Homeಕರ್ನಾಟಕಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ಕೆಲಸದ ನಡುವೆ ಪ್ರತಿ 2 ಗಂಟೆಗೊಮ್ಮೆ ನೀಡುವ 10 ನಿಮಿಷ ವಿಶ್ರಾಂತಿ ಸಮಯದಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ವಿಶ್ರಾಂತಿ ಕೊಠಡಿಗೆ ಹೋಗಿ ಬರುವುದಕ್ಕೆ 5-6 ನಿಮಿಷ ಬೇಕು. ಹೀಗಿರುವಾಗ ನೀರು ಕುಡಿಯಲು, ಮೂತ್ರ ವಿಸರ್ಜಿಸಲೂ ಸಮಯವಿಲ್ಲ. ಇದರಲ್ಲಿ ವಿಶ್ರಾಂತಿಯ ಮಾತೇ ಇಲ್ಲ ಎನ್ನುತ್ತಾರೆ ಕಾರ್ಮಿಕರು

- Advertisement -
- Advertisement -

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಲಿಮಿಟೆಡ್ ಕಾರ್ಮಿಕರು ನಿನ್ನೆಯಿಂದ ಅಹೋರಾತ್ರಿ ಧರಣಿ ನೆಡೆಸುತ್ತಿದ್ದು, ಧಿಡೀರ್ ಲಾಕ್ ಔಟ್ ಮಾಡುವ ಕಂಪನಿಯ ನಿರ್ಧಾರವನ್ನು ವಿರೋಧಿಸಿ ಹಾಗೂ ಕಾರ್ಮಿಕರ ಕೆಲಸದ ಸಮಯವನ್ನು ವೈಜ್ಞಾನಿಕವಾಗಿ ನಿಗದಿಪಡಿಸಬೇಕೆನ್ನುವ ಬೇಡಿಕೆ ಸೇರಿದಂತೆ ಇನ್ನೂ ಹತ್ತಾರು ಬೇಡಿಕೆಗಳನ್ನು ಇಟ್ಟುಕೊಂಡು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.

ಜಪಾನ್ ಮೂಲದ ಕಂಪನಿಯು 1999 ರಿಂದಲೂ ಬಿಡದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಸಾವಿರಾರು ಕಾರ್ಮಿಕರು ಕಳೆದ 20 ವರ್ಷದಿಂದಲೂ ಕೆಲಸ ಮಾಡಿಕೊಂಡು ಬಂದಿದ್ದಾರೆ. ಇದೀಗ ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಟೊಯೊಟಾ ಕಂಪನಿಯ ಸುಮಾರು 3500 ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ಕಂಪನಿಯ ಲಾಕ್‌ ಔಟ್ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಅಧಿಕಾರಿಗಳು, “ಕಾರ್ಮಿಕರು ಕಾನೂನು ಬಾಹಿರ ಹೋರಾಟವನ್ನು ಮಾಡಿದ್ದಕ್ಕಾಗಿ ಈ ಕಂಪನಿಯನ್ನು ಲಾಕ್‌ ಔಟ್ ಮಾಡಲಾಗುತ್ತಿದೆ” ಎಂದಿದ್ದಾರೆ.

ಈ ಕುರಿತು ನಾನು ಗೌರಿ.ಕಾಂ ಜೊತೆ ಮಾತನಾಡಿದ ಟೊಯೊಟಾ ಕಿರ್ಲೋಸ್ಕರ್ ಕಾರ್ಮಿಕ ಯೂನಿಯನ್ ಪದಾಧಿಕಾರಿಯಾದ ಗಂಗಾಧರ್, “ನಮ್ಮಲ್ಲಿ ಹಲವಾರು ಸಮಸ್ಯೆಗಳು ಮೊದಲಿಂದಲೂ ಇವೆ. ಕಂಪನಿ ಲಾಕ್‌ ಔಟ್ ಮಾಡುವುದಾಗಿ ಹೇಳುತ್ತಿರುವುದು ಇದು 3ನೇ ಬಾರಿ. ಆದರೆ ಲಾಕ್‌ಡೌನ್ ನಂತರ ನಮ್ಮ ಸಮಸ್ಯೆಗಳು ಮತ್ತಷ್ಟು ಜಟಿಲವಾಗಿವೆ. ಮೊದಲಿಗೆ ನಾವು ಕೆಲಸ ಮಾಡುವ ಶಿಫ್ಟ್‌ ವ್ಯವಸ್ಥೆಯೇ ಅವೈಜ್ಞಾನಿಕವಾಗಿದ್ದು, ಮೊದಲ ಶಿಫ್ಟ್‌ ಮಧ್ಯರಾತ್ರಿ 2 ಗಂಟೆಗೆ ಮುಗಿಯುತ್ತದೆ. ಎರಡನೇ ಶಿಫ್ಟ್‌ ಬೆಳಗಿನ ಜಾವ 3 ಗಂಟೆಗೆ ಆರಂಭವಾಗುತ್ತದೆ. ಪ್ರತಿ ವಾರವೂ ಈ ಶಿಫ್ಟ್‌ ಬದಲಾಗುತ್ತಲೇ ಇರುತ್ತದೆ. ಹಾಗಾಗಿ ದೈನಂದಿನ ಅವಶ್ಯಕ ಕೆಲಸಗಳಾದ ಊಟ-ನಿದ್ರೆಯಲ್ಲಿ ಏರುಪೇರಾಗಿ ನಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ಭಾರಿ ಮಳೆ, ಲಾಕ್‌ಡೌನ್ ಎಫೆಕ್ಟ್: ಮುಂದಿನ ವರ್ಷ ಉಪ್ಪಿನ ಕೊರತೆ ಸಾಧ್ಯತೆ

“ನಮ್ಮದು ಜಪಾನ್ ಮೂಲದ ಕಂಪನಿಯಾಗಿರುವುದರಿಂದ ಅಲ್ಲಿನಂತೆಯೇ ಕೆಲಸ ಮಾಡಬೇಕು ಎಂದು ಆಡಳಿತ ಹೇಳುತ್ತದೆ. ಉದಾಹರಣೆಗೆ, ಇಂದು ದಿನಕ್ಕೆ ನಮ್ಮಲ್ಲಿ 300 ಕಾರುಗಳು ಸಿದ್ಧವಾಗುತ್ತವೆ. ಹಾಗಾಗಿ ಒಬ್ಬ ವ್ಯಕ್ತಿಗೆ ದಿನದಲ್ಲಿ 480 ನಿಮಿಷ ಕೆಲಸ ಮಾಡಬೇಕಾಗುತ್ತದೆ. ಅಂದರೆ 1 ಕಾರಿಗೆ 3 ನಿಮಿಷದಂತೆ ಒಬ್ಬ ಕಾರ್ಮಿಕ ಕೆಲಸ ಮಾಡಬೇಕು ಎಂದು ಆಡಳಿತ ಹೇಳುತ್ತದೆ. ಇದೇ ಸಮಯವನ್ನು ಇಡೀ 300 ಕಾರುಗಳಿಗೂ ಅನ್ವಯಿಸಬೇಕು ಎಂದು ಹೇಳುತ್ತಾರೆ. ಅಂದರೆ ಮೊದಲ ಸೆಕೆಂಡಿನಿಂದ ಯಾವ ಸಾಮರ್ಥ್ಯದಲ್ಲಿ ಕೆಲಸ ಆರಂಭಿಸಿರುತ್ತೇನೋ ಅದನ್ನೇ ಕೊನೆಯ ಸೆಕೆಂಡ್‌ವರೆಗೂ ಉಳಿಸಿಕೊಂಡು ಕೆಲಸ ಮಾಡಬೇಕು”

“ಇದು ಒಂದು ರೀತಿಯಲ್ಲಿ ಉಸಿರು ಬಿಗಿಹಿಡಿದು ಕೆಲಸ ಮಾಡುವಂತೆ. ಇದರಲ್ಲಿ ಒಂದು ಕ್ಷಣ ಹೆಚ್ಚು-ಕಡಿಮೆಯಾದರೂ ಇಡೀ ಉತ್ಪಾದನೆಯನ್ನು ನಿಲ್ಲಿಸಿ ನಮ್ಮ ಮೇಲೆ ನಿರ್ಧಾಕ್ಷೀಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಈ ವ್ಯವಸ್ಥೆಯೇ ತುಂಬಾ ಕಷ್ಟವಾದುದಾಗಿದ್ದು, ಇದರ ವಿರುದ್ಧ ಹಲವು ವರ್ಷಗಳಿಂದ ಹೋರಾಡುತ್ತಲೇ ಇದ್ದೇವೆ. ಆದರೂ ಯಾವುದೇ ಪೂರಕ ಕ್ರಮ ಕೈಗೊಂಡಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

“ಕಡಿಮೆ ಮಾನವ ಸಂಪನ್ಮೂಲ ಬಳಸಿಕೊಂಡು ಹೆಚ್ಚು ಉತ್ಪಾದನೆ ಮಾಡಬೇಕು ಎಂದು ಕಂಪನಿಯೇ ಹೇಳುತ್ತದೆ. ಹಾಗಾಗಿ ಕಂಪನಿ ಪ್ರತಿ ವರ್ಷವೂ ಕೆಲವರನ್ನು ಕೆಲಸದಿಂದ ತೆಗೆಯುತ್ತದೆ. ಆದರೆ ಉತ್ಪಾದನೆ ಮಾತ್ರ ಅಷ್ಟೇ ಇರಬೇಕು ಎಂದು ಹೇಳುತ್ತದೆ. ಆದರೆ ಈಗ ಲಾಕ್‌ಡೌನ್‌ಗಿಂತ ಮೊದಲು ಒಂದು ಕಾರು ತಯಾರಿಸಲು ಒಬ್ಬ ಕಾರ್ಮಿಕ 3 ನಿಮಿಷ ದುಡಿಯಬೇಕಾಗಿತ್ತು. ಆದರೆ ಈಗ ಹೊಸ ನಿಯಮದ ಪ್ರಕಾರ ಲಾಕ್‌ಡೌನ್‌ ನಂತರದಲ್ಲಿ 2.5 ನಿಮಿಷದಲ್ಲಿ ಅದೇ ಕೆಲಸವನ್ನು ಮುಗಿಸಬೇಕು ಎಂದು ಹೇಳುತ್ತದೆ”

“ಇದು ಯಾವ ನ್ಯಾಯ. ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ, ತಾಂತ್ರಿಕ ಸಹಕಾರದಲ್ಲಿ ಯಾವುದೇ ವ್ಯತ್ಯಾಸವಿಲ್ಲ, ಸಂಬಳದಲ್ಲಿ ಯಾವುದೇ ವ್ಯತ್ಯಾಸವಿಲ್ಲ, ಆದರೂ ಉತ್ಪಾದನೆ ಮಾತ್ರ ಹೆಚ್ಚಾಗಬೇಕು ಎಂದು ಹೇಳುತ್ತಿದ್ದಾರೆ. ಹಳೆಯ ನಿಯಮವೇ ನಮಗೆ ಹೊರೆಯಾಗಿರುವಾಗ ಈ ಹೊಸ ನಿಯಮ ಬಾಣಲೆಯಿಂದ ಬೆಂಕಿಗೆ ಹಾಕಿದಂತಾಗಿದೆ. ಅಷ್ಟಕ್ಕೂ ಈ ಕಂಪನಿಗೆ ವರ್ಷಕ್ಕೆ 20 ಸಾವಿರ ಕೋಟಿ ವ್ಯವಹಾರವಿದೆ. ಈ ವರ್ಷ 350 ಕೋಟಿ ಲಾಭವಾಗಿದೆ ಎಂದು ಕಂಪನಿಯೇ ಅಧಿಕೃತವಾಗಿ ಹೇಳಿಕೊಂಡಿದೆ” ಎಂದು ಅಳಲು ತೋಡಿಕೊಂಡರು.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

“ಈಗಾಗಲೇ 40 ವರ್ಷ ದಾಟುತ್ತಿದ್ದಂತೆ ಕೆಲವರಿಗೆ ಮೂಲೆ ಸವೆತ ಸೇರಿದಂತೆ ಹಲವು ಖಾಯಿಲೆಗಳು ಕಾಣಿಸಿಕೊಳ್ಳುತ್ತಿದೆ. ಇನ್ನು ಕೆಲಸದ ನಡುವೆ ಪ್ರತಿ 2 ಗಂಟೆಗೊಮ್ಮೆ ನಮಗೆ ನೀಡುವ 10 ನಿಮಿಷ ವಿಶ್ರಾಂತಿ ಸಮಯದಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ವಿಶ್ರಾಂತಿ ಕೊಠಡಿಗೆ ಹೋಗಿ ಬರುವುದಕ್ಕೆ 5-6 ನಿಮಿಷ ಬೇಕು. ಹೀಗಿರುವಾಗ ನೀರು ಕುಡಿಯಲು, ಮೂತ್ರ ವಿಸರ್ಜಿಸಲೂ ಸಮಯವಿಲ್ಲ. ಇದರಲ್ಲಿ ವಿಶ್ರಾಂತಿಯ ಮಾತೇ ಇಲ್ಲ. ಕೆಲಸದ ಮಧ್ಯೆ ನೀರು ಕುಡಿಯಬೇಕಾದರೂ ಮ್ಯಾನೇಜರ್‌ಗೆ ಕರೆ ಮಾಡಿ, ಅವರು ಬಂದು ಪತ್ರ ಬರೆಸಿಕೊಂಡು ಅಪ್ಪಣೆ ಕೊಟ್ಟರೆ ಮಾತ್ರ ಹೋಗಿ ಕುಡಿಯಬೇಕು. ಇದು ನಮ್ಮ ಪರಿಸ್ಥಿತಿ. ಇವರು ಅಕ್ಷರಶಹ ಕಾರ್ಪೋರೇಟ್ ರೌಡಿಗಳಂತೆ ವರ್ತಿಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನಾವು ಹೇಳಿಕೊಳ್ಳುವುದಕ್ಕಷ್ಟೇ ಕಾರ್ಪೋರೇಟ್ ಉದ್ಯೋಗಿಗಳು. ಆದರೆ ವಾಸ್ತವದಲ್ಲಿ ಮೂತ್ರ ವಿಸರ್ಜನೆ ಮಾಡಬೇಕಾದರೂ ಇವರ ಬಳಿ ಅಪ್ಪಣೆ ಕೇಳುವ ಕಾರ್ಪೋರೇಟ್ ಗುಲಾಮರಾಗಿದ್ದೇವೆ. ಈ ಕಂಪನಿ, ಭಾರತದ ಮತ್ತು ರಾಜ್ಯದ ಯಾವುದೇ ಕಾನೂನುಗಳನ್ನೂ ಗೌರವಿಸದೇ ತನ್ನಿಷ್ಟದಂತೆ ನಮ್ಮನ್ನು ದುಡಿಸಿಕೊಳ್ಳುತ್ತಿದೆ. ಇದರ ವಿರುದ್ಧ ನಾವು ಸಂಬಂಧಪಟ್ಟ ಇಲಾಖೆಗಳಿಗೆ ಸಾಕಷ್ಟು ಬಾರಿ ದೂರು ನೀಡಿದ್ದೇವೆ. ಸಭೆಗಳನ್ನು ನಡೆಸಿದ್ದೇವೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೂ ಕಾರ್ಪೋರೇಟ್‌ಗಳ ಪರ ಇರುವಂತೆ ವರ್ತಿಸುತ್ತಿದ್ದಾರೆ. ಆದರು ಯಾವುದೇ ಕ್ರಮ ಕೈಗೊಳ್ಳದಿರುವುದು ನಮ್ಮ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಮೊದಲೂ ಇದನ್ನೆಲ್ಲಾ ಪ್ರಶ್ನಿಸುವ ಅನೇಕರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಬೆದರಿಕೆ, ಅಮಾನತುಗಳಂತಹ ಕ್ರಮಗಳನ್ನು ಕೈಗೊಂಡಿದ್ದಾರೆ. ಹಾಗಾಗಿ ಒಂದು ಸಭೆ ಮಾಡಿಕೊಳ್ಳೋಣ ಎಂದು ಮೊದಲ ಶಿಫ್ಟಿನ ಕಾರ್ಮಿಕರೆಲ್ಲವೂ ಸಭೆ ಸೇರಿದ್ದೆವು. ಈಗ ಅದನ್ನೇ ಕಾನೂನು ಬಾಹಿರ ಹೋರಾಟವೆಂದು ಕಂಪನಿಯನ್ನು ಲಾಕ್‌ ಔಟ್ ಮಾಡಲು ಮುಂದಾಗಿದೆ. ಆದರೆ ನಮಗೆ ನ್ಯಾಯ ಸಿಗುವವರೆಗೂ ನಾವು ಹೋರಾಡುತ್ತೇವೆ” ಎಂದು ಹೇಳಿದರು.


ಇದನ್ನೂ ಓದಿ: ಲಾಕ್‌ಡೌನ್ ವಿಧಿಸಿದ್ದು ನೀವು, ಈಗ ನೀವೇ ನೆರವು ನೀಡಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...