Homeಮುಖಪುಟ‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಸಂಗತಿಗಳು ಹೊರಬೀಳುತ್ತಿವೆ. ವಯಸ್ಕ ಆರು ಮಂದಿ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಪೈಕಿ ಒಬ್ಬ ಕುಸ್ತಿಪಟುವಿನ ಆರೋಪಗಳನ್ನು ಅಂತಾರಾಷ್ಟ್ರೀಯ ರೆಫರಿ ದೃಢೀಕರಿಸಿದ್ದಾರೆ.

“ಏಷಿಯನ್ ಚಾಂಪಿಯನ್‌ಶಿಪ್‌ಗಾಗಿ ಅಭ್ಯಾಸವನ್ನು ನಡೆಸಿದ ಬಳಿಕ ಕೊನೆಯಲ್ಲಿ ತಂಡದ ಫೋಟೋ ಸೆಷನ್‌ ಇತ್ತು. ಆ ಸಂದರ್ಭದಲ್ಲಿ ಆತ (ಬ್ರಿಜ್‌ ಭೂಷಣ್) ನನ್ನ ನಿತಂಬದ (ಕುಂಡಿ) ಮೇಲೆ ಕೈ ಇಟ್ಟನು. ನಂತರ ನಾನು ದೂರು ಸರಿಯಲು ಯತ್ನಿಸಿದೆ” ಎಂದು ತಿಳಿಸಿದ್ದಾರೆ. ಈ ಆರೋಪವನ್ನು ಅಂತಾರಾಷ್ಟ್ರೀಯ ಕುಸ್ತಿ ರೆಫರಿ ದೃಢಪಡಿಸಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

2007ರಿಂದಲೂ ಅಂತಾರಾಷ್ಟ್ರೀಯ ಕುಸ್ತಿ ರೆಫರಿಯಾಗಿರುವ ಜಗಬೀರ್‌ ಸಿಂಗ್‌, ಸಂತ್ರಸ್ತ ಕುಸ್ತಿಪಟು ಮಾಡಿರುವ ಆರೋಪವನ್ನು ದೃಢಪಡಿಸಿದ್ದಾರೆ. ಅಂದು ಈ ರೆಫರಿಯು ದೂರದಾರ ಕುಸ್ತಿಪಟು ಮತ್ತು ಬ್ರಿಜ್ ಭೂಷಣ್‌ ಅವರಿಂದ ಕೆಲವೇ ಅಡಿಗಳ ಅಂತರದಲ್ಲಿ ನಿಂತಿದ್ದರು. ದೆಹಲಿ ಪೊಲೀಸರಿಗೆ ಕುಸ್ತಿಪಟು ಫೋಟೋ ಸಾಕ್ಷಿಯನ್ನು ಒದಗಿಸಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಬುಧವಾರ ನೀಡಿದ ಹೇಳಿಕೆಯ ಪ್ರಕಾರ, “ಜೂನ್ 15ರಂದು ಪೊಲೀಸ್ ತನಿಖೆ ಮುಕ್ತಾಯಗೊಳ್ಳಲಿದೆ. ತನಿಖೆಗೆ ಒಳಪಡಿಸಲಾದ ನಾಲ್ಕು ರಾಜ್ಯಗಳ 125ಕ್ಕೂ ಹೆಚ್ಚು ಸಂಭಾವ್ಯ ಸಾಕ್ಷಿಗಳಲ್ಲಿ ಜಗ್ಬೀರ್‌ ಸಿಂಗ್‌ ಕೂಡ ಒಬ್ಬರಾಗಿದ್ದಾರೆ.”

ಒಲಿಂಪಿಯನ್, ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ, ಅಂತಾರಾಷ್ಟ್ರೀಯ ರೆಫರಿ ಮತ್ತು ರಾಜ್ಯ ಮಟ್ಟದ ಕೋಚ್- ಈ ನಾಲ್ವರು ಕನಿಷ್ಠ ಮೂವರು ಮಹಿಳಾ ಕುಸ್ತಿಪಟುಗಳ ಆರೋಪಗಳನ್ನು ದೃಢಪಡಿಸಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಹೇಳಿದೆ.

“ಅವನು (ಬ್ರಿಜ್ ಭೂಷಣ್) ಅವಳ ಪಕ್ಕದಲ್ಲಿ ನಿಂತಿರುವುದನ್ನು ನಾನು ನೋಡಿದೆ. ಆಕೆ ಆತನಿಂದ ದೂರ ನಿಲ್ಲಲು ಮುಂದಾದಳು, ದೂರ ನಿಂತಳು, ಗೊಣಗಿದಳು. ಆಕೆ ಮೊದಲು ಅಧ್ಯಕ್ಷರ ಪಕ್ಕದಲ್ಲಿ ನಿಂತಿದ್ದಳು, ಆದರೆ ನಂತರ ಮುಂದೆ ಬಂದಳು. ಈ ಮಹಿಳಾ ಕುಸ್ತಿಪಟು ಹೇಗೆ ಪ್ರತಿಕ್ರಿಯಿಸುತ್ತಿದ್ದಾರೆಂದು ನಾನು ನೋಡಿದೆ. ಆಕೆ ತೊಂದರೆಯಲ್ಲಿದ್ದಾಳೆ ಅನಿಸಿತು. ಆಕೆಯೊಂದಿಗೆ ಏನೋ ತಪ್ಪಾಗಿರುವುದು ತಿಳಿಯಿತು. ಇಲ್ಲಿ ಬಾ, ಇಲ್ಲಿ ಬಂದು ನಿಲ್ಲು ಎಂದು ಕುಸ್ತಿಪಟುಗಳನ್ನು ಆತ ಮುಟ್ಟುತ್ತಲೇ ಇದ್ದನು. ಕುಸ್ತಿಪಟುವಿಗೆ ಆ ದಿನ (ಫೋಟೋ ಸೆಷನ್ ಸಮಯದಲ್ಲಿ) ಏನೋ ತಪ್ಪಾಗಿದೆ ಎಂದು ಸ್ಪಷ್ಟವಾಯಿತು” ಎಂದು ಜಗ್ಬೀರ್‌ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಎಫ್‌ಐಆರ್‌ನ ಪ್ರಕಾರ, “ಫೋಟೋ ತೆಗೆಸಿಕೊಳ್ಳುವ ಸಂದರ್ಭದಲ್ಲಿ ಆತನಿಂದ ಬಿಡಿಸಿಕೊಂಡು ಮುಂದಿನ ಸಾಲಿಗೆ ತೆರಳುವ ಮುನ್ನ ಆತ ಬಲವಂತವಾಗಿ ಆಕೆಯ ಭುಜವನ್ನು ಹಿಡಿದಿದ್ದನು.”

“ನಾನು ಅತ್ಯಂತ ಎತ್ತರದ ಕುಸ್ತಿಪಟುಗಳಲ್ಲಿ ಒಬ್ಬಳಾಗಿದ್ದರಿಂದ, ನಾನು ಕೊನೆಯ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ನಾನು ಕೊನೆಯ ಸಾಲಿನಲ್ಲಿ ನಿಂತು, ಇತರ ಕುಸ್ತಿಪಟುಗಳು ತಮ್ಮ ಸ್ಥಾನಗಳಲ್ಲಿ ನಿಲ್ಲಲೆಂದು ಕಾಯುತ್ತಿದ್ದಾಗ ಬ್ರಿಜ್ ಭೂಷಣ್‌ ಬಂದು ನನ್ನ ಪಕ್ಕದಲ್ಲಿ ನಿಂತನು. ನನ್ನ ನಿತಂಬದ ಮೇಲೆ ಕೈ ಹಾಕಿದ್ದು ನನ್ನ ಅನುಭವಕ್ಕೆ ಬಂದಿತು…”

“…ನಾನು ತಕ್ಷಣ ಗಾಬರಿಯಿಂದ ಹಿಂತಿರುಗಿ ನೋಡಿದೆ. ಆರೋಪಿಯು ನನ್ನ ನಿತಂಬದ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಆರೋಪಿಯು ಮತ್ತಷ್ಟು ಅನುಚಿತ ಸ್ಪರ್ಶ ಮಾಡುವುದರಿಂದ ತಪ್ಪಿಸಿಕೊಳ್ಳಲು ನಾನು ತಕ್ಷಣವೇ ಆ ಸ್ಥಳದಿಂದ ದೂರ ಸರಿಯಲು ಪ್ರಯತ್ನಿಸಿದೆ. ಆದರೆ, ನಾನು ದೂರ ಹೋಗಲು ಯತ್ನಿಸಿದಾಗ ಆರೋಪಿ ಬ್ರಿಜ್ ಭೂಷಣ್‌ ನನ್ನ ಭುಜವನ್ನು ಬಲವಂತವಾಗಿ ಹಿಡಿದಿದ್ದರು. ಹೇಗೋ ಆರೋಪಿಯ ಕಪಿಮುಷ್ಠಿಯಿಂದ ಪಾರಾದೆ. ತಂಡದ ಫೋಟೋ ಕ್ಲಿಕ್ಕಿಸುವುದನ್ನು ನಾನು ತಪ್ಪಿಸಲು ಸಾಧ್ಯವಾಗದ ಕಾರಣ, ನಾನು ಆರೋಪಿಯಿಂದ ದೂರವಿದ್ದು ಮೊದಲ ಸಾಲಿನಲ್ಲಿ ಕುಳಿತುಕೊಳ್ಳಲು ನಿರ್ಧರಿಸಿದೆ” ಎಂದು ದೂರುದಾರರು ವಿವರಿಸಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಗೊಂಡಿದೆ.

“ಒಪ್ಪಿಗೆಯಿಲ್ಲದ ‘ಅತ್ಯಂತ ಅಸಭ್ಯ’ ಮತ್ತು ‘ಆಕ್ಷೇಪಾರ್ಹ’ ನಡೆಯಿಂದಾಗಿ ನಾನು ದಿಗ್ಭ್ರಮೆಗೊಂಡಿದ್ದೇನೆ” ಎಂದಿದ್ದಾರೆ ಕುಸ್ತಿಪಟು.

ಮತ್ತೊಬ್ಬ ಸಾಕ್ಷಿ, 2010ರ ಸಿಡಬ್ಲ್ಯುಜಿ ಚಿನ್ನದ ಪದಕ ವಿಜೇತೆ ಅನಿತಾ ಕೂಡ ಈ ಆರೋಪಗಳನ್ನು ದೃಢೀಕರಿಸಿದ್ದಾರೆ.

ಇದನ್ನೂ ಓದಿರಿ: ಜೂ.15ರ ವರೆಗೆ ಪ್ರತಿಭಟನೆ ಸ್ಥಗಿತ: ಕ್ರೀಡಾ ಸಚಿವರ ಭೇಟಿ ಬಳಿಕ ಕುಸ್ತಿಪಟುಗಳ ಹೇಳಿಕೆ

“ತನ್ನನ್ನು ಕೋಣೆಗೆ ಕರೆದು ಬಲವಂತವಾಗಿ ಬ್ರಿಜ್ ಭೂಷಣ್ ತಬ್ಬಿಕೊಂಡಿರುವ ಕುರಿತು ಕುಸ್ತಿಪಟು ತಿಳಿಸಿದ್ದರು” ಎಂದು ಅನಿತಾ ವಿವರಿಸಿದ್ದಾರೆ.

ಪಟಿಯಾಲದ ರಾಷ್ಟ್ರೀಯ ಶಿಬಿರಕ್ಕೆ ಹಿಂದಿರುಗಿದ ನಂತರ ಸಂತ್ರಸ್ತ ಕುಸ್ತಿಪಟು, ಅನಿತಾ ಅವರಲ್ಲಿ ತಮ್ಮ ನೋವನ್ನು ಹೇಳಿಕೊಳ್ಳುತ್ತಾ ಕಣ್ಣೀರು ಹಾಕಿದ್ದರು.

ಅಪ್ರಾಪ್ತ ಕುಸ್ತಿಪಟು ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಎರಡು ಎಫ್‌ಐಆರ್‌ಗಳು ಅಘಾತಕಾರಿ ಅಂಶಗಳನ್ನು ಹೊಂದಿವೆ. “ನೀನು ಈ ಕ್ಷೇತ್ರದಲ್ಲಿ ಬೆಳೆಯಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕು” ಎಂದು ಬ್ರಿಜ್‌ ಭೂಷಣ್ ಒತ್ತಾಯಿಸುತ್ತಿದ್ದ ಕನಿಷ್ಠ ಎರಡು ನಿದರ್ಶನಗಳು ಉಲ್ಲೇಖಗೊಂಡಿವೆ.

ಅನುಚಿತ ಸ್ಪರ್ಶ ಕುರಿತ 15 ಲೈಂಗಿಕ ಕಿರುಕುಳ ಘಟನೆಗಳು, ಸ್ತನಗಳ ಮೇಲೆ ಕೈಗಳನ್ನು ಆಡಿಸಿದ್ದು, ಹೊಕ್ಕುಳನ್ನು ಸ್ಪರ್ಶಿಸಿದ್ದು, ಹಿಂಬಾಲಿಸಿದ್ದು-  ಮೊದಲಾದ ಆರೋಪಗಳನ್ನು ಕುಸ್ತಿಪಟುಗಳು ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...