Homeಮುಖಪುಟಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

ಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

- Advertisement -
- Advertisement -

ರಾಜ್ಯದಲ್ಲಿ ಪ್ರವಾಸೋದ್ಯಮವು ಕುಸಿತ ಕಾಣುತ್ತಿದೆ ಎಂದು ಪ್ರತಿಪಾದಿಸಲು “ಸುಳ್ಳು ಅಂಕಿ-ಅಂಶಗಳನ್ನು” ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿ ಗೋವಾ ಸರ್ಕಾರವು ವ್ಯಕ್ತಿಯೊಬ್ಬರ ವಿರುದ್ಧ ಶುಕ್ರವಾರ ಪೊಲೀಸ್ ದೂರು ದಾಖಲಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ವ್ಯಕ್ತಿಯು ಲಂಡನ್ ಮೂಲದ ವಿಶ್ಲೇಷಣಾ ಕಂಪನಿಯಾದ CEIC ಡೇಟಾದ ಅಂಕಿಅಂಶಗಳನ್ನು ಉಲ್ಲೇಖಿಸಿ, “ಗೋವಾದಲ್ಲಿ ಪ್ರವಾಸೋದ್ಯಮವು ಕುಸಿಯುತ್ತಿದೆ” ಎಂದು ಹೇಳಿದ್ದರು. ಪ್ರವಾಸೋದ್ಯಮ ಕುಸಿತ

ಗೋವಾದಲ್ಲಿ ವಿದೇಶಿ ಪ್ರವಾಸಿಗರ 2019 ಮತ್ತು 2023 ಅಂಕಿ ಅಂಶಗಳ ನಡುವಿನ ಹೋಲಿಕೆಯನ್ನು ಉಲ್ಲೇಖಿಸಿ ರಾಮಾನುಜ್ ಮುಖರ್ಜಿ ಅವರು ನವೆಂಬರ್ 5 ರಂದು ಟ್ವಿಟರ್‌ನಲ್ಲಿ ಪೋಸ್ಟ್ ಹಾಕಿದ್ದರು. ಅದರಲ್ಲಿ ಅವರು ವಿದೇಶಿ ಪ್ರವಾಸಿಗರು ಗೋವಾ ಬದಲಿಗೆ ಶ್ರೀಲಂಕಾದಂತಹ ಇತರ ಸ್ಥಳಗಳಿಗೆ ತೆರಳುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಭಾರತೀಯ ಪ್ರವಾಸಿಗರು ಗೋವಾಕ್ಕೆ ಇನ್ನೂ ಭೇಟಿ ನೀಡುತ್ತಿದ್ದಾರೆ. ಅದರೆ, ವಿದೇಶದಲ್ಲಿ ಗೋವಾದಂತೆಯೆ ಇರುವ ಹಲವಾರು ಅಗ್ಗದ ಸ್ಥಳಗಳಿರುವಾಗ ಮತ್ತು ಗೋವಾದಲ್ಲಿ ಪ್ರವಾಸಿಗರ ಶೋಷಣೆಯ ಬಗ್ಗೆಗಿನ ವಿಚಾರ ಹರಡಿದರೆ ಅವರು ಕೂಡಾ ಶೀಘ್ರದಲ್ಲೇ ಗೋವಾಗೆ ಭೇಟಿ ನೀಡುವುದನ್ನು ನಿಲ್ಲಿಸುತ್ತಾರೆ” ಎಂದು ಅವರು ಹೇಳಿದ್ದರು.

ಲಂಡನ್ ಮೂಲದ ವಿಶ್ಲೇಷಣಾ ಕಂಪನಿಯಾದ CEIC ಡೇಟಾದ ಅಂಕಿಅಂಶಗಳನ್ನು ಉಲ್ಲೇಖಿಸಿ, “ಗೋವಾದಲ್ಲಿ ಪ್ರವಾಸೋದ್ಯಮವು ಕುಸಿತ ಕಂಡಿದೆ” ಎಂದು ಮುಖರ್ಜಿ ಉಲ್ಲೇಖಿಸಿದ್ದರು. ಪ್ರವಾಸೋದ್ಯಮ ಕುಸಿತ

ಮುಖರ್ಜಿ ಅವರ ಪೋಸ್ಟ್‌ಗೆ ಪ್ರತಿಕ್ರಿಯೆಯಾಗಿ, ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಗೋವಾದಲ್ಲಿ ವಿಶ್ವಾಸಾರ್ಹ ಸಾರಿಗೆ ಮತ್ತು ಸಮಂಜಸವಾದ ಹೋಟೆಲ್ ದರಗಳನ್ನು ಹುಡುಕಲು ಹೆಣಗಾಡುತ್ತಿರುವ ಅನುಭವಗಳ ಬಗ್ಗೆ ವಿವರಿಸಿದ್ದಾರೆ.

ಆದಾಗ್ಯೂ, ರಾಜ್ಯದ ಪ್ರವಾಸೋದ್ಯಮ ಇಲಾಖೆಯು, ಮುಖರ್ಜಿ ಅವರು ಸುಳ್ಳು ದತ್ತಾಂಶವನ್ನು ಇಟ್ಟುಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದೆ. ಅವರು “ಸಾರ್ವಜನಿಕ ಕಿಡಿಗೇಡಿತನ” ಮಾಡುತ್ತಿದ್ದಾರೆ ಎಂದು ಎಂದು ಆರೋಪಿಸಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಅವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

“ಇಂತಹ ಸುಳ್ಳು ಹೇಳಿಕೆಗಳ ಪ್ರಚಾರವು ನಮ್ಮ ರಾಜ್ಯದ ಪ್ರತಿಷ್ಠೆಗೆ ಧಕ್ಕೆ ತರುವುದಲ್ಲದೆ, ಸಾರ್ವಜನಿಕ ನೆಮ್ಮದಿಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. ಅವರ ಈ ಹೇಳಿಕೆಯು ಗೋವಾದ ಇಮೇಜ್ ಅನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿರುವ ಗುಪ್ತ ಕಾರ್ಯಸೂಚಿಯ ಭಾಗವಾಗಿರಬಹುದು ಎಂದು ಪ್ರವಾಸೋದ್ಯಮ ಇಲಾಖೆಯು ವಿಶೇಷವಾಗಿ ಆತಂಕ ವ್ಯಕ್ತಪಡಿಸಿದೆ” ಎಂದು ಅವರು ದೂರಿನಲ್ಲಿ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಪೋಸ್ಟ್ ಅನ್ನು ಅಪ್‌ಲೋಡ್ ಮಾಡುವ ಮೊದಲು ಮುಖರ್ಜಿ ಅವರು ಪ್ರವಾಸೋದ್ಯಮ ಇಲಾಖೆಯೊಂದಿಗೆ ಸಮಾಲೋಚಿಸಿಲ್ಲ, ಅವರು ನೀಡಿರುವ ಅಂಕಿ-ಅಂಶದ ವಿಶ್ವಾಸಾರ್ಹತೆ ಪ್ರಶ್ನಾರ್ಹವಾಗಿದೆ. ಜೊತೆಗೆ ಅವರ ಹೇಳಿಕೆಗಳು ಸಾರ್ವಜನಿಕ ಅಶಾಂತಿಯನ್ನು ಉಂಟುಮಾಡುವ ಉದ್ದೇಶವನ್ನು ಹೊಂದಿವೆ” ಎಂದು ಅವರು ಆರೋಪಿಸಿದ್ದಾರೆ.

ಪ್ರವಾಸೋದ್ಯಮ ಇಲಾಖೆಯ ದೂರಿಗೆ ಪ್ರತಿಕ್ರಿಯಿಸಿರುವ ಮುಖರ್ಜಿ, ತಾನು ಸಾರ್ವಜನಿಕವಾಗಿ ಲಭ್ಯವಿರುವ ಡೇಟಾವನ್ನು ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರವಾಸಿಗರು ಎತ್ತುವ ದೂರುಗಳನ್ನು ಪರಿಹರಿಸುವ ಬದಲು ರಾಜ್ಯ ಸರ್ಕಾರವು “ಟೀಕೆಗಳನ್ನು ಮುಚ್ಚಲು ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

“ಟೀಕೆಗಳನ್ನು ಇಲ್ಲದಂತೆ ಮಾಡಲು ಕಾನೂನಿನ ದುರುಪಯೋಗ ಮಾಡುವ ಬದಲು, ನಾನು ಉಲ್ಲೇಖಿಸಿದ ಅಂಕಿ ಅಂಶಗಳು ತಪ್ಪಾಗಿದೆ ಎಂದು ಅವರು ಸರಿಯಾದ ಅಂಕಿ ಅಂಶಗಳನ್ನು ಅಲ್ಲಿಗೆ ಹಾಕಬೇಕು. ಸರ್ಕಾರದ ಈ ಬೆದರಿಕೆಯನ್ನು ಕಾನೂನು ವಿಧಾನಗಳ ಮೂಲಕ ಎದುರಿಸುತ್ತೇನೆ” ಎಂದು ಮುಖರ್ಜಿ ಅವರು ಹೇಳಿದರು.

ಇದನ್ನೂ ಓದಿ: ವಿದ್ಯಾರ್ಥಿ ನೀತಿ ರದ್ದು ಮಾಡಿದ ಕೆನಡಾ – ಭಾರತದ 90% ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ವಿದ್ಯಾರ್ಥಿ ನೀತಿ ರದ್ದು ಮಾಡಿದ ಕೆನಡಾ – ಭಾರತದ 90% ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...