Homeಮುಖಪುಟ‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಸಂಗತಿಗಳು ಹೊರಬೀಳುತ್ತಿವೆ. ವಯಸ್ಕ ಆರು ಮಂದಿ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಪೈಕಿ ಒಬ್ಬ ಕುಸ್ತಿಪಟುವಿನ ಆರೋಪಗಳನ್ನು ಅಂತಾರಾಷ್ಟ್ರೀಯ ರೆಫರಿ ದೃಢೀಕರಿಸಿದ್ದಾರೆ.

“ಏಷಿಯನ್ ಚಾಂಪಿಯನ್‌ಶಿಪ್‌ಗಾಗಿ ಅಭ್ಯಾಸವನ್ನು ನಡೆಸಿದ ಬಳಿಕ ಕೊನೆಯಲ್ಲಿ ತಂಡದ ಫೋಟೋ ಸೆಷನ್‌ ಇತ್ತು. ಆ ಸಂದರ್ಭದಲ್ಲಿ ಆತ (ಬ್ರಿಜ್‌ ಭೂಷಣ್) ನನ್ನ ನಿತಂಬದ (ಕುಂಡಿ) ಮೇಲೆ ಕೈ ಇಟ್ಟನು. ನಂತರ ನಾನು ದೂರು ಸರಿಯಲು ಯತ್ನಿಸಿದೆ” ಎಂದು ತಿಳಿಸಿದ್ದಾರೆ. ಈ ಆರೋಪವನ್ನು ಅಂತಾರಾಷ್ಟ್ರೀಯ ಕುಸ್ತಿ ರೆಫರಿ ದೃಢಪಡಿಸಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

2007ರಿಂದಲೂ ಅಂತಾರಾಷ್ಟ್ರೀಯ ಕುಸ್ತಿ ರೆಫರಿಯಾಗಿರುವ ಜಗಬೀರ್‌ ಸಿಂಗ್‌, ಸಂತ್ರಸ್ತ ಕುಸ್ತಿಪಟು ಮಾಡಿರುವ ಆರೋಪವನ್ನು ದೃಢಪಡಿಸಿದ್ದಾರೆ. ಅಂದು ಈ ರೆಫರಿಯು ದೂರದಾರ ಕುಸ್ತಿಪಟು ಮತ್ತು ಬ್ರಿಜ್ ಭೂಷಣ್‌ ಅವರಿಂದ ಕೆಲವೇ ಅಡಿಗಳ ಅಂತರದಲ್ಲಿ ನಿಂತಿದ್ದರು. ದೆಹಲಿ ಪೊಲೀಸರಿಗೆ ಕುಸ್ತಿಪಟು ಫೋಟೋ ಸಾಕ್ಷಿಯನ್ನು ಒದಗಿಸಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಬುಧವಾರ ನೀಡಿದ ಹೇಳಿಕೆಯ ಪ್ರಕಾರ, “ಜೂನ್ 15ರಂದು ಪೊಲೀಸ್ ತನಿಖೆ ಮುಕ್ತಾಯಗೊಳ್ಳಲಿದೆ. ತನಿಖೆಗೆ ಒಳಪಡಿಸಲಾದ ನಾಲ್ಕು ರಾಜ್ಯಗಳ 125ಕ್ಕೂ ಹೆಚ್ಚು ಸಂಭಾವ್ಯ ಸಾಕ್ಷಿಗಳಲ್ಲಿ ಜಗ್ಬೀರ್‌ ಸಿಂಗ್‌ ಕೂಡ ಒಬ್ಬರಾಗಿದ್ದಾರೆ.”

ಒಲಿಂಪಿಯನ್, ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ, ಅಂತಾರಾಷ್ಟ್ರೀಯ ರೆಫರಿ ಮತ್ತು ರಾಜ್ಯ ಮಟ್ಟದ ಕೋಚ್- ಈ ನಾಲ್ವರು ಕನಿಷ್ಠ ಮೂವರು ಮಹಿಳಾ ಕುಸ್ತಿಪಟುಗಳ ಆರೋಪಗಳನ್ನು ದೃಢಪಡಿಸಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಹೇಳಿದೆ.

“ಅವನು (ಬ್ರಿಜ್ ಭೂಷಣ್) ಅವಳ ಪಕ್ಕದಲ್ಲಿ ನಿಂತಿರುವುದನ್ನು ನಾನು ನೋಡಿದೆ. ಆಕೆ ಆತನಿಂದ ದೂರ ನಿಲ್ಲಲು ಮುಂದಾದಳು, ದೂರ ನಿಂತಳು, ಗೊಣಗಿದಳು. ಆಕೆ ಮೊದಲು ಅಧ್ಯಕ್ಷರ ಪಕ್ಕದಲ್ಲಿ ನಿಂತಿದ್ದಳು, ಆದರೆ ನಂತರ ಮುಂದೆ ಬಂದಳು. ಈ ಮಹಿಳಾ ಕುಸ್ತಿಪಟು ಹೇಗೆ ಪ್ರತಿಕ್ರಿಯಿಸುತ್ತಿದ್ದಾರೆಂದು ನಾನು ನೋಡಿದೆ. ಆಕೆ ತೊಂದರೆಯಲ್ಲಿದ್ದಾಳೆ ಅನಿಸಿತು. ಆಕೆಯೊಂದಿಗೆ ಏನೋ ತಪ್ಪಾಗಿರುವುದು ತಿಳಿಯಿತು. ಇಲ್ಲಿ ಬಾ, ಇಲ್ಲಿ ಬಂದು ನಿಲ್ಲು ಎಂದು ಕುಸ್ತಿಪಟುಗಳನ್ನು ಆತ ಮುಟ್ಟುತ್ತಲೇ ಇದ್ದನು. ಕುಸ್ತಿಪಟುವಿಗೆ ಆ ದಿನ (ಫೋಟೋ ಸೆಷನ್ ಸಮಯದಲ್ಲಿ) ಏನೋ ತಪ್ಪಾಗಿದೆ ಎಂದು ಸ್ಪಷ್ಟವಾಯಿತು” ಎಂದು ಜಗ್ಬೀರ್‌ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಎಫ್‌ಐಆರ್‌ನ ಪ್ರಕಾರ, “ಫೋಟೋ ತೆಗೆಸಿಕೊಳ್ಳುವ ಸಂದರ್ಭದಲ್ಲಿ ಆತನಿಂದ ಬಿಡಿಸಿಕೊಂಡು ಮುಂದಿನ ಸಾಲಿಗೆ ತೆರಳುವ ಮುನ್ನ ಆತ ಬಲವಂತವಾಗಿ ಆಕೆಯ ಭುಜವನ್ನು ಹಿಡಿದಿದ್ದನು.”

“ನಾನು ಅತ್ಯಂತ ಎತ್ತರದ ಕುಸ್ತಿಪಟುಗಳಲ್ಲಿ ಒಬ್ಬಳಾಗಿದ್ದರಿಂದ, ನಾನು ಕೊನೆಯ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ನಾನು ಕೊನೆಯ ಸಾಲಿನಲ್ಲಿ ನಿಂತು, ಇತರ ಕುಸ್ತಿಪಟುಗಳು ತಮ್ಮ ಸ್ಥಾನಗಳಲ್ಲಿ ನಿಲ್ಲಲೆಂದು ಕಾಯುತ್ತಿದ್ದಾಗ ಬ್ರಿಜ್ ಭೂಷಣ್‌ ಬಂದು ನನ್ನ ಪಕ್ಕದಲ್ಲಿ ನಿಂತನು. ನನ್ನ ನಿತಂಬದ ಮೇಲೆ ಕೈ ಹಾಕಿದ್ದು ನನ್ನ ಅನುಭವಕ್ಕೆ ಬಂದಿತು…”

“…ನಾನು ತಕ್ಷಣ ಗಾಬರಿಯಿಂದ ಹಿಂತಿರುಗಿ ನೋಡಿದೆ. ಆರೋಪಿಯು ನನ್ನ ನಿತಂಬದ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಆರೋಪಿಯು ಮತ್ತಷ್ಟು ಅನುಚಿತ ಸ್ಪರ್ಶ ಮಾಡುವುದರಿಂದ ತಪ್ಪಿಸಿಕೊಳ್ಳಲು ನಾನು ತಕ್ಷಣವೇ ಆ ಸ್ಥಳದಿಂದ ದೂರ ಸರಿಯಲು ಪ್ರಯತ್ನಿಸಿದೆ. ಆದರೆ, ನಾನು ದೂರ ಹೋಗಲು ಯತ್ನಿಸಿದಾಗ ಆರೋಪಿ ಬ್ರಿಜ್ ಭೂಷಣ್‌ ನನ್ನ ಭುಜವನ್ನು ಬಲವಂತವಾಗಿ ಹಿಡಿದಿದ್ದರು. ಹೇಗೋ ಆರೋಪಿಯ ಕಪಿಮುಷ್ಠಿಯಿಂದ ಪಾರಾದೆ. ತಂಡದ ಫೋಟೋ ಕ್ಲಿಕ್ಕಿಸುವುದನ್ನು ನಾನು ತಪ್ಪಿಸಲು ಸಾಧ್ಯವಾಗದ ಕಾರಣ, ನಾನು ಆರೋಪಿಯಿಂದ ದೂರವಿದ್ದು ಮೊದಲ ಸಾಲಿನಲ್ಲಿ ಕುಳಿತುಕೊಳ್ಳಲು ನಿರ್ಧರಿಸಿದೆ” ಎಂದು ದೂರುದಾರರು ವಿವರಿಸಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಗೊಂಡಿದೆ.

“ಒಪ್ಪಿಗೆಯಿಲ್ಲದ ‘ಅತ್ಯಂತ ಅಸಭ್ಯ’ ಮತ್ತು ‘ಆಕ್ಷೇಪಾರ್ಹ’ ನಡೆಯಿಂದಾಗಿ ನಾನು ದಿಗ್ಭ್ರಮೆಗೊಂಡಿದ್ದೇನೆ” ಎಂದಿದ್ದಾರೆ ಕುಸ್ತಿಪಟು.

ಮತ್ತೊಬ್ಬ ಸಾಕ್ಷಿ, 2010ರ ಸಿಡಬ್ಲ್ಯುಜಿ ಚಿನ್ನದ ಪದಕ ವಿಜೇತೆ ಅನಿತಾ ಕೂಡ ಈ ಆರೋಪಗಳನ್ನು ದೃಢೀಕರಿಸಿದ್ದಾರೆ.

ಇದನ್ನೂ ಓದಿರಿ: ಜೂ.15ರ ವರೆಗೆ ಪ್ರತಿಭಟನೆ ಸ್ಥಗಿತ: ಕ್ರೀಡಾ ಸಚಿವರ ಭೇಟಿ ಬಳಿಕ ಕುಸ್ತಿಪಟುಗಳ ಹೇಳಿಕೆ

“ತನ್ನನ್ನು ಕೋಣೆಗೆ ಕರೆದು ಬಲವಂತವಾಗಿ ಬ್ರಿಜ್ ಭೂಷಣ್ ತಬ್ಬಿಕೊಂಡಿರುವ ಕುರಿತು ಕುಸ್ತಿಪಟು ತಿಳಿಸಿದ್ದರು” ಎಂದು ಅನಿತಾ ವಿವರಿಸಿದ್ದಾರೆ.

ಪಟಿಯಾಲದ ರಾಷ್ಟ್ರೀಯ ಶಿಬಿರಕ್ಕೆ ಹಿಂದಿರುಗಿದ ನಂತರ ಸಂತ್ರಸ್ತ ಕುಸ್ತಿಪಟು, ಅನಿತಾ ಅವರಲ್ಲಿ ತಮ್ಮ ನೋವನ್ನು ಹೇಳಿಕೊಳ್ಳುತ್ತಾ ಕಣ್ಣೀರು ಹಾಕಿದ್ದರು.

ಅಪ್ರಾಪ್ತ ಕುಸ್ತಿಪಟು ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಎರಡು ಎಫ್‌ಐಆರ್‌ಗಳು ಅಘಾತಕಾರಿ ಅಂಶಗಳನ್ನು ಹೊಂದಿವೆ. “ನೀನು ಈ ಕ್ಷೇತ್ರದಲ್ಲಿ ಬೆಳೆಯಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕು” ಎಂದು ಬ್ರಿಜ್‌ ಭೂಷಣ್ ಒತ್ತಾಯಿಸುತ್ತಿದ್ದ ಕನಿಷ್ಠ ಎರಡು ನಿದರ್ಶನಗಳು ಉಲ್ಲೇಖಗೊಂಡಿವೆ.

ಅನುಚಿತ ಸ್ಪರ್ಶ ಕುರಿತ 15 ಲೈಂಗಿಕ ಕಿರುಕುಳ ಘಟನೆಗಳು, ಸ್ತನಗಳ ಮೇಲೆ ಕೈಗಳನ್ನು ಆಡಿಸಿದ್ದು, ಹೊಕ್ಕುಳನ್ನು ಸ್ಪರ್ಶಿಸಿದ್ದು, ಹಿಂಬಾಲಿಸಿದ್ದು-  ಮೊದಲಾದ ಆರೋಪಗಳನ್ನು ಕುಸ್ತಿಪಟುಗಳು ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...