Homeಮುಖಪುಟಟೊಯೊಟಾ: 5 ನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಪ್ರತಿಭಟನೆ- ದರ್ಪ ತೋರುತ್ತಿರುವ ಕಂಪನಿ ಆಡಳಿತ!

ಟೊಯೊಟಾ: 5 ನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಪ್ರತಿಭಟನೆ- ದರ್ಪ ತೋರುತ್ತಿರುವ ಕಂಪನಿ ಆಡಳಿತ!

ಪ್ರಶ್ನಿಸುವ ಕಾರ್ಮಿಕರು ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರನ್ನು ಕಂಪನಿ ದಮನಿಸುತ್ತಿದೆ. ಪ್ರಶ್ನಿಸುವ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಅದನ್ನೂ ಮೀರಿ ದನಿಯೆತ್ತಿದರೂ ನಮ್ಮ ಸರ್ಕಾರ ಅದಕ್ಕೆ ಬೆಲೆ ಕೊಟ್ಟು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದು ನಮ್ಮ ದೇಶದ ಪರಿಸ್ಥಿತಿ

- Advertisement -
- Advertisement -

ತಮ್ಮ ಮೆಲಿನ ದೌರ್ಜನ್ಯವನ್ನು ಕೊನೆಗೊಳಿಸುವಂತೆ ಮತ್ತು ದಿಢೀರ್ ಎಂದು ಘೋಷಿಸಿರುವ ಲಾಕೌಟ್ ಕ್ರಮವನ್ನು ಹಿಂಪಡೆಯಬೇಕೆಂದು ಟೊಯೊಟಾ ಮೋಟಾರ್ಸ್‌ ಕಾರ್ ಕಂಪನಿಯ ಕಾರ್ಮಿಕರು ಕಳೆದ 5 ದಿನಗಳಿಂದ ಬಿಡದಿಯಲ್ಲಿರುವ ಕಂಪನಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದುವರೆಗೆ ಆಡಳಿತ ಮಂಡಳಿಯು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೋರಾಟನಿರತ ಕಾರ್ಮಿಕರು ಹೇಳುತ್ತಾರೆ.

ರಾಜ್ಯದ ಉಪಮುಖ್ಯಮಂತ್ರಿಗಳಾದ ಅಶ್ವತ್ ನಾರಾಯನ್ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಮಿಕ ಸಚಿವರು ಮತ್ತು ಕಾರ್ಮಿಕ ಕಮಿಷನರ್ ಅವರನ್ನೂ ಭೇಟಿ ಮಾಡಿ ನಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದೇವೆ. ಆದರೆ ಸರ್ಕಾರದ ಕಡೆಯಿಂದಾಗಲೀ ಅಥವಾ ಅಧಿಕಾರಿಗಳ ಕಡೆಯಿಂದಾಗಲೀ ಯಾವುದೇ ಗಮನಾರ್ಹ ಕ್ರಮ ಕೈಗೊಂಡಿಲ್ಲ ಎಂದು ಹೆಸರು ಹೇಳಲಿಚ್ಚಿಸದ ಹೋರಾಟಗಾರರೊಬ್ಬರು ನಾನು ಗೌರಿ.ಕಾಂ ಗೆ ಹೇಳಿದರು.

ಇದನ್ನೂ ಓದಿ: ಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ಜಪಾನ್ ಮೂಲದ ಕಂಪನಿಯು 1999 ರಿಂದಲೂ ಬಿಡದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಸಾವಿರಾರು ಕಾರ್ಮಿಕರು ಕಳೆದ 20 ವರ್ಷದಿಂದಲೂ ಕೆಲಸ ಮಾಡಿಕೊಂಡು ಬಂದಿದ್ದಾರೆ. ಅವೈಜ್ಞಾನಿಕ ಕೆಲಸದ ಸಮಯ ಮತ್ತು ಕೆಲಸದ ಶಿಫ್ಟ್‌, ಪ್ರಶ್ನೆ ಮಾಡುವ ಕಾರ್ಮಿಕರು ಮತ್ತು ಕಾರ್ಮಿಕ ಮುಖಂಡರ ಅಮಾನತು, ಬಂಡವಾಳಶಾಹಿಗಳ ದರ್ಪ, ದಿಢೀರ್ ಲಾಕೌಟ್ ಸೇರಿದಂತೆ ಹತ್ತಾರು ಸಮಸ್ಯೆಗಳನ್ನಿಟ್ಟುಕೊಂಡು ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಟೊಯೊಟಾ ಕಂಪನಿಯ ಸುಮಾರು 3500 ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣದ ವಿರುದ್ಧ ಆನ್‌ಲೈನ್ ಸಹಿ ಸಂಗ್ರಹ: ನೀವೂ ಭಾಗವಹಿಸಲು ಇಲ್ಲಿದೆ ವಿವರ…

“ಮೊದಲಿನಿಂದಲೂ ನಮ್ಮ ಸಮಸ್ಯೆಗಳ ಬಗ್ಗೆ ನಾವು ಪ್ರಶ್ನೆ ಮಾಡುತ್ತಲೇ ಬಂದಿದ್ದೇವೆ. ಆದರೆ ಈ ರೀತಿ ಪ್ರಶ್ನೆ ಮಾಡುವವರ ವಿರುದ್ಧ ಆಡಳಿತ ಮಂಡಳಿಯು ಅನ್-ಆಥರೈಸ್‌ಡ್ ರಜೆಯ ಅಸ್ತ್ರವನ್ನು ಬಳಸಿ ಅವರನ್ನು ಕೆಲಸದಿಂದ ತೆಗೆಯುವ ಹುನ್ನಾರ ಮಾಡುತ್ತಿದೆ. ಜೊತೆಗೆ ಖಾಯಂ ಕಾರ್ಮಿಕರನ್ನು ಕೆಲಸದಿಂದ ತೆಗೆಯಬೇಕು ಎನ್ನುವ ಉದ್ದೇಶದಿಂದ ಕೆಲಸದ ಸಮಯವನ್ನು ಕಡಿಮೆಗೊಳಿಸಿ, ಉತ್ಪಾದನಾ ಮಟ್ಟವನ್ನು ಹೆಚ್ಚಿಸಬೇಕು ಎಂದು ಹೇಳುತ್ತಿದೆ. ನಿಜಕ್ಕೂ ಇದು ಅಮಾನವೀಯ ಮತ್ತು ಶೋಷಣೆಯಾಗಿದೆ. ಇದರ ಬಗ್ಗೆ ಪ್ರಶ್ನೆ ಮಾಡಿದ ಕಾರ್ಮಿಕ ಸಂಘದ ಪದಾಧಿಕಾರಿಯನ್ನು ಅಮಾನತು ಮಾಡಿದ್ದರು. ಈ ಹಿಂದೆಯೂ ಇದೇ ರೀತಿ ಇಬ್ಬರನ್ನು ಅಮಾನತು ಮಾಡಿದ್ದರು. ಆಡಳಿತದ ಈ ಕ್ರಮವನ್ನು ಕಾರ್ಮಿಕರೆಲ್ಲಾ ಒಟ್ಟಾಗಿ ಪ್ರಶ್ನಿಸಿದೆವು. ಆದರೆ ಇದನ್ನೆ ನೆಪ ಮಾಡಿಕೊಂಡು ‘ಕಾನೂನು ಬಾಹಿರ ಹೋರಾಟ ಮಾಡುತ್ತಿದ್ದಾರೆ ಎಂದು ಆಡಳಿತವು ಲಾಕೌಟ್ ಘೋ‍‍ಷಣೆಯನ್ನು ಮಾಡಿದೆ” ಎಂದು ಹೇಳಿದರು.

ಇದನ್ನೂ ಓದಿ: 40 ಐಟಿಐಗಳ ಖಾಸಗೀಕರಣಕ್ಕೆ ಮುಂದಾದ ಯೋಗಿ ಸರ್ಕಾರ: ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ

“ಈ ಕಂಪನಿಯಲ್ಲಿ ಕಾರ್ಮಿಕರು ರೋಬೋಟ್‌ಗಳಂತೆ ಕೆಲಸ ನಿರ್ವಹಿಸಬೇಕು ಎಂದು ಆಡಳಿತ ಹೇಳುತ್ತದೆ. ಹಾಗಾಗಿಯೇ 2010 ರ ನಂತರ ಇಲ್ಲಿಗೆ ನೇಮಿಸಿಕೊಳ್ಳುವ ಕಾರ್ಮಿಕರನ್ನು ವೈದ್ಯಕೀಯ ಪರೀಕ್ಷೆಯೊಂದಿಗೆ, ಭಾರತೀಯ ಸೇನೆಯಲ್ಲಿ ಮಾಡುವ ದೈಹಿಕ ಪರೀಕ್ಷೆಯನ್ನೂ ಮಾಡಿ ನೇಮಿಸಿಕೊಳ್ಳಲಾಗುತ್ತದೆ. ನಿರ್ಧಿಷ್ಟ ಸಮಯದಲ್ಲಿ ಇಷ್ಟು ದೂರ ಓಡಬೇಕು, ಇಷ್ಟು ಭಾರ ಎತ್ತಬೇಕು ಇನ್ನು ಮುಂತಾದ ಮಾನದಂಡಗಳನ್ನು ನಿಗದಿಪಡಿಸಿ ಕಾರ್ಮಿಕರನ್ನು ನೇಮಿಸಿಕೊಂಡಿದ್ದಾರೆ. ಆದರೆ ಈ ವಿಧಾನದ ಮೂಲಕ ಆಯ್ಕೆಯಾಗಿರುವ ಕಾರ್ಮಿಕರಿಗೂ ಸಹ ಈಗ, ಮೂಳೆ ಸವೆತ, ಮಿದುಳು ಬಳ್ಳಿಯ ಸಮಸ್ಯೆ, ಕಿಡ್ನಿ ಸ್ಟೋನ್ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಿವೆ. ಇದಕ್ಕೆ ಕಾರಣ ಇಲ್ಲಿನ ಅವೈಜ್ಞಾನಿಕ ಕೆಲಸದ ಸಮಯ ಮತ್ತು ಶಿಫ್ಟ್‌ ವ್ಯವಸ್ಥೆ.

ಇದನ್ನೂ ಓದಿ: ಎಲ್ಐಸಿ ಖಾಸಗೀಕರಣ ಪ್ರಸ್ತಾಪ : ಕೇಂದ್ರದ ವಿರುದ್ಧ ಅಧಿಕಾರಿಗಳು, ನೌಕರರ ಪ್ರತಿಭಟನೆ

“ಈ ಪ್ರತಿಭಟನೆಗೆ ತತ್‌ಕ್ಷಣದ ಕಾರಣ, ಪದಾಧಿಕಾರಿಗಳ ಅಮಾನತುಗೊಳಿಸುವಿಕೆ ಮತ್ತು ಕಂಪನಿ ಲಾಕೌಟ್ ಕ್ರಮವಾಗಿದ್ದು, ಧೀರ್ಘಕಾಲಿಕವಾಗಿ ನಮ್ಮಲ್ಲಿ ಹತ್ತಾರು ಸಮಸ್ಯೆಗಳಿವೆ. ಇವುಗಳಿಗೆ ನ್ಯಾಯ ಸಿಗುವವರೆಗೂ ನಾವು ನ್ಯಾಯಯುತವಾಗಿ ಅಹೋರಾತ್ರಿ ಧರಣಿ ಮಾಡುತ್ತೇವೆ” ಎಂದು ಹೇಳಿದರು.

ಕಂಪನಿಯ ಲಾಕ್‌ ಔಟ್ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಅಧಿಕಾರಿಗಳು, “ಕಾರ್ಮಿಕರು ಕಾನೂನು ಬಾಹಿರ ಹೋರಾಟವನ್ನು ಮಾಡಿದ್ದಕ್ಕಾಗಿ ಈ ಕಂಪನಿಯನ್ನು ಲಾಕ್‌ ಔಟ್ ಮಾಡಲಾಗುತ್ತಿದೆ” ಎಂದಿದ್ದಾರೆ.

ಜಿಲ್ಲೆಯ ಕಾರ್ಮಿಕ ಕಮಿಷನರ್ ಅವರ ಕೇಛೇರಿಯಲ್ಲಿ ಸಂದಾನಕ್ಕೆಂದು ಕರೆದಿದ್ದಾಗಲೂ ಸಹ ಕಂಪನಿಯು ತನ್ನ ದರ್ಪವನ್ನು ತೋರಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಈ ಬಹುರಾಷ್ಟ್ರೀಯ ಕಂಪನಿಯು ದೇಶದ ಎಲ್ಲಾ ಕಾನೂನುಗಳನ್ನೂ ಸಾರಾಸಗಟಾಗಿ ಉಲ್ಲಂಘಿಸಿ ನಮ್ಮ ಕಾರ್ಮಿಕರನ್ನ ಶೋಷಣೆ ಮಾಡುತ್ತಿದೆ. ಆರಂಭದಲ್ಲಿ ಖಾಸಗೀಕರಣ, ಅಭಿವೃದ್ಧಿ, ನಮ್ಮ ದೇಶದ ಕಾರ್ಮಿಕರಿಗೆ ಉದ್ಯೋಗಾವಕಾಶ ನೀಡುತ್ತೇವೆ ಎಂದು ಹೇಳಿಕೊಂಡು ಬಂದು, ಕಾಲ ಸಂದಂತೆ ಇಂತಹ ಸಮಸ್ಯೆಗಳನ್ನು ಸೃಷ್ಟಿಸುತ್ತವೆ. ಇದಕ್ಕೆ ಸರ್ಕಾರಗಳು ಸೊಪ್ಪು ಹಾಕುತ್ತವೆ. 1992 ರ ನಂತರ ದೇಶದ ಅಭಿವೃದ್ಧಿಯ ಹೆಸರಿನಲ್ಲಿ ಇಂತಹ ಬಹುರಾಷ್ಟ್ರೀಯ ಕಂಪನಿಗಳಿಗೆ ನಮ್ಮ ದೇಶದಲ್ಲಿ ಜಾಗ ಕೊಡಲಾಗಿದೆ. ಅಂದಿನಿಂದಲೂ ಇಂತಹ ಸಮಸ್ಯೆಗಳನ್ನು ಸಾವಿರಾರು ಕಂಪನಿಗಳ ಕಾರ್ಮಿಕರು ಎದುರಿಸುತ್ತಲೇ ಇದ್ದಾರೆ. ಆದರೆ ತಮ್ಮ ಕೆಲಸ ಕಳೆದುಕೊಂಡು ಬೀದಿಗೆ ಬರುವ ಭಯಕ್ಕೆ ಅವರ್ಯಾರೂ ದನಿಯೆತ್ತುತ್ತಿಲ್ಲ. ಪ್ರಶ್ನಿಸುವ ಕಾರ್ಮಿಕರು ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರನ್ನು ಕಂಪನಿ ದಮನಿಸುತ್ತಿದೆ. ಪ್ರಶ್ನಿಸುವ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಅದನ್ನೂ ಮೀರಿ ದನಿಯೆತ್ತಿದರೂ ನಮ್ಮ ಸರ್ಕಾರ ಅದಕ್ಕೆ ಬೆಲೆ ಕೊಟ್ಟು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದು ನಮ್ಮ ದೇಶದ ಪರಿಸ್ಥಿತಿ.

ಇದನ್ನೂ ಓದಿ: ಕುಸಿಯುತ್ತಿರುವ ಕಣ್ವ ಸಾಮ್ರಾಜ್ಯ: ಆತಂಕದಲ್ಲಿ ಲಕ್ಷಾಂತರ ಕಾರ್ಮಿಕರು

ಹಿಂದೆಂದಿಗಿಂತಲೂ ಇಂದು ಈ ಖಾಸಗೀಕರಣ ಮತ್ತು ಬಹುರಾಷ್ಟ್ರೀಯ ಕಂಪನಿಗಳನ್ನು ನಮ್ಮ ದೇಶದ ಕಡೆ ಸೆಳೆದು ಅಭಿವೃದ್ಧಿ ಮಾಡಬೇಕು ಎನ್ನುವ ಯೋಚನೆ ಸರ್ಕಾರದ ಮತ್ತು ಸೋ ಕಾಲ್ಡ್‌ ಜನರಿಂದ ಕೇಳಿಬರುತ್ತಿದೆ. ಆದರೆ ಇದರ ಪರಿಣಾಮಗಳು ಏನಿರಬಹುದು ಎಂಬುದಕ್ಕೆ ಒಂದು ಸಣ್ಣ ಉದಾಹರಣೆ ಇದಾಗಿದೆ.

ಈಗಾಗಲೇ ಈ ಟೊಯೊಟಾ ಕಾರ್ಮಿಕರ ಸಮಸ್ಯೆಗಳಿಗೆ ರಾಜ್ಯದ ಕೆಲವು ಕಾರ್ಮಿಕ ಸಂಘಟನೆಗಳು, ರೈತ ಸಂಘಟನೆಗಳು ಬೆಂಬಲ ನೀಡಿವೆ. ಕಾರ್ಮಿಕರ ಈ ಸಮಸ್ಯೆಗಳನ್ನು ಸರ್ಕಾರ ಮತ್ತು ಆಡಳಿತ ಮಂಡಳಿ ಈ ಕೂಡಲೇ ಬಗೆಹರಿಸದಿದ್ದರೆ ಇನ್ನೂ ತೀವ್ರವಾದ ಪ್ರತಿಭಟನೆಯನ್ನು ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿವೆ.


ಇದನ್ನೂ ಓದಿ: ಎಎಪಿ ಪ್ರಣಾಳಿಕೆ ಬಿಡುಗಡೆ : ಸ್ವಚ್ಚತೆ, ಶಿಕ್ಷಣ, ಆರೋಗ್ಯಕ್ಕೆ ಒತ್ತು, ಪೌರಕಾರ್ಮಿಕರು ಮೃತಪಟ್ಟಲ್ಲಿ ಒಂದು ಕೋಟಿ ಪರಿಹಾರ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...