Homeಮುಖಪುಟಲೈಂಗಿಕ ಉದ್ದೇಶವಿಲ್ಲದೆ ಮಗುವಿನ ಕೆನ್ನೆ ಮುಟ್ಟುವುದು ಲೈಂಗಿಕ ದೌರ್ಜನ್ಯವಲ್ಲ-ಬಾಂಬೆ ಹೈಕೋರ್ಟ್

ಲೈಂಗಿಕ ಉದ್ದೇಶವಿಲ್ಲದೆ ಮಗುವಿನ ಕೆನ್ನೆ ಮುಟ್ಟುವುದು ಲೈಂಗಿಕ ದೌರ್ಜನ್ಯವಲ್ಲ-ಬಾಂಬೆ ಹೈಕೋರ್ಟ್

- Advertisement -
- Advertisement -

ಲೈಂಗಿಕ ಉದ್ದೇಶವಿಲ್ಲದೆ ಮಗುವಿನ ಕೆನ್ನೆಗಳನ್ನು ಮುಟ್ಟಿದರೆ ಫೋಕ್ಸೋ ಕಾಯಿದೆಯಡಿ “ಲೈಂಗಿಕ ದೌರ್ಜನ್ಯ”ದ ಅಪರಾಧವಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವಿದ್ದ 46 ವರ್ಷದ ವ್ಯಕ್ತಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

46 ವರ್ಷದ ಕೋಳಿ ಮಾರಾಟಗಾರ ಮೊಹಮ್ಮದ್ ಉಲ್ಲಾ ಅವರು ಕಳೆದ 13 ತಿಂಗಳಿನಿಂದ ಈ ಆರೋಪದಲ್ಲಿ ಜೈಲಿನಲ್ಲಿದ್ದರು. ಪ್ರಾಥಮಿಕ ದಾಖಲೆ ಪ್ರಕಾರ ಆರೋಪಿಯು ಲೈಂಗಿಕ ಉದ್ದೇಶದಿಂದ ಅಪ್ತಾಪ್ತೆಯ ಕೆನ್ನೆಯನ್ನು ಮುಟ್ಟಿರುವುದನ್ನು ಸೂಚಿಸಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಸಂದೀಪ್ ಶಿಂಧೆ ಏಕ ಸದಸ್ಯ ಪೀಠ, “ನನ್ನ ಅಭಿಪ್ರಾಯದಲ್ಲಿ ಲೈಂಗಿಕ ಉದ್ದೇಶವಿಲ್ಲದೆ ಮಕ್ಕಳ ಕೆನ್ನೆಗಳನ್ನು ಮುಟ್ಟುವುದು ಲೈಂಗಿಕ ದೌರ್ಜನ್ಯದ ಅಪರಾಧವಾಗುವುದಿಲ್ಲ. ಪೋಕ್ಸೋ ಕಾಯ್ದೆಯ ಸೆಕ್ಷನ್ 7ರ ಅಡಿಯಲ್ಲಿ ಈ ಬಗ್ಗೆ ವ್ಯಾಖ್ಯಾನಿಸಲಾಗಿದೆ’ ಎಂದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: 18 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ, ಪ್ರಕರಣ ದಾಖಲು

“ಆದರೆ, ನ್ಯಾಯಾಲಯದ ಇಂದಿನ ಅಭಿಪ್ರಾಯ ಆರೋಪಿಯ ಜಾಮೀನಿಗಾಗಿ ಮಾತ್ರ ಎಂದು ಅರ್ಥೈಸಿಕೊಳ್ಳಬೇಕು. ಇತರ ವಿಷಯಗಳ ವಿಚಾರಣೆಯ ಮೇಲೆ ಇದು ಯಾವುದೇ ರೀತಿಯಲ್ಲಿ ಪ್ರಭಾವ ಬೀರುವುದಿಲ್ಲ” ಎಂದು ಹೇಳಿದ್ದಾರೆ.

ಠಾಣೆ ಜಿಲ್ಲೆಯ ರಾಬೋಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಕೋಳಿ ಮಾಂಸ ಮಾರಾಟಗಾರ ಮೊಹಮ್ಮದ್‌ ಉಲ್ಲಾ ತಮ್ಮ ಅಂಗಡಿಗೆ ಬಂದಿದ್ದ 8 ವರ್ಷದ ಬಾಲಕಿಯ ಕೆನ್ನೆ ಸವರಿದ್ದರೆಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಮಹಿಳೆಯೊಬ್ಬರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಉಲ್ಲಾನನ್ನು ಕಳೆದ ವರ್ಷ ಜುಲೈ 2020 ನಲ್ಲಿ ಬಂಧಿಸಿದ್ದ ಪೊಲೀಸರು ನವಿಮುಂಬೈನ ತಲೋಜಾ ಜೈಲಿನಲ್ಲಿರಿಸಿದ್ದರು.

ಈ ಹಿಂದೆ ಆರೋಪಿಯ ಜಾಮೀನು ಅರ್ಜಿಗಳನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು. ವಕೀಲ ರಾಮ್ ಪ್ರಸಾದ್ ಗುಪ್ತಾ ಆರೋಪಿಯ ಪರವಾಗಿ ಹಾಜರಾಗಿ, ವ್ಯಾಪಾರದ ಪೈಪೋಟಿಯ ಮೇಲೆ ಆರೋಪಿಯನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಅರ್ಜಿ ಸಲ್ಲಿಸಿದ್ದರು.

ಪತ್ನಿಯ ಇಚ್ಛೆಗೆ ವಿರುದ್ಧವಾಗಿ ಪತಿ ನಡೆಸುವ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಛತ್ತೀಸಗಢ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ಛತ್ತೀಸಗಢ ಹೈಕೋರ್ಟ್ ತೀರ್ಪಿಗೆ ನಟಿ ತಾಪ್ಸಿ ಪನ್ನು, ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿ ಸಂಘಟನೆಗಳು ಸೇರಿದಂತೆ ಹಲವು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ- ತನಿಖೆಗೆ ತಂಡ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...