೂರ್ತಿ ಅವರು, “ಗ್ರೀಷ್ಮಾ ಪೋಷಕರು ನಮ್ಮ ಸಂಪರ್ಕದಲ್ಲಿ ಇರಲಿಲ್ಲ” ಎಂದು ಆರೋಪಿಸಿದ್ದರು. “ನಾವು ಪೋಷಕರಿಗೆ ಪತ್ರವನ್ನು ಕಳುಹಿಸಿದ್ದೆವು. ಆದರೂ ಅವರು ಹತ್ತನೇ ತರಗತಿಗೆ ದಾಖಲಾತಿ ಮಾಡಿರಲಿಲ್ಲ. ನಮ್ಮ ಪತ್ರಗಳಿಗೂ ಉತ್ತರಿಸಲಿಲ್ಲ. ನಂತರದಲ್ಲಿ ಶುಲ್ಕ ಪಾವತಿಸದ ಕಾರಣ ಪ್ರವೇಶಾತಿ ನೀಡಿಲ್ಲ ಎಂದು ಹೇಳಿ ಗಾಬರಿಗೊಳಿಸಿದರು” ಎಂದು ಮುಖ್ಯಶಿಕ್ಷಕಿ ಹೇಳಿಕೆ ನೀಡಿದ್ದರು.

ಅಂದಹಾಗೆ ಗ್ರೀಷ್ಮಾ ಉತ್ತಮ ಫಲಿತಾಂಶವನ್ನು ಗಳಿಸುವ ಮೂಲಕ ಭರವಸೆಯಾಗಿ ಹೊಮ್ಮಿದ್ದಾರೆ. “ನಾನು 625ಕ್ಕೆ 615ಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುವ ಭರವಸೆ ಹೊಂದಿದ್ದೆ. ಆದರೆ ಪರೀಕ್ಷೆಯಲ್ಲಿ ಕೆಲವೊಂದು ಗೊಂದಲಕ್ಕೊಳಗಾಗಿ ಕೆಲವು ಅಂಕಗಳನ್ನು ಕಳೆದುಕೊಂಡೆ” ಎಂದಿದ್ದಾರೆ. ಆದರೆ ಅಂತಿಮವಾಗಿ ಗ್ರೀಷ್ಮಾ 599 ಅಂಕಗಳನ್ನು ಗಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಮುಂದಿನ ಕಲಿಕೆಯನ್ನು ಮುಂದುವರಿಸುವುದಾಗಿ ಗ್ರೀಷ್ಮಾ ಹೇಳಿದ್ದಾರೆ. ಅವರಿಗೆ ಹಲವರ ಸಹಕಾರವೂ ದೊರೆತಿದೆ.

ಜಿ.ಪರಮೇಶ್ವರ 50 ಸಾವಿರ ರೂ. ಪ್ರೋತ್ಸಾಹ ಧನ; ಮೆಡಿಕಲ್‌ ಸೀಟ್ ಭರವಸೆ

ಕೊರಟಗೆರೆ ಕ್ಷೇತ್ರದ ಶಾಸಕ, ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ವಿದ್ಯಾರ್ಥಿನಿಯ ಕುಟುಂಬವನ್ನು ಮಂಗಳವಾರ ಭೇಟಿಯಾಗಿ, ಐವತ್ತು ಸಾವಿರ ರೂ. ಪ್ರೋತ್ಸಾಹಧನವನ್ನು ನೀಡಿ, ವಿದ್ಯಾರ್ಥಿಯನ್ನು ಪ್ರೋತ್ಸಾಹಿಸಿದ್ದಾರೆ.

“ವಿದ್ಯಾಭ್ಯಾಸವನ್ನು ಇದೇ ರೀತಿಯಲ್ಲಿ ಮುಂದುವರಿಸಬೇಕು” ಎಂದು ಕಿವಿ ಮಾತನ್ನು ಹೇಳಿರುವ ಶಾಸಕರು ಇದೇ ಸಂದರ್ಭದಲ್ಲಿ ಪ್ರೋತ್ಸಾಹಧನವಾಗಿ ವಿದ್ಯಾರ್ಥಿನಿಗೆ 50 ಸಾವಿರ ರೂ.ಗಳ ಚೆಕ್ ನೀಡಿ ನೆರವಾಗಿದ್ದಾರೆ. ಜೊತೆಗೆ ಪಿಯುಸಿ ನಂತರ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಉಚಿತವಾಗಿ ಪ್ರವೇಶಾತಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿರಿ: ನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....