Homeಮುಖಪುಟಬುಡಕಟ್ಟು ಯುವತಿಗೆ ಚಿತ್ರಹಿಂಸೆ: ಆರೋಪಿ ಸೀಮಾ ಪಾತ್ರಾ ಬಿಜೆಪಿಯಿಂದ ಅಮಾನತು

ಬುಡಕಟ್ಟು ಯುವತಿಗೆ ಚಿತ್ರಹಿಂಸೆ: ಆರೋಪಿ ಸೀಮಾ ಪಾತ್ರಾ ಬಿಜೆಪಿಯಿಂದ ಅಮಾನತು

ಆರೋಪಿ ತನ್ನ ಫೇ‌ಸ್‌ಬುಕ್ ಖಾತೆಯಲ್ಲಿ, ‘ಬೇಟಿ ಬಚಾವೋ - ಬೇಟಿ ಪಢಾವೋ ರಾಜ್ಯ ಸಂಚಾಲಕಿ’ ಎಂದು ಬರೆದುಕೊಂಡಿದ್ದಾರೆ

- Advertisement -
- Advertisement -

ಜಾರ್ಖಂಡ್‌ನ ಬಿಜೆಪಿ ನಾಯಕಿ ಸೀಮಾ ಪಾತ್ರಾ ತಮ್ಮ ಮನೆಯ ಮನೆಕೆಲಸ ಮಾಡಿಕೊಂಡಿದ್ದ ಬುಡಕಟ್ಟು ಸಮುದಾಯದ ಯುವತಿಯನ್ನು ಕ್ರೂರವಾಗಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಆರೋಪದ ನಡುವೆ ಪಕ್ಷವೂ ಮಂಗಳವಾರ ಅವರನ್ನು ಅಮಾನತುಗೊಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸೀಮಾ ಪಾತ್ರಾ ಅವರು ಬಿಜೆಪಿಯ ಮಹಿಳಾ ವಿಭಾಗದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ. ಅವರ ಪತಿ ಮಹೇಶ್ವರ್ ಪಾತ್ರಾ ನಿವೃತ್ತ ಐಎಎಸ್ ಅಧಿಕಾರಿ ಆಗಿದ್ದಾರೆ. ಸೀಮಾ ಅವರು ತನ್ನ ಫೇ‌ಸ್‌ಬುಕ್ ಖಾತೆಯಲ್ಲಿ,“ಬೇಟಿ ಬಚಾವೋ – ಬೇಟಿ ಪಢಾವೋ ರಾಜ್ಯ ಸಂಚಾಲಕಿ ಮತ್ತು ಜಾರ್ಖಂಡ್ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ” ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತೆ ಬುಡಕಟ್ಟು ಸಮುದಾಯದ ಯುವತಿಯು ಬಿಜೆಪಿ ನಾಯಕಿ ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಹೇಳಿರುವ ವಿಡಿಯೊ ವೈರಲ್ ಆದ ನಂತರ ಜಾರ್ಖಂಡ್ ಬಿಜೆಪಿ ಮುಖ್ಯಸ್ಥ ದೀಪಕ್ ಪ್ರಕಾಶ್ ಅವರು ಸೀಮಾ ವಿರುದ್ಧ ಕ್ರಮಕ್ಕೆ ಆದೇಶಿಸಿದ್ದಾರೆ.

ಇದನ್ನೂ ಓದಿ: ‘ನಾಲಗೆಯಲ್ಲಿ ನೆಲ ಸ್ವಚ್ಛ ಮಾಡಿಸುತ್ತಿದ್ದರು’: ಬುಡಕಟ್ಟು ಯುವತಿಯನ್ನು 8 ವರ್ಷ ಬಂಧಿಸಿಟ್ಟು ಚಿತ್ರಹಿಂಸೆ ನೀಡುತ್ತಿದ್ದ BJP ನಾಯಕಿ

ವೈರಲ್ ಆಗಿರುವ ವಿಡಿಯೊದಲ್ಲಿ, ಸಂತ್ರಸ್ತೆ ಸುನೀತಾ ಅವರ ಸ್ಥಿತಿಯು ಭಯಾನಕವಾಗಿರುವುದು ಕಂಡು ಬಂದಿದೆ. ಯುವತಿಯು ಆಸ್ಪತ್ರೆಯ ಹಾಸಿಗೆಯಲ್ಲಿದ್ದು, ಅವರ ಹಲವಾರು ಹಲ್ಲುಗಳು ಕಾಣೆಯಾಗಿವೆ. ಅಲ್ಲದೆ ಅವರು ಕುಳಿತುಕೊಳ್ಳಲು ಕೂಡಾ ಅಸಮರ್ಥ ಸ್ಥಿತಿಯಲ್ಲಿದ್ದಾರೆ. ಜೊತೆಗೆ ಅವರ ದೇಹದ ಮೇಲಿನ ಗಾಯದ ಗುರುತುಗಳು ಅವರ ಮೇಲೆ ನಿರಂತರ ದಾಳಿ ನಡೆದಿರುವುದು ಸೂಚಿಸುತ್ತವೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ಸುನಿತಾ ಅವರ ಪರಿಸ್ಥಿತಿಯ ವಿಡಿಯೊ ವೈರಲ್ ಆಗುತ್ತಿದ್ದಂತೆ, ಸೀಮಾ ಪಾತ್ರ ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

29 ವರ್ಷದ ಸುನೀತಾ ಅವರು ಜಾರ್ಖಂಡ್‌ನ ಗುಮ್ಲಾ ಮೂಲದವರಾಗಿದ್ದು, ಸುಮಾರು 10 ವರ್ಷಗಳ ಹಿಂದೆ ಸೀಮಾ ಪಾತ್ರಾ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಅವರ ಮಗಳು ವತ್ಸಲಾ ಕೆಲಸದ ನಿಮಿತ್ತ ದೆಹಲಿಗೆ ತೆರಳುತ್ತಿದ್ದಾಗ ಕೂಡಾ ಸುನೀತಾ ಅವರ ಸಹಾಯಕ್ಕೆ ತೆರಳಿದ್ದರು. ಸುಮಾರು ನಾಲ್ಕು ವರ್ಷಗಳ ಹಿಂದೆ ವತ್ಸಲಾ ಮತ್ತು ಸುನೀತಾ ರಾಂಚಿಗೆ ಮರಳಿದ್ದರು.

ಇದನ್ನೂ ಓದಿ: ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ!

ಸುಮಾರು ಆರು ವರ್ಷಗಳಿಂದ ಸೀಮಾ ಪಾತ್ರಾ ಕ್ರೂರ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಯುವತಿ ಹೇಳಿದ್ದಾರೆ. ಅಪಾರ ನೋವಿನಿಂದ ಮಾತನಾಡಿದ ಅವರು, ತನಗೆ ಬಿಸಿ ತವಾ ಮತ್ತು ರಾಡ್‌ಗಳಿಂದ ಥಳಿಸಿ ಹಲ್ಲುಗಳನ್ನು ಒಡೆದುಹಾಕಲಾಯಿತು ಎಂದು ವೀಡಿಯೊಗಳಲ್ಲಿ ಹೇಳಿಕೊಂಡಿದ್ದಾರೆ. ಆಕೆಗೆ ನೆಲದ ಮೇಲಿನ ಮೂತ್ರವನ್ನು ನೆಕ್ಕುವಂತೆ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ.

ಈ ಚಿತ್ರಹಿಂಸೆಯನ್ನು ತನಗೆ ಶಿಕ್ಷೆಯಾಗಿ ನೀಡಲಾಗಿದ್ದು, ಆದರೆ ತಾನು ಮಾಡಿರುವ ತಪ್ಪುಗಳೇನು ಎಂದು ತನಗೆ ತಿಳಿದಿರಲಿಲ್ಲ ಎಂದು ಸುನೀತಾ ಹೇಳಿದ್ದಾರೆ.

ಸೀಮಾ ಪಾತ್ರಾ ಅವರ ಮಗ ಆಯುಷ್ಮಾನ್ ತನಗೆ ಸಹಾಯ ಮಾಡಿದ್ದಾನೆ ಎಂದು ಯುವತಿ ಹೇಳಿದ್ದು,“ನಾನು ಬದುಕಿರುವುದು ಅವನಿಂದ ಮಾತ್ರ” ಎಂದು ಅವರು ಹೇಳಿದ್ದಾರೆ. ತನ್ನ ಸಹೋದರಿ ಮತ್ತು ಸೋದರ ಮಾವನಿಗೆ ಈ ಕಷ್ಟಗಳನ್ನು ಹೇಳಿದ್ದರೂ ಅವರು ಇದರ ಬಗ್ಗೆ ಚಿಂತಿತರಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ. ವೀಡಿಯೊದಲ್ಲಿ ಸುನಿತಾ ಅವರು ತಾನು ಚೇತರಿಸಿಕೊಂಡರೆ ಅಧ್ಯಯನ ಮಾಡುವುದಾಗಿ ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ಮಾತು ಮರೆತ ಭಾರತ; ಊನಾ ಫೈಲ್: ಆರೆಸ್ಸೆಸ್-ಬಿಜೆಪಿಯ ದನದ ರಾಜಕಾರಣ ಮತ್ತು ದಲಿತರು

ಸೀಮಾ ಅವರು ಮಗ ಆಯುಷ್ಮಾನ್ ಅವರು ಸುನೀತಾ ಅವರ ಪರಿಸ್ಥಿತಿಯನ್ನು ಸ್ನೇಹಿತರಿಗೆ ವಿವರಿಸಿ ಸಹಾಯ ಕೇಳಿದ್ದರು. ನಂತರ ಆತನ ಸ್ನೇಹಿತ ಪೊಲೀಸ್ ದೂರು ದಾಖಲಿಸಿದ್ದು, ಸುನೀತಾರನ್ನು ರಕ್ಷಿಸಲಾಗಿದೆ. ಪಸ್ತುತ ಅವರು ರಾಂಚಿಯ ರಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...