Homeಮುಖಪುಟಕ್ರೈಸ್ತ ಸನ್ಯಾಸಿನಿಯರಿಗೆ ಕಿರುಕುಳ ಪ್ರಕರಣ: ಇಬ್ಬರನ್ನು ಬಂಧಿಸಿದ ರೈಲ್ವೇ ಪೊಲೀಸರು

ಕ್ರೈಸ್ತ ಸನ್ಯಾಸಿನಿಯರಿಗೆ ಕಿರುಕುಳ ಪ್ರಕರಣ: ಇಬ್ಬರನ್ನು ಬಂಧಿಸಿದ ರೈಲ್ವೇ ಪೊಲೀಸರು

- Advertisement -
- Advertisement -

ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರಿಗೆ ರೈಲಿನಲ್ಲಿ ಕಿರುಕುಳ ನೀಡಿದ್ದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉತ್ತರಪ್ರದೇಶದ ಝಾನ್ಸಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂಚಲ್ ಅರ್ಜರಿಯಾ ಮತ್ತು ಪೂರ್ಗೇಶ್ ಅಮರಿಯಾ ಬಂಧಿತ ಆರೋಪಿಗಳು.

ಮಾರ್ಚ್ 19 ರಂದು ಕ್ರೈಸ್ತ ಸನ್ಯಾಸಿನಿಯರ ಮೇಲೆ ನಡೆದ ಕಿರುಕುಳದ ಬಗ್ಗೆ ‘ಈ ಪ್ರಕರಣದಲ್ಲಿ ಪೊಲೀಸರು ಸರಿಯಾಗಿ ಕಾರ್ಯನಿರ್ವಹಿಸಿಲ್ಲ; ಜೊತೆಗೆ ಸನ್ಯಾಸಿನಿಯರನ್ನು ಬಿಟ್ಟಿದ್ದಾರೆ’ ಎಂಬುದಾಗಿ ಈ ಇಬ್ಬರು ಝಾನ್ಸಿ ರೈಲು ನಿಲ್ದಾಣದಲ್ಲಿ ಚರ್ಚಿಸುತ್ತಿದ್ದರು. ಅಲ್ಲಿಯೇ ಗಸ್ತು ತಿರುಗುತ್ತಿದ್ದ ರೈಲ್ವೇ ಪೊಲೀಸರು ಈ ಕುರಿತು ಪ್ರಶ್ನಿಸಿದ್ದಾರೆ. ನಂತರ ಪೊಲೀಸರು ಮತ್ತು ಆರೋಪಿಗಳ ಮಧ್ಯೆ ವಾಗ್ವಾದ ಆರಂಭವಾಗಿದೆ. ನಂತರ ಪೊಲೀಸರ ವಿರುದ್ಧ ಪ್ರತಿಭಟನೆ ಮಾಡುವುದಾಗಿ ಅವರು ಆಕ್ರೋಶಗೊಂಡರು. ಹಾಗಾಗಿಯೇ ಇವರನ್ನು ಬಂಧಿಸಲಾಗಿದೆ ಎಂದು ಝಾನ್ಸಿ ರೈಲ್ವೆ ಠಾಣೆಯ ಪೊಲೀಸ್ ವರಿಷ್ಠಾಧಿಕಾರಿ ನಯೀಮ್ ಖಾನ್ ಮನ್ಸೂರಿ ತಿಳಿಸಿದ್ದಾರೆ.

ಬಂಧಿತರು ಝಾನ್ಸಿಯಲ್ಲಿ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಎಂದು ತಿಳಿದುಬಂದಿದೆ.

ಮತಾಂತರ ಮಾಡುತ್ತಿದ್ದಾರೆ ಎಂದು ಶಂಕಿಸಿ ಇಬ್ಬರು ಕ್ರೈಸ್ತ ಸನ್ಯಾಸಿಗಳು (ನನ್‌ಗಳು) ಮತ್ತು ಅವರ ಇಬ್ಬರು ನವಶಿಷ್ಯೆಯರಿಗೆ ABVP ಕಾರ್ಯಕರ್ತರು ಕಿರುಕುಳ ನಿಡಿರುವ ಪ್ರಕರಣ ಮಾರ್ಚ್‌ 19ರಂದು ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿತ್ತು. ಕ್ರೈಸ್ತ ಸನ್ಯಾಸಿಗಳನ್ನು ABVP ಕಾರ್ಯಕರ್ತರು ರೈಲಿನಿಂದ ಕೆಳಗಿಳಿಸಿ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ವ್ಯಾಪಕ ಟೀಕೆಗಳು ಕೇಳಿ ಬಂದಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ‘ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರ ಮೇಲೆ ಯಾವುದೇ ದಾಳಿ ನಡೆದಿಲ್ಲ’-ಕೇಂದ್ರ ರೈಲ್ವೇ ಸಚಿವ

“ಎಬಿವಿಪಿಯ ಕೆಲವು ಸದಸ್ಯರು ಉತ್ಸಲ್ ಎಕ್ಸ್‌ಪ್ರೆಸ್‌‌ ರೈಲಿನಲ್ಲಿ ಝಾನ್ಸಿಗೆ ರಿಷಿಕೇಶದ ತರಬೇತಿ ಶಿಬಿರದಿಂದ ಹಿಂದಿರುಗುತ್ತಿದ್ದರು. ನಾಲ್ಕು ಕ್ರಿಶ್ಚಿಯನ್ ಮಹಿಳೆಯರು ದೆಹಲಿಯ ಹಜರತ್ ನಿಜಾಮುದ್ದೀನ್‌ನಿಂದ ಒಡಿಶಾದ ರೂರ್ಕೆಲಾಕ್ಕೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಅವರಲ್ಲಿ ಇಬ್ಬರು ಸನ್ಯಾಸಿಗಳು ಮತ್ತು ಇಬ್ಬರು ತರಬೇತಿಯಲ್ಲಿದ್ದವರು. ಸನ್ಯಾಸಿಗಳು ಇತರ ಮಹಿಳೆಯರೊಂದಿಗೆ ಮಾತನಾಡುತ್ತಿರುವುದರಿಂದ ಈ ಇಬ್ಬರು ಸನ್ಯಾಸಿಗಳು ಇತರ ಇಬ್ಬರು ಮಹಿಳೆಯರನ್ನು ಮತಾಂತರಕ್ಕಾಗಿ ಕರೆದೊಯ್ಯುತ್ತಿದ್ದಾರೆ ಎಂದು ಎಬಿವಿಪಿಯ ಈ ಸದಸ್ಯರು ಶಂಕಿಸಿದ್ದಾರೆ. ಈ ಅನುಮಾನದ ಮೇಲೆ ಅವರು ರೈಲ್ವೆ ಸಂರಕ್ಷಣಾ ಪಡೆಗೆ ಮಾಹಿತಿ ನೀಡಿದರು. ಹುಟ್ಟಿನಿಂದ ನಾಲ್ವರು  ಮಹಿಳೆಯರು ಕ್ರಿಶ್ಚಿಯನ್ ಆಗಿದ್ದು ಯಾವುದೇ ಮತಾಂತರದಲ್ಲಿ ಪಾಲ್ಗೊಂಡಿಲ್ಲ. ಇದರ ನಂತರ ನಾವು ನಾಲ್ವರು ಮಹಿಳೆಯರನ್ನು ಒಡಿಶಾದ ಅವರ ಸ್ವಂತ ಸ್ಥಳಕ್ಕೆ ಕಳುಹಿಸಿದ್ದೇವೆ’ ಎಂದು ನಯೀಮ್ ಖಾನ್ ಮನ್ಸೂರಿ ವಿವರವಾದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ರೈಲು ನಿಲ್ದಾಣದಲ್ಲಿ ವಿಚಾರಣೆ ನಡೆಸಿ, ಸನ್ಯಾಸಿನಿಯರು ಮತಾಂತರ ನಡೆಸುತ್ತಿಲ್ಲ ಎಂಬುದು ಸಾಬೀತಾದ ನಂತರ ಅವರನ್ನು ಕಳುಹಿಸಲಾಗಿತ್ತು.

ಈ ಕುರಿತು ಪ್ರಧಾನಿಗೆ ಪತ್ರ ಬರೆದಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಇಂತಹ ಘಟನೆಗಳು ರಾಷ್ಟ್ರದ ಗೌರವ ಮತ್ತು ಅದರ ಪ್ರಾಚೀನ ಧಾರ್ಮಿಕ ಸಹಿಷ್ಣುತೆಯನ್ನು ಕೆಡಿಸುತ್ತವೆ. ಇಂತಹ ಘಟನೆಗಳಿಗೆ ಕೇಂದ್ರ ಸರ್ಕಾರದಿಂದ ಅತ್ಯಂತ ಖಂಡನೆ ಅಗತ್ಯ. ಅಡ್ಡಿಪಡಿಸುವ, ದುರ್ಬಲಗೊಳಿಸುವ ಎಲ್ಲ ಗುಂಪುಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲು ನಿಮ್ಮ ಹಸ್ತಕ್ಷೇಪವನ್ನು ನಾನು ಕೋರುತ್ತೇನೆ. ಸಂವಿಧಾನವು ಖಾತರಿಪಡಿಸಿದ ವೈಯಕ್ತಿಕ ಹಕ್ಕುಗಳ ಸ್ವಾತಂತ್ರ‍್ಯ ಕಾಪಾಡಿ” ಎಂದು ಆಗ್ರಹಿಸಿದ್ದರು.

ಆದರೆ ಈ ಕುರಿತು ಪ್ರತಿಕ್ರಿಯಿಸದ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್, “ಕೇರಳ ಮೂಲದ ಇಬ್ಬರು ಕ್ರೈಸ್ತ ಸನ್ಯಾಸಿನಿಯರ ಮೇಲೆ ರೈಲು ಪ್ರಯಾಣದ ಸಂದರ್ಭದಲ್ಲಿ ಹಲ್ಲೆ ನಡೆದಿಲ್ಲ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ವಿಷಯದಲ್ಲಿ “ಸುಳ್ಳು ಹೇಳಿಕೆ ನೀಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದರು.


ಇದನ್ನೂ ಓದಿ: ರೈಲಿನಲ್ಲಿ ABVP ಕಾರ್ಯಕರ್ತರಿಂದ ಕ್ರೈಸ್ತ ಸನ್ಯಾಸಿನಿಗಳಿಗೆ ಕಿರುಕುಳ: ವ್ಯಾಪಕ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...