Homeಮುಖಪುಟಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

ಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

- Advertisement -
- Advertisement -

ರಾಜ್ಯದಲ್ಲಿ ಪ್ರವಾಸೋದ್ಯಮವು ಕುಸಿತ ಕಾಣುತ್ತಿದೆ ಎಂದು ಪ್ರತಿಪಾದಿಸಲು “ಸುಳ್ಳು ಅಂಕಿ-ಅಂಶಗಳನ್ನು” ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿ ಗೋವಾ ಸರ್ಕಾರವು ವ್ಯಕ್ತಿಯೊಬ್ಬರ ವಿರುದ್ಧ ಶುಕ್ರವಾರ ಪೊಲೀಸ್ ದೂರು ದಾಖಲಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ವ್ಯಕ್ತಿಯು ಲಂಡನ್ ಮೂಲದ ವಿಶ್ಲೇಷಣಾ ಕಂಪನಿಯಾದ CEIC ಡೇಟಾದ ಅಂಕಿಅಂಶಗಳನ್ನು ಉಲ್ಲೇಖಿಸಿ, “ಗೋವಾದಲ್ಲಿ ಪ್ರವಾಸೋದ್ಯಮವು ಕುಸಿಯುತ್ತಿದೆ” ಎಂದು ಹೇಳಿದ್ದರು. ಪ್ರವಾಸೋದ್ಯಮ ಕುಸಿತ

ಗೋವಾದಲ್ಲಿ ವಿದೇಶಿ ಪ್ರವಾಸಿಗರ 2019 ಮತ್ತು 2023 ಅಂಕಿ ಅಂಶಗಳ ನಡುವಿನ ಹೋಲಿಕೆಯನ್ನು ಉಲ್ಲೇಖಿಸಿ ರಾಮಾನುಜ್ ಮುಖರ್ಜಿ ಅವರು ನವೆಂಬರ್ 5 ರಂದು ಟ್ವಿಟರ್‌ನಲ್ಲಿ ಪೋಸ್ಟ್ ಹಾಕಿದ್ದರು. ಅದರಲ್ಲಿ ಅವರು ವಿದೇಶಿ ಪ್ರವಾಸಿಗರು ಗೋವಾ ಬದಲಿಗೆ ಶ್ರೀಲಂಕಾದಂತಹ ಇತರ ಸ್ಥಳಗಳಿಗೆ ತೆರಳುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಭಾರತೀಯ ಪ್ರವಾಸಿಗರು ಗೋವಾಕ್ಕೆ ಇನ್ನೂ ಭೇಟಿ ನೀಡುತ್ತಿದ್ದಾರೆ. ಅದರೆ, ವಿದೇಶದಲ್ಲಿ ಗೋವಾದಂತೆಯೆ ಇರುವ ಹಲವಾರು ಅಗ್ಗದ ಸ್ಥಳಗಳಿರುವಾಗ ಮತ್ತು ಗೋವಾದಲ್ಲಿ ಪ್ರವಾಸಿಗರ ಶೋಷಣೆಯ ಬಗ್ಗೆಗಿನ ವಿಚಾರ ಹರಡಿದರೆ ಅವರು ಕೂಡಾ ಶೀಘ್ರದಲ್ಲೇ ಗೋವಾಗೆ ಭೇಟಿ ನೀಡುವುದನ್ನು ನಿಲ್ಲಿಸುತ್ತಾರೆ” ಎಂದು ಅವರು ಹೇಳಿದ್ದರು.

ಲಂಡನ್ ಮೂಲದ ವಿಶ್ಲೇಷಣಾ ಕಂಪನಿಯಾದ CEIC ಡೇಟಾದ ಅಂಕಿಅಂಶಗಳನ್ನು ಉಲ್ಲೇಖಿಸಿ, “ಗೋವಾದಲ್ಲಿ ಪ್ರವಾಸೋದ್ಯಮವು ಕುಸಿತ ಕಂಡಿದೆ” ಎಂದು ಮುಖರ್ಜಿ ಉಲ್ಲೇಖಿಸಿದ್ದರು. ಪ್ರವಾಸೋದ್ಯಮ ಕುಸಿತ

ಮುಖರ್ಜಿ ಅವರ ಪೋಸ್ಟ್‌ಗೆ ಪ್ರತಿಕ್ರಿಯೆಯಾಗಿ, ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಗೋವಾದಲ್ಲಿ ವಿಶ್ವಾಸಾರ್ಹ ಸಾರಿಗೆ ಮತ್ತು ಸಮಂಜಸವಾದ ಹೋಟೆಲ್ ದರಗಳನ್ನು ಹುಡುಕಲು ಹೆಣಗಾಡುತ್ತಿರುವ ಅನುಭವಗಳ ಬಗ್ಗೆ ವಿವರಿಸಿದ್ದಾರೆ.

ಆದಾಗ್ಯೂ, ರಾಜ್ಯದ ಪ್ರವಾಸೋದ್ಯಮ ಇಲಾಖೆಯು, ಮುಖರ್ಜಿ ಅವರು ಸುಳ್ಳು ದತ್ತಾಂಶವನ್ನು ಇಟ್ಟುಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದೆ. ಅವರು “ಸಾರ್ವಜನಿಕ ಕಿಡಿಗೇಡಿತನ” ಮಾಡುತ್ತಿದ್ದಾರೆ ಎಂದು ಎಂದು ಆರೋಪಿಸಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಅವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

“ಇಂತಹ ಸುಳ್ಳು ಹೇಳಿಕೆಗಳ ಪ್ರಚಾರವು ನಮ್ಮ ರಾಜ್ಯದ ಪ್ರತಿಷ್ಠೆಗೆ ಧಕ್ಕೆ ತರುವುದಲ್ಲದೆ, ಸಾರ್ವಜನಿಕ ನೆಮ್ಮದಿಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. ಅವರ ಈ ಹೇಳಿಕೆಯು ಗೋವಾದ ಇಮೇಜ್ ಅನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿರುವ ಗುಪ್ತ ಕಾರ್ಯಸೂಚಿಯ ಭಾಗವಾಗಿರಬಹುದು ಎಂದು ಪ್ರವಾಸೋದ್ಯಮ ಇಲಾಖೆಯು ವಿಶೇಷವಾಗಿ ಆತಂಕ ವ್ಯಕ್ತಪಡಿಸಿದೆ” ಎಂದು ಅವರು ದೂರಿನಲ್ಲಿ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಪೋಸ್ಟ್ ಅನ್ನು ಅಪ್‌ಲೋಡ್ ಮಾಡುವ ಮೊದಲು ಮುಖರ್ಜಿ ಅವರು ಪ್ರವಾಸೋದ್ಯಮ ಇಲಾಖೆಯೊಂದಿಗೆ ಸಮಾಲೋಚಿಸಿಲ್ಲ, ಅವರು ನೀಡಿರುವ ಅಂಕಿ-ಅಂಶದ ವಿಶ್ವಾಸಾರ್ಹತೆ ಪ್ರಶ್ನಾರ್ಹವಾಗಿದೆ. ಜೊತೆಗೆ ಅವರ ಹೇಳಿಕೆಗಳು ಸಾರ್ವಜನಿಕ ಅಶಾಂತಿಯನ್ನು ಉಂಟುಮಾಡುವ ಉದ್ದೇಶವನ್ನು ಹೊಂದಿವೆ” ಎಂದು ಅವರು ಆರೋಪಿಸಿದ್ದಾರೆ.

ಪ್ರವಾಸೋದ್ಯಮ ಇಲಾಖೆಯ ದೂರಿಗೆ ಪ್ರತಿಕ್ರಿಯಿಸಿರುವ ಮುಖರ್ಜಿ, ತಾನು ಸಾರ್ವಜನಿಕವಾಗಿ ಲಭ್ಯವಿರುವ ಡೇಟಾವನ್ನು ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರವಾಸಿಗರು ಎತ್ತುವ ದೂರುಗಳನ್ನು ಪರಿಹರಿಸುವ ಬದಲು ರಾಜ್ಯ ಸರ್ಕಾರವು “ಟೀಕೆಗಳನ್ನು ಮುಚ್ಚಲು ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

“ಟೀಕೆಗಳನ್ನು ಇಲ್ಲದಂತೆ ಮಾಡಲು ಕಾನೂನಿನ ದುರುಪಯೋಗ ಮಾಡುವ ಬದಲು, ನಾನು ಉಲ್ಲೇಖಿಸಿದ ಅಂಕಿ ಅಂಶಗಳು ತಪ್ಪಾಗಿದೆ ಎಂದು ಅವರು ಸರಿಯಾದ ಅಂಕಿ ಅಂಶಗಳನ್ನು ಅಲ್ಲಿಗೆ ಹಾಕಬೇಕು. ಸರ್ಕಾರದ ಈ ಬೆದರಿಕೆಯನ್ನು ಕಾನೂನು ವಿಧಾನಗಳ ಮೂಲಕ ಎದುರಿಸುತ್ತೇನೆ” ಎಂದು ಮುಖರ್ಜಿ ಅವರು ಹೇಳಿದರು.

ಇದನ್ನೂ ಓದಿ: ವಿದ್ಯಾರ್ಥಿ ನೀತಿ ರದ್ದು ಮಾಡಿದ ಕೆನಡಾ – ಭಾರತದ 90% ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ವಿದ್ಯಾರ್ಥಿ ನೀತಿ ರದ್ದು ಮಾಡಿದ ಕೆನಡಾ – ಭಾರತದ 90% ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...