Homeಕರ್ನಾಟಕಶಾಲಾ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ಟಾಪರ್‌‌

ಶಾಲಾ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ಟಾಪರ್‌‌

ಮೂಡಬಿದಿರೆಯ ಆಳ್ವಾಸ್ ಶಾಲೆಯಲ್ಲಿ ಗ್ರೀಷ್ಮಾ ವ್ಯಾಸಂಗ ಮಾಡುತ್ತಿದ್ದಳು. ಪೋಷಕರು ಶುಲ್ಕ ಪಾವತಿಸದ ಕಾರಣ ಶಾಲಾ ಪ್ರವೇಶಾತಿ ನಿರಾಕರಿಸಲಾಗಿತ್ತು. ತೇರ್ಗಡೆಯಾಗಿರುವ ವಿದ್ಯಾರ್ಥಿಗೆ 50,000 ರೂ. ಪ್ರೋತ್ಸಾಹಧನವನ್ನು ಡಾ.ಜಿ.ಪರಮೇಶ್ವರ ನೀಡಿದ್ದಾರೆ.

- Advertisement -
- Advertisement -

ಶಾಲೆಯ ಶುಲ್ಕ ಪಾವತಿಸಲಾಗದೆ, ಶಾಲೆಯವರು ಪರೀಕ್ಷೆಯ ಪ್ರವೇಶಪತ್ರ ನೀಡದ ಕಾರಣ ಹತ್ತನೇ ತರಗತಿ ಪರೀಕ್ಷೆಯನ್ನು ಬರೆಯಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಕೊನೆಗೂ ಪೂರಕ ಪರೀಕ್ಷೆಯನ್ನು ಎದುರಿಸಿ ಶಾಲೆಗೆ ಟಾಪರ್‌ ಆಗಿ ತೇರ್ಗಡೆಯಾಗಿದ್ದಾಳೆ.

ಕೊರಟಗೆರೆ ಪಟ್ಟಣದ ಬಿ.ಆರ್‌.ನರಸಿಂಹಮೂರ್ತಿ, ಟಿ.ಪಿ.ಪದ್ಮಾವತಮ್ಮ ದಂಪತಿಯ ಹದಿನಾರು ವರ್ಷಗಳ ಪುತ್ರಿ ಗ್ರೀಷ್ಮಾ ನಾಯಕ್‌, ಪರೀಕ್ಷೆ ಬರೆಯಲು ಅವಕಾಶ ಸಿಗದೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಕೋವಿಡ್ ಸಂದರ್ಭದಲ್ಲಿ ಘಟಿಸಿದ ಈ ಪ್ರಕರಣ ರಾಜ್ಯ ಮಟ್ಟದ ಸುದ್ದಿಯಾಗಿತ್ತು.

ರೈತರ ಮಗಳಾದ ಗ್ರೀಷ್ಮಾ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್‌ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಗ್ರೀಷ್ಮಾ ಹೇಳುವಂತೆ, “ಕೋವಿಡ್ ಕಾರಣದಿಂದಾಗಿ ಶಾಲೆಗೆ ಹಾಜರಾಗಲು ಹಾಗೂ ಶುಲ್ಕವನ್ನು ಪಾವತಿಸಲು ಸಾಧ್ಯವಾಗಿರಲಿಲ್ಲ. ನನ್ನ ಸಹೋದರಿ ಕೀರ್ತನಾ, ಕೋರ್‌ ಸಬ್ಜೆಕ್ಟ್‌ ಕಲಿಕೆಗೆ ಸಹಕರಿಸಿದಳು. ಪರೀಕ್ಷೆಗೆ ಮೂರು ತಿಂಗಳು ಇರುವಾಗ ಭಾಷಾ ವಿಷಯಗಳ ಓದು ಆರಂಭಿಸಿದ್ದೆ. ಆದರೆ ನನ್ನ ಹೆಸರು ಶಾಲಾ ದಾಖಲಾತಿಯಲ್ಲಿಯೇ ಇರಲಿಲ್ಲ.”

ಗ್ರೀಷ್ಮಾ ಆಳ್ವಾಸ್‌ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು. ಗ್ರೀಷ್ಮಾ ಕುಟುಂಬ ಶಾಲಾ ಶುಲ್ಕವನ್ನು ಪಾವತಿಸಿಲ್ಲ ಎಂದು ಹತ್ತನೇ ತರಗತಿಯ ದಾಖಲಾತಿಯಲ್ಲಿ ಸೇರಿಸಿರಲಿಲ್ಲ. ಹೀಗಾಗಿ ಹತ್ತನೇ ತರಗತಿಯ ಪ್ರವೇಶಾತಿಗೂ ಅವಕಾಶವಿರಲಿಲ್ಲ.

“ಶುಲ್ಕ ಪಾವತಿಗೆ ಹೆಚ್ಚುವರಿ ಸಮಯವನ್ನು ಶಾಲಾ ನಿರ್ವಹಣಾ ಮಂಡಳಿ ನಮಗೆ ನೀಡಲಿಲ್ಲ. ಗ್ರೀಷ್ಮಾ 9ನೇ ತರಗತಿಯಲ್ಲಿ ಶೇ .96 ಅಂಕ ಗಳಿಸಿದ್ದರೂ ಹತ್ತನೇ ತರಗತಿಗೆ ಪ್ರವೇಶವನ್ನು ನೀಡಿಲ್ಲ” ಎಂದು ಪೋಷಕರು ಆರೋಪಿಸಿದ್ದರು.

ಡಿಡಿಪಿಐ ಅವರಲ್ಲಿಯೂ ಪೋಷಕರು ಮೊರೆ ಇಟ್ಟಾಗ ಪ್ರಕರಣ ಅಂದಿನ ಪ್ರಾಥಮಿಕ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಅವರ ತನಕ ಹೋಗಿತ್ತು. ಇದೇ ರೀತಿಯ ಪ್ರಕರಣಗಳು ಎಲ್ಲೆಡೆ ವರದಿಯಾದಾಗ ಶುಲ್ಕ ಪಾವತಿಯನ್ನು ಮುಂದಿಟ್ಟುಕೊಂಡು ಪರೀಕ್ಷಾ ಪ್ರವೇಶಾತಿಯನ್ನು ನಿರಾಕರಿಸುವಂತಿಲ್ಲ ಎಂದು ಆದೇಶಿಸಿದ್ದರು.

ವಿದ್ಯಾರ್ಥಿನಿ ಗ್ರೀಷ್ಮಾ

ಅಲ್ಲದೇ ಗ್ರೀಷ್ಮಾ ಅವರ ಕುಟುಂಬವನ್ನು ಸುರೇಶ್‌ ಕುಮಾರ್‌ ಭೇಟಿಯಾಗದಿದರು. ಹೊಸ ಅಭ್ಯರ್ಥಿಯನ್ನಾಗಿಯೇ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದರು. ಗ್ರೀಷ್ಮಾ ಅವರ ಓದಿನ ಖುಷಿಯನ್ನು ಸುರೇಶ್ ಕುಮಾರ್ ಪ್ರೋತ್ಸಾಹಿಸಿದ್ದರು.

“ಸಚಿವರು ನಮ್ಮ ಮನೆಗೆ ಬಂದ ಬಳಿಕ ಶಾಲೆಯವರು ನನ್ನ ಹೆಸರನ್ನು ಬೋರ್ಡ್ ಪರೀಕ್ಷೆಗೆ ನಮೂದಿಸಿದ್ದರು. ಹೀಗಾಗಿ ಮೊದಲ ಭಾರಿಗೆ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಯಾಗಿ ಪೂರಕ ಪರೀಕ್ಷೆಯಲ್ಲಿ ನನ್ನನ್ನು ಪರಿಗಣಿಸಲಾಗಿತ್ತು” ಎಂದು ಗ್ರೀಷ್ಮಾ ಹೇಳಿದ್ದಾರೆ.

ಇದನ್ನೂ ಓದಿರಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

ಆಳ್ವಾಸ್‌ ಶಾಲೆಯ ಮುಖ್ಯಶಿಕ್ಷಕಿ ವಿಜಯಾ ಟಿ.ಮೂರ್ತಿ ಅವರು, “ಗ್ರೀಷ್ಮಾ ಪೋಷಕರು ನಮ್ಮ ಸಂಪರ್ಕದಲ್ಲಿ ಇರಲಿಲ್ಲ” ಎಂದು ಆರೋಪಿಸಿದ್ದರು. “ನಾವು ಪೋಷಕರಿಗೆ ಪತ್ರವನ್ನು ಕಳುಹಿಸಿದ್ದೆವು. ಆದರೂ ಅವರು ಹತ್ತನೇ ತರಗತಿಗೆ ದಾಖಲಾತಿ ಮಾಡಿರಲಿಲ್ಲ. ನಮ್ಮ ಪತ್ರಗಳಿಗೂ ಉತ್ತರಿಸಲಿಲ್ಲ. ನಂತರದಲ್ಲಿ ಶುಲ್ಕ ಪಾವತಿಸದ ಕಾರಣ ಪ್ರವೇಶಾತಿ ನೀಡಿಲ್ಲ ಎಂದು ಹೇಳಿ ಗಾಬರಿಗೊಳಿಸಿದರು” ಎಂದು ಮುಖ್ಯಶಿಕ್ಷಕಿ ಹೇಳಿಕೆ ನೀಡಿದ್ದರು.

ಅಂದಹಾಗೆ ಗ್ರೀಷ್ಮಾ ಉತ್ತಮ ಫಲಿತಾಂಶವನ್ನು ಗಳಿಸುವ ಮೂಲಕ ಭರವಸೆಯಾಗಿ ಹೊಮ್ಮಿದ್ದಾರೆ. “ನಾನು 625ಕ್ಕೆ 615ಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುವ ಭರವಸೆ ಹೊಂದಿದ್ದೆ. ಆದರೆ ಪರೀಕ್ಷೆಯಲ್ಲಿ ಕೆಲವೊಂದು ಗೊಂದಲಕ್ಕೊಳಗಾಗಿ ಕೆಲವು ಅಂಕಗಳನ್ನು ಕಳೆದುಕೊಂಡೆ” ಎಂದಿದ್ದಾರೆ. ಆದರೆ ಅಂತಿಮವಾಗಿ ಗ್ರೀಷ್ಮಾ 599 ಅಂಕಗಳನ್ನು ಗಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಮುಂದಿನ ಕಲಿಕೆಯನ್ನು ಮುಂದುವರಿಸುವುದಾಗಿ ಗ್ರೀಷ್ಮಾ ಹೇಳಿದ್ದಾರೆ. ಅವರಿಗೆ ಹಲವರ ಸಹಕಾರವೂ ದೊರೆತಿದೆ.

ಜಿ.ಪರಮೇಶ್ವರ 50 ಸಾವಿರ ರೂ. ಪ್ರೋತ್ಸಾಹ ಧನ; ಮೆಡಿಕಲ್‌ ಸೀಟ್ ಭರವಸೆ

ಕೊರಟಗೆರೆ ಕ್ಷೇತ್ರದ ಶಾಸಕ, ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ವಿದ್ಯಾರ್ಥಿನಿಯ ಕುಟುಂಬವನ್ನು ಮಂಗಳವಾರ ಭೇಟಿಯಾಗಿ, ಐವತ್ತು ಸಾವಿರ ರೂ. ಪ್ರೋತ್ಸಾಹಧನವನ್ನು ನೀಡಿ, ವಿದ್ಯಾರ್ಥಿಯನ್ನು ಪ್ರೋತ್ಸಾಹಿಸಿದ್ದಾರೆ.

“ವಿದ್ಯಾಭ್ಯಾಸವನ್ನು ಇದೇ ರೀತಿಯಲ್ಲಿ ಮುಂದುವರಿಸಬೇಕು” ಎಂದು ಕಿವಿ ಮಾತನ್ನು ಹೇಳಿರುವ ಶಾಸಕರು ಇದೇ ಸಂದರ್ಭದಲ್ಲಿ ಪ್ರೋತ್ಸಾಹಧನವಾಗಿ ವಿದ್ಯಾರ್ಥಿನಿಗೆ 50 ಸಾವಿರ ರೂ.ಗಳ ಚೆಕ್ ನೀಡಿ ನೆರವಾಗಿದ್ದಾರೆ. ಜೊತೆಗೆ ಪಿಯುಸಿ ನಂತರ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಉಚಿತವಾಗಿ ಪ್ರವೇಶಾತಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿರಿ: ನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...