Homeಕರ್ನಾಟಕಶಾಲಾ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ಟಾಪರ್‌‌

ಶಾಲಾ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ಟಾಪರ್‌‌

ಮೂಡಬಿದಿರೆಯ ಆಳ್ವಾಸ್ ಶಾಲೆಯಲ್ಲಿ ಗ್ರೀಷ್ಮಾ ವ್ಯಾಸಂಗ ಮಾಡುತ್ತಿದ್ದಳು. ಪೋಷಕರು ಶುಲ್ಕ ಪಾವತಿಸದ ಕಾರಣ ಶಾಲಾ ಪ್ರವೇಶಾತಿ ನಿರಾಕರಿಸಲಾಗಿತ್ತು. ತೇರ್ಗಡೆಯಾಗಿರುವ ವಿದ್ಯಾರ್ಥಿಗೆ 50,000 ರೂ. ಪ್ರೋತ್ಸಾಹಧನವನ್ನು ಡಾ.ಜಿ.ಪರಮೇಶ್ವರ ನೀಡಿದ್ದಾರೆ.

- Advertisement -
- Advertisement -

ಶಾಲೆಯ ಶುಲ್ಕ ಪಾವತಿಸಲಾಗದೆ, ಶಾಲೆಯವರು ಪರೀಕ್ಷೆಯ ಪ್ರವೇಶಪತ್ರ ನೀಡದ ಕಾರಣ ಹತ್ತನೇ ತರಗತಿ ಪರೀಕ್ಷೆಯನ್ನು ಬರೆಯಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಕೊನೆಗೂ ಪೂರಕ ಪರೀಕ್ಷೆಯನ್ನು ಎದುರಿಸಿ ಶಾಲೆಗೆ ಟಾಪರ್‌ ಆಗಿ ತೇರ್ಗಡೆಯಾಗಿದ್ದಾಳೆ.

ಕೊರಟಗೆರೆ ಪಟ್ಟಣದ ಬಿ.ಆರ್‌.ನರಸಿಂಹಮೂರ್ತಿ, ಟಿ.ಪಿ.ಪದ್ಮಾವತಮ್ಮ ದಂಪತಿಯ ಹದಿನಾರು ವರ್ಷಗಳ ಪುತ್ರಿ ಗ್ರೀಷ್ಮಾ ನಾಯಕ್‌, ಪರೀಕ್ಷೆ ಬರೆಯಲು ಅವಕಾಶ ಸಿಗದೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಕೋವಿಡ್ ಸಂದರ್ಭದಲ್ಲಿ ಘಟಿಸಿದ ಈ ಪ್ರಕರಣ ರಾಜ್ಯ ಮಟ್ಟದ ಸುದ್ದಿಯಾಗಿತ್ತು.

ರೈತರ ಮಗಳಾದ ಗ್ರೀಷ್ಮಾ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್‌ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಗ್ರೀಷ್ಮಾ ಹೇಳುವಂತೆ, “ಕೋವಿಡ್ ಕಾರಣದಿಂದಾಗಿ ಶಾಲೆಗೆ ಹಾಜರಾಗಲು ಹಾಗೂ ಶುಲ್ಕವನ್ನು ಪಾವತಿಸಲು ಸಾಧ್ಯವಾಗಿರಲಿಲ್ಲ. ನನ್ನ ಸಹೋದರಿ ಕೀರ್ತನಾ, ಕೋರ್‌ ಸಬ್ಜೆಕ್ಟ್‌ ಕಲಿಕೆಗೆ ಸಹಕರಿಸಿದಳು. ಪರೀಕ್ಷೆಗೆ ಮೂರು ತಿಂಗಳು ಇರುವಾಗ ಭಾಷಾ ವಿಷಯಗಳ ಓದು ಆರಂಭಿಸಿದ್ದೆ. ಆದರೆ ನನ್ನ ಹೆಸರು ಶಾಲಾ ದಾಖಲಾತಿಯಲ್ಲಿಯೇ ಇರಲಿಲ್ಲ.”

ಗ್ರೀಷ್ಮಾ ಆಳ್ವಾಸ್‌ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು. ಗ್ರೀಷ್ಮಾ ಕುಟುಂಬ ಶಾಲಾ ಶುಲ್ಕವನ್ನು ಪಾವತಿಸಿಲ್ಲ ಎಂದು ಹತ್ತನೇ ತರಗತಿಯ ದಾಖಲಾತಿಯಲ್ಲಿ ಸೇರಿಸಿರಲಿಲ್ಲ. ಹೀಗಾಗಿ ಹತ್ತನೇ ತರಗತಿಯ ಪ್ರವೇಶಾತಿಗೂ ಅವಕಾಶವಿರಲಿಲ್ಲ.

“ಶುಲ್ಕ ಪಾವತಿಗೆ ಹೆಚ್ಚುವರಿ ಸಮಯವನ್ನು ಶಾಲಾ ನಿರ್ವಹಣಾ ಮಂಡಳಿ ನಮಗೆ ನೀಡಲಿಲ್ಲ. ಗ್ರೀಷ್ಮಾ 9ನೇ ತರಗತಿಯಲ್ಲಿ ಶೇ .96 ಅಂಕ ಗಳಿಸಿದ್ದರೂ ಹತ್ತನೇ ತರಗತಿಗೆ ಪ್ರವೇಶವನ್ನು ನೀಡಿಲ್ಲ” ಎಂದು ಪೋಷಕರು ಆರೋಪಿಸಿದ್ದರು.

ಡಿಡಿಪಿಐ ಅವರಲ್ಲಿಯೂ ಪೋಷಕರು ಮೊರೆ ಇಟ್ಟಾಗ ಪ್ರಕರಣ ಅಂದಿನ ಪ್ರಾಥಮಿಕ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಅವರ ತನಕ ಹೋಗಿತ್ತು. ಇದೇ ರೀತಿಯ ಪ್ರಕರಣಗಳು ಎಲ್ಲೆಡೆ ವರದಿಯಾದಾಗ ಶುಲ್ಕ ಪಾವತಿಯನ್ನು ಮುಂದಿಟ್ಟುಕೊಂಡು ಪರೀಕ್ಷಾ ಪ್ರವೇಶಾತಿಯನ್ನು ನಿರಾಕರಿಸುವಂತಿಲ್ಲ ಎಂದು ಆದೇಶಿಸಿದ್ದರು.

ವಿದ್ಯಾರ್ಥಿನಿ ಗ್ರೀಷ್ಮಾ

ಅಲ್ಲದೇ ಗ್ರೀಷ್ಮಾ ಅವರ ಕುಟುಂಬವನ್ನು ಸುರೇಶ್‌ ಕುಮಾರ್‌ ಭೇಟಿಯಾಗದಿದರು. ಹೊಸ ಅಭ್ಯರ್ಥಿಯನ್ನಾಗಿಯೇ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದರು. ಗ್ರೀಷ್ಮಾ ಅವರ ಓದಿನ ಖುಷಿಯನ್ನು ಸುರೇಶ್ ಕುಮಾರ್ ಪ್ರೋತ್ಸಾಹಿಸಿದ್ದರು.

“ಸಚಿವರು ನಮ್ಮ ಮನೆಗೆ ಬಂದ ಬಳಿಕ ಶಾಲೆಯವರು ನನ್ನ ಹೆಸರನ್ನು ಬೋರ್ಡ್ ಪರೀಕ್ಷೆಗೆ ನಮೂದಿಸಿದ್ದರು. ಹೀಗಾಗಿ ಮೊದಲ ಭಾರಿಗೆ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಯಾಗಿ ಪೂರಕ ಪರೀಕ್ಷೆಯಲ್ಲಿ ನನ್ನನ್ನು ಪರಿಗಣಿಸಲಾಗಿತ್ತು” ಎಂದು ಗ್ರೀಷ್ಮಾ ಹೇಳಿದ್ದಾರೆ.

ಇದನ್ನೂ ಓದಿರಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

ಆಳ್ವಾಸ್‌ ಶಾಲೆಯ ಮುಖ್ಯಶಿಕ್ಷಕಿ ವಿಜಯಾ ಟಿ.ಮೂರ್ತಿ ಅವರು, “ಗ್ರೀಷ್ಮಾ ಪೋಷಕರು ನಮ್ಮ ಸಂಪರ್ಕದಲ್ಲಿ ಇರಲಿಲ್ಲ” ಎಂದು ಆರೋಪಿಸಿದ್ದರು. “ನಾವು ಪೋಷಕರಿಗೆ ಪತ್ರವನ್ನು ಕಳುಹಿಸಿದ್ದೆವು. ಆದರೂ ಅವರು ಹತ್ತನೇ ತರಗತಿಗೆ ದಾಖಲಾತಿ ಮಾಡಿರಲಿಲ್ಲ. ನಮ್ಮ ಪತ್ರಗಳಿಗೂ ಉತ್ತರಿಸಲಿಲ್ಲ. ನಂತರದಲ್ಲಿ ಶುಲ್ಕ ಪಾವತಿಸದ ಕಾರಣ ಪ್ರವೇಶಾತಿ ನೀಡಿಲ್ಲ ಎಂದು ಹೇಳಿ ಗಾಬರಿಗೊಳಿಸಿದರು” ಎಂದು ಮುಖ್ಯಶಿಕ್ಷಕಿ ಹೇಳಿಕೆ ನೀಡಿದ್ದರು.

ಅಂದಹಾಗೆ ಗ್ರೀಷ್ಮಾ ಉತ್ತಮ ಫಲಿತಾಂಶವನ್ನು ಗಳಿಸುವ ಮೂಲಕ ಭರವಸೆಯಾಗಿ ಹೊಮ್ಮಿದ್ದಾರೆ. “ನಾನು 625ಕ್ಕೆ 615ಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುವ ಭರವಸೆ ಹೊಂದಿದ್ದೆ. ಆದರೆ ಪರೀಕ್ಷೆಯಲ್ಲಿ ಕೆಲವೊಂದು ಗೊಂದಲಕ್ಕೊಳಗಾಗಿ ಕೆಲವು ಅಂಕಗಳನ್ನು ಕಳೆದುಕೊಂಡೆ” ಎಂದಿದ್ದಾರೆ. ಆದರೆ ಅಂತಿಮವಾಗಿ ಗ್ರೀಷ್ಮಾ 599 ಅಂಕಗಳನ್ನು ಗಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಮುಂದಿನ ಕಲಿಕೆಯನ್ನು ಮುಂದುವರಿಸುವುದಾಗಿ ಗ್ರೀಷ್ಮಾ ಹೇಳಿದ್ದಾರೆ. ಅವರಿಗೆ ಹಲವರ ಸಹಕಾರವೂ ದೊರೆತಿದೆ.

ಜಿ.ಪರಮೇಶ್ವರ 50 ಸಾವಿರ ರೂ. ಪ್ರೋತ್ಸಾಹ ಧನ; ಮೆಡಿಕಲ್‌ ಸೀಟ್ ಭರವಸೆ

ಕೊರಟಗೆರೆ ಕ್ಷೇತ್ರದ ಶಾಸಕ, ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ವಿದ್ಯಾರ್ಥಿನಿಯ ಕುಟುಂಬವನ್ನು ಮಂಗಳವಾರ ಭೇಟಿಯಾಗಿ, ಐವತ್ತು ಸಾವಿರ ರೂ. ಪ್ರೋತ್ಸಾಹಧನವನ್ನು ನೀಡಿ, ವಿದ್ಯಾರ್ಥಿಯನ್ನು ಪ್ರೋತ್ಸಾಹಿಸಿದ್ದಾರೆ.

“ವಿದ್ಯಾಭ್ಯಾಸವನ್ನು ಇದೇ ರೀತಿಯಲ್ಲಿ ಮುಂದುವರಿಸಬೇಕು” ಎಂದು ಕಿವಿ ಮಾತನ್ನು ಹೇಳಿರುವ ಶಾಸಕರು ಇದೇ ಸಂದರ್ಭದಲ್ಲಿ ಪ್ರೋತ್ಸಾಹಧನವಾಗಿ ವಿದ್ಯಾರ್ಥಿನಿಗೆ 50 ಸಾವಿರ ರೂ.ಗಳ ಚೆಕ್ ನೀಡಿ ನೆರವಾಗಿದ್ದಾರೆ. ಜೊತೆಗೆ ಪಿಯುಸಿ ನಂತರ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಉಚಿತವಾಗಿ ಪ್ರವೇಶಾತಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿರಿ: ನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...