Homeಮುಖಪುಟ‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಸಂಗತಿಗಳು ಹೊರಬೀಳುತ್ತಿವೆ. ವಯಸ್ಕ ಆರು ಮಂದಿ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಪೈಕಿ ಒಬ್ಬ ಕುಸ್ತಿಪಟುವಿನ ಆರೋಪಗಳನ್ನು ಅಂತಾರಾಷ್ಟ್ರೀಯ ರೆಫರಿ ದೃಢೀಕರಿಸಿದ್ದಾರೆ.

“ಏಷಿಯನ್ ಚಾಂಪಿಯನ್‌ಶಿಪ್‌ಗಾಗಿ ಅಭ್ಯಾಸವನ್ನು ನಡೆಸಿದ ಬಳಿಕ ಕೊನೆಯಲ್ಲಿ ತಂಡದ ಫೋಟೋ ಸೆಷನ್‌ ಇತ್ತು. ಆ ಸಂದರ್ಭದಲ್ಲಿ ಆತ (ಬ್ರಿಜ್‌ ಭೂಷಣ್) ನನ್ನ ನಿತಂಬದ (ಕುಂಡಿ) ಮೇಲೆ ಕೈ ಇಟ್ಟನು. ನಂತರ ನಾನು ದೂರು ಸರಿಯಲು ಯತ್ನಿಸಿದೆ” ಎಂದು ತಿಳಿಸಿದ್ದಾರೆ. ಈ ಆರೋಪವನ್ನು ಅಂತಾರಾಷ್ಟ್ರೀಯ ಕುಸ್ತಿ ರೆಫರಿ ದೃಢಪಡಿಸಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

2007ರಿಂದಲೂ ಅಂತಾರಾಷ್ಟ್ರೀಯ ಕುಸ್ತಿ ರೆಫರಿಯಾಗಿರುವ ಜಗಬೀರ್‌ ಸಿಂಗ್‌, ಸಂತ್ರಸ್ತ ಕುಸ್ತಿಪಟು ಮಾಡಿರುವ ಆರೋಪವನ್ನು ದೃಢಪಡಿಸಿದ್ದಾರೆ. ಅಂದು ಈ ರೆಫರಿಯು ದೂರದಾರ ಕುಸ್ತಿಪಟು ಮತ್ತು ಬ್ರಿಜ್ ಭೂಷಣ್‌ ಅವರಿಂದ ಕೆಲವೇ ಅಡಿಗಳ ಅಂತರದಲ್ಲಿ ನಿಂತಿದ್ದರು. ದೆಹಲಿ ಪೊಲೀಸರಿಗೆ ಕುಸ್ತಿಪಟು ಫೋಟೋ ಸಾಕ್ಷಿಯನ್ನು ಒದಗಿಸಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಬುಧವಾರ ನೀಡಿದ ಹೇಳಿಕೆಯ ಪ್ರಕಾರ, “ಜೂನ್ 15ರಂದು ಪೊಲೀಸ್ ತನಿಖೆ ಮುಕ್ತಾಯಗೊಳ್ಳಲಿದೆ. ತನಿಖೆಗೆ ಒಳಪಡಿಸಲಾದ ನಾಲ್ಕು ರಾಜ್ಯಗಳ 125ಕ್ಕೂ ಹೆಚ್ಚು ಸಂಭಾವ್ಯ ಸಾಕ್ಷಿಗಳಲ್ಲಿ ಜಗ್ಬೀರ್‌ ಸಿಂಗ್‌ ಕೂಡ ಒಬ್ಬರಾಗಿದ್ದಾರೆ.”

ಒಲಿಂಪಿಯನ್, ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ, ಅಂತಾರಾಷ್ಟ್ರೀಯ ರೆಫರಿ ಮತ್ತು ರಾಜ್ಯ ಮಟ್ಟದ ಕೋಚ್- ಈ ನಾಲ್ವರು ಕನಿಷ್ಠ ಮೂವರು ಮಹಿಳಾ ಕುಸ್ತಿಪಟುಗಳ ಆರೋಪಗಳನ್ನು ದೃಢಪಡಿಸಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಹೇಳಿದೆ.

“ಅವನು (ಬ್ರಿಜ್ ಭೂಷಣ್) ಅವಳ ಪಕ್ಕದಲ್ಲಿ ನಿಂತಿರುವುದನ್ನು ನಾನು ನೋಡಿದೆ. ಆಕೆ ಆತನಿಂದ ದೂರ ನಿಲ್ಲಲು ಮುಂದಾದಳು, ದೂರ ನಿಂತಳು, ಗೊಣಗಿದಳು. ಆಕೆ ಮೊದಲು ಅಧ್ಯಕ್ಷರ ಪಕ್ಕದಲ್ಲಿ ನಿಂತಿದ್ದಳು, ಆದರೆ ನಂತರ ಮುಂದೆ ಬಂದಳು. ಈ ಮಹಿಳಾ ಕುಸ್ತಿಪಟು ಹೇಗೆ ಪ್ರತಿಕ್ರಿಯಿಸುತ್ತಿದ್ದಾರೆಂದು ನಾನು ನೋಡಿದೆ. ಆಕೆ ತೊಂದರೆಯಲ್ಲಿದ್ದಾಳೆ ಅನಿಸಿತು. ಆಕೆಯೊಂದಿಗೆ ಏನೋ ತಪ್ಪಾಗಿರುವುದು ತಿಳಿಯಿತು. ಇಲ್ಲಿ ಬಾ, ಇಲ್ಲಿ ಬಂದು ನಿಲ್ಲು ಎಂದು ಕುಸ್ತಿಪಟುಗಳನ್ನು ಆತ ಮುಟ್ಟುತ್ತಲೇ ಇದ್ದನು. ಕುಸ್ತಿಪಟುವಿಗೆ ಆ ದಿನ (ಫೋಟೋ ಸೆಷನ್ ಸಮಯದಲ್ಲಿ) ಏನೋ ತಪ್ಪಾಗಿದೆ ಎಂದು ಸ್ಪಷ್ಟವಾಯಿತು” ಎಂದು ಜಗ್ಬೀರ್‌ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಎಫ್‌ಐಆರ್‌ನ ಪ್ರಕಾರ, “ಫೋಟೋ ತೆಗೆಸಿಕೊಳ್ಳುವ ಸಂದರ್ಭದಲ್ಲಿ ಆತನಿಂದ ಬಿಡಿಸಿಕೊಂಡು ಮುಂದಿನ ಸಾಲಿಗೆ ತೆರಳುವ ಮುನ್ನ ಆತ ಬಲವಂತವಾಗಿ ಆಕೆಯ ಭುಜವನ್ನು ಹಿಡಿದಿದ್ದನು.”

“ನಾನು ಅತ್ಯಂತ ಎತ್ತರದ ಕುಸ್ತಿಪಟುಗಳಲ್ಲಿ ಒಬ್ಬಳಾಗಿದ್ದರಿಂದ, ನಾನು ಕೊನೆಯ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ನಾನು ಕೊನೆಯ ಸಾಲಿನಲ್ಲಿ ನಿಂತು, ಇತರ ಕುಸ್ತಿಪಟುಗಳು ತಮ್ಮ ಸ್ಥಾನಗಳಲ್ಲಿ ನಿಲ್ಲಲೆಂದು ಕಾಯುತ್ತಿದ್ದಾಗ ಬ್ರಿಜ್ ಭೂಷಣ್‌ ಬಂದು ನನ್ನ ಪಕ್ಕದಲ್ಲಿ ನಿಂತನು. ನನ್ನ ನಿತಂಬದ ಮೇಲೆ ಕೈ ಹಾಕಿದ್ದು ನನ್ನ ಅನುಭವಕ್ಕೆ ಬಂದಿತು…”

“…ನಾನು ತಕ್ಷಣ ಗಾಬರಿಯಿಂದ ಹಿಂತಿರುಗಿ ನೋಡಿದೆ. ಆರೋಪಿಯು ನನ್ನ ನಿತಂಬದ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಆರೋಪಿಯು ಮತ್ತಷ್ಟು ಅನುಚಿತ ಸ್ಪರ್ಶ ಮಾಡುವುದರಿಂದ ತಪ್ಪಿಸಿಕೊಳ್ಳಲು ನಾನು ತಕ್ಷಣವೇ ಆ ಸ್ಥಳದಿಂದ ದೂರ ಸರಿಯಲು ಪ್ರಯತ್ನಿಸಿದೆ. ಆದರೆ, ನಾನು ದೂರ ಹೋಗಲು ಯತ್ನಿಸಿದಾಗ ಆರೋಪಿ ಬ್ರಿಜ್ ಭೂಷಣ್‌ ನನ್ನ ಭುಜವನ್ನು ಬಲವಂತವಾಗಿ ಹಿಡಿದಿದ್ದರು. ಹೇಗೋ ಆರೋಪಿಯ ಕಪಿಮುಷ್ಠಿಯಿಂದ ಪಾರಾದೆ. ತಂಡದ ಫೋಟೋ ಕ್ಲಿಕ್ಕಿಸುವುದನ್ನು ನಾನು ತಪ್ಪಿಸಲು ಸಾಧ್ಯವಾಗದ ಕಾರಣ, ನಾನು ಆರೋಪಿಯಿಂದ ದೂರವಿದ್ದು ಮೊದಲ ಸಾಲಿನಲ್ಲಿ ಕುಳಿತುಕೊಳ್ಳಲು ನಿರ್ಧರಿಸಿದೆ” ಎಂದು ದೂರುದಾರರು ವಿವರಿಸಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಗೊಂಡಿದೆ.

“ಒಪ್ಪಿಗೆಯಿಲ್ಲದ ‘ಅತ್ಯಂತ ಅಸಭ್ಯ’ ಮತ್ತು ‘ಆಕ್ಷೇಪಾರ್ಹ’ ನಡೆಯಿಂದಾಗಿ ನಾನು ದಿಗ್ಭ್ರಮೆಗೊಂಡಿದ್ದೇನೆ” ಎಂದಿದ್ದಾರೆ ಕುಸ್ತಿಪಟು.

ಮತ್ತೊಬ್ಬ ಸಾಕ್ಷಿ, 2010ರ ಸಿಡಬ್ಲ್ಯುಜಿ ಚಿನ್ನದ ಪದಕ ವಿಜೇತೆ ಅನಿತಾ ಕೂಡ ಈ ಆರೋಪಗಳನ್ನು ದೃಢೀಕರಿಸಿದ್ದಾರೆ.

ಇದನ್ನೂ ಓದಿರಿ: ಜೂ.15ರ ವರೆಗೆ ಪ್ರತಿಭಟನೆ ಸ್ಥಗಿತ: ಕ್ರೀಡಾ ಸಚಿವರ ಭೇಟಿ ಬಳಿಕ ಕುಸ್ತಿಪಟುಗಳ ಹೇಳಿಕೆ

“ತನ್ನನ್ನು ಕೋಣೆಗೆ ಕರೆದು ಬಲವಂತವಾಗಿ ಬ್ರಿಜ್ ಭೂಷಣ್ ತಬ್ಬಿಕೊಂಡಿರುವ ಕುರಿತು ಕುಸ್ತಿಪಟು ತಿಳಿಸಿದ್ದರು” ಎಂದು ಅನಿತಾ ವಿವರಿಸಿದ್ದಾರೆ.

ಪಟಿಯಾಲದ ರಾಷ್ಟ್ರೀಯ ಶಿಬಿರಕ್ಕೆ ಹಿಂದಿರುಗಿದ ನಂತರ ಸಂತ್ರಸ್ತ ಕುಸ್ತಿಪಟು, ಅನಿತಾ ಅವರಲ್ಲಿ ತಮ್ಮ ನೋವನ್ನು ಹೇಳಿಕೊಳ್ಳುತ್ತಾ ಕಣ್ಣೀರು ಹಾಕಿದ್ದರು.

ಅಪ್ರಾಪ್ತ ಕುಸ್ತಿಪಟು ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಎರಡು ಎಫ್‌ಐಆರ್‌ಗಳು ಅಘಾತಕಾರಿ ಅಂಶಗಳನ್ನು ಹೊಂದಿವೆ. “ನೀನು ಈ ಕ್ಷೇತ್ರದಲ್ಲಿ ಬೆಳೆಯಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕು” ಎಂದು ಬ್ರಿಜ್‌ ಭೂಷಣ್ ಒತ್ತಾಯಿಸುತ್ತಿದ್ದ ಕನಿಷ್ಠ ಎರಡು ನಿದರ್ಶನಗಳು ಉಲ್ಲೇಖಗೊಂಡಿವೆ.

ಅನುಚಿತ ಸ್ಪರ್ಶ ಕುರಿತ 15 ಲೈಂಗಿಕ ಕಿರುಕುಳ ಘಟನೆಗಳು, ಸ್ತನಗಳ ಮೇಲೆ ಕೈಗಳನ್ನು ಆಡಿಸಿದ್ದು, ಹೊಕ್ಕುಳನ್ನು ಸ್ಪರ್ಶಿಸಿದ್ದು, ಹಿಂಬಾಲಿಸಿದ್ದು-  ಮೊದಲಾದ ಆರೋಪಗಳನ್ನು ಕುಸ್ತಿಪಟುಗಳು ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...