Homeಕರ್ನಾಟಕಸ್ಟನ್‌ಗನ್‌ ಬಳಸಿ ಚಿತ್ರಹಿಂಸೆ; ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಸ್ಟನ್‌ಗನ್‌ ಬಳಸಿ ಚಿತ್ರಹಿಂಸೆ; ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಅಲೀಮುಲ್ಲಾ ಬೇಗ್ ಎಂಬವರಿಗೆ ಚಿತ್ರಹಿಂಸೆ ನೀಡಿರುವ ವಿಡಿಯೊ ವೈರಲ್ ಆಗಿರುವ ಬೆನ್ನಲ್ಲೇ ಬೆಂಗಳೂರು ಪೊಲೀಸರು ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.

- Advertisement -
- Advertisement -

ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಂಡು ಈಗ ಪೊಲೀಸ್‌ ಬಂಧನದಲ್ಲಿರುವ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ವ್ಯಕ್ತಿಯೊಬ್ಬರ ಮೇಲೆ ಸ್ಟನ್‌ಗನ್‌ನಿಂದ ಹಲ್ಲೆ ನಡೆಸಿರುವ ಸಂಬಂಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಗೋರಕ್ಷಣೆಯ ಹೆಸರಿನಲ್ಲಿ ಇತ್ತೀಚೆಗೆ ಸ್ಟನ್‌ಗನ್‌ನಿಂದ ಹಲ್ಲೆ ಮಾಡಿದ್ದು, ಫೇಸ್‌ಬುಕ್‌ ಲೈವ್‌ನಲ್ಲಿ ವಿಡಿಯೊ ಹಂಚಿಕೊಳ್ಳಲಾಗಿದೆ. ಅದರ ಅನ್ವಯ ಬೆಂಗಳೂರು ಪೊಲೀಸರು ಕ್ರಮ ಜರುಗಿಸಿದ್ದಾರೆ.

ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ಜಾನುವಾರು ಸಾಗಾಟಗಾರ ಇದ್ರೀಸ್ ಪಾಷಾ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಕೆಲವೇ ದಿನಗಳಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ, ಇಂತಹದ್ದೇ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಇತ್ತೀಚೆಗೆ ಮಾರಣಾಂತಿಕವಾಗಿ ಸ್ಟನ್‌ಗನ್‌ನಿಂದ ಪುನೀತ್‌ ಮತ್ತು ಆತನ ಸಹಚರರು ಹಲ್ಲೆ ನಡೆಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 20 ರಂದು ಹೊಸೂರು ರಸ್ತೆಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಅಲೀಮುಲ್ಲಾ ಬೇಗ್ ಎಂಬ 30 ವರ್ಷದ ಯುವಕನ ಮೇಲೆ ಪುನೀತ್ ಕೆರೆಹಳ್ಳಿ ಮತ್ತು ಇತರ ಮೂವರು ಸಹಚರರು ಸ್ಟನ್ ಗನ್ ನಿಂದ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿದ್ದರು.

ಅಲೀಮುಲ್ಲಾ ಅವರ ದೂರಿನ ಆಧಾರದ ಮೇಲೆ, ಏಪ್ರಿಲ್ 6 ರಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ಹಲ್ಲೆ, ಅಕ್ರಮ ತಡೆ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಏನಿದು ಘಟನೆ?

ತಮಿಳುನಾಡಿನ ಕೃಷ್ಣಗಿರಿಗೆ ದನಗಳನ್ನು ಸಾಗಿಸುವ ಕೆಲಸಕ್ಕೆ ಅಲೀಮುಲ್ಲಾ ಅವರನ್ನು ನಿಯೋಜಿಸಲಾಗಿತ್ತು. ಅವರನ್ನು ಪುನೀತ್ ಕೆರೆಹಳ್ಳಿ ಮತ್ತು ಆತನ ಮೂವರು ಸಹಚರರಾದ ಸಂತೋಷ್, ಚೇತನ್ ಮತ್ತು ದೀಪಕ್ ಅವರು ನೈಸ್ ರಸ್ತೆಯಲ್ಲಿ ಅಡ್ಡ ಹಾಕಿದ್ದರು.

ಪುನೀತ್ ಮತ್ತು ಆತನ ಸಹಚರರು ವಾಹನದ ಚಾಲಕ ರಫೀಕ್ ಅವರ ಮೇಲೆ ಮೊದಲು ಹಲ್ಲೆ ನಡೆಸಿದ್ದರು. ದನಗಳನ್ನು ಸಾಗಿಸುತ್ತಿದ್ದ ಕಾರಣ ಅವರನ್ನು ನಿಂದಿಸಿ ಥಳಿಸಿದ್ದರು. ಬಳಿಕ ವಿದ್ಯುತ್ ಶಾಕ್ ನೀಡಲು ಸ್ಟನ್ ಗನ್ ಅನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಹಾಯಕ್ಕಾಗಿ ಅಲೀಮುಲ್ಲಾ ಬೇಗ್ ಕೂಗಿ ಕೊಂಡರೂ, ಸುಮಾರು ಒಂದು ಗಂಟೆಗಳ ಕಾಲ ಅವರಿಗೆ ಚಿತ್ರಹಿಂಸೆ ನೀಡಲಾಯಿತು ಎಂಬುದು ತಿಳಿದುಬಂದಿದೆ. ಬಳಿಕ ಪುನೀತ್ ಕೆರೆಹಳ್ಳಿ ಈ ಘಟನೆಯ ಕುರಿತು ಸಾಮಾಜಿಕ ಮಾಧ್ಯಮದ ಮೂಲಕ ಲೈವ್ ವೀಡಿಯೊ ಮಾಡಿದ್ದನು. ಟ್ರಕ್‌ನೊಳಗೆ ಉಯ್ಯಾಲೆಯಲ್ಲಿ ಮಲಗಿದ್ದ ಅಲೀಮುಲ್ಲಾಗೆ ನೋವನ್ನುಂಟು ಮಾಡಲು ಪುನೀತ್ ಕೆರೆಹಳ್ಳಿ, ಸ್ಟನ್ ಗನ್ ಅನ್ನು ಬಳಸುತ್ತಿರುವ ವೀಡಿಯೊ ವೈರಲ್ ಆಗಿದೆ.

“ನಾನು ನಿರಪರಾಧಿ ಎಂದು ಮನವಿ ಮಾಡಿದರೂ ಹಣಕಾಸಿನ ತೊಂದರೆಯಿಂದಾಗಿ ಜಾನುವಾರು ಸಾಗಾಟದ ಕೆಲಸವನ್ನು ಮಾಡಿಕೊಂಡಿದ್ದೇನೆ ಎಂದು ತಿಳಿಸಿದರೂ ಬಿಡದೆ ಪುನೀತ್‌ ಕೆರೆಹಳ್ಳಿ ಟೀಮ್ ಅಮಾನುಷವಾಗಿ ಹಲ್ಲೆ ನಡೆಸಿದನು. ಬಾಯಿಗೆ ಬಂದಂತೆ ಬೈದನು” ಎಂದು ಸಂತ್ರಸ್ತ ಅಲೀಮುಲ್ಲಾ ತಿಳಿಸಿದ್ದಾರೆ. ಘಟನೆಯ ನಂತರ ಪುನೀತ್ ಕೆರೆಹಳ್ಳಿ, ಕರ್ನಾಟಕ ಗೋಹತ್ಯೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020 ರ ಅಡಿಯಲ್ಲಿ ದೂರು ನೀಡಿದ್ದನು.

ಪುನೀತ್ ಕೆರೆಹಳ್ಳಿ ಸದ್ಯ ಸಾತನೂರು ಪೊಲೀಸರ ವಶದಲ್ಲಿದ್ದಾರೆ. ಜಾನುವಾರು ಸಾಗಣೆ ಮಾಡುತ್ತಿದ್ದ ಇದ್ರೀಸ್ ಪಾಷಾ ಎಂಬವರನ್ನು ಪುನೀತ್ ಮತ್ತು ಆತನ ಸಹಚರರು ಕೊಂದಿರುವುದಾಗಿ ಪ್ರಕರಣ ದಾಖಲಾಗಿದೆ. ಇದಾದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು. ಇದ್ರೀಸ್ ಪಾಷಾ ಅವರ ದೇಹದ ಮೇಲೂ ಸುಟ್ಟ ಗಾಯದ ಗುರುತುಗಳಿದ್ದು, ಸ್ಟನ್ ಗನ್ ಬಳಸಿರುವ ಶಂಕೆ ವ್ಯಕ್ತವಾಗಿದೆ.

ಮಾರ್ಚ್ 31ರ ರಾತ್ರಿ ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ಆ ಸಂದರ್ಭದಲ್ಲಿ ವಾಹನ ಚಾಲಕ ಇದ್ರೀಸ್ ಪಾಶ ಹತ್ಯೆಯಾಗಿದ್ದರು. ಈ ಕುರಿತು ಪುನೀತ್ ಕೆರೆಹಳ್ಳಿ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 304 ಅಡಿ ಪ್ರಕರಣ ದಾಖಲಿಸಿದ್ದರು. ಆದರೆ ಅಂದಿನಿಂದ ತಲೆ ಮರೆಸಿಕೊಂಡಿದ್ದ ಅವರು ಸೋಮವಾರ ರಾತ್ರಿ ಫೇಸ್‌ಬುಕ್‌ ಲೈವ್‌ ಬಂದು ನಾನು ಕೊಲೆ ಮಾಡಿಲ್ಲ ಎಂದಿದ್ದರು.

ಪ್ರಕರಣದ ಕುರಿತು ಪತ್ರಿಕಾಗೋಷ್ಟಿ ನಡೆಸಿದ್ದ ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿಯವರು, “ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದು, ಶೋಧಕ್ಕಾಗಿ ನಾಲ್ಕು ತಂಡಗಳನ್ನು ರಚಿಸಿದ್ದೇವೆ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಮುಸ್ಲಿಮರ ಮೇಲೆ ದೂರು ನೀಡಲು ಹಸು ಕೊಂದು ಸಿಕ್ಕಿಬಿದ್ದ ಹಿಂದೂ ಮಹಾಸಭಾ ಸದಸ್ಯರು

ಮಾರ್ಚ್ 27 ರಂದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ತೆಂಡೇಕೆರೆ ದನದ ಸಂತೆಯಲ್ಲಿ ಖರೀದಿಸಿದ ರಾಸುಗಳನ್ನು ಮಾರ್ಚ್ 31 ರ ರಾತ್ರಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸಂತೆಗಳಿಗೆ ಕೊಂಡೊಯ್ಯುತ್ತಿರುವಾಗ ಅವರನ್ನು ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ತಡೆದಿತ್ತು.  2 ಲಕ್ಷ ಹಣ ಕೊಟ್ಟರೆ ಗಾಡಿ ಬಿಡುತ್ತೇನೆ, ಇಲ್ಲದಿದ್ದರೆ ಬಿಡುವುದಿಲ್ಲ ಎಂದು ಇದ್ರಿಶ್ ಪಾಶ ಸೇರಿ ಅವರ ಜೊತೆಗಿದ್ದ ಇರ್ಫಾನ್ ಮತ್ತು ಸೈಯ್ಯದ್ ಜಹೀರ್ ಎಂಬುವವರಿಗೆ ಬೆದರಿಕೆಯೊಡ್ಡಿದ್ದಾರೆ. ಆದರೆ ಇದ್ರಿಶ್ ಪಾಶ ರಾಸುಗಳನ್ನು ಖರೀದಿಸಿದ ರಶೀದಿಗಳನ್ನು ತೋರಿಸಿ ನಾವು ಕಾನೂನು ಬದ್ಧವಾಗಿ ಖರೀದಿಸಿದ ಗೋವುಗಳನ್ನು ಸಾಗಾಟ ಮಾಡುತ್ತಿದ್ದೇವೆ, ನಿಮಗೆ ಏಕೆ  ಹಣ ಕೊಡಬೇಕೆಂದು ವಾದಿಸಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದ್ದು, ಪುನೀತ್ ಕೆರೆಹಳ್ಳಿ ಗ್ಯಾಂಗ್ ಮಾರಕಾಸ್ತ್ರಗಳಿಂದ ಇದ್ರಿಶ್ ಪಾಶ, ಇರ್ಫಾನ್ ಮತ್ತು ಸಯ್ಯದ್ ಜಹೀರ್ ಮೇಲೆ ತೀವ್ರ ಹಲ್ಲೆ ನಡೆಸಿದೆ.

ಈ ಗಲಾಟೆಯಲ್ಲಿ ಇರ್ಫಾನ್ ತಪ್ಪಿಸಿಕೊಂಡು ಓಡಿದರೆ, ಸಯ್ಯದ್ ಅಂಗಡಿಯ ಬಳಿ ಅವಿತುಕೊಂಡಾಗ ಸಿಕ್ಕಿಬಿದ್ದಿದ್ದಾರೆ. ಆದರೆ ಇದ್ರೀಸ್ ತಪ್ಪಿಸಿಕೊಳ್ಳಲು ಯತ್ನಿಸುವಾಗ ಅವರಿಗೆ ಚಿತ್ರಹಿಂಸೆ ನೀಡಲಾಗಿದೆ. ಎಲೆಕ್ಟ್ರಿಕ್ ಗನ್ ರೀತಿಯ ಸಾಧನದಿಂದ ಕರೆಂಟ್ ಶಾಕ್ ಕೊಟ್ಟಿದ್ದಾರೆ. ಅದು ಮಿತಿ ಮೀರಿದ್ದರಿಂದ ಇದ್ರಿಶ್ ಪಾಶ ಜೀವ ಬಿಟ್ಟಿದ್ದಾರೆ. ಅವರಿಗೆ ನೀಡಿದ ಕಿರುಕುಳದ ಮಾರ್ಕ್‌ಗಳು ಇದ್ರೀಶ್ ದೇಹದ ಮೇಲಿರುವುದನ್ನು ಫೋಟೊಗಳು ದೃಢೀಕರಿಸುತ್ತವೆ ಎಂದು ಇದ್ರೀಸ್ ಪಾಶ ಕುಟುಂಬಸ್ಥರು ಆರೋಪಿಸಿದ್ದಾರೆ.

ಏಳು ದಿನ ನ್ಯಾಯಾಂಗ ಬಂಧನ

ಇದ್ರೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು ಇಂದು ಸಾತನೂರು ಪೊಲೀಸರು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳನ್ನು ಏಳು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶ ನೀಡಿದೆ. ಪ್ರಧಾನ ಸಿವಿಲ್ ನ್ಯಾ.ಅಪ್ಪಣ್ಣ ಸವದಿ ಅವರು ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿ ಆದೇಶ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...