Homeಕರ್ನಾಟಕಸ್ಟನ್‌ಗನ್‌ ಬಳಸಿ ಚಿತ್ರಹಿಂಸೆ; ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಸ್ಟನ್‌ಗನ್‌ ಬಳಸಿ ಚಿತ್ರಹಿಂಸೆ; ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಅಲೀಮುಲ್ಲಾ ಬೇಗ್ ಎಂಬವರಿಗೆ ಚಿತ್ರಹಿಂಸೆ ನೀಡಿರುವ ವಿಡಿಯೊ ವೈರಲ್ ಆಗಿರುವ ಬೆನ್ನಲ್ಲೇ ಬೆಂಗಳೂರು ಪೊಲೀಸರು ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.

- Advertisement -
- Advertisement -

ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಂಡು ಈಗ ಪೊಲೀಸ್‌ ಬಂಧನದಲ್ಲಿರುವ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ವ್ಯಕ್ತಿಯೊಬ್ಬರ ಮೇಲೆ ಸ್ಟನ್‌ಗನ್‌ನಿಂದ ಹಲ್ಲೆ ನಡೆಸಿರುವ ಸಂಬಂಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಗೋರಕ್ಷಣೆಯ ಹೆಸರಿನಲ್ಲಿ ಇತ್ತೀಚೆಗೆ ಸ್ಟನ್‌ಗನ್‌ನಿಂದ ಹಲ್ಲೆ ಮಾಡಿದ್ದು, ಫೇಸ್‌ಬುಕ್‌ ಲೈವ್‌ನಲ್ಲಿ ವಿಡಿಯೊ ಹಂಚಿಕೊಳ್ಳಲಾಗಿದೆ. ಅದರ ಅನ್ವಯ ಬೆಂಗಳೂರು ಪೊಲೀಸರು ಕ್ರಮ ಜರುಗಿಸಿದ್ದಾರೆ.

ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ಜಾನುವಾರು ಸಾಗಾಟಗಾರ ಇದ್ರೀಸ್ ಪಾಷಾ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಕೆಲವೇ ದಿನಗಳಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ, ಇಂತಹದ್ದೇ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಇತ್ತೀಚೆಗೆ ಮಾರಣಾಂತಿಕವಾಗಿ ಸ್ಟನ್‌ಗನ್‌ನಿಂದ ಪುನೀತ್‌ ಮತ್ತು ಆತನ ಸಹಚರರು ಹಲ್ಲೆ ನಡೆಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 20 ರಂದು ಹೊಸೂರು ರಸ್ತೆಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಅಲೀಮುಲ್ಲಾ ಬೇಗ್ ಎಂಬ 30 ವರ್ಷದ ಯುವಕನ ಮೇಲೆ ಪುನೀತ್ ಕೆರೆಹಳ್ಳಿ ಮತ್ತು ಇತರ ಮೂವರು ಸಹಚರರು ಸ್ಟನ್ ಗನ್ ನಿಂದ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿದ್ದರು.

ಅಲೀಮುಲ್ಲಾ ಅವರ ದೂರಿನ ಆಧಾರದ ಮೇಲೆ, ಏಪ್ರಿಲ್ 6 ರಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ಹಲ್ಲೆ, ಅಕ್ರಮ ತಡೆ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಏನಿದು ಘಟನೆ?

ತಮಿಳುನಾಡಿನ ಕೃಷ್ಣಗಿರಿಗೆ ದನಗಳನ್ನು ಸಾಗಿಸುವ ಕೆಲಸಕ್ಕೆ ಅಲೀಮುಲ್ಲಾ ಅವರನ್ನು ನಿಯೋಜಿಸಲಾಗಿತ್ತು. ಅವರನ್ನು ಪುನೀತ್ ಕೆರೆಹಳ್ಳಿ ಮತ್ತು ಆತನ ಮೂವರು ಸಹಚರರಾದ ಸಂತೋಷ್, ಚೇತನ್ ಮತ್ತು ದೀಪಕ್ ಅವರು ನೈಸ್ ರಸ್ತೆಯಲ್ಲಿ ಅಡ್ಡ ಹಾಕಿದ್ದರು.

ಪುನೀತ್ ಮತ್ತು ಆತನ ಸಹಚರರು ವಾಹನದ ಚಾಲಕ ರಫೀಕ್ ಅವರ ಮೇಲೆ ಮೊದಲು ಹಲ್ಲೆ ನಡೆಸಿದ್ದರು. ದನಗಳನ್ನು ಸಾಗಿಸುತ್ತಿದ್ದ ಕಾರಣ ಅವರನ್ನು ನಿಂದಿಸಿ ಥಳಿಸಿದ್ದರು. ಬಳಿಕ ವಿದ್ಯುತ್ ಶಾಕ್ ನೀಡಲು ಸ್ಟನ್ ಗನ್ ಅನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಹಾಯಕ್ಕಾಗಿ ಅಲೀಮುಲ್ಲಾ ಬೇಗ್ ಕೂಗಿ ಕೊಂಡರೂ, ಸುಮಾರು ಒಂದು ಗಂಟೆಗಳ ಕಾಲ ಅವರಿಗೆ ಚಿತ್ರಹಿಂಸೆ ನೀಡಲಾಯಿತು ಎಂಬುದು ತಿಳಿದುಬಂದಿದೆ. ಬಳಿಕ ಪುನೀತ್ ಕೆರೆಹಳ್ಳಿ ಈ ಘಟನೆಯ ಕುರಿತು ಸಾಮಾಜಿಕ ಮಾಧ್ಯಮದ ಮೂಲಕ ಲೈವ್ ವೀಡಿಯೊ ಮಾಡಿದ್ದನು. ಟ್ರಕ್‌ನೊಳಗೆ ಉಯ್ಯಾಲೆಯಲ್ಲಿ ಮಲಗಿದ್ದ ಅಲೀಮುಲ್ಲಾಗೆ ನೋವನ್ನುಂಟು ಮಾಡಲು ಪುನೀತ್ ಕೆರೆಹಳ್ಳಿ, ಸ್ಟನ್ ಗನ್ ಅನ್ನು ಬಳಸುತ್ತಿರುವ ವೀಡಿಯೊ ವೈರಲ್ ಆಗಿದೆ.

“ನಾನು ನಿರಪರಾಧಿ ಎಂದು ಮನವಿ ಮಾಡಿದರೂ ಹಣಕಾಸಿನ ತೊಂದರೆಯಿಂದಾಗಿ ಜಾನುವಾರು ಸಾಗಾಟದ ಕೆಲಸವನ್ನು ಮಾಡಿಕೊಂಡಿದ್ದೇನೆ ಎಂದು ತಿಳಿಸಿದರೂ ಬಿಡದೆ ಪುನೀತ್‌ ಕೆರೆಹಳ್ಳಿ ಟೀಮ್ ಅಮಾನುಷವಾಗಿ ಹಲ್ಲೆ ನಡೆಸಿದನು. ಬಾಯಿಗೆ ಬಂದಂತೆ ಬೈದನು” ಎಂದು ಸಂತ್ರಸ್ತ ಅಲೀಮುಲ್ಲಾ ತಿಳಿಸಿದ್ದಾರೆ. ಘಟನೆಯ ನಂತರ ಪುನೀತ್ ಕೆರೆಹಳ್ಳಿ, ಕರ್ನಾಟಕ ಗೋಹತ್ಯೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020 ರ ಅಡಿಯಲ್ಲಿ ದೂರು ನೀಡಿದ್ದನು.

ಪುನೀತ್ ಕೆರೆಹಳ್ಳಿ ಸದ್ಯ ಸಾತನೂರು ಪೊಲೀಸರ ವಶದಲ್ಲಿದ್ದಾರೆ. ಜಾನುವಾರು ಸಾಗಣೆ ಮಾಡುತ್ತಿದ್ದ ಇದ್ರೀಸ್ ಪಾಷಾ ಎಂಬವರನ್ನು ಪುನೀತ್ ಮತ್ತು ಆತನ ಸಹಚರರು ಕೊಂದಿರುವುದಾಗಿ ಪ್ರಕರಣ ದಾಖಲಾಗಿದೆ. ಇದಾದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು. ಇದ್ರೀಸ್ ಪಾಷಾ ಅವರ ದೇಹದ ಮೇಲೂ ಸುಟ್ಟ ಗಾಯದ ಗುರುತುಗಳಿದ್ದು, ಸ್ಟನ್ ಗನ್ ಬಳಸಿರುವ ಶಂಕೆ ವ್ಯಕ್ತವಾಗಿದೆ.

ಮಾರ್ಚ್ 31ರ ರಾತ್ರಿ ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ಆ ಸಂದರ್ಭದಲ್ಲಿ ವಾಹನ ಚಾಲಕ ಇದ್ರೀಸ್ ಪಾಶ ಹತ್ಯೆಯಾಗಿದ್ದರು. ಈ ಕುರಿತು ಪುನೀತ್ ಕೆರೆಹಳ್ಳಿ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 304 ಅಡಿ ಪ್ರಕರಣ ದಾಖಲಿಸಿದ್ದರು. ಆದರೆ ಅಂದಿನಿಂದ ತಲೆ ಮರೆಸಿಕೊಂಡಿದ್ದ ಅವರು ಸೋಮವಾರ ರಾತ್ರಿ ಫೇಸ್‌ಬುಕ್‌ ಲೈವ್‌ ಬಂದು ನಾನು ಕೊಲೆ ಮಾಡಿಲ್ಲ ಎಂದಿದ್ದರು.

ಪ್ರಕರಣದ ಕುರಿತು ಪತ್ರಿಕಾಗೋಷ್ಟಿ ನಡೆಸಿದ್ದ ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿಯವರು, “ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದು, ಶೋಧಕ್ಕಾಗಿ ನಾಲ್ಕು ತಂಡಗಳನ್ನು ರಚಿಸಿದ್ದೇವೆ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಮುಸ್ಲಿಮರ ಮೇಲೆ ದೂರು ನೀಡಲು ಹಸು ಕೊಂದು ಸಿಕ್ಕಿಬಿದ್ದ ಹಿಂದೂ ಮಹಾಸಭಾ ಸದಸ್ಯರು

ಮಾರ್ಚ್ 27 ರಂದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ತೆಂಡೇಕೆರೆ ದನದ ಸಂತೆಯಲ್ಲಿ ಖರೀದಿಸಿದ ರಾಸುಗಳನ್ನು ಮಾರ್ಚ್ 31 ರ ರಾತ್ರಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸಂತೆಗಳಿಗೆ ಕೊಂಡೊಯ್ಯುತ್ತಿರುವಾಗ ಅವರನ್ನು ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ತಡೆದಿತ್ತು.  2 ಲಕ್ಷ ಹಣ ಕೊಟ್ಟರೆ ಗಾಡಿ ಬಿಡುತ್ತೇನೆ, ಇಲ್ಲದಿದ್ದರೆ ಬಿಡುವುದಿಲ್ಲ ಎಂದು ಇದ್ರಿಶ್ ಪಾಶ ಸೇರಿ ಅವರ ಜೊತೆಗಿದ್ದ ಇರ್ಫಾನ್ ಮತ್ತು ಸೈಯ್ಯದ್ ಜಹೀರ್ ಎಂಬುವವರಿಗೆ ಬೆದರಿಕೆಯೊಡ್ಡಿದ್ದಾರೆ. ಆದರೆ ಇದ್ರಿಶ್ ಪಾಶ ರಾಸುಗಳನ್ನು ಖರೀದಿಸಿದ ರಶೀದಿಗಳನ್ನು ತೋರಿಸಿ ನಾವು ಕಾನೂನು ಬದ್ಧವಾಗಿ ಖರೀದಿಸಿದ ಗೋವುಗಳನ್ನು ಸಾಗಾಟ ಮಾಡುತ್ತಿದ್ದೇವೆ, ನಿಮಗೆ ಏಕೆ  ಹಣ ಕೊಡಬೇಕೆಂದು ವಾದಿಸಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದ್ದು, ಪುನೀತ್ ಕೆರೆಹಳ್ಳಿ ಗ್ಯಾಂಗ್ ಮಾರಕಾಸ್ತ್ರಗಳಿಂದ ಇದ್ರಿಶ್ ಪಾಶ, ಇರ್ಫಾನ್ ಮತ್ತು ಸಯ್ಯದ್ ಜಹೀರ್ ಮೇಲೆ ತೀವ್ರ ಹಲ್ಲೆ ನಡೆಸಿದೆ.

ಈ ಗಲಾಟೆಯಲ್ಲಿ ಇರ್ಫಾನ್ ತಪ್ಪಿಸಿಕೊಂಡು ಓಡಿದರೆ, ಸಯ್ಯದ್ ಅಂಗಡಿಯ ಬಳಿ ಅವಿತುಕೊಂಡಾಗ ಸಿಕ್ಕಿಬಿದ್ದಿದ್ದಾರೆ. ಆದರೆ ಇದ್ರೀಸ್ ತಪ್ಪಿಸಿಕೊಳ್ಳಲು ಯತ್ನಿಸುವಾಗ ಅವರಿಗೆ ಚಿತ್ರಹಿಂಸೆ ನೀಡಲಾಗಿದೆ. ಎಲೆಕ್ಟ್ರಿಕ್ ಗನ್ ರೀತಿಯ ಸಾಧನದಿಂದ ಕರೆಂಟ್ ಶಾಕ್ ಕೊಟ್ಟಿದ್ದಾರೆ. ಅದು ಮಿತಿ ಮೀರಿದ್ದರಿಂದ ಇದ್ರಿಶ್ ಪಾಶ ಜೀವ ಬಿಟ್ಟಿದ್ದಾರೆ. ಅವರಿಗೆ ನೀಡಿದ ಕಿರುಕುಳದ ಮಾರ್ಕ್‌ಗಳು ಇದ್ರೀಶ್ ದೇಹದ ಮೇಲಿರುವುದನ್ನು ಫೋಟೊಗಳು ದೃಢೀಕರಿಸುತ್ತವೆ ಎಂದು ಇದ್ರೀಸ್ ಪಾಶ ಕುಟುಂಬಸ್ಥರು ಆರೋಪಿಸಿದ್ದಾರೆ.

ಏಳು ದಿನ ನ್ಯಾಯಾಂಗ ಬಂಧನ

ಇದ್ರೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು ಇಂದು ಸಾತನೂರು ಪೊಲೀಸರು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳನ್ನು ಏಳು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶ ನೀಡಿದೆ. ಪ್ರಧಾನ ಸಿವಿಲ್ ನ್ಯಾ.ಅಪ್ಪಣ್ಣ ಸವದಿ ಅವರು ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿ ಆದೇಶ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...