Homeಮುಖಪುಟಟೊಯೊಟಾ: 5 ನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಪ್ರತಿಭಟನೆ- ದರ್ಪ ತೋರುತ್ತಿರುವ ಕಂಪನಿ ಆಡಳಿತ!

ಟೊಯೊಟಾ: 5 ನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಪ್ರತಿಭಟನೆ- ದರ್ಪ ತೋರುತ್ತಿರುವ ಕಂಪನಿ ಆಡಳಿತ!

ಪ್ರಶ್ನಿಸುವ ಕಾರ್ಮಿಕರು ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರನ್ನು ಕಂಪನಿ ದಮನಿಸುತ್ತಿದೆ. ಪ್ರಶ್ನಿಸುವ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಅದನ್ನೂ ಮೀರಿ ದನಿಯೆತ್ತಿದರೂ ನಮ್ಮ ಸರ್ಕಾರ ಅದಕ್ಕೆ ಬೆಲೆ ಕೊಟ್ಟು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದು ನಮ್ಮ ದೇಶದ ಪರಿಸ್ಥಿತಿ

- Advertisement -
- Advertisement -

ತಮ್ಮ ಮೆಲಿನ ದೌರ್ಜನ್ಯವನ್ನು ಕೊನೆಗೊಳಿಸುವಂತೆ ಮತ್ತು ದಿಢೀರ್ ಎಂದು ಘೋಷಿಸಿರುವ ಲಾಕೌಟ್ ಕ್ರಮವನ್ನು ಹಿಂಪಡೆಯಬೇಕೆಂದು ಟೊಯೊಟಾ ಮೋಟಾರ್ಸ್‌ ಕಾರ್ ಕಂಪನಿಯ ಕಾರ್ಮಿಕರು ಕಳೆದ 5 ದಿನಗಳಿಂದ ಬಿಡದಿಯಲ್ಲಿರುವ ಕಂಪನಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದುವರೆಗೆ ಆಡಳಿತ ಮಂಡಳಿಯು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೋರಾಟನಿರತ ಕಾರ್ಮಿಕರು ಹೇಳುತ್ತಾರೆ.

ರಾಜ್ಯದ ಉಪಮುಖ್ಯಮಂತ್ರಿಗಳಾದ ಅಶ್ವತ್ ನಾರಾಯನ್ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಮಿಕ ಸಚಿವರು ಮತ್ತು ಕಾರ್ಮಿಕ ಕಮಿಷನರ್ ಅವರನ್ನೂ ಭೇಟಿ ಮಾಡಿ ನಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದೇವೆ. ಆದರೆ ಸರ್ಕಾರದ ಕಡೆಯಿಂದಾಗಲೀ ಅಥವಾ ಅಧಿಕಾರಿಗಳ ಕಡೆಯಿಂದಾಗಲೀ ಯಾವುದೇ ಗಮನಾರ್ಹ ಕ್ರಮ ಕೈಗೊಂಡಿಲ್ಲ ಎಂದು ಹೆಸರು ಹೇಳಲಿಚ್ಚಿಸದ ಹೋರಾಟಗಾರರೊಬ್ಬರು ನಾನು ಗೌರಿ.ಕಾಂ ಗೆ ಹೇಳಿದರು.

ಇದನ್ನೂ ಓದಿ: ಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ಜಪಾನ್ ಮೂಲದ ಕಂಪನಿಯು 1999 ರಿಂದಲೂ ಬಿಡದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಸಾವಿರಾರು ಕಾರ್ಮಿಕರು ಕಳೆದ 20 ವರ್ಷದಿಂದಲೂ ಕೆಲಸ ಮಾಡಿಕೊಂಡು ಬಂದಿದ್ದಾರೆ. ಅವೈಜ್ಞಾನಿಕ ಕೆಲಸದ ಸಮಯ ಮತ್ತು ಕೆಲಸದ ಶಿಫ್ಟ್‌, ಪ್ರಶ್ನೆ ಮಾಡುವ ಕಾರ್ಮಿಕರು ಮತ್ತು ಕಾರ್ಮಿಕ ಮುಖಂಡರ ಅಮಾನತು, ಬಂಡವಾಳಶಾಹಿಗಳ ದರ್ಪ, ದಿಢೀರ್ ಲಾಕೌಟ್ ಸೇರಿದಂತೆ ಹತ್ತಾರು ಸಮಸ್ಯೆಗಳನ್ನಿಟ್ಟುಕೊಂಡು ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಟೊಯೊಟಾ ಕಂಪನಿಯ ಸುಮಾರು 3500 ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣದ ವಿರುದ್ಧ ಆನ್‌ಲೈನ್ ಸಹಿ ಸಂಗ್ರಹ: ನೀವೂ ಭಾಗವಹಿಸಲು ಇಲ್ಲಿದೆ ವಿವರ…

“ಮೊದಲಿನಿಂದಲೂ ನಮ್ಮ ಸಮಸ್ಯೆಗಳ ಬಗ್ಗೆ ನಾವು ಪ್ರಶ್ನೆ ಮಾಡುತ್ತಲೇ ಬಂದಿದ್ದೇವೆ. ಆದರೆ ಈ ರೀತಿ ಪ್ರಶ್ನೆ ಮಾಡುವವರ ವಿರುದ್ಧ ಆಡಳಿತ ಮಂಡಳಿಯು ಅನ್-ಆಥರೈಸ್‌ಡ್ ರಜೆಯ ಅಸ್ತ್ರವನ್ನು ಬಳಸಿ ಅವರನ್ನು ಕೆಲಸದಿಂದ ತೆಗೆಯುವ ಹುನ್ನಾರ ಮಾಡುತ್ತಿದೆ. ಜೊತೆಗೆ ಖಾಯಂ ಕಾರ್ಮಿಕರನ್ನು ಕೆಲಸದಿಂದ ತೆಗೆಯಬೇಕು ಎನ್ನುವ ಉದ್ದೇಶದಿಂದ ಕೆಲಸದ ಸಮಯವನ್ನು ಕಡಿಮೆಗೊಳಿಸಿ, ಉತ್ಪಾದನಾ ಮಟ್ಟವನ್ನು ಹೆಚ್ಚಿಸಬೇಕು ಎಂದು ಹೇಳುತ್ತಿದೆ. ನಿಜಕ್ಕೂ ಇದು ಅಮಾನವೀಯ ಮತ್ತು ಶೋಷಣೆಯಾಗಿದೆ. ಇದರ ಬಗ್ಗೆ ಪ್ರಶ್ನೆ ಮಾಡಿದ ಕಾರ್ಮಿಕ ಸಂಘದ ಪದಾಧಿಕಾರಿಯನ್ನು ಅಮಾನತು ಮಾಡಿದ್ದರು. ಈ ಹಿಂದೆಯೂ ಇದೇ ರೀತಿ ಇಬ್ಬರನ್ನು ಅಮಾನತು ಮಾಡಿದ್ದರು. ಆಡಳಿತದ ಈ ಕ್ರಮವನ್ನು ಕಾರ್ಮಿಕರೆಲ್ಲಾ ಒಟ್ಟಾಗಿ ಪ್ರಶ್ನಿಸಿದೆವು. ಆದರೆ ಇದನ್ನೆ ನೆಪ ಮಾಡಿಕೊಂಡು ‘ಕಾನೂನು ಬಾಹಿರ ಹೋರಾಟ ಮಾಡುತ್ತಿದ್ದಾರೆ ಎಂದು ಆಡಳಿತವು ಲಾಕೌಟ್ ಘೋ‍‍ಷಣೆಯನ್ನು ಮಾಡಿದೆ” ಎಂದು ಹೇಳಿದರು.

ಇದನ್ನೂ ಓದಿ: 40 ಐಟಿಐಗಳ ಖಾಸಗೀಕರಣಕ್ಕೆ ಮುಂದಾದ ಯೋಗಿ ಸರ್ಕಾರ: ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ

“ಈ ಕಂಪನಿಯಲ್ಲಿ ಕಾರ್ಮಿಕರು ರೋಬೋಟ್‌ಗಳಂತೆ ಕೆಲಸ ನಿರ್ವಹಿಸಬೇಕು ಎಂದು ಆಡಳಿತ ಹೇಳುತ್ತದೆ. ಹಾಗಾಗಿಯೇ 2010 ರ ನಂತರ ಇಲ್ಲಿಗೆ ನೇಮಿಸಿಕೊಳ್ಳುವ ಕಾರ್ಮಿಕರನ್ನು ವೈದ್ಯಕೀಯ ಪರೀಕ್ಷೆಯೊಂದಿಗೆ, ಭಾರತೀಯ ಸೇನೆಯಲ್ಲಿ ಮಾಡುವ ದೈಹಿಕ ಪರೀಕ್ಷೆಯನ್ನೂ ಮಾಡಿ ನೇಮಿಸಿಕೊಳ್ಳಲಾಗುತ್ತದೆ. ನಿರ್ಧಿಷ್ಟ ಸಮಯದಲ್ಲಿ ಇಷ್ಟು ದೂರ ಓಡಬೇಕು, ಇಷ್ಟು ಭಾರ ಎತ್ತಬೇಕು ಇನ್ನು ಮುಂತಾದ ಮಾನದಂಡಗಳನ್ನು ನಿಗದಿಪಡಿಸಿ ಕಾರ್ಮಿಕರನ್ನು ನೇಮಿಸಿಕೊಂಡಿದ್ದಾರೆ. ಆದರೆ ಈ ವಿಧಾನದ ಮೂಲಕ ಆಯ್ಕೆಯಾಗಿರುವ ಕಾರ್ಮಿಕರಿಗೂ ಸಹ ಈಗ, ಮೂಳೆ ಸವೆತ, ಮಿದುಳು ಬಳ್ಳಿಯ ಸಮಸ್ಯೆ, ಕಿಡ್ನಿ ಸ್ಟೋನ್ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಿವೆ. ಇದಕ್ಕೆ ಕಾರಣ ಇಲ್ಲಿನ ಅವೈಜ್ಞಾನಿಕ ಕೆಲಸದ ಸಮಯ ಮತ್ತು ಶಿಫ್ಟ್‌ ವ್ಯವಸ್ಥೆ.

ಇದನ್ನೂ ಓದಿ: ಎಲ್ಐಸಿ ಖಾಸಗೀಕರಣ ಪ್ರಸ್ತಾಪ : ಕೇಂದ್ರದ ವಿರುದ್ಧ ಅಧಿಕಾರಿಗಳು, ನೌಕರರ ಪ್ರತಿಭಟನೆ

“ಈ ಪ್ರತಿಭಟನೆಗೆ ತತ್‌ಕ್ಷಣದ ಕಾರಣ, ಪದಾಧಿಕಾರಿಗಳ ಅಮಾನತುಗೊಳಿಸುವಿಕೆ ಮತ್ತು ಕಂಪನಿ ಲಾಕೌಟ್ ಕ್ರಮವಾಗಿದ್ದು, ಧೀರ್ಘಕಾಲಿಕವಾಗಿ ನಮ್ಮಲ್ಲಿ ಹತ್ತಾರು ಸಮಸ್ಯೆಗಳಿವೆ. ಇವುಗಳಿಗೆ ನ್ಯಾಯ ಸಿಗುವವರೆಗೂ ನಾವು ನ್ಯಾಯಯುತವಾಗಿ ಅಹೋರಾತ್ರಿ ಧರಣಿ ಮಾಡುತ್ತೇವೆ” ಎಂದು ಹೇಳಿದರು.

ಕಂಪನಿಯ ಲಾಕ್‌ ಔಟ್ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಅಧಿಕಾರಿಗಳು, “ಕಾರ್ಮಿಕರು ಕಾನೂನು ಬಾಹಿರ ಹೋರಾಟವನ್ನು ಮಾಡಿದ್ದಕ್ಕಾಗಿ ಈ ಕಂಪನಿಯನ್ನು ಲಾಕ್‌ ಔಟ್ ಮಾಡಲಾಗುತ್ತಿದೆ” ಎಂದಿದ್ದಾರೆ.

ಜಿಲ್ಲೆಯ ಕಾರ್ಮಿಕ ಕಮಿಷನರ್ ಅವರ ಕೇಛೇರಿಯಲ್ಲಿ ಸಂದಾನಕ್ಕೆಂದು ಕರೆದಿದ್ದಾಗಲೂ ಸಹ ಕಂಪನಿಯು ತನ್ನ ದರ್ಪವನ್ನು ತೋರಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಈ ಬಹುರಾಷ್ಟ್ರೀಯ ಕಂಪನಿಯು ದೇಶದ ಎಲ್ಲಾ ಕಾನೂನುಗಳನ್ನೂ ಸಾರಾಸಗಟಾಗಿ ಉಲ್ಲಂಘಿಸಿ ನಮ್ಮ ಕಾರ್ಮಿಕರನ್ನ ಶೋಷಣೆ ಮಾಡುತ್ತಿದೆ. ಆರಂಭದಲ್ಲಿ ಖಾಸಗೀಕರಣ, ಅಭಿವೃದ್ಧಿ, ನಮ್ಮ ದೇಶದ ಕಾರ್ಮಿಕರಿಗೆ ಉದ್ಯೋಗಾವಕಾಶ ನೀಡುತ್ತೇವೆ ಎಂದು ಹೇಳಿಕೊಂಡು ಬಂದು, ಕಾಲ ಸಂದಂತೆ ಇಂತಹ ಸಮಸ್ಯೆಗಳನ್ನು ಸೃಷ್ಟಿಸುತ್ತವೆ. ಇದಕ್ಕೆ ಸರ್ಕಾರಗಳು ಸೊಪ್ಪು ಹಾಕುತ್ತವೆ. 1992 ರ ನಂತರ ದೇಶದ ಅಭಿವೃದ್ಧಿಯ ಹೆಸರಿನಲ್ಲಿ ಇಂತಹ ಬಹುರಾಷ್ಟ್ರೀಯ ಕಂಪನಿಗಳಿಗೆ ನಮ್ಮ ದೇಶದಲ್ಲಿ ಜಾಗ ಕೊಡಲಾಗಿದೆ. ಅಂದಿನಿಂದಲೂ ಇಂತಹ ಸಮಸ್ಯೆಗಳನ್ನು ಸಾವಿರಾರು ಕಂಪನಿಗಳ ಕಾರ್ಮಿಕರು ಎದುರಿಸುತ್ತಲೇ ಇದ್ದಾರೆ. ಆದರೆ ತಮ್ಮ ಕೆಲಸ ಕಳೆದುಕೊಂಡು ಬೀದಿಗೆ ಬರುವ ಭಯಕ್ಕೆ ಅವರ್ಯಾರೂ ದನಿಯೆತ್ತುತ್ತಿಲ್ಲ. ಪ್ರಶ್ನಿಸುವ ಕಾರ್ಮಿಕರು ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರನ್ನು ಕಂಪನಿ ದಮನಿಸುತ್ತಿದೆ. ಪ್ರಶ್ನಿಸುವ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಅದನ್ನೂ ಮೀರಿ ದನಿಯೆತ್ತಿದರೂ ನಮ್ಮ ಸರ್ಕಾರ ಅದಕ್ಕೆ ಬೆಲೆ ಕೊಟ್ಟು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದು ನಮ್ಮ ದೇಶದ ಪರಿಸ್ಥಿತಿ.

ಇದನ್ನೂ ಓದಿ: ಕುಸಿಯುತ್ತಿರುವ ಕಣ್ವ ಸಾಮ್ರಾಜ್ಯ: ಆತಂಕದಲ್ಲಿ ಲಕ್ಷಾಂತರ ಕಾರ್ಮಿಕರು

ಹಿಂದೆಂದಿಗಿಂತಲೂ ಇಂದು ಈ ಖಾಸಗೀಕರಣ ಮತ್ತು ಬಹುರಾಷ್ಟ್ರೀಯ ಕಂಪನಿಗಳನ್ನು ನಮ್ಮ ದೇಶದ ಕಡೆ ಸೆಳೆದು ಅಭಿವೃದ್ಧಿ ಮಾಡಬೇಕು ಎನ್ನುವ ಯೋಚನೆ ಸರ್ಕಾರದ ಮತ್ತು ಸೋ ಕಾಲ್ಡ್‌ ಜನರಿಂದ ಕೇಳಿಬರುತ್ತಿದೆ. ಆದರೆ ಇದರ ಪರಿಣಾಮಗಳು ಏನಿರಬಹುದು ಎಂಬುದಕ್ಕೆ ಒಂದು ಸಣ್ಣ ಉದಾಹರಣೆ ಇದಾಗಿದೆ.

ಈಗಾಗಲೇ ಈ ಟೊಯೊಟಾ ಕಾರ್ಮಿಕರ ಸಮಸ್ಯೆಗಳಿಗೆ ರಾಜ್ಯದ ಕೆಲವು ಕಾರ್ಮಿಕ ಸಂಘಟನೆಗಳು, ರೈತ ಸಂಘಟನೆಗಳು ಬೆಂಬಲ ನೀಡಿವೆ. ಕಾರ್ಮಿಕರ ಈ ಸಮಸ್ಯೆಗಳನ್ನು ಸರ್ಕಾರ ಮತ್ತು ಆಡಳಿತ ಮಂಡಳಿ ಈ ಕೂಡಲೇ ಬಗೆಹರಿಸದಿದ್ದರೆ ಇನ್ನೂ ತೀವ್ರವಾದ ಪ್ರತಿಭಟನೆಯನ್ನು ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿವೆ.


ಇದನ್ನೂ ಓದಿ: ಎಎಪಿ ಪ್ರಣಾಳಿಕೆ ಬಿಡುಗಡೆ : ಸ್ವಚ್ಚತೆ, ಶಿಕ್ಷಣ, ಆರೋಗ್ಯಕ್ಕೆ ಒತ್ತು, ಪೌರಕಾರ್ಮಿಕರು ಮೃತಪಟ್ಟಲ್ಲಿ ಒಂದು ಕೋಟಿ ಪರಿಹಾರ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....