Homeಮುಖಪುಟಟೊಯೊಟಾ: 5 ನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಪ್ರತಿಭಟನೆ- ದರ್ಪ ತೋರುತ್ತಿರುವ ಕಂಪನಿ ಆಡಳಿತ!

ಟೊಯೊಟಾ: 5 ನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಪ್ರತಿಭಟನೆ- ದರ್ಪ ತೋರುತ್ತಿರುವ ಕಂಪನಿ ಆಡಳಿತ!

ಪ್ರಶ್ನಿಸುವ ಕಾರ್ಮಿಕರು ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರನ್ನು ಕಂಪನಿ ದಮನಿಸುತ್ತಿದೆ. ಪ್ರಶ್ನಿಸುವ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಅದನ್ನೂ ಮೀರಿ ದನಿಯೆತ್ತಿದರೂ ನಮ್ಮ ಸರ್ಕಾರ ಅದಕ್ಕೆ ಬೆಲೆ ಕೊಟ್ಟು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದು ನಮ್ಮ ದೇಶದ ಪರಿಸ್ಥಿತಿ

- Advertisement -
- Advertisement -

ತಮ್ಮ ಮೆಲಿನ ದೌರ್ಜನ್ಯವನ್ನು ಕೊನೆಗೊಳಿಸುವಂತೆ ಮತ್ತು ದಿಢೀರ್ ಎಂದು ಘೋಷಿಸಿರುವ ಲಾಕೌಟ್ ಕ್ರಮವನ್ನು ಹಿಂಪಡೆಯಬೇಕೆಂದು ಟೊಯೊಟಾ ಮೋಟಾರ್ಸ್‌ ಕಾರ್ ಕಂಪನಿಯ ಕಾರ್ಮಿಕರು ಕಳೆದ 5 ದಿನಗಳಿಂದ ಬಿಡದಿಯಲ್ಲಿರುವ ಕಂಪನಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದುವರೆಗೆ ಆಡಳಿತ ಮಂಡಳಿಯು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೋರಾಟನಿರತ ಕಾರ್ಮಿಕರು ಹೇಳುತ್ತಾರೆ.

ರಾಜ್ಯದ ಉಪಮುಖ್ಯಮಂತ್ರಿಗಳಾದ ಅಶ್ವತ್ ನಾರಾಯನ್ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಮಿಕ ಸಚಿವರು ಮತ್ತು ಕಾರ್ಮಿಕ ಕಮಿಷನರ್ ಅವರನ್ನೂ ಭೇಟಿ ಮಾಡಿ ನಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದೇವೆ. ಆದರೆ ಸರ್ಕಾರದ ಕಡೆಯಿಂದಾಗಲೀ ಅಥವಾ ಅಧಿಕಾರಿಗಳ ಕಡೆಯಿಂದಾಗಲೀ ಯಾವುದೇ ಗಮನಾರ್ಹ ಕ್ರಮ ಕೈಗೊಂಡಿಲ್ಲ ಎಂದು ಹೆಸರು ಹೇಳಲಿಚ್ಚಿಸದ ಹೋರಾಟಗಾರರೊಬ್ಬರು ನಾನು ಗೌರಿ.ಕಾಂ ಗೆ ಹೇಳಿದರು.

ಇದನ್ನೂ ಓದಿ: ಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ಜಪಾನ್ ಮೂಲದ ಕಂಪನಿಯು 1999 ರಿಂದಲೂ ಬಿಡದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಸಾವಿರಾರು ಕಾರ್ಮಿಕರು ಕಳೆದ 20 ವರ್ಷದಿಂದಲೂ ಕೆಲಸ ಮಾಡಿಕೊಂಡು ಬಂದಿದ್ದಾರೆ. ಅವೈಜ್ಞಾನಿಕ ಕೆಲಸದ ಸಮಯ ಮತ್ತು ಕೆಲಸದ ಶಿಫ್ಟ್‌, ಪ್ರಶ್ನೆ ಮಾಡುವ ಕಾರ್ಮಿಕರು ಮತ್ತು ಕಾರ್ಮಿಕ ಮುಖಂಡರ ಅಮಾನತು, ಬಂಡವಾಳಶಾಹಿಗಳ ದರ್ಪ, ದಿಢೀರ್ ಲಾಕೌಟ್ ಸೇರಿದಂತೆ ಹತ್ತಾರು ಸಮಸ್ಯೆಗಳನ್ನಿಟ್ಟುಕೊಂಡು ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಟೊಯೊಟಾ ಕಂಪನಿಯ ಸುಮಾರು 3500 ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣದ ವಿರುದ್ಧ ಆನ್‌ಲೈನ್ ಸಹಿ ಸಂಗ್ರಹ: ನೀವೂ ಭಾಗವಹಿಸಲು ಇಲ್ಲಿದೆ ವಿವರ…

“ಮೊದಲಿನಿಂದಲೂ ನಮ್ಮ ಸಮಸ್ಯೆಗಳ ಬಗ್ಗೆ ನಾವು ಪ್ರಶ್ನೆ ಮಾಡುತ್ತಲೇ ಬಂದಿದ್ದೇವೆ. ಆದರೆ ಈ ರೀತಿ ಪ್ರಶ್ನೆ ಮಾಡುವವರ ವಿರುದ್ಧ ಆಡಳಿತ ಮಂಡಳಿಯು ಅನ್-ಆಥರೈಸ್‌ಡ್ ರಜೆಯ ಅಸ್ತ್ರವನ್ನು ಬಳಸಿ ಅವರನ್ನು ಕೆಲಸದಿಂದ ತೆಗೆಯುವ ಹುನ್ನಾರ ಮಾಡುತ್ತಿದೆ. ಜೊತೆಗೆ ಖಾಯಂ ಕಾರ್ಮಿಕರನ್ನು ಕೆಲಸದಿಂದ ತೆಗೆಯಬೇಕು ಎನ್ನುವ ಉದ್ದೇಶದಿಂದ ಕೆಲಸದ ಸಮಯವನ್ನು ಕಡಿಮೆಗೊಳಿಸಿ, ಉತ್ಪಾದನಾ ಮಟ್ಟವನ್ನು ಹೆಚ್ಚಿಸಬೇಕು ಎಂದು ಹೇಳುತ್ತಿದೆ. ನಿಜಕ್ಕೂ ಇದು ಅಮಾನವೀಯ ಮತ್ತು ಶೋಷಣೆಯಾಗಿದೆ. ಇದರ ಬಗ್ಗೆ ಪ್ರಶ್ನೆ ಮಾಡಿದ ಕಾರ್ಮಿಕ ಸಂಘದ ಪದಾಧಿಕಾರಿಯನ್ನು ಅಮಾನತು ಮಾಡಿದ್ದರು. ಈ ಹಿಂದೆಯೂ ಇದೇ ರೀತಿ ಇಬ್ಬರನ್ನು ಅಮಾನತು ಮಾಡಿದ್ದರು. ಆಡಳಿತದ ಈ ಕ್ರಮವನ್ನು ಕಾರ್ಮಿಕರೆಲ್ಲಾ ಒಟ್ಟಾಗಿ ಪ್ರಶ್ನಿಸಿದೆವು. ಆದರೆ ಇದನ್ನೆ ನೆಪ ಮಾಡಿಕೊಂಡು ‘ಕಾನೂನು ಬಾಹಿರ ಹೋರಾಟ ಮಾಡುತ್ತಿದ್ದಾರೆ ಎಂದು ಆಡಳಿತವು ಲಾಕೌಟ್ ಘೋ‍‍ಷಣೆಯನ್ನು ಮಾಡಿದೆ” ಎಂದು ಹೇಳಿದರು.

ಇದನ್ನೂ ಓದಿ: 40 ಐಟಿಐಗಳ ಖಾಸಗೀಕರಣಕ್ಕೆ ಮುಂದಾದ ಯೋಗಿ ಸರ್ಕಾರ: ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ

“ಈ ಕಂಪನಿಯಲ್ಲಿ ಕಾರ್ಮಿಕರು ರೋಬೋಟ್‌ಗಳಂತೆ ಕೆಲಸ ನಿರ್ವಹಿಸಬೇಕು ಎಂದು ಆಡಳಿತ ಹೇಳುತ್ತದೆ. ಹಾಗಾಗಿಯೇ 2010 ರ ನಂತರ ಇಲ್ಲಿಗೆ ನೇಮಿಸಿಕೊಳ್ಳುವ ಕಾರ್ಮಿಕರನ್ನು ವೈದ್ಯಕೀಯ ಪರೀಕ್ಷೆಯೊಂದಿಗೆ, ಭಾರತೀಯ ಸೇನೆಯಲ್ಲಿ ಮಾಡುವ ದೈಹಿಕ ಪರೀಕ್ಷೆಯನ್ನೂ ಮಾಡಿ ನೇಮಿಸಿಕೊಳ್ಳಲಾಗುತ್ತದೆ. ನಿರ್ಧಿಷ್ಟ ಸಮಯದಲ್ಲಿ ಇಷ್ಟು ದೂರ ಓಡಬೇಕು, ಇಷ್ಟು ಭಾರ ಎತ್ತಬೇಕು ಇನ್ನು ಮುಂತಾದ ಮಾನದಂಡಗಳನ್ನು ನಿಗದಿಪಡಿಸಿ ಕಾರ್ಮಿಕರನ್ನು ನೇಮಿಸಿಕೊಂಡಿದ್ದಾರೆ. ಆದರೆ ಈ ವಿಧಾನದ ಮೂಲಕ ಆಯ್ಕೆಯಾಗಿರುವ ಕಾರ್ಮಿಕರಿಗೂ ಸಹ ಈಗ, ಮೂಳೆ ಸವೆತ, ಮಿದುಳು ಬಳ್ಳಿಯ ಸಮಸ್ಯೆ, ಕಿಡ್ನಿ ಸ್ಟೋನ್ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಿವೆ. ಇದಕ್ಕೆ ಕಾರಣ ಇಲ್ಲಿನ ಅವೈಜ್ಞಾನಿಕ ಕೆಲಸದ ಸಮಯ ಮತ್ತು ಶಿಫ್ಟ್‌ ವ್ಯವಸ್ಥೆ.

ಇದನ್ನೂ ಓದಿ: ಎಲ್ಐಸಿ ಖಾಸಗೀಕರಣ ಪ್ರಸ್ತಾಪ : ಕೇಂದ್ರದ ವಿರುದ್ಧ ಅಧಿಕಾರಿಗಳು, ನೌಕರರ ಪ್ರತಿಭಟನೆ

“ಈ ಪ್ರತಿಭಟನೆಗೆ ತತ್‌ಕ್ಷಣದ ಕಾರಣ, ಪದಾಧಿಕಾರಿಗಳ ಅಮಾನತುಗೊಳಿಸುವಿಕೆ ಮತ್ತು ಕಂಪನಿ ಲಾಕೌಟ್ ಕ್ರಮವಾಗಿದ್ದು, ಧೀರ್ಘಕಾಲಿಕವಾಗಿ ನಮ್ಮಲ್ಲಿ ಹತ್ತಾರು ಸಮಸ್ಯೆಗಳಿವೆ. ಇವುಗಳಿಗೆ ನ್ಯಾಯ ಸಿಗುವವರೆಗೂ ನಾವು ನ್ಯಾಯಯುತವಾಗಿ ಅಹೋರಾತ್ರಿ ಧರಣಿ ಮಾಡುತ್ತೇವೆ” ಎಂದು ಹೇಳಿದರು.

ಕಂಪನಿಯ ಲಾಕ್‌ ಔಟ್ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಅಧಿಕಾರಿಗಳು, “ಕಾರ್ಮಿಕರು ಕಾನೂನು ಬಾಹಿರ ಹೋರಾಟವನ್ನು ಮಾಡಿದ್ದಕ್ಕಾಗಿ ಈ ಕಂಪನಿಯನ್ನು ಲಾಕ್‌ ಔಟ್ ಮಾಡಲಾಗುತ್ತಿದೆ” ಎಂದಿದ್ದಾರೆ.

ಜಿಲ್ಲೆಯ ಕಾರ್ಮಿಕ ಕಮಿಷನರ್ ಅವರ ಕೇಛೇರಿಯಲ್ಲಿ ಸಂದಾನಕ್ಕೆಂದು ಕರೆದಿದ್ದಾಗಲೂ ಸಹ ಕಂಪನಿಯು ತನ್ನ ದರ್ಪವನ್ನು ತೋರಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಈ ಬಹುರಾಷ್ಟ್ರೀಯ ಕಂಪನಿಯು ದೇಶದ ಎಲ್ಲಾ ಕಾನೂನುಗಳನ್ನೂ ಸಾರಾಸಗಟಾಗಿ ಉಲ್ಲಂಘಿಸಿ ನಮ್ಮ ಕಾರ್ಮಿಕರನ್ನ ಶೋಷಣೆ ಮಾಡುತ್ತಿದೆ. ಆರಂಭದಲ್ಲಿ ಖಾಸಗೀಕರಣ, ಅಭಿವೃದ್ಧಿ, ನಮ್ಮ ದೇಶದ ಕಾರ್ಮಿಕರಿಗೆ ಉದ್ಯೋಗಾವಕಾಶ ನೀಡುತ್ತೇವೆ ಎಂದು ಹೇಳಿಕೊಂಡು ಬಂದು, ಕಾಲ ಸಂದಂತೆ ಇಂತಹ ಸಮಸ್ಯೆಗಳನ್ನು ಸೃಷ್ಟಿಸುತ್ತವೆ. ಇದಕ್ಕೆ ಸರ್ಕಾರಗಳು ಸೊಪ್ಪು ಹಾಕುತ್ತವೆ. 1992 ರ ನಂತರ ದೇಶದ ಅಭಿವೃದ್ಧಿಯ ಹೆಸರಿನಲ್ಲಿ ಇಂತಹ ಬಹುರಾಷ್ಟ್ರೀಯ ಕಂಪನಿಗಳಿಗೆ ನಮ್ಮ ದೇಶದಲ್ಲಿ ಜಾಗ ಕೊಡಲಾಗಿದೆ. ಅಂದಿನಿಂದಲೂ ಇಂತಹ ಸಮಸ್ಯೆಗಳನ್ನು ಸಾವಿರಾರು ಕಂಪನಿಗಳ ಕಾರ್ಮಿಕರು ಎದುರಿಸುತ್ತಲೇ ಇದ್ದಾರೆ. ಆದರೆ ತಮ್ಮ ಕೆಲಸ ಕಳೆದುಕೊಂಡು ಬೀದಿಗೆ ಬರುವ ಭಯಕ್ಕೆ ಅವರ್ಯಾರೂ ದನಿಯೆತ್ತುತ್ತಿಲ್ಲ. ಪ್ರಶ್ನಿಸುವ ಕಾರ್ಮಿಕರು ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರನ್ನು ಕಂಪನಿ ದಮನಿಸುತ್ತಿದೆ. ಪ್ರಶ್ನಿಸುವ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಅದನ್ನೂ ಮೀರಿ ದನಿಯೆತ್ತಿದರೂ ನಮ್ಮ ಸರ್ಕಾರ ಅದಕ್ಕೆ ಬೆಲೆ ಕೊಟ್ಟು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದು ನಮ್ಮ ದೇಶದ ಪರಿಸ್ಥಿತಿ.

ಇದನ್ನೂ ಓದಿ: ಕುಸಿಯುತ್ತಿರುವ ಕಣ್ವ ಸಾಮ್ರಾಜ್ಯ: ಆತಂಕದಲ್ಲಿ ಲಕ್ಷಾಂತರ ಕಾರ್ಮಿಕರು

ಹಿಂದೆಂದಿಗಿಂತಲೂ ಇಂದು ಈ ಖಾಸಗೀಕರಣ ಮತ್ತು ಬಹುರಾಷ್ಟ್ರೀಯ ಕಂಪನಿಗಳನ್ನು ನಮ್ಮ ದೇಶದ ಕಡೆ ಸೆಳೆದು ಅಭಿವೃದ್ಧಿ ಮಾಡಬೇಕು ಎನ್ನುವ ಯೋಚನೆ ಸರ್ಕಾರದ ಮತ್ತು ಸೋ ಕಾಲ್ಡ್‌ ಜನರಿಂದ ಕೇಳಿಬರುತ್ತಿದೆ. ಆದರೆ ಇದರ ಪರಿಣಾಮಗಳು ಏನಿರಬಹುದು ಎಂಬುದಕ್ಕೆ ಒಂದು ಸಣ್ಣ ಉದಾಹರಣೆ ಇದಾಗಿದೆ.

ಈಗಾಗಲೇ ಈ ಟೊಯೊಟಾ ಕಾರ್ಮಿಕರ ಸಮಸ್ಯೆಗಳಿಗೆ ರಾಜ್ಯದ ಕೆಲವು ಕಾರ್ಮಿಕ ಸಂಘಟನೆಗಳು, ರೈತ ಸಂಘಟನೆಗಳು ಬೆಂಬಲ ನೀಡಿವೆ. ಕಾರ್ಮಿಕರ ಈ ಸಮಸ್ಯೆಗಳನ್ನು ಸರ್ಕಾರ ಮತ್ತು ಆಡಳಿತ ಮಂಡಳಿ ಈ ಕೂಡಲೇ ಬಗೆಹರಿಸದಿದ್ದರೆ ಇನ್ನೂ ತೀವ್ರವಾದ ಪ್ರತಿಭಟನೆಯನ್ನು ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿವೆ.


ಇದನ್ನೂ ಓದಿ: ಎಎಪಿ ಪ್ರಣಾಳಿಕೆ ಬಿಡುಗಡೆ : ಸ್ವಚ್ಚತೆ, ಶಿಕ್ಷಣ, ಆರೋಗ್ಯಕ್ಕೆ ಒತ್ತು, ಪೌರಕಾರ್ಮಿಕರು ಮೃತಪಟ್ಟಲ್ಲಿ ಒಂದು ಕೋಟಿ ಪರಿಹಾರ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...