Homeಕರ್ನಾಟಕಶಾಲಾ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ಟಾಪರ್‌‌

ಶಾಲಾ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ಟಾಪರ್‌‌

ಮೂಡಬಿದಿರೆಯ ಆಳ್ವಾಸ್ ಶಾಲೆಯಲ್ಲಿ ಗ್ರೀಷ್ಮಾ ವ್ಯಾಸಂಗ ಮಾಡುತ್ತಿದ್ದಳು. ಪೋಷಕರು ಶುಲ್ಕ ಪಾವತಿಸದ ಕಾರಣ ಶಾಲಾ ಪ್ರವೇಶಾತಿ ನಿರಾಕರಿಸಲಾಗಿತ್ತು. ತೇರ್ಗಡೆಯಾಗಿರುವ ವಿದ್ಯಾರ್ಥಿಗೆ 50,000 ರೂ. ಪ್ರೋತ್ಸಾಹಧನವನ್ನು ಡಾ.ಜಿ.ಪರಮೇಶ್ವರ ನೀಡಿದ್ದಾರೆ.

- Advertisement -
- Advertisement -

ಶಾಲೆಯ ಶುಲ್ಕ ಪಾವತಿಸಲಾಗದೆ, ಶಾಲೆಯವರು ಪರೀಕ್ಷೆಯ ಪ್ರವೇಶಪತ್ರ ನೀಡದ ಕಾರಣ ಹತ್ತನೇ ತರಗತಿ ಪರೀಕ್ಷೆಯನ್ನು ಬರೆಯಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಕೊನೆಗೂ ಪೂರಕ ಪರೀಕ್ಷೆಯನ್ನು ಎದುರಿಸಿ ಶಾಲೆಗೆ ಟಾಪರ್‌ ಆಗಿ ತೇರ್ಗಡೆಯಾಗಿದ್ದಾಳೆ.

ಕೊರಟಗೆರೆ ಪಟ್ಟಣದ ಬಿ.ಆರ್‌.ನರಸಿಂಹಮೂರ್ತಿ, ಟಿ.ಪಿ.ಪದ್ಮಾವತಮ್ಮ ದಂಪತಿಯ ಹದಿನಾರು ವರ್ಷಗಳ ಪುತ್ರಿ ಗ್ರೀಷ್ಮಾ ನಾಯಕ್‌, ಪರೀಕ್ಷೆ ಬರೆಯಲು ಅವಕಾಶ ಸಿಗದೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಕೋವಿಡ್ ಸಂದರ್ಭದಲ್ಲಿ ಘಟಿಸಿದ ಈ ಪ್ರಕರಣ ರಾಜ್ಯ ಮಟ್ಟದ ಸುದ್ದಿಯಾಗಿತ್ತು.

ರೈತರ ಮಗಳಾದ ಗ್ರೀಷ್ಮಾ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್‌ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಗ್ರೀಷ್ಮಾ ಹೇಳುವಂತೆ, “ಕೋವಿಡ್ ಕಾರಣದಿಂದಾಗಿ ಶಾಲೆಗೆ ಹಾಜರಾಗಲು ಹಾಗೂ ಶುಲ್ಕವನ್ನು ಪಾವತಿಸಲು ಸಾಧ್ಯವಾಗಿರಲಿಲ್ಲ. ನನ್ನ ಸಹೋದರಿ ಕೀರ್ತನಾ, ಕೋರ್‌ ಸಬ್ಜೆಕ್ಟ್‌ ಕಲಿಕೆಗೆ ಸಹಕರಿಸಿದಳು. ಪರೀಕ್ಷೆಗೆ ಮೂರು ತಿಂಗಳು ಇರುವಾಗ ಭಾಷಾ ವಿಷಯಗಳ ಓದು ಆರಂಭಿಸಿದ್ದೆ. ಆದರೆ ನನ್ನ ಹೆಸರು ಶಾಲಾ ದಾಖಲಾತಿಯಲ್ಲಿಯೇ ಇರಲಿಲ್ಲ.”

ಗ್ರೀಷ್ಮಾ ಆಳ್ವಾಸ್‌ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು. ಗ್ರೀಷ್ಮಾ ಕುಟುಂಬ ಶಾಲಾ ಶುಲ್ಕವನ್ನು ಪಾವತಿಸಿಲ್ಲ ಎಂದು ಹತ್ತನೇ ತರಗತಿಯ ದಾಖಲಾತಿಯಲ್ಲಿ ಸೇರಿಸಿರಲಿಲ್ಲ. ಹೀಗಾಗಿ ಹತ್ತನೇ ತರಗತಿಯ ಪ್ರವೇಶಾತಿಗೂ ಅವಕಾಶವಿರಲಿಲ್ಲ.

“ಶುಲ್ಕ ಪಾವತಿಗೆ ಹೆಚ್ಚುವರಿ ಸಮಯವನ್ನು ಶಾಲಾ ನಿರ್ವಹಣಾ ಮಂಡಳಿ ನಮಗೆ ನೀಡಲಿಲ್ಲ. ಗ್ರೀಷ್ಮಾ 9ನೇ ತರಗತಿಯಲ್ಲಿ ಶೇ .96 ಅಂಕ ಗಳಿಸಿದ್ದರೂ ಹತ್ತನೇ ತರಗತಿಗೆ ಪ್ರವೇಶವನ್ನು ನೀಡಿಲ್ಲ” ಎಂದು ಪೋಷಕರು ಆರೋಪಿಸಿದ್ದರು.

ಡಿಡಿಪಿಐ ಅವರಲ್ಲಿಯೂ ಪೋಷಕರು ಮೊರೆ ಇಟ್ಟಾಗ ಪ್ರಕರಣ ಅಂದಿನ ಪ್ರಾಥಮಿಕ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಅವರ ತನಕ ಹೋಗಿತ್ತು. ಇದೇ ರೀತಿಯ ಪ್ರಕರಣಗಳು ಎಲ್ಲೆಡೆ ವರದಿಯಾದಾಗ ಶುಲ್ಕ ಪಾವತಿಯನ್ನು ಮುಂದಿಟ್ಟುಕೊಂಡು ಪರೀಕ್ಷಾ ಪ್ರವೇಶಾತಿಯನ್ನು ನಿರಾಕರಿಸುವಂತಿಲ್ಲ ಎಂದು ಆದೇಶಿಸಿದ್ದರು.

ವಿದ್ಯಾರ್ಥಿನಿ ಗ್ರೀಷ್ಮಾ

ಅಲ್ಲದೇ ಗ್ರೀಷ್ಮಾ ಅವರ ಕುಟುಂಬವನ್ನು ಸುರೇಶ್‌ ಕುಮಾರ್‌ ಭೇಟಿಯಾಗದಿದರು. ಹೊಸ ಅಭ್ಯರ್ಥಿಯನ್ನಾಗಿಯೇ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದರು. ಗ್ರೀಷ್ಮಾ ಅವರ ಓದಿನ ಖುಷಿಯನ್ನು ಸುರೇಶ್ ಕುಮಾರ್ ಪ್ರೋತ್ಸಾಹಿಸಿದ್ದರು.

“ಸಚಿವರು ನಮ್ಮ ಮನೆಗೆ ಬಂದ ಬಳಿಕ ಶಾಲೆಯವರು ನನ್ನ ಹೆಸರನ್ನು ಬೋರ್ಡ್ ಪರೀಕ್ಷೆಗೆ ನಮೂದಿಸಿದ್ದರು. ಹೀಗಾಗಿ ಮೊದಲ ಭಾರಿಗೆ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಯಾಗಿ ಪೂರಕ ಪರೀಕ್ಷೆಯಲ್ಲಿ ನನ್ನನ್ನು ಪರಿಗಣಿಸಲಾಗಿತ್ತು” ಎಂದು ಗ್ರೀಷ್ಮಾ ಹೇಳಿದ್ದಾರೆ.

ಇದನ್ನೂ ಓದಿರಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

ಆಳ್ವಾಸ್‌ ಶಾಲೆಯ ಮುಖ್ಯಶಿಕ್ಷಕಿ ವಿಜಯಾ ಟಿ.ಮೂರ್ತಿ ಅವರು, “ಗ್ರೀಷ್ಮಾ ಪೋಷಕರು ನಮ್ಮ ಸಂಪರ್ಕದಲ್ಲಿ ಇರಲಿಲ್ಲ” ಎಂದು ಆರೋಪಿಸಿದ್ದರು. “ನಾವು ಪೋಷಕರಿಗೆ ಪತ್ರವನ್ನು ಕಳುಹಿಸಿದ್ದೆವು. ಆದರೂ ಅವರು ಹತ್ತನೇ ತರಗತಿಗೆ ದಾಖಲಾತಿ ಮಾಡಿರಲಿಲ್ಲ. ನಮ್ಮ ಪತ್ರಗಳಿಗೂ ಉತ್ತರಿಸಲಿಲ್ಲ. ನಂತರದಲ್ಲಿ ಶುಲ್ಕ ಪಾವತಿಸದ ಕಾರಣ ಪ್ರವೇಶಾತಿ ನೀಡಿಲ್ಲ ಎಂದು ಹೇಳಿ ಗಾಬರಿಗೊಳಿಸಿದರು” ಎಂದು ಮುಖ್ಯಶಿಕ್ಷಕಿ ಹೇಳಿಕೆ ನೀಡಿದ್ದರು.

ಅಂದಹಾಗೆ ಗ್ರೀಷ್ಮಾ ಉತ್ತಮ ಫಲಿತಾಂಶವನ್ನು ಗಳಿಸುವ ಮೂಲಕ ಭರವಸೆಯಾಗಿ ಹೊಮ್ಮಿದ್ದಾರೆ. “ನಾನು 625ಕ್ಕೆ 615ಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುವ ಭರವಸೆ ಹೊಂದಿದ್ದೆ. ಆದರೆ ಪರೀಕ್ಷೆಯಲ್ಲಿ ಕೆಲವೊಂದು ಗೊಂದಲಕ್ಕೊಳಗಾಗಿ ಕೆಲವು ಅಂಕಗಳನ್ನು ಕಳೆದುಕೊಂಡೆ” ಎಂದಿದ್ದಾರೆ. ಆದರೆ ಅಂತಿಮವಾಗಿ ಗ್ರೀಷ್ಮಾ 599 ಅಂಕಗಳನ್ನು ಗಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಮುಂದಿನ ಕಲಿಕೆಯನ್ನು ಮುಂದುವರಿಸುವುದಾಗಿ ಗ್ರೀಷ್ಮಾ ಹೇಳಿದ್ದಾರೆ. ಅವರಿಗೆ ಹಲವರ ಸಹಕಾರವೂ ದೊರೆತಿದೆ.

ಜಿ.ಪರಮೇಶ್ವರ 50 ಸಾವಿರ ರೂ. ಪ್ರೋತ್ಸಾಹ ಧನ; ಮೆಡಿಕಲ್‌ ಸೀಟ್ ಭರವಸೆ

ಕೊರಟಗೆರೆ ಕ್ಷೇತ್ರದ ಶಾಸಕ, ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ವಿದ್ಯಾರ್ಥಿನಿಯ ಕುಟುಂಬವನ್ನು ಮಂಗಳವಾರ ಭೇಟಿಯಾಗಿ, ಐವತ್ತು ಸಾವಿರ ರೂ. ಪ್ರೋತ್ಸಾಹಧನವನ್ನು ನೀಡಿ, ವಿದ್ಯಾರ್ಥಿಯನ್ನು ಪ್ರೋತ್ಸಾಹಿಸಿದ್ದಾರೆ.

“ವಿದ್ಯಾಭ್ಯಾಸವನ್ನು ಇದೇ ರೀತಿಯಲ್ಲಿ ಮುಂದುವರಿಸಬೇಕು” ಎಂದು ಕಿವಿ ಮಾತನ್ನು ಹೇಳಿರುವ ಶಾಸಕರು ಇದೇ ಸಂದರ್ಭದಲ್ಲಿ ಪ್ರೋತ್ಸಾಹಧನವಾಗಿ ವಿದ್ಯಾರ್ಥಿನಿಗೆ 50 ಸಾವಿರ ರೂ.ಗಳ ಚೆಕ್ ನೀಡಿ ನೆರವಾಗಿದ್ದಾರೆ. ಜೊತೆಗೆ ಪಿಯುಸಿ ನಂತರ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಉಚಿತವಾಗಿ ಪ್ರವೇಶಾತಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿರಿ: ನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...