Homeಕರ್ನಾಟಕಸ್ಟನ್‌ಗನ್‌ ಬಳಸಿ ಚಿತ್ರಹಿಂಸೆ; ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಸ್ಟನ್‌ಗನ್‌ ಬಳಸಿ ಚಿತ್ರಹಿಂಸೆ; ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಅಲೀಮುಲ್ಲಾ ಬೇಗ್ ಎಂಬವರಿಗೆ ಚಿತ್ರಹಿಂಸೆ ನೀಡಿರುವ ವಿಡಿಯೊ ವೈರಲ್ ಆಗಿರುವ ಬೆನ್ನಲ್ಲೇ ಬೆಂಗಳೂರು ಪೊಲೀಸರು ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.

- Advertisement -
- Advertisement -

ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಂಡು ಈಗ ಪೊಲೀಸ್‌ ಬಂಧನದಲ್ಲಿರುವ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ವ್ಯಕ್ತಿಯೊಬ್ಬರ ಮೇಲೆ ಸ್ಟನ್‌ಗನ್‌ನಿಂದ ಹಲ್ಲೆ ನಡೆಸಿರುವ ಸಂಬಂಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಗೋರಕ್ಷಣೆಯ ಹೆಸರಿನಲ್ಲಿ ಇತ್ತೀಚೆಗೆ ಸ್ಟನ್‌ಗನ್‌ನಿಂದ ಹಲ್ಲೆ ಮಾಡಿದ್ದು, ಫೇಸ್‌ಬುಕ್‌ ಲೈವ್‌ನಲ್ಲಿ ವಿಡಿಯೊ ಹಂಚಿಕೊಳ್ಳಲಾಗಿದೆ. ಅದರ ಅನ್ವಯ ಬೆಂಗಳೂರು ಪೊಲೀಸರು ಕ್ರಮ ಜರುಗಿಸಿದ್ದಾರೆ.

ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ಜಾನುವಾರು ಸಾಗಾಟಗಾರ ಇದ್ರೀಸ್ ಪಾಷಾ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಕೆಲವೇ ದಿನಗಳಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ, ಇಂತಹದ್ದೇ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಇತ್ತೀಚೆಗೆ ಮಾರಣಾಂತಿಕವಾಗಿ ಸ್ಟನ್‌ಗನ್‌ನಿಂದ ಪುನೀತ್‌ ಮತ್ತು ಆತನ ಸಹಚರರು ಹಲ್ಲೆ ನಡೆಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 20 ರಂದು ಹೊಸೂರು ರಸ್ತೆಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಅಲೀಮುಲ್ಲಾ ಬೇಗ್ ಎಂಬ 30 ವರ್ಷದ ಯುವಕನ ಮೇಲೆ ಪುನೀತ್ ಕೆರೆಹಳ್ಳಿ ಮತ್ತು ಇತರ ಮೂವರು ಸಹಚರರು ಸ್ಟನ್ ಗನ್ ನಿಂದ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿದ್ದರು.

ಅಲೀಮುಲ್ಲಾ ಅವರ ದೂರಿನ ಆಧಾರದ ಮೇಲೆ, ಏಪ್ರಿಲ್ 6 ರಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ಹಲ್ಲೆ, ಅಕ್ರಮ ತಡೆ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಏನಿದು ಘಟನೆ?

ತಮಿಳುನಾಡಿನ ಕೃಷ್ಣಗಿರಿಗೆ ದನಗಳನ್ನು ಸಾಗಿಸುವ ಕೆಲಸಕ್ಕೆ ಅಲೀಮುಲ್ಲಾ ಅವರನ್ನು ನಿಯೋಜಿಸಲಾಗಿತ್ತು. ಅವರನ್ನು ಪುನೀತ್ ಕೆರೆಹಳ್ಳಿ ಮತ್ತು ಆತನ ಮೂವರು ಸಹಚರರಾದ ಸಂತೋಷ್, ಚೇತನ್ ಮತ್ತು ದೀಪಕ್ ಅವರು ನೈಸ್ ರಸ್ತೆಯಲ್ಲಿ ಅಡ್ಡ ಹಾಕಿದ್ದರು.

ಪುನೀತ್ ಮತ್ತು ಆತನ ಸಹಚರರು ವಾಹನದ ಚಾಲಕ ರಫೀಕ್ ಅವರ ಮೇಲೆ ಮೊದಲು ಹಲ್ಲೆ ನಡೆಸಿದ್ದರು. ದನಗಳನ್ನು ಸಾಗಿಸುತ್ತಿದ್ದ ಕಾರಣ ಅವರನ್ನು ನಿಂದಿಸಿ ಥಳಿಸಿದ್ದರು. ಬಳಿಕ ವಿದ್ಯುತ್ ಶಾಕ್ ನೀಡಲು ಸ್ಟನ್ ಗನ್ ಅನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಹಾಯಕ್ಕಾಗಿ ಅಲೀಮುಲ್ಲಾ ಬೇಗ್ ಕೂಗಿ ಕೊಂಡರೂ, ಸುಮಾರು ಒಂದು ಗಂಟೆಗಳ ಕಾಲ ಅವರಿಗೆ ಚಿತ್ರಹಿಂಸೆ ನೀಡಲಾಯಿತು ಎಂಬುದು ತಿಳಿದುಬಂದಿದೆ. ಬಳಿಕ ಪುನೀತ್ ಕೆರೆಹಳ್ಳಿ ಈ ಘಟನೆಯ ಕುರಿತು ಸಾಮಾಜಿಕ ಮಾಧ್ಯಮದ ಮೂಲಕ ಲೈವ್ ವೀಡಿಯೊ ಮಾಡಿದ್ದನು. ಟ್ರಕ್‌ನೊಳಗೆ ಉಯ್ಯಾಲೆಯಲ್ಲಿ ಮಲಗಿದ್ದ ಅಲೀಮುಲ್ಲಾಗೆ ನೋವನ್ನುಂಟು ಮಾಡಲು ಪುನೀತ್ ಕೆರೆಹಳ್ಳಿ, ಸ್ಟನ್ ಗನ್ ಅನ್ನು ಬಳಸುತ್ತಿರುವ ವೀಡಿಯೊ ವೈರಲ್ ಆಗಿದೆ.

“ನಾನು ನಿರಪರಾಧಿ ಎಂದು ಮನವಿ ಮಾಡಿದರೂ ಹಣಕಾಸಿನ ತೊಂದರೆಯಿಂದಾಗಿ ಜಾನುವಾರು ಸಾಗಾಟದ ಕೆಲಸವನ್ನು ಮಾಡಿಕೊಂಡಿದ್ದೇನೆ ಎಂದು ತಿಳಿಸಿದರೂ ಬಿಡದೆ ಪುನೀತ್‌ ಕೆರೆಹಳ್ಳಿ ಟೀಮ್ ಅಮಾನುಷವಾಗಿ ಹಲ್ಲೆ ನಡೆಸಿದನು. ಬಾಯಿಗೆ ಬಂದಂತೆ ಬೈದನು” ಎಂದು ಸಂತ್ರಸ್ತ ಅಲೀಮುಲ್ಲಾ ತಿಳಿಸಿದ್ದಾರೆ. ಘಟನೆಯ ನಂತರ ಪುನೀತ್ ಕೆರೆಹಳ್ಳಿ, ಕರ್ನಾಟಕ ಗೋಹತ್ಯೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020 ರ ಅಡಿಯಲ್ಲಿ ದೂರು ನೀಡಿದ್ದನು.

ಪುನೀತ್ ಕೆರೆಹಳ್ಳಿ ಸದ್ಯ ಸಾತನೂರು ಪೊಲೀಸರ ವಶದಲ್ಲಿದ್ದಾರೆ. ಜಾನುವಾರು ಸಾಗಣೆ ಮಾಡುತ್ತಿದ್ದ ಇದ್ರೀಸ್ ಪಾಷಾ ಎಂಬವರನ್ನು ಪುನೀತ್ ಮತ್ತು ಆತನ ಸಹಚರರು ಕೊಂದಿರುವುದಾಗಿ ಪ್ರಕರಣ ದಾಖಲಾಗಿದೆ. ಇದಾದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು. ಇದ್ರೀಸ್ ಪಾಷಾ ಅವರ ದೇಹದ ಮೇಲೂ ಸುಟ್ಟ ಗಾಯದ ಗುರುತುಗಳಿದ್ದು, ಸ್ಟನ್ ಗನ್ ಬಳಸಿರುವ ಶಂಕೆ ವ್ಯಕ್ತವಾಗಿದೆ.

ಮಾರ್ಚ್ 31ರ ರಾತ್ರಿ ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ಆ ಸಂದರ್ಭದಲ್ಲಿ ವಾಹನ ಚಾಲಕ ಇದ್ರೀಸ್ ಪಾಶ ಹತ್ಯೆಯಾಗಿದ್ದರು. ಈ ಕುರಿತು ಪುನೀತ್ ಕೆರೆಹಳ್ಳಿ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 304 ಅಡಿ ಪ್ರಕರಣ ದಾಖಲಿಸಿದ್ದರು. ಆದರೆ ಅಂದಿನಿಂದ ತಲೆ ಮರೆಸಿಕೊಂಡಿದ್ದ ಅವರು ಸೋಮವಾರ ರಾತ್ರಿ ಫೇಸ್‌ಬುಕ್‌ ಲೈವ್‌ ಬಂದು ನಾನು ಕೊಲೆ ಮಾಡಿಲ್ಲ ಎಂದಿದ್ದರು.

ಪ್ರಕರಣದ ಕುರಿತು ಪತ್ರಿಕಾಗೋಷ್ಟಿ ನಡೆಸಿದ್ದ ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿಯವರು, “ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದು, ಶೋಧಕ್ಕಾಗಿ ನಾಲ್ಕು ತಂಡಗಳನ್ನು ರಚಿಸಿದ್ದೇವೆ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಮುಸ್ಲಿಮರ ಮೇಲೆ ದೂರು ನೀಡಲು ಹಸು ಕೊಂದು ಸಿಕ್ಕಿಬಿದ್ದ ಹಿಂದೂ ಮಹಾಸಭಾ ಸದಸ್ಯರು

ಮಾರ್ಚ್ 27 ರಂದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ತೆಂಡೇಕೆರೆ ದನದ ಸಂತೆಯಲ್ಲಿ ಖರೀದಿಸಿದ ರಾಸುಗಳನ್ನು ಮಾರ್ಚ್ 31 ರ ರಾತ್ರಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸಂತೆಗಳಿಗೆ ಕೊಂಡೊಯ್ಯುತ್ತಿರುವಾಗ ಅವರನ್ನು ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ತಡೆದಿತ್ತು.  2 ಲಕ್ಷ ಹಣ ಕೊಟ್ಟರೆ ಗಾಡಿ ಬಿಡುತ್ತೇನೆ, ಇಲ್ಲದಿದ್ದರೆ ಬಿಡುವುದಿಲ್ಲ ಎಂದು ಇದ್ರಿಶ್ ಪಾಶ ಸೇರಿ ಅವರ ಜೊತೆಗಿದ್ದ ಇರ್ಫಾನ್ ಮತ್ತು ಸೈಯ್ಯದ್ ಜಹೀರ್ ಎಂಬುವವರಿಗೆ ಬೆದರಿಕೆಯೊಡ್ಡಿದ್ದಾರೆ. ಆದರೆ ಇದ್ರಿಶ್ ಪಾಶ ರಾಸುಗಳನ್ನು ಖರೀದಿಸಿದ ರಶೀದಿಗಳನ್ನು ತೋರಿಸಿ ನಾವು ಕಾನೂನು ಬದ್ಧವಾಗಿ ಖರೀದಿಸಿದ ಗೋವುಗಳನ್ನು ಸಾಗಾಟ ಮಾಡುತ್ತಿದ್ದೇವೆ, ನಿಮಗೆ ಏಕೆ  ಹಣ ಕೊಡಬೇಕೆಂದು ವಾದಿಸಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದ್ದು, ಪುನೀತ್ ಕೆರೆಹಳ್ಳಿ ಗ್ಯಾಂಗ್ ಮಾರಕಾಸ್ತ್ರಗಳಿಂದ ಇದ್ರಿಶ್ ಪಾಶ, ಇರ್ಫಾನ್ ಮತ್ತು ಸಯ್ಯದ್ ಜಹೀರ್ ಮೇಲೆ ತೀವ್ರ ಹಲ್ಲೆ ನಡೆಸಿದೆ.

ಈ ಗಲಾಟೆಯಲ್ಲಿ ಇರ್ಫಾನ್ ತಪ್ಪಿಸಿಕೊಂಡು ಓಡಿದರೆ, ಸಯ್ಯದ್ ಅಂಗಡಿಯ ಬಳಿ ಅವಿತುಕೊಂಡಾಗ ಸಿಕ್ಕಿಬಿದ್ದಿದ್ದಾರೆ. ಆದರೆ ಇದ್ರೀಸ್ ತಪ್ಪಿಸಿಕೊಳ್ಳಲು ಯತ್ನಿಸುವಾಗ ಅವರಿಗೆ ಚಿತ್ರಹಿಂಸೆ ನೀಡಲಾಗಿದೆ. ಎಲೆಕ್ಟ್ರಿಕ್ ಗನ್ ರೀತಿಯ ಸಾಧನದಿಂದ ಕರೆಂಟ್ ಶಾಕ್ ಕೊಟ್ಟಿದ್ದಾರೆ. ಅದು ಮಿತಿ ಮೀರಿದ್ದರಿಂದ ಇದ್ರಿಶ್ ಪಾಶ ಜೀವ ಬಿಟ್ಟಿದ್ದಾರೆ. ಅವರಿಗೆ ನೀಡಿದ ಕಿರುಕುಳದ ಮಾರ್ಕ್‌ಗಳು ಇದ್ರೀಶ್ ದೇಹದ ಮೇಲಿರುವುದನ್ನು ಫೋಟೊಗಳು ದೃಢೀಕರಿಸುತ್ತವೆ ಎಂದು ಇದ್ರೀಸ್ ಪಾಶ ಕುಟುಂಬಸ್ಥರು ಆರೋಪಿಸಿದ್ದಾರೆ.

ಏಳು ದಿನ ನ್ಯಾಯಾಂಗ ಬಂಧನ

ಇದ್ರೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು ಇಂದು ಸಾತನೂರು ಪೊಲೀಸರು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳನ್ನು ಏಳು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶ ನೀಡಿದೆ. ಪ್ರಧಾನ ಸಿವಿಲ್ ನ್ಯಾ.ಅಪ್ಪಣ್ಣ ಸವದಿ ಅವರು ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿ ಆದೇಶ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...