Homeಕರ್ನಾಟಕಸ್ಟನ್‌ಗನ್‌ ಬಳಸಿ ಚಿತ್ರಹಿಂಸೆ; ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಸ್ಟನ್‌ಗನ್‌ ಬಳಸಿ ಚಿತ್ರಹಿಂಸೆ; ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಅಲೀಮುಲ್ಲಾ ಬೇಗ್ ಎಂಬವರಿಗೆ ಚಿತ್ರಹಿಂಸೆ ನೀಡಿರುವ ವಿಡಿಯೊ ವೈರಲ್ ಆಗಿರುವ ಬೆನ್ನಲ್ಲೇ ಬೆಂಗಳೂರು ಪೊಲೀಸರು ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.

- Advertisement -
- Advertisement -

ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಂಡು ಈಗ ಪೊಲೀಸ್‌ ಬಂಧನದಲ್ಲಿರುವ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ವ್ಯಕ್ತಿಯೊಬ್ಬರ ಮೇಲೆ ಸ್ಟನ್‌ಗನ್‌ನಿಂದ ಹಲ್ಲೆ ನಡೆಸಿರುವ ಸಂಬಂಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಗೋರಕ್ಷಣೆಯ ಹೆಸರಿನಲ್ಲಿ ಇತ್ತೀಚೆಗೆ ಸ್ಟನ್‌ಗನ್‌ನಿಂದ ಹಲ್ಲೆ ಮಾಡಿದ್ದು, ಫೇಸ್‌ಬುಕ್‌ ಲೈವ್‌ನಲ್ಲಿ ವಿಡಿಯೊ ಹಂಚಿಕೊಳ್ಳಲಾಗಿದೆ. ಅದರ ಅನ್ವಯ ಬೆಂಗಳೂರು ಪೊಲೀಸರು ಕ್ರಮ ಜರುಗಿಸಿದ್ದಾರೆ.

ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ಜಾನುವಾರು ಸಾಗಾಟಗಾರ ಇದ್ರೀಸ್ ಪಾಷಾ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಕೆಲವೇ ದಿನಗಳಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ, ಇಂತಹದ್ದೇ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಇತ್ತೀಚೆಗೆ ಮಾರಣಾಂತಿಕವಾಗಿ ಸ್ಟನ್‌ಗನ್‌ನಿಂದ ಪುನೀತ್‌ ಮತ್ತು ಆತನ ಸಹಚರರು ಹಲ್ಲೆ ನಡೆಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 20 ರಂದು ಹೊಸೂರು ರಸ್ತೆಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಅಲೀಮುಲ್ಲಾ ಬೇಗ್ ಎಂಬ 30 ವರ್ಷದ ಯುವಕನ ಮೇಲೆ ಪುನೀತ್ ಕೆರೆಹಳ್ಳಿ ಮತ್ತು ಇತರ ಮೂವರು ಸಹಚರರು ಸ್ಟನ್ ಗನ್ ನಿಂದ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿದ್ದರು.

ಅಲೀಮುಲ್ಲಾ ಅವರ ದೂರಿನ ಆಧಾರದ ಮೇಲೆ, ಏಪ್ರಿಲ್ 6 ರಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ಹಲ್ಲೆ, ಅಕ್ರಮ ತಡೆ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಏನಿದು ಘಟನೆ?

ತಮಿಳುನಾಡಿನ ಕೃಷ್ಣಗಿರಿಗೆ ದನಗಳನ್ನು ಸಾಗಿಸುವ ಕೆಲಸಕ್ಕೆ ಅಲೀಮುಲ್ಲಾ ಅವರನ್ನು ನಿಯೋಜಿಸಲಾಗಿತ್ತು. ಅವರನ್ನು ಪುನೀತ್ ಕೆರೆಹಳ್ಳಿ ಮತ್ತು ಆತನ ಮೂವರು ಸಹಚರರಾದ ಸಂತೋಷ್, ಚೇತನ್ ಮತ್ತು ದೀಪಕ್ ಅವರು ನೈಸ್ ರಸ್ತೆಯಲ್ಲಿ ಅಡ್ಡ ಹಾಕಿದ್ದರು.

ಪುನೀತ್ ಮತ್ತು ಆತನ ಸಹಚರರು ವಾಹನದ ಚಾಲಕ ರಫೀಕ್ ಅವರ ಮೇಲೆ ಮೊದಲು ಹಲ್ಲೆ ನಡೆಸಿದ್ದರು. ದನಗಳನ್ನು ಸಾಗಿಸುತ್ತಿದ್ದ ಕಾರಣ ಅವರನ್ನು ನಿಂದಿಸಿ ಥಳಿಸಿದ್ದರು. ಬಳಿಕ ವಿದ್ಯುತ್ ಶಾಕ್ ನೀಡಲು ಸ್ಟನ್ ಗನ್ ಅನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಹಾಯಕ್ಕಾಗಿ ಅಲೀಮುಲ್ಲಾ ಬೇಗ್ ಕೂಗಿ ಕೊಂಡರೂ, ಸುಮಾರು ಒಂದು ಗಂಟೆಗಳ ಕಾಲ ಅವರಿಗೆ ಚಿತ್ರಹಿಂಸೆ ನೀಡಲಾಯಿತು ಎಂಬುದು ತಿಳಿದುಬಂದಿದೆ. ಬಳಿಕ ಪುನೀತ್ ಕೆರೆಹಳ್ಳಿ ಈ ಘಟನೆಯ ಕುರಿತು ಸಾಮಾಜಿಕ ಮಾಧ್ಯಮದ ಮೂಲಕ ಲೈವ್ ವೀಡಿಯೊ ಮಾಡಿದ್ದನು. ಟ್ರಕ್‌ನೊಳಗೆ ಉಯ್ಯಾಲೆಯಲ್ಲಿ ಮಲಗಿದ್ದ ಅಲೀಮುಲ್ಲಾಗೆ ನೋವನ್ನುಂಟು ಮಾಡಲು ಪುನೀತ್ ಕೆರೆಹಳ್ಳಿ, ಸ್ಟನ್ ಗನ್ ಅನ್ನು ಬಳಸುತ್ತಿರುವ ವೀಡಿಯೊ ವೈರಲ್ ಆಗಿದೆ.

“ನಾನು ನಿರಪರಾಧಿ ಎಂದು ಮನವಿ ಮಾಡಿದರೂ ಹಣಕಾಸಿನ ತೊಂದರೆಯಿಂದಾಗಿ ಜಾನುವಾರು ಸಾಗಾಟದ ಕೆಲಸವನ್ನು ಮಾಡಿಕೊಂಡಿದ್ದೇನೆ ಎಂದು ತಿಳಿಸಿದರೂ ಬಿಡದೆ ಪುನೀತ್‌ ಕೆರೆಹಳ್ಳಿ ಟೀಮ್ ಅಮಾನುಷವಾಗಿ ಹಲ್ಲೆ ನಡೆಸಿದನು. ಬಾಯಿಗೆ ಬಂದಂತೆ ಬೈದನು” ಎಂದು ಸಂತ್ರಸ್ತ ಅಲೀಮುಲ್ಲಾ ತಿಳಿಸಿದ್ದಾರೆ. ಘಟನೆಯ ನಂತರ ಪುನೀತ್ ಕೆರೆಹಳ್ಳಿ, ಕರ್ನಾಟಕ ಗೋಹತ್ಯೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020 ರ ಅಡಿಯಲ್ಲಿ ದೂರು ನೀಡಿದ್ದನು.

ಪುನೀತ್ ಕೆರೆಹಳ್ಳಿ ಸದ್ಯ ಸಾತನೂರು ಪೊಲೀಸರ ವಶದಲ್ಲಿದ್ದಾರೆ. ಜಾನುವಾರು ಸಾಗಣೆ ಮಾಡುತ್ತಿದ್ದ ಇದ್ರೀಸ್ ಪಾಷಾ ಎಂಬವರನ್ನು ಪುನೀತ್ ಮತ್ತು ಆತನ ಸಹಚರರು ಕೊಂದಿರುವುದಾಗಿ ಪ್ರಕರಣ ದಾಖಲಾಗಿದೆ. ಇದಾದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು. ಇದ್ರೀಸ್ ಪಾಷಾ ಅವರ ದೇಹದ ಮೇಲೂ ಸುಟ್ಟ ಗಾಯದ ಗುರುತುಗಳಿದ್ದು, ಸ್ಟನ್ ಗನ್ ಬಳಸಿರುವ ಶಂಕೆ ವ್ಯಕ್ತವಾಗಿದೆ.

ಮಾರ್ಚ್ 31ರ ರಾತ್ರಿ ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ಆ ಸಂದರ್ಭದಲ್ಲಿ ವಾಹನ ಚಾಲಕ ಇದ್ರೀಸ್ ಪಾಶ ಹತ್ಯೆಯಾಗಿದ್ದರು. ಈ ಕುರಿತು ಪುನೀತ್ ಕೆರೆಹಳ್ಳಿ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 304 ಅಡಿ ಪ್ರಕರಣ ದಾಖಲಿಸಿದ್ದರು. ಆದರೆ ಅಂದಿನಿಂದ ತಲೆ ಮರೆಸಿಕೊಂಡಿದ್ದ ಅವರು ಸೋಮವಾರ ರಾತ್ರಿ ಫೇಸ್‌ಬುಕ್‌ ಲೈವ್‌ ಬಂದು ನಾನು ಕೊಲೆ ಮಾಡಿಲ್ಲ ಎಂದಿದ್ದರು.

ಪ್ರಕರಣದ ಕುರಿತು ಪತ್ರಿಕಾಗೋಷ್ಟಿ ನಡೆಸಿದ್ದ ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿಯವರು, “ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದು, ಶೋಧಕ್ಕಾಗಿ ನಾಲ್ಕು ತಂಡಗಳನ್ನು ರಚಿಸಿದ್ದೇವೆ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಮುಸ್ಲಿಮರ ಮೇಲೆ ದೂರು ನೀಡಲು ಹಸು ಕೊಂದು ಸಿಕ್ಕಿಬಿದ್ದ ಹಿಂದೂ ಮಹಾಸಭಾ ಸದಸ್ಯರು

ಮಾರ್ಚ್ 27 ರಂದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ತೆಂಡೇಕೆರೆ ದನದ ಸಂತೆಯಲ್ಲಿ ಖರೀದಿಸಿದ ರಾಸುಗಳನ್ನು ಮಾರ್ಚ್ 31 ರ ರಾತ್ರಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸಂತೆಗಳಿಗೆ ಕೊಂಡೊಯ್ಯುತ್ತಿರುವಾಗ ಅವರನ್ನು ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ತಡೆದಿತ್ತು.  2 ಲಕ್ಷ ಹಣ ಕೊಟ್ಟರೆ ಗಾಡಿ ಬಿಡುತ್ತೇನೆ, ಇಲ್ಲದಿದ್ದರೆ ಬಿಡುವುದಿಲ್ಲ ಎಂದು ಇದ್ರಿಶ್ ಪಾಶ ಸೇರಿ ಅವರ ಜೊತೆಗಿದ್ದ ಇರ್ಫಾನ್ ಮತ್ತು ಸೈಯ್ಯದ್ ಜಹೀರ್ ಎಂಬುವವರಿಗೆ ಬೆದರಿಕೆಯೊಡ್ಡಿದ್ದಾರೆ. ಆದರೆ ಇದ್ರಿಶ್ ಪಾಶ ರಾಸುಗಳನ್ನು ಖರೀದಿಸಿದ ರಶೀದಿಗಳನ್ನು ತೋರಿಸಿ ನಾವು ಕಾನೂನು ಬದ್ಧವಾಗಿ ಖರೀದಿಸಿದ ಗೋವುಗಳನ್ನು ಸಾಗಾಟ ಮಾಡುತ್ತಿದ್ದೇವೆ, ನಿಮಗೆ ಏಕೆ  ಹಣ ಕೊಡಬೇಕೆಂದು ವಾದಿಸಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದ್ದು, ಪುನೀತ್ ಕೆರೆಹಳ್ಳಿ ಗ್ಯಾಂಗ್ ಮಾರಕಾಸ್ತ್ರಗಳಿಂದ ಇದ್ರಿಶ್ ಪಾಶ, ಇರ್ಫಾನ್ ಮತ್ತು ಸಯ್ಯದ್ ಜಹೀರ್ ಮೇಲೆ ತೀವ್ರ ಹಲ್ಲೆ ನಡೆಸಿದೆ.

ಈ ಗಲಾಟೆಯಲ್ಲಿ ಇರ್ಫಾನ್ ತಪ್ಪಿಸಿಕೊಂಡು ಓಡಿದರೆ, ಸಯ್ಯದ್ ಅಂಗಡಿಯ ಬಳಿ ಅವಿತುಕೊಂಡಾಗ ಸಿಕ್ಕಿಬಿದ್ದಿದ್ದಾರೆ. ಆದರೆ ಇದ್ರೀಸ್ ತಪ್ಪಿಸಿಕೊಳ್ಳಲು ಯತ್ನಿಸುವಾಗ ಅವರಿಗೆ ಚಿತ್ರಹಿಂಸೆ ನೀಡಲಾಗಿದೆ. ಎಲೆಕ್ಟ್ರಿಕ್ ಗನ್ ರೀತಿಯ ಸಾಧನದಿಂದ ಕರೆಂಟ್ ಶಾಕ್ ಕೊಟ್ಟಿದ್ದಾರೆ. ಅದು ಮಿತಿ ಮೀರಿದ್ದರಿಂದ ಇದ್ರಿಶ್ ಪಾಶ ಜೀವ ಬಿಟ್ಟಿದ್ದಾರೆ. ಅವರಿಗೆ ನೀಡಿದ ಕಿರುಕುಳದ ಮಾರ್ಕ್‌ಗಳು ಇದ್ರೀಶ್ ದೇಹದ ಮೇಲಿರುವುದನ್ನು ಫೋಟೊಗಳು ದೃಢೀಕರಿಸುತ್ತವೆ ಎಂದು ಇದ್ರೀಸ್ ಪಾಶ ಕುಟುಂಬಸ್ಥರು ಆರೋಪಿಸಿದ್ದಾರೆ.

ಏಳು ದಿನ ನ್ಯಾಯಾಂಗ ಬಂಧನ

ಇದ್ರೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು ಇಂದು ಸಾತನೂರು ಪೊಲೀಸರು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳನ್ನು ಏಳು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶ ನೀಡಿದೆ. ಪ್ರಧಾನ ಸಿವಿಲ್ ನ್ಯಾ.ಅಪ್ಪಣ್ಣ ಸವದಿ ಅವರು ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿ ಆದೇಶ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...