Homeಮುಖಪುಟಬೆನ್ನಿನ ಮೇಲೆ ‘ಭಯೋತ್ಪಾದಕ’ ಎಂದು ಕೊರೆದು ಪೊಲೀಸರಿಂದ ಚಿತ್ರಹಿಂಸೆ: ವಿಚಾರಣಾಧೀನ ಕೈದಿಯ ಆರೋಪ

ಬೆನ್ನಿನ ಮೇಲೆ ‘ಭಯೋತ್ಪಾದಕ’ ಎಂದು ಕೊರೆದು ಪೊಲೀಸರಿಂದ ಚಿತ್ರಹಿಂಸೆ: ವಿಚಾರಣಾಧೀನ ಕೈದಿಯ ಆರೋಪ

- Advertisement -
- Advertisement -

ಪಂಜಾಬ್‌ನ ಬರ್ನಾಲಾ ಜಿಲ್ಲೆಯ ವಿಚಾರಣಾಧೀನ ಕೈದಿಯೊಬ್ಬ, ಜೈಲಿನ ಸೂಪರಿಂಟೆಂಡೆಂಟ್‌ ತನ್ನ ಬೆನ್ನಿನ ಮೇಲೆ ‘ಭಯೋತ್ಪಾದಕ’ ಎಂದು ಕೊರೆದು, ಇಲ್ಲದ ಆರೋಪ ಹೊರಿಸಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಸುಖ್ಜೀಂದರ್‌ ಸಿಂಗ್‌ ರಾಂಧವಾ ಅವರು ಕೂಲಂಕುಶ ತನಿಖೆಗೆ ಆದೇಶಿಸಿದ್ದಾರೆ.

28 ವರ್ಷದ ಕರಮ್‌ಜಿತ್‌ ಸಿಂಗ್‌ ಚಿತ್ರಹಿಂಸೆಗೊಳಗಾದ ಕೈದಿ. ಕರಮ್‌ಜಿತ್‌ ಸಿಂಗ್‌ ಮೇಲೆ ಡ್ರಗ್ಸ್‌ ಮತ್ತು ಕೊಲೆ ಪ್ರಕರಣಗಳು ದಾಖಲಾಗಿದ್ದು, ಎನ್‌ಡಿಪಿಎಸ್‌ (ನಾರ್ಕೋಟಿಕ್ ಡ್ರಗ್ಸ್‌ ಮತ್ತು ಸೈಕೋಟ್ರೋಪಿಕ್‌ ಸಬ್‌ಸ್ಟೆನ್ಸಸ್‌ ಆಕ್ಟ್‌) ಅಡಿಯಲ್ಲಿ ದಾಖಲಿಸಲಾದ ಪ್ರಕರಣದ ವಿಚಾರಣೆ ಮಾನ್ಸಾ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿದೆ.

‘ಇಲ್ಲಿನ ಕೈದಿಗಳ ಸ್ಥಿತಿ ಶೋಚನೀಯವಾಗಿದೆ. ಏಡ್ಸ್‌ ಮತ್ತು ಹೆಪಟೈಟಿಸ್‌ ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಿಲ್ಲ. ಈ ಬಗ್ಗೆ ಜೈಲು ಅಧೀಕ್ಷಕರ ಹತ್ತಿರ ವಿಷಯ ಪ್ರಸ್ತಾಪಿಸಲು ಪ್ರಯತ್ನಿಸಿದಾಗ, ಅಧೀಕ್ಷಕರನ್ನು ನನ್ನನ್ನು ಹೊಡೆಯುತ್ತಿದ್ದರು’ ಎಂದು ಆರೋಪಿಸಿದ್ದಾರೆ.

ಜೈಲು ಅಧೀಕ್ಷಕ ಬಲ್‌‌ಬೀರ್‌ ಸಿಂಗ್‌ ಅವರು ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದು, ಕರಮ್‌ಜಿತ್‌ ಸಿಂಗ್‌ ’ಕಲ್ಪಿತ ಕತೆಗಳನ್ನು ಹಂಚಿಕೊಳ್ಳುವ ಅಭ್ಯಾಸವನ್ನು ಹೊಂದಿರುವ ಅಪರಾಧಿ’ ಎಂದಿದ್ದಾರೆ. ಅಲ್ಲದೆ ಕರಮ್‌ಜಿತ್ ಸಿಂಗ್ ಒಮ್ಮೆ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ ಎಂದು ಸೂಪರಿಂಟೆಂಡೆಂಟ್ ಹೇಳಿದ್ದಾರೆ.

ಉಪಮುಖ್ಯಮಂತ್ರಿ ರಾಂಧವಾ ಅವರು ಎಡಿಜಿಪಿ (ಜೈಲು) ಪಿಕೆ ಸಿನ್ಹಾ ಅವರಿಗೆ ಆಳವಾದ ವಿಚಾರಣೆ ನಡೆಸಲು ಮತ್ತು ಖೈದಿಯ ವೈದ್ಯಕೀಯ ಪರೀಕ್ಷೆಯನ್ನು ನಡೆಸುವಂತೆ ಆದೇಶಿಸಿದ್ದಾರೆ. ಹಿರಿಯ ಅಧಿಕಾರಿ – ತಜೀಂದರ್ ಸಿಂಗ್ ಮೌರ್, ಡಿಐಜಿ (ಫಿರೋಜ್‌ಪುರ) – ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ ಮತ್ತು ಇಂದು ವಿಚಾರಣೆಯನ್ನು ಪ್ರಾರಂಭಿಸಲಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅಕಾಲಿದಳದ ವಕ್ತಾರ ಮಂಜಿಂದರ್ ಸಿರ್ಸಾ ಅವರು ‘ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆ’ ಕುರಿತು ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

’ಸಿಖ್ಖರನ್ನು ಭಯೋತ್ಪಾದಕರೆಂದು ಬಣ್ಣಿಸುವುದು ಕಾಂಗ್ರೆಸ್ ಸರ್ಕಾರದ ದುರುದ್ದೇಶ! ಪಂಜಾಬ್ ಪೊಲೀಸರು ವಿಚಾರಣಾಧೀನ ಸಿಖ್ ಖೈದಿಯನ್ನು ಥಳಿಸಿ ಆತನ ಬೆನ್ನ ಮೇಲೆ ‘ಭಯೋತ್ಪಾದಕ’ ಎಂಬ ಪದವನ್ನು ಬರೆದಿದ್ದಾರೆ. ಜೈಲು ಅಧೀಕ್ಷಕರನ್ನು ತಕ್ಷಣವೇ ಅಮಾನತುಗೊಳಿಸಬೇಕು ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗಾಗಿ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತೇವೆ” ಎಂದು ಮಂಜಿಂದರ್ ಸಿರ್ಸಾ ಸಿರ್ಸಾ ಟ್ವಿಟ್ ಮಾಡಿದ್ದಾರೆ.


ಇದನ್ನೂ ಓದಿ: ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ರಾಜೀನಾಮೆ ಅಂಗೀಕರಿಸಿದ ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...