Homeಮುಖಪುಟಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

ಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

- Advertisement -
- Advertisement -

ರಾಜ್ಯದಲ್ಲಿ ಪ್ರವಾಸೋದ್ಯಮವು ಕುಸಿತ ಕಾಣುತ್ತಿದೆ ಎಂದು ಪ್ರತಿಪಾದಿಸಲು “ಸುಳ್ಳು ಅಂಕಿ-ಅಂಶಗಳನ್ನು” ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿ ಗೋವಾ ಸರ್ಕಾರವು ವ್ಯಕ್ತಿಯೊಬ್ಬರ ವಿರುದ್ಧ ಶುಕ್ರವಾರ ಪೊಲೀಸ್ ದೂರು ದಾಖಲಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ವ್ಯಕ್ತಿಯು ಲಂಡನ್ ಮೂಲದ ವಿಶ್ಲೇಷಣಾ ಕಂಪನಿಯಾದ CEIC ಡೇಟಾದ ಅಂಕಿಅಂಶಗಳನ್ನು ಉಲ್ಲೇಖಿಸಿ, “ಗೋವಾದಲ್ಲಿ ಪ್ರವಾಸೋದ್ಯಮವು ಕುಸಿಯುತ್ತಿದೆ” ಎಂದು ಹೇಳಿದ್ದರು. ಪ್ರವಾಸೋದ್ಯಮ ಕುಸಿತ

ಗೋವಾದಲ್ಲಿ ವಿದೇಶಿ ಪ್ರವಾಸಿಗರ 2019 ಮತ್ತು 2023 ಅಂಕಿ ಅಂಶಗಳ ನಡುವಿನ ಹೋಲಿಕೆಯನ್ನು ಉಲ್ಲೇಖಿಸಿ ರಾಮಾನುಜ್ ಮುಖರ್ಜಿ ಅವರು ನವೆಂಬರ್ 5 ರಂದು ಟ್ವಿಟರ್‌ನಲ್ಲಿ ಪೋಸ್ಟ್ ಹಾಕಿದ್ದರು. ಅದರಲ್ಲಿ ಅವರು ವಿದೇಶಿ ಪ್ರವಾಸಿಗರು ಗೋವಾ ಬದಲಿಗೆ ಶ್ರೀಲಂಕಾದಂತಹ ಇತರ ಸ್ಥಳಗಳಿಗೆ ತೆರಳುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಭಾರತೀಯ ಪ್ರವಾಸಿಗರು ಗೋವಾಕ್ಕೆ ಇನ್ನೂ ಭೇಟಿ ನೀಡುತ್ತಿದ್ದಾರೆ. ಅದರೆ, ವಿದೇಶದಲ್ಲಿ ಗೋವಾದಂತೆಯೆ ಇರುವ ಹಲವಾರು ಅಗ್ಗದ ಸ್ಥಳಗಳಿರುವಾಗ ಮತ್ತು ಗೋವಾದಲ್ಲಿ ಪ್ರವಾಸಿಗರ ಶೋಷಣೆಯ ಬಗ್ಗೆಗಿನ ವಿಚಾರ ಹರಡಿದರೆ ಅವರು ಕೂಡಾ ಶೀಘ್ರದಲ್ಲೇ ಗೋವಾಗೆ ಭೇಟಿ ನೀಡುವುದನ್ನು ನಿಲ್ಲಿಸುತ್ತಾರೆ” ಎಂದು ಅವರು ಹೇಳಿದ್ದರು.

ಲಂಡನ್ ಮೂಲದ ವಿಶ್ಲೇಷಣಾ ಕಂಪನಿಯಾದ CEIC ಡೇಟಾದ ಅಂಕಿಅಂಶಗಳನ್ನು ಉಲ್ಲೇಖಿಸಿ, “ಗೋವಾದಲ್ಲಿ ಪ್ರವಾಸೋದ್ಯಮವು ಕುಸಿತ ಕಂಡಿದೆ” ಎಂದು ಮುಖರ್ಜಿ ಉಲ್ಲೇಖಿಸಿದ್ದರು. ಪ್ರವಾಸೋದ್ಯಮ ಕುಸಿತ

ಮುಖರ್ಜಿ ಅವರ ಪೋಸ್ಟ್‌ಗೆ ಪ್ರತಿಕ್ರಿಯೆಯಾಗಿ, ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಗೋವಾದಲ್ಲಿ ವಿಶ್ವಾಸಾರ್ಹ ಸಾರಿಗೆ ಮತ್ತು ಸಮಂಜಸವಾದ ಹೋಟೆಲ್ ದರಗಳನ್ನು ಹುಡುಕಲು ಹೆಣಗಾಡುತ್ತಿರುವ ಅನುಭವಗಳ ಬಗ್ಗೆ ವಿವರಿಸಿದ್ದಾರೆ.

ಆದಾಗ್ಯೂ, ರಾಜ್ಯದ ಪ್ರವಾಸೋದ್ಯಮ ಇಲಾಖೆಯು, ಮುಖರ್ಜಿ ಅವರು ಸುಳ್ಳು ದತ್ತಾಂಶವನ್ನು ಇಟ್ಟುಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದೆ. ಅವರು “ಸಾರ್ವಜನಿಕ ಕಿಡಿಗೇಡಿತನ” ಮಾಡುತ್ತಿದ್ದಾರೆ ಎಂದು ಎಂದು ಆರೋಪಿಸಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಅವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

“ಇಂತಹ ಸುಳ್ಳು ಹೇಳಿಕೆಗಳ ಪ್ರಚಾರವು ನಮ್ಮ ರಾಜ್ಯದ ಪ್ರತಿಷ್ಠೆಗೆ ಧಕ್ಕೆ ತರುವುದಲ್ಲದೆ, ಸಾರ್ವಜನಿಕ ನೆಮ್ಮದಿಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. ಅವರ ಈ ಹೇಳಿಕೆಯು ಗೋವಾದ ಇಮೇಜ್ ಅನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿರುವ ಗುಪ್ತ ಕಾರ್ಯಸೂಚಿಯ ಭಾಗವಾಗಿರಬಹುದು ಎಂದು ಪ್ರವಾಸೋದ್ಯಮ ಇಲಾಖೆಯು ವಿಶೇಷವಾಗಿ ಆತಂಕ ವ್ಯಕ್ತಪಡಿಸಿದೆ” ಎಂದು ಅವರು ದೂರಿನಲ್ಲಿ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಪೋಸ್ಟ್ ಅನ್ನು ಅಪ್‌ಲೋಡ್ ಮಾಡುವ ಮೊದಲು ಮುಖರ್ಜಿ ಅವರು ಪ್ರವಾಸೋದ್ಯಮ ಇಲಾಖೆಯೊಂದಿಗೆ ಸಮಾಲೋಚಿಸಿಲ್ಲ, ಅವರು ನೀಡಿರುವ ಅಂಕಿ-ಅಂಶದ ವಿಶ್ವಾಸಾರ್ಹತೆ ಪ್ರಶ್ನಾರ್ಹವಾಗಿದೆ. ಜೊತೆಗೆ ಅವರ ಹೇಳಿಕೆಗಳು ಸಾರ್ವಜನಿಕ ಅಶಾಂತಿಯನ್ನು ಉಂಟುಮಾಡುವ ಉದ್ದೇಶವನ್ನು ಹೊಂದಿವೆ” ಎಂದು ಅವರು ಆರೋಪಿಸಿದ್ದಾರೆ.

ಪ್ರವಾಸೋದ್ಯಮ ಇಲಾಖೆಯ ದೂರಿಗೆ ಪ್ರತಿಕ್ರಿಯಿಸಿರುವ ಮುಖರ್ಜಿ, ತಾನು ಸಾರ್ವಜನಿಕವಾಗಿ ಲಭ್ಯವಿರುವ ಡೇಟಾವನ್ನು ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರವಾಸಿಗರು ಎತ್ತುವ ದೂರುಗಳನ್ನು ಪರಿಹರಿಸುವ ಬದಲು ರಾಜ್ಯ ಸರ್ಕಾರವು “ಟೀಕೆಗಳನ್ನು ಮುಚ್ಚಲು ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

“ಟೀಕೆಗಳನ್ನು ಇಲ್ಲದಂತೆ ಮಾಡಲು ಕಾನೂನಿನ ದುರುಪಯೋಗ ಮಾಡುವ ಬದಲು, ನಾನು ಉಲ್ಲೇಖಿಸಿದ ಅಂಕಿ ಅಂಶಗಳು ತಪ್ಪಾಗಿದೆ ಎಂದು ಅವರು ಸರಿಯಾದ ಅಂಕಿ ಅಂಶಗಳನ್ನು ಅಲ್ಲಿಗೆ ಹಾಕಬೇಕು. ಸರ್ಕಾರದ ಈ ಬೆದರಿಕೆಯನ್ನು ಕಾನೂನು ವಿಧಾನಗಳ ಮೂಲಕ ಎದುರಿಸುತ್ತೇನೆ” ಎಂದು ಮುಖರ್ಜಿ ಅವರು ಹೇಳಿದರು.

ಇದನ್ನೂ ಓದಿ: ವಿದ್ಯಾರ್ಥಿ ನೀತಿ ರದ್ದು ಮಾಡಿದ ಕೆನಡಾ – ಭಾರತದ 90% ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ವಿದ್ಯಾರ್ಥಿ ನೀತಿ ರದ್ದು ಮಾಡಿದ ಕೆನಡಾ – ಭಾರತದ 90% ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...