Homeಮುಖಪುಟ‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಸಂಗತಿಗಳು ಹೊರಬೀಳುತ್ತಿವೆ. ವಯಸ್ಕ ಆರು ಮಂದಿ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಪೈಕಿ ಒಬ್ಬ ಕುಸ್ತಿಪಟುವಿನ ಆರೋಪಗಳನ್ನು ಅಂತಾರಾಷ್ಟ್ರೀಯ ರೆಫರಿ ದೃಢೀಕರಿಸಿದ್ದಾರೆ.

“ಏಷಿಯನ್ ಚಾಂಪಿಯನ್‌ಶಿಪ್‌ಗಾಗಿ ಅಭ್ಯಾಸವನ್ನು ನಡೆಸಿದ ಬಳಿಕ ಕೊನೆಯಲ್ಲಿ ತಂಡದ ಫೋಟೋ ಸೆಷನ್‌ ಇತ್ತು. ಆ ಸಂದರ್ಭದಲ್ಲಿ ಆತ (ಬ್ರಿಜ್‌ ಭೂಷಣ್) ನನ್ನ ನಿತಂಬದ (ಕುಂಡಿ) ಮೇಲೆ ಕೈ ಇಟ್ಟನು. ನಂತರ ನಾನು ದೂರು ಸರಿಯಲು ಯತ್ನಿಸಿದೆ” ಎಂದು ತಿಳಿಸಿದ್ದಾರೆ. ಈ ಆರೋಪವನ್ನು ಅಂತಾರಾಷ್ಟ್ರೀಯ ಕುಸ್ತಿ ರೆಫರಿ ದೃಢಪಡಿಸಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

2007ರಿಂದಲೂ ಅಂತಾರಾಷ್ಟ್ರೀಯ ಕುಸ್ತಿ ರೆಫರಿಯಾಗಿರುವ ಜಗಬೀರ್‌ ಸಿಂಗ್‌, ಸಂತ್ರಸ್ತ ಕುಸ್ತಿಪಟು ಮಾಡಿರುವ ಆರೋಪವನ್ನು ದೃಢಪಡಿಸಿದ್ದಾರೆ. ಅಂದು ಈ ರೆಫರಿಯು ದೂರದಾರ ಕುಸ್ತಿಪಟು ಮತ್ತು ಬ್ರಿಜ್ ಭೂಷಣ್‌ ಅವರಿಂದ ಕೆಲವೇ ಅಡಿಗಳ ಅಂತರದಲ್ಲಿ ನಿಂತಿದ್ದರು. ದೆಹಲಿ ಪೊಲೀಸರಿಗೆ ಕುಸ್ತಿಪಟು ಫೋಟೋ ಸಾಕ್ಷಿಯನ್ನು ಒದಗಿಸಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಬುಧವಾರ ನೀಡಿದ ಹೇಳಿಕೆಯ ಪ್ರಕಾರ, “ಜೂನ್ 15ರಂದು ಪೊಲೀಸ್ ತನಿಖೆ ಮುಕ್ತಾಯಗೊಳ್ಳಲಿದೆ. ತನಿಖೆಗೆ ಒಳಪಡಿಸಲಾದ ನಾಲ್ಕು ರಾಜ್ಯಗಳ 125ಕ್ಕೂ ಹೆಚ್ಚು ಸಂಭಾವ್ಯ ಸಾಕ್ಷಿಗಳಲ್ಲಿ ಜಗ್ಬೀರ್‌ ಸಿಂಗ್‌ ಕೂಡ ಒಬ್ಬರಾಗಿದ್ದಾರೆ.”

ಒಲಿಂಪಿಯನ್, ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ, ಅಂತಾರಾಷ್ಟ್ರೀಯ ರೆಫರಿ ಮತ್ತು ರಾಜ್ಯ ಮಟ್ಟದ ಕೋಚ್- ಈ ನಾಲ್ವರು ಕನಿಷ್ಠ ಮೂವರು ಮಹಿಳಾ ಕುಸ್ತಿಪಟುಗಳ ಆರೋಪಗಳನ್ನು ದೃಢಪಡಿಸಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಹೇಳಿದೆ.

“ಅವನು (ಬ್ರಿಜ್ ಭೂಷಣ್) ಅವಳ ಪಕ್ಕದಲ್ಲಿ ನಿಂತಿರುವುದನ್ನು ನಾನು ನೋಡಿದೆ. ಆಕೆ ಆತನಿಂದ ದೂರ ನಿಲ್ಲಲು ಮುಂದಾದಳು, ದೂರ ನಿಂತಳು, ಗೊಣಗಿದಳು. ಆಕೆ ಮೊದಲು ಅಧ್ಯಕ್ಷರ ಪಕ್ಕದಲ್ಲಿ ನಿಂತಿದ್ದಳು, ಆದರೆ ನಂತರ ಮುಂದೆ ಬಂದಳು. ಈ ಮಹಿಳಾ ಕುಸ್ತಿಪಟು ಹೇಗೆ ಪ್ರತಿಕ್ರಿಯಿಸುತ್ತಿದ್ದಾರೆಂದು ನಾನು ನೋಡಿದೆ. ಆಕೆ ತೊಂದರೆಯಲ್ಲಿದ್ದಾಳೆ ಅನಿಸಿತು. ಆಕೆಯೊಂದಿಗೆ ಏನೋ ತಪ್ಪಾಗಿರುವುದು ತಿಳಿಯಿತು. ಇಲ್ಲಿ ಬಾ, ಇಲ್ಲಿ ಬಂದು ನಿಲ್ಲು ಎಂದು ಕುಸ್ತಿಪಟುಗಳನ್ನು ಆತ ಮುಟ್ಟುತ್ತಲೇ ಇದ್ದನು. ಕುಸ್ತಿಪಟುವಿಗೆ ಆ ದಿನ (ಫೋಟೋ ಸೆಷನ್ ಸಮಯದಲ್ಲಿ) ಏನೋ ತಪ್ಪಾಗಿದೆ ಎಂದು ಸ್ಪಷ್ಟವಾಯಿತು” ಎಂದು ಜಗ್ಬೀರ್‌ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಎಫ್‌ಐಆರ್‌ನ ಪ್ರಕಾರ, “ಫೋಟೋ ತೆಗೆಸಿಕೊಳ್ಳುವ ಸಂದರ್ಭದಲ್ಲಿ ಆತನಿಂದ ಬಿಡಿಸಿಕೊಂಡು ಮುಂದಿನ ಸಾಲಿಗೆ ತೆರಳುವ ಮುನ್ನ ಆತ ಬಲವಂತವಾಗಿ ಆಕೆಯ ಭುಜವನ್ನು ಹಿಡಿದಿದ್ದನು.”

“ನಾನು ಅತ್ಯಂತ ಎತ್ತರದ ಕುಸ್ತಿಪಟುಗಳಲ್ಲಿ ಒಬ್ಬಳಾಗಿದ್ದರಿಂದ, ನಾನು ಕೊನೆಯ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ನಾನು ಕೊನೆಯ ಸಾಲಿನಲ್ಲಿ ನಿಂತು, ಇತರ ಕುಸ್ತಿಪಟುಗಳು ತಮ್ಮ ಸ್ಥಾನಗಳಲ್ಲಿ ನಿಲ್ಲಲೆಂದು ಕಾಯುತ್ತಿದ್ದಾಗ ಬ್ರಿಜ್ ಭೂಷಣ್‌ ಬಂದು ನನ್ನ ಪಕ್ಕದಲ್ಲಿ ನಿಂತನು. ನನ್ನ ನಿತಂಬದ ಮೇಲೆ ಕೈ ಹಾಕಿದ್ದು ನನ್ನ ಅನುಭವಕ್ಕೆ ಬಂದಿತು…”

“…ನಾನು ತಕ್ಷಣ ಗಾಬರಿಯಿಂದ ಹಿಂತಿರುಗಿ ನೋಡಿದೆ. ಆರೋಪಿಯು ನನ್ನ ನಿತಂಬದ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಆರೋಪಿಯು ಮತ್ತಷ್ಟು ಅನುಚಿತ ಸ್ಪರ್ಶ ಮಾಡುವುದರಿಂದ ತಪ್ಪಿಸಿಕೊಳ್ಳಲು ನಾನು ತಕ್ಷಣವೇ ಆ ಸ್ಥಳದಿಂದ ದೂರ ಸರಿಯಲು ಪ್ರಯತ್ನಿಸಿದೆ. ಆದರೆ, ನಾನು ದೂರ ಹೋಗಲು ಯತ್ನಿಸಿದಾಗ ಆರೋಪಿ ಬ್ರಿಜ್ ಭೂಷಣ್‌ ನನ್ನ ಭುಜವನ್ನು ಬಲವಂತವಾಗಿ ಹಿಡಿದಿದ್ದರು. ಹೇಗೋ ಆರೋಪಿಯ ಕಪಿಮುಷ್ಠಿಯಿಂದ ಪಾರಾದೆ. ತಂಡದ ಫೋಟೋ ಕ್ಲಿಕ್ಕಿಸುವುದನ್ನು ನಾನು ತಪ್ಪಿಸಲು ಸಾಧ್ಯವಾಗದ ಕಾರಣ, ನಾನು ಆರೋಪಿಯಿಂದ ದೂರವಿದ್ದು ಮೊದಲ ಸಾಲಿನಲ್ಲಿ ಕುಳಿತುಕೊಳ್ಳಲು ನಿರ್ಧರಿಸಿದೆ” ಎಂದು ದೂರುದಾರರು ವಿವರಿಸಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಗೊಂಡಿದೆ.

“ಒಪ್ಪಿಗೆಯಿಲ್ಲದ ‘ಅತ್ಯಂತ ಅಸಭ್ಯ’ ಮತ್ತು ‘ಆಕ್ಷೇಪಾರ್ಹ’ ನಡೆಯಿಂದಾಗಿ ನಾನು ದಿಗ್ಭ್ರಮೆಗೊಂಡಿದ್ದೇನೆ” ಎಂದಿದ್ದಾರೆ ಕುಸ್ತಿಪಟು.

ಮತ್ತೊಬ್ಬ ಸಾಕ್ಷಿ, 2010ರ ಸಿಡಬ್ಲ್ಯುಜಿ ಚಿನ್ನದ ಪದಕ ವಿಜೇತೆ ಅನಿತಾ ಕೂಡ ಈ ಆರೋಪಗಳನ್ನು ದೃಢೀಕರಿಸಿದ್ದಾರೆ.

ಇದನ್ನೂ ಓದಿರಿ: ಜೂ.15ರ ವರೆಗೆ ಪ್ರತಿಭಟನೆ ಸ್ಥಗಿತ: ಕ್ರೀಡಾ ಸಚಿವರ ಭೇಟಿ ಬಳಿಕ ಕುಸ್ತಿಪಟುಗಳ ಹೇಳಿಕೆ

“ತನ್ನನ್ನು ಕೋಣೆಗೆ ಕರೆದು ಬಲವಂತವಾಗಿ ಬ್ರಿಜ್ ಭೂಷಣ್ ತಬ್ಬಿಕೊಂಡಿರುವ ಕುರಿತು ಕುಸ್ತಿಪಟು ತಿಳಿಸಿದ್ದರು” ಎಂದು ಅನಿತಾ ವಿವರಿಸಿದ್ದಾರೆ.

ಪಟಿಯಾಲದ ರಾಷ್ಟ್ರೀಯ ಶಿಬಿರಕ್ಕೆ ಹಿಂದಿರುಗಿದ ನಂತರ ಸಂತ್ರಸ್ತ ಕುಸ್ತಿಪಟು, ಅನಿತಾ ಅವರಲ್ಲಿ ತಮ್ಮ ನೋವನ್ನು ಹೇಳಿಕೊಳ್ಳುತ್ತಾ ಕಣ್ಣೀರು ಹಾಕಿದ್ದರು.

ಅಪ್ರಾಪ್ತ ಕುಸ್ತಿಪಟು ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಎರಡು ಎಫ್‌ಐಆರ್‌ಗಳು ಅಘಾತಕಾರಿ ಅಂಶಗಳನ್ನು ಹೊಂದಿವೆ. “ನೀನು ಈ ಕ್ಷೇತ್ರದಲ್ಲಿ ಬೆಳೆಯಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕು” ಎಂದು ಬ್ರಿಜ್‌ ಭೂಷಣ್ ಒತ್ತಾಯಿಸುತ್ತಿದ್ದ ಕನಿಷ್ಠ ಎರಡು ನಿದರ್ಶನಗಳು ಉಲ್ಲೇಖಗೊಂಡಿವೆ.

ಅನುಚಿತ ಸ್ಪರ್ಶ ಕುರಿತ 15 ಲೈಂಗಿಕ ಕಿರುಕುಳ ಘಟನೆಗಳು, ಸ್ತನಗಳ ಮೇಲೆ ಕೈಗಳನ್ನು ಆಡಿಸಿದ್ದು, ಹೊಕ್ಕುಳನ್ನು ಸ್ಪರ್ಶಿಸಿದ್ದು, ಹಿಂಬಾಲಿಸಿದ್ದು-  ಮೊದಲಾದ ಆರೋಪಗಳನ್ನು ಕುಸ್ತಿಪಟುಗಳು ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...