Homeಮುಖಪುಟ‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಸಂಗತಿಗಳು ಹೊರಬೀಳುತ್ತಿವೆ. ವಯಸ್ಕ ಆರು ಮಂದಿ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಪೈಕಿ ಒಬ್ಬ ಕುಸ್ತಿಪಟುವಿನ ಆರೋಪಗಳನ್ನು ಅಂತಾರಾಷ್ಟ್ರೀಯ ರೆಫರಿ ದೃಢೀಕರಿಸಿದ್ದಾರೆ.

“ಏಷಿಯನ್ ಚಾಂಪಿಯನ್‌ಶಿಪ್‌ಗಾಗಿ ಅಭ್ಯಾಸವನ್ನು ನಡೆಸಿದ ಬಳಿಕ ಕೊನೆಯಲ್ಲಿ ತಂಡದ ಫೋಟೋ ಸೆಷನ್‌ ಇತ್ತು. ಆ ಸಂದರ್ಭದಲ್ಲಿ ಆತ (ಬ್ರಿಜ್‌ ಭೂಷಣ್) ನನ್ನ ನಿತಂಬದ (ಕುಂಡಿ) ಮೇಲೆ ಕೈ ಇಟ್ಟನು. ನಂತರ ನಾನು ದೂರು ಸರಿಯಲು ಯತ್ನಿಸಿದೆ” ಎಂದು ತಿಳಿಸಿದ್ದಾರೆ. ಈ ಆರೋಪವನ್ನು ಅಂತಾರಾಷ್ಟ್ರೀಯ ಕುಸ್ತಿ ರೆಫರಿ ದೃಢಪಡಿಸಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

2007ರಿಂದಲೂ ಅಂತಾರಾಷ್ಟ್ರೀಯ ಕುಸ್ತಿ ರೆಫರಿಯಾಗಿರುವ ಜಗಬೀರ್‌ ಸಿಂಗ್‌, ಸಂತ್ರಸ್ತ ಕುಸ್ತಿಪಟು ಮಾಡಿರುವ ಆರೋಪವನ್ನು ದೃಢಪಡಿಸಿದ್ದಾರೆ. ಅಂದು ಈ ರೆಫರಿಯು ದೂರದಾರ ಕುಸ್ತಿಪಟು ಮತ್ತು ಬ್ರಿಜ್ ಭೂಷಣ್‌ ಅವರಿಂದ ಕೆಲವೇ ಅಡಿಗಳ ಅಂತರದಲ್ಲಿ ನಿಂತಿದ್ದರು. ದೆಹಲಿ ಪೊಲೀಸರಿಗೆ ಕುಸ್ತಿಪಟು ಫೋಟೋ ಸಾಕ್ಷಿಯನ್ನು ಒದಗಿಸಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಬುಧವಾರ ನೀಡಿದ ಹೇಳಿಕೆಯ ಪ್ರಕಾರ, “ಜೂನ್ 15ರಂದು ಪೊಲೀಸ್ ತನಿಖೆ ಮುಕ್ತಾಯಗೊಳ್ಳಲಿದೆ. ತನಿಖೆಗೆ ಒಳಪಡಿಸಲಾದ ನಾಲ್ಕು ರಾಜ್ಯಗಳ 125ಕ್ಕೂ ಹೆಚ್ಚು ಸಂಭಾವ್ಯ ಸಾಕ್ಷಿಗಳಲ್ಲಿ ಜಗ್ಬೀರ್‌ ಸಿಂಗ್‌ ಕೂಡ ಒಬ್ಬರಾಗಿದ್ದಾರೆ.”

ಒಲಿಂಪಿಯನ್, ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ, ಅಂತಾರಾಷ್ಟ್ರೀಯ ರೆಫರಿ ಮತ್ತು ರಾಜ್ಯ ಮಟ್ಟದ ಕೋಚ್- ಈ ನಾಲ್ವರು ಕನಿಷ್ಠ ಮೂವರು ಮಹಿಳಾ ಕುಸ್ತಿಪಟುಗಳ ಆರೋಪಗಳನ್ನು ದೃಢಪಡಿಸಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಹೇಳಿದೆ.

“ಅವನು (ಬ್ರಿಜ್ ಭೂಷಣ್) ಅವಳ ಪಕ್ಕದಲ್ಲಿ ನಿಂತಿರುವುದನ್ನು ನಾನು ನೋಡಿದೆ. ಆಕೆ ಆತನಿಂದ ದೂರ ನಿಲ್ಲಲು ಮುಂದಾದಳು, ದೂರ ನಿಂತಳು, ಗೊಣಗಿದಳು. ಆಕೆ ಮೊದಲು ಅಧ್ಯಕ್ಷರ ಪಕ್ಕದಲ್ಲಿ ನಿಂತಿದ್ದಳು, ಆದರೆ ನಂತರ ಮುಂದೆ ಬಂದಳು. ಈ ಮಹಿಳಾ ಕುಸ್ತಿಪಟು ಹೇಗೆ ಪ್ರತಿಕ್ರಿಯಿಸುತ್ತಿದ್ದಾರೆಂದು ನಾನು ನೋಡಿದೆ. ಆಕೆ ತೊಂದರೆಯಲ್ಲಿದ್ದಾಳೆ ಅನಿಸಿತು. ಆಕೆಯೊಂದಿಗೆ ಏನೋ ತಪ್ಪಾಗಿರುವುದು ತಿಳಿಯಿತು. ಇಲ್ಲಿ ಬಾ, ಇಲ್ಲಿ ಬಂದು ನಿಲ್ಲು ಎಂದು ಕುಸ್ತಿಪಟುಗಳನ್ನು ಆತ ಮುಟ್ಟುತ್ತಲೇ ಇದ್ದನು. ಕುಸ್ತಿಪಟುವಿಗೆ ಆ ದಿನ (ಫೋಟೋ ಸೆಷನ್ ಸಮಯದಲ್ಲಿ) ಏನೋ ತಪ್ಪಾಗಿದೆ ಎಂದು ಸ್ಪಷ್ಟವಾಯಿತು” ಎಂದು ಜಗ್ಬೀರ್‌ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಎಫ್‌ಐಆರ್‌ನ ಪ್ರಕಾರ, “ಫೋಟೋ ತೆಗೆಸಿಕೊಳ್ಳುವ ಸಂದರ್ಭದಲ್ಲಿ ಆತನಿಂದ ಬಿಡಿಸಿಕೊಂಡು ಮುಂದಿನ ಸಾಲಿಗೆ ತೆರಳುವ ಮುನ್ನ ಆತ ಬಲವಂತವಾಗಿ ಆಕೆಯ ಭುಜವನ್ನು ಹಿಡಿದಿದ್ದನು.”

“ನಾನು ಅತ್ಯಂತ ಎತ್ತರದ ಕುಸ್ತಿಪಟುಗಳಲ್ಲಿ ಒಬ್ಬಳಾಗಿದ್ದರಿಂದ, ನಾನು ಕೊನೆಯ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ನಾನು ಕೊನೆಯ ಸಾಲಿನಲ್ಲಿ ನಿಂತು, ಇತರ ಕುಸ್ತಿಪಟುಗಳು ತಮ್ಮ ಸ್ಥಾನಗಳಲ್ಲಿ ನಿಲ್ಲಲೆಂದು ಕಾಯುತ್ತಿದ್ದಾಗ ಬ್ರಿಜ್ ಭೂಷಣ್‌ ಬಂದು ನನ್ನ ಪಕ್ಕದಲ್ಲಿ ನಿಂತನು. ನನ್ನ ನಿತಂಬದ ಮೇಲೆ ಕೈ ಹಾಕಿದ್ದು ನನ್ನ ಅನುಭವಕ್ಕೆ ಬಂದಿತು…”

“…ನಾನು ತಕ್ಷಣ ಗಾಬರಿಯಿಂದ ಹಿಂತಿರುಗಿ ನೋಡಿದೆ. ಆರೋಪಿಯು ನನ್ನ ನಿತಂಬದ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಆರೋಪಿಯು ಮತ್ತಷ್ಟು ಅನುಚಿತ ಸ್ಪರ್ಶ ಮಾಡುವುದರಿಂದ ತಪ್ಪಿಸಿಕೊಳ್ಳಲು ನಾನು ತಕ್ಷಣವೇ ಆ ಸ್ಥಳದಿಂದ ದೂರ ಸರಿಯಲು ಪ್ರಯತ್ನಿಸಿದೆ. ಆದರೆ, ನಾನು ದೂರ ಹೋಗಲು ಯತ್ನಿಸಿದಾಗ ಆರೋಪಿ ಬ್ರಿಜ್ ಭೂಷಣ್‌ ನನ್ನ ಭುಜವನ್ನು ಬಲವಂತವಾಗಿ ಹಿಡಿದಿದ್ದರು. ಹೇಗೋ ಆರೋಪಿಯ ಕಪಿಮುಷ್ಠಿಯಿಂದ ಪಾರಾದೆ. ತಂಡದ ಫೋಟೋ ಕ್ಲಿಕ್ಕಿಸುವುದನ್ನು ನಾನು ತಪ್ಪಿಸಲು ಸಾಧ್ಯವಾಗದ ಕಾರಣ, ನಾನು ಆರೋಪಿಯಿಂದ ದೂರವಿದ್ದು ಮೊದಲ ಸಾಲಿನಲ್ಲಿ ಕುಳಿತುಕೊಳ್ಳಲು ನಿರ್ಧರಿಸಿದೆ” ಎಂದು ದೂರುದಾರರು ವಿವರಿಸಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಗೊಂಡಿದೆ.

“ಒಪ್ಪಿಗೆಯಿಲ್ಲದ ‘ಅತ್ಯಂತ ಅಸಭ್ಯ’ ಮತ್ತು ‘ಆಕ್ಷೇಪಾರ್ಹ’ ನಡೆಯಿಂದಾಗಿ ನಾನು ದಿಗ್ಭ್ರಮೆಗೊಂಡಿದ್ದೇನೆ” ಎಂದಿದ್ದಾರೆ ಕುಸ್ತಿಪಟು.

ಮತ್ತೊಬ್ಬ ಸಾಕ್ಷಿ, 2010ರ ಸಿಡಬ್ಲ್ಯುಜಿ ಚಿನ್ನದ ಪದಕ ವಿಜೇತೆ ಅನಿತಾ ಕೂಡ ಈ ಆರೋಪಗಳನ್ನು ದೃಢೀಕರಿಸಿದ್ದಾರೆ.

ಇದನ್ನೂ ಓದಿರಿ: ಜೂ.15ರ ವರೆಗೆ ಪ್ರತಿಭಟನೆ ಸ್ಥಗಿತ: ಕ್ರೀಡಾ ಸಚಿವರ ಭೇಟಿ ಬಳಿಕ ಕುಸ್ತಿಪಟುಗಳ ಹೇಳಿಕೆ

“ತನ್ನನ್ನು ಕೋಣೆಗೆ ಕರೆದು ಬಲವಂತವಾಗಿ ಬ್ರಿಜ್ ಭೂಷಣ್ ತಬ್ಬಿಕೊಂಡಿರುವ ಕುರಿತು ಕುಸ್ತಿಪಟು ತಿಳಿಸಿದ್ದರು” ಎಂದು ಅನಿತಾ ವಿವರಿಸಿದ್ದಾರೆ.

ಪಟಿಯಾಲದ ರಾಷ್ಟ್ರೀಯ ಶಿಬಿರಕ್ಕೆ ಹಿಂದಿರುಗಿದ ನಂತರ ಸಂತ್ರಸ್ತ ಕುಸ್ತಿಪಟು, ಅನಿತಾ ಅವರಲ್ಲಿ ತಮ್ಮ ನೋವನ್ನು ಹೇಳಿಕೊಳ್ಳುತ್ತಾ ಕಣ್ಣೀರು ಹಾಕಿದ್ದರು.

ಅಪ್ರಾಪ್ತ ಕುಸ್ತಿಪಟು ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಎರಡು ಎಫ್‌ಐಆರ್‌ಗಳು ಅಘಾತಕಾರಿ ಅಂಶಗಳನ್ನು ಹೊಂದಿವೆ. “ನೀನು ಈ ಕ್ಷೇತ್ರದಲ್ಲಿ ಬೆಳೆಯಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕು” ಎಂದು ಬ್ರಿಜ್‌ ಭೂಷಣ್ ಒತ್ತಾಯಿಸುತ್ತಿದ್ದ ಕನಿಷ್ಠ ಎರಡು ನಿದರ್ಶನಗಳು ಉಲ್ಲೇಖಗೊಂಡಿವೆ.

ಅನುಚಿತ ಸ್ಪರ್ಶ ಕುರಿತ 15 ಲೈಂಗಿಕ ಕಿರುಕುಳ ಘಟನೆಗಳು, ಸ್ತನಗಳ ಮೇಲೆ ಕೈಗಳನ್ನು ಆಡಿಸಿದ್ದು, ಹೊಕ್ಕುಳನ್ನು ಸ್ಪರ್ಶಿಸಿದ್ದು, ಹಿಂಬಾಲಿಸಿದ್ದು-  ಮೊದಲಾದ ಆರೋಪಗಳನ್ನು ಕುಸ್ತಿಪಟುಗಳು ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...