Homeಮುಖಪುಟಬುಡಕಟ್ಟು ಯುವತಿಗೆ ಚಿತ್ರಹಿಂಸೆ: ಆರೋಪಿ ಸೀಮಾ ಪಾತ್ರಾ ಬಿಜೆಪಿಯಿಂದ ಅಮಾನತು

ಬುಡಕಟ್ಟು ಯುವತಿಗೆ ಚಿತ್ರಹಿಂಸೆ: ಆರೋಪಿ ಸೀಮಾ ಪಾತ್ರಾ ಬಿಜೆಪಿಯಿಂದ ಅಮಾನತು

ಆರೋಪಿ ತನ್ನ ಫೇ‌ಸ್‌ಬುಕ್ ಖಾತೆಯಲ್ಲಿ, ‘ಬೇಟಿ ಬಚಾವೋ - ಬೇಟಿ ಪಢಾವೋ ರಾಜ್ಯ ಸಂಚಾಲಕಿ’ ಎಂದು ಬರೆದುಕೊಂಡಿದ್ದಾರೆ

- Advertisement -
- Advertisement -

ಜಾರ್ಖಂಡ್‌ನ ಬಿಜೆಪಿ ನಾಯಕಿ ಸೀಮಾ ಪಾತ್ರಾ ತಮ್ಮ ಮನೆಯ ಮನೆಕೆಲಸ ಮಾಡಿಕೊಂಡಿದ್ದ ಬುಡಕಟ್ಟು ಸಮುದಾಯದ ಯುವತಿಯನ್ನು ಕ್ರೂರವಾಗಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಆರೋಪದ ನಡುವೆ ಪಕ್ಷವೂ ಮಂಗಳವಾರ ಅವರನ್ನು ಅಮಾನತುಗೊಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸೀಮಾ ಪಾತ್ರಾ ಅವರು ಬಿಜೆಪಿಯ ಮಹಿಳಾ ವಿಭಾಗದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ. ಅವರ ಪತಿ ಮಹೇಶ್ವರ್ ಪಾತ್ರಾ ನಿವೃತ್ತ ಐಎಎಸ್ ಅಧಿಕಾರಿ ಆಗಿದ್ದಾರೆ. ಸೀಮಾ ಅವರು ತನ್ನ ಫೇ‌ಸ್‌ಬುಕ್ ಖಾತೆಯಲ್ಲಿ,“ಬೇಟಿ ಬಚಾವೋ – ಬೇಟಿ ಪಢಾವೋ ರಾಜ್ಯ ಸಂಚಾಲಕಿ ಮತ್ತು ಜಾರ್ಖಂಡ್ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ” ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತೆ ಬುಡಕಟ್ಟು ಸಮುದಾಯದ ಯುವತಿಯು ಬಿಜೆಪಿ ನಾಯಕಿ ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಹೇಳಿರುವ ವಿಡಿಯೊ ವೈರಲ್ ಆದ ನಂತರ ಜಾರ್ಖಂಡ್ ಬಿಜೆಪಿ ಮುಖ್ಯಸ್ಥ ದೀಪಕ್ ಪ್ರಕಾಶ್ ಅವರು ಸೀಮಾ ವಿರುದ್ಧ ಕ್ರಮಕ್ಕೆ ಆದೇಶಿಸಿದ್ದಾರೆ.

ಇದನ್ನೂ ಓದಿ: ‘ನಾಲಗೆಯಲ್ಲಿ ನೆಲ ಸ್ವಚ್ಛ ಮಾಡಿಸುತ್ತಿದ್ದರು’: ಬುಡಕಟ್ಟು ಯುವತಿಯನ್ನು 8 ವರ್ಷ ಬಂಧಿಸಿಟ್ಟು ಚಿತ್ರಹಿಂಸೆ ನೀಡುತ್ತಿದ್ದ BJP ನಾಯಕಿ

ವೈರಲ್ ಆಗಿರುವ ವಿಡಿಯೊದಲ್ಲಿ, ಸಂತ್ರಸ್ತೆ ಸುನೀತಾ ಅವರ ಸ್ಥಿತಿಯು ಭಯಾನಕವಾಗಿರುವುದು ಕಂಡು ಬಂದಿದೆ. ಯುವತಿಯು ಆಸ್ಪತ್ರೆಯ ಹಾಸಿಗೆಯಲ್ಲಿದ್ದು, ಅವರ ಹಲವಾರು ಹಲ್ಲುಗಳು ಕಾಣೆಯಾಗಿವೆ. ಅಲ್ಲದೆ ಅವರು ಕುಳಿತುಕೊಳ್ಳಲು ಕೂಡಾ ಅಸಮರ್ಥ ಸ್ಥಿತಿಯಲ್ಲಿದ್ದಾರೆ. ಜೊತೆಗೆ ಅವರ ದೇಹದ ಮೇಲಿನ ಗಾಯದ ಗುರುತುಗಳು ಅವರ ಮೇಲೆ ನಿರಂತರ ದಾಳಿ ನಡೆದಿರುವುದು ಸೂಚಿಸುತ್ತವೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ಸುನಿತಾ ಅವರ ಪರಿಸ್ಥಿತಿಯ ವಿಡಿಯೊ ವೈರಲ್ ಆಗುತ್ತಿದ್ದಂತೆ, ಸೀಮಾ ಪಾತ್ರ ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

29 ವರ್ಷದ ಸುನೀತಾ ಅವರು ಜಾರ್ಖಂಡ್‌ನ ಗುಮ್ಲಾ ಮೂಲದವರಾಗಿದ್ದು, ಸುಮಾರು 10 ವರ್ಷಗಳ ಹಿಂದೆ ಸೀಮಾ ಪಾತ್ರಾ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಅವರ ಮಗಳು ವತ್ಸಲಾ ಕೆಲಸದ ನಿಮಿತ್ತ ದೆಹಲಿಗೆ ತೆರಳುತ್ತಿದ್ದಾಗ ಕೂಡಾ ಸುನೀತಾ ಅವರ ಸಹಾಯಕ್ಕೆ ತೆರಳಿದ್ದರು. ಸುಮಾರು ನಾಲ್ಕು ವರ್ಷಗಳ ಹಿಂದೆ ವತ್ಸಲಾ ಮತ್ತು ಸುನೀತಾ ರಾಂಚಿಗೆ ಮರಳಿದ್ದರು.

ಇದನ್ನೂ ಓದಿ: ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ!

ಸುಮಾರು ಆರು ವರ್ಷಗಳಿಂದ ಸೀಮಾ ಪಾತ್ರಾ ಕ್ರೂರ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಯುವತಿ ಹೇಳಿದ್ದಾರೆ. ಅಪಾರ ನೋವಿನಿಂದ ಮಾತನಾಡಿದ ಅವರು, ತನಗೆ ಬಿಸಿ ತವಾ ಮತ್ತು ರಾಡ್‌ಗಳಿಂದ ಥಳಿಸಿ ಹಲ್ಲುಗಳನ್ನು ಒಡೆದುಹಾಕಲಾಯಿತು ಎಂದು ವೀಡಿಯೊಗಳಲ್ಲಿ ಹೇಳಿಕೊಂಡಿದ್ದಾರೆ. ಆಕೆಗೆ ನೆಲದ ಮೇಲಿನ ಮೂತ್ರವನ್ನು ನೆಕ್ಕುವಂತೆ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ.

ಈ ಚಿತ್ರಹಿಂಸೆಯನ್ನು ತನಗೆ ಶಿಕ್ಷೆಯಾಗಿ ನೀಡಲಾಗಿದ್ದು, ಆದರೆ ತಾನು ಮಾಡಿರುವ ತಪ್ಪುಗಳೇನು ಎಂದು ತನಗೆ ತಿಳಿದಿರಲಿಲ್ಲ ಎಂದು ಸುನೀತಾ ಹೇಳಿದ್ದಾರೆ.

ಸೀಮಾ ಪಾತ್ರಾ ಅವರ ಮಗ ಆಯುಷ್ಮಾನ್ ತನಗೆ ಸಹಾಯ ಮಾಡಿದ್ದಾನೆ ಎಂದು ಯುವತಿ ಹೇಳಿದ್ದು,“ನಾನು ಬದುಕಿರುವುದು ಅವನಿಂದ ಮಾತ್ರ” ಎಂದು ಅವರು ಹೇಳಿದ್ದಾರೆ. ತನ್ನ ಸಹೋದರಿ ಮತ್ತು ಸೋದರ ಮಾವನಿಗೆ ಈ ಕಷ್ಟಗಳನ್ನು ಹೇಳಿದ್ದರೂ ಅವರು ಇದರ ಬಗ್ಗೆ ಚಿಂತಿತರಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ. ವೀಡಿಯೊದಲ್ಲಿ ಸುನಿತಾ ಅವರು ತಾನು ಚೇತರಿಸಿಕೊಂಡರೆ ಅಧ್ಯಯನ ಮಾಡುವುದಾಗಿ ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ಮಾತು ಮರೆತ ಭಾರತ; ಊನಾ ಫೈಲ್: ಆರೆಸ್ಸೆಸ್-ಬಿಜೆಪಿಯ ದನದ ರಾಜಕಾರಣ ಮತ್ತು ದಲಿತರು

ಸೀಮಾ ಅವರು ಮಗ ಆಯುಷ್ಮಾನ್ ಅವರು ಸುನೀತಾ ಅವರ ಪರಿಸ್ಥಿತಿಯನ್ನು ಸ್ನೇಹಿತರಿಗೆ ವಿವರಿಸಿ ಸಹಾಯ ಕೇಳಿದ್ದರು. ನಂತರ ಆತನ ಸ್ನೇಹಿತ ಪೊಲೀಸ್ ದೂರು ದಾಖಲಿಸಿದ್ದು, ಸುನೀತಾರನ್ನು ರಕ್ಷಿಸಲಾಗಿದೆ. ಪಸ್ತುತ ಅವರು ರಾಂಚಿಯ ರಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...